ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಪೋರ್ಟ್ ವಾರ್ಡ್ ಫ್ರೆಂಡ್ಸ್ ವತಿಯಿಂದ ಹೊಲಿಗೆ ಯಂತ್ರ, ಸೀರೆ ವಿತರಣೆ

ಮಂಗಳೂರು: 79ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನಗರದ ಕಂದಕ್ ಪರಿಸರದಲ್ಲಿ ಪೋರ್ಟ್ ವಾರ್ಡ್ ಫ್ರೆಂಡ್ಸ್ ವತಿಯಿಂದ ಹೊಲಿಗೆ ಯಂತ್ರ, ಸೀರೆ ವಿತರಣೆ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು.
ಬದ್ರಿಯಾ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಎನ್ ಇಸ್ಮಾಯಿಲ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು.
ಕಾರ್ಯಕ್ರಮದಲ್ಲಿ ಮಂಗಳೂರು ತಾಲ್ಲೂಕಿನ ತಹಶೀಲ್ದಾರ್ರಾದ ಟಿ. ರಮೇಶ್ ಬಾಬು, ಮಂಗಳೂರು ನಗರಾಬಿವೃದ್ದಿ ಪ್ರಾಧಿಕಾರ ಆಯುಕ್ತರಾದ ಮುಹಮ್ಮದ್ ನಝೀರ್, ಮಂಗಳೂರು ಸಂಚಾರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ನಜ್ಮಾ ಫಾರೂಖಿ, ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆ ಉಪ ನಿರ್ದೇಶಕರಾದ ಅಸ್ಮ ಕೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮುಖ್ಯ ಲೆಕ್ಕ ಪರಿಶೋಧನಾ ಅಧಿಕಾರಿ ಮೊಹಮ್ಮದ್ ತೌಸೀಫ್, ರೊಸಾರಿಯೋ ಚರ್ಚ್ ಧರ್ಮಗುರುಗಳಾದ ಫಾ. ವಲೇರಿಯನ್ ಡಿಸೋಜ, ಸ್ಥಳೀಯ ಪಾಲಿಕೆ ಸದಸ್ಯರಾದ ಅಬ್ದುಲ್ ಲತೀಫ್, ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷರಾದ ಜಿ.ಹನುಮಂತ ಕಾಮತ್, ಖ್ಯಾತ ತುಳು ರಂಗಭೂಮಿ ಹಾಗೂ ಚಲನಚಿತ್ರ ನಟ ಸತೀಶ್ ಬಂದಲೆ, ಸಂತ ಅರ್ಸುಲ ಅಂಗನವಾಡಿ ಕಾರ್ಯಕರ್ತೆ ಸುಜಾತ ಶೆಟ್ಟಿ, ಬದ್ರಿಯಾ ಶಾಲೆಯ ಪ್ರಾಂಶುಪಾಲಕಿ ಸೀಮಾ, ಹಾಗೂ ಇನ್ನಿತರರು ಉಪಸ್ಥಿತರಿದ್ದರು.







