Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಯುನಿವೆಫ್ ನಿಂದ ಸ್ವಾತಂತ್ರ್ಯೋತ್ಸವ

ಯುನಿವೆಫ್ ನಿಂದ ಸ್ವಾತಂತ್ರ್ಯೋತ್ಸವ

ವಾರ್ತಾಭಾರತಿವಾರ್ತಾಭಾರತಿ15 Aug 2023 6:03 PM IST
share
ಯುನಿವೆಫ್ ನಿಂದ ಸ್ವಾತಂತ್ರ್ಯೋತ್ಸವ

ಮಂಗಳೂರು : ಸಮಾನತೆ, ಸಾಮರಸ್ಯ ಮತ್ತು ಸಹಬಾಳ್ವೆಗಾಗಿ ಸ್ವಾತಂತ್ರ್ಯ ಎಂಬ ಧ್ಯೇಯವಾಕ್ಯದೊಂದಿಗೆ ಯುನಿವೆಫ್ ಕರ್ನಾಟಕ ಸ್ವಾತಂತ್ರ್ಯೋತ್ಸವವನ್ನು ಫಳ್ನೀರ್ ನ ಲುಲು ಸೆಂಟರ್ ನಲ್ಲಿ ಆಚರಿಸಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಯೇನೆಪೋಯ ಮೆಡಿಕಲ್ ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದ ಪ್ರಾಧ್ಯಾಪಕರಾದ ಡಾ. ಅಬ್ದುಲ್ ಮಜೀದ್ ರವರು ಧ್ವಜಾರೋಹಣವನ್ನು ನೆರವೇರಿಸಿದರು. ಬಳಿಕ ಮಾತನಾಡಿದ ಅವರು “ಭಾರತದಂತ ಸಮ್ಮಿಶ್ರ ದೇಶದಲ್ಲಿ ಭಿನ್ನಭಿಪ್ರಾಯಗಳು ವಿರೋಧಾಭಾಸಗಳು ನಮ್ಮನ್ನು ವಿಭಜಿಸಲಿಕ್ಕಾಗಿ ಇರುವಂಥದ್ದಲ್ಲ. ವಿಭಿನ್ನ ಸಂಸ್ಕೃತಿಯ ಭಾಗವಾಗಿರುವ ಅವುಗಳನ್ನು ಒಪ್ಪಿಕೊಂಡು ಸಾಮರಸ್ಯದಿಂದ ಸಹಬಾಳ್ವೆ ನಡೆಸಿದಾಗ ಮಾತ್ರ ಇಲ್ಲಿ ಶಾಂತಿ ನೆಲೆಯೂರುತ್ತದೆ. ಇಲ್ಲಿ ಕ್ಷೋಭೆ ಸೃಷ್ಟಿಸುವ ಕೆಲವು ಜನರ ಅತಿರೇಕಗಳನ್ನು ಶಾಂತಿ ಬಯಸುವ ಹಲವು ಜನರು ಮೌನ ವಾಗಿ ಸಹಿಸುವುದೇ ಎಲ್ಲಾ ದುರಂತಗಳಿಗೆ ಮೂಲ. ವೈಯಕ್ತಿಕವಾಗಿ ಎಲ್ಲರೂ ಒಳ್ಳೆಯವರೇ ಆದರೆ ಯಾವುದೇ ದುಷ್ಪ್ರೇರಣೆಯಿಂದ ಓರ್ವ ಮಾಡುವ ಕೆಡುಕಿಗೆ ಇಡೀ ಸಮುದಾಯವೇ ಬೆಲೆ ತೆರಬೇಕಾದ ಪರಿಸ್ಥಿತಿ ಇಂದು ದೇಶದಲ್ಲಿ ನಿರ್ಮಾಣವಾಗಿದೆ. ಇಂಥ ಸ್ವಾತಂತ್ರ್ಯೋತ್ಸವಗಳು ನಮ್ಮನ್ನು ಒಗ್ಗೂಡಿಸಲಿ” ಎಂದು ಹೇಳಿದರು.

ಅತಿಥಿಯಾಗಿ ಭಾಗವಹಿಸಿದ ಜಮೀಅತುಲ್ ಫಲಾಹ್ ಇದರ ಕಾರ್ಯನಿರ್ವಾಹಕ ಸಮಿತಿ ಸದಸ್ಯ ಜನಾಬ್ ಅಶ್ಫಾಕ್ ಅಹ್ಮದ್ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಇನ್ನೋರ್ವ ಅತಿಥಿ ಖ್ಯಾತ ವಕೀಲ ಇಮ್ತಿಯಾಝ್ ಬಂಟ್ವಾಳ್ ರವರು ಮಾತನಾಡಿ, “ಇತಿಹಾಸ ಮರೆತವರು ಇತಿಹಾಸ ಸೃಷ್ಟಿಸಲಾರರು. ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದ ಮುಸ್ಲಿಮ್ ವೀರರ ಹೆಸರುಗಳನ್ನು ಇತಿಹಾಸ ದಿಂದ ಅಳಿಸಿ ಹಾಕುವ ಹುನ್ನಾರದ ಮಧ್ಯೆ ಇಂಥ ಸ್ವಾತಂತ್ರ್ಯೋತ್ಸವಗಳು ಮುಂದಿನ ತಲೆಮಾರಿಗೆ ಮುಸ್ಲಿಮ್ ಸಮುದಾಯದ ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ನೆನಪಿಸಲಿ. ಮದ್ರಸಗಳಲ್ಲಿ ಸಂವಿಧಾನ ಬೋಧನೆಯಿಂದ ತಮ್ಮ ಹಕ್ಕು ಮತ್ತು ಕರ್ತವ್ಯಗಳನ್ನು ಮುಂದಿನ ತಲೆಮಾರು ಅರಿತುಕೊಳ್ಳುವಂತಾಗಲಿ” ಎಂದು ಹೇಳಿದರು.

ಯುನಿವೆಫ್ ಕರ್ನಾಟಕ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ “ಭಾರತದ ಸ್ವಾತಂತ್ರ್ಯಕ್ಕೆ ಮುಸ್ಲಿಮರ ಕೊಡುಗೆಯ ಇತಿಹಾಸವನ್ನು ಇಂದಿನ ಮಕ್ಕಳಿಗೆ ಕಲಿಸಬೇಕಾದ ಅಗತ್ಯ ಇಂದು ಹಿಂದೆಂದಿಗಿಂತಲೂ ಹೆಚ್ಚಾಗಿದೆ. ಕೇವಲ ಲೌಕಿಕ ಜ್ಞಾನಕ್ಕೆ ಮಹತ್ವ ನೀಡಿ ತಮ್ಮ ಮಕ್ಕಳನ್ನು ಅಂಕ ಗಳಿಸುವ ಯಂತ್ರ ಗಳನ್ನಾಗಿಸುವ ಇಂದಿನ ಪೋಷಕರು ಅವರ ಧಾರ್ಮಿಕ ಜ್ಞಾನದ ಬಗ್ಗೆ ಅಜ್ಞರಾಗಿದ್ದಾರೆ. ಮಕ್ಕಳನ್ನು ಸಮುದಾಯದ ಆಸ್ತಿಯನ್ನಾಗಿಸುವ ಪ್ರಯತ್ನ ನಡೆಯಬೇಕಾಗಿದೆ” ಎಂದು ಹೇಳಿದರು.

ಕುದ್ರೋಳಿ ಶಾಖಾಧ್ಯಕ್ಷ ವಕಾಝ್ ಅರ್ಶಲನ್ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಉಮರ್ ಮುಖ್ತಾರ್ ಕಿರ್ ಅತ್ ಪಠಿಸಿದರು. ಈ ಸಂದರ್ಭದಲ್ಲಿ ದಾರುಲ್ ಇಲ್ಮ್ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X