Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಕೈಗೆಟಕುವ ದರದ ಸುಸಜ್ಜಿತ...

ಮಂಗಳೂರು: ಕೈಗೆಟಕುವ ದರದ ಸುಸಜ್ಜಿತ ಡಾರ್ಮಿಟರಿ 'ಐವರಿ ಇನ್‌' ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ11 Aug 2025 7:46 PM IST
share
ಮಂಗಳೂರು: ಕೈಗೆಟಕುವ ದರದ ಸುಸಜ್ಜಿತ ಡಾರ್ಮಿಟರಿ ಐವರಿ ಇನ್‌ ಉದ್ಘಾಟನೆ

ಮಂಗಳೂರು: ನಗರದ ಅತ್ತಾವರದಲ್ಲಿರುವ ಐವರಿ ಎನ್‌ಕ್ಲೇವ್‌ನಲ್ಲಿ ಕೈಗೆಟಕುವ ದರದಲ್ಲಿ ವಸತಿ ಸೌಕರ್ಯ ನೀಡುವ ನೂತನ ಐಷಾರಾಮಿ ಹವಾನಿಯಂತ್ರಿತ ಡಾರ್ಮಿಟರಿ 'ಐವರಿ ಇನ್‌' ಅನ್ನು ಸೋಮವಾರ ಉದ್ಘಾಟಿಸಲಾಯಿತು.

ಮಂಗಳೂರಿನ ಶಾಂತಿ ಪ್ರಕಾಶನದ ವ್ಯವಸ್ಥಾಪಕ ಮತ್ತು ಮಸ್ಜಿದ್-ಉಲ್-ಹುದಾ ಖತೀಬ್ ಮೊಹಮ್ಮದ್ ಕುಂಞಿ ಅವರ ದುಆದೊಂದಿಗೆ ಕಾರ್ಯಕ್ರಮ ಆರಂಭವಾಯಿತು.

ಈ ಸೌಲಭ್ಯವು ವಿದ್ಯಾರ್ಥಿಗಳು, ವೃತ್ತಿಪರರು ಹಾಗೂ ಬಜೆಟ್ ಸ್ನೇಹಿ ಮತ್ತು ಸ್ವಚ್ಛವಾದ ವಸತಿ ಬಯಸುವ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ಗುರಿ ಹೊಂದಿದೆ.

ಇಲ್ಲಿ ದೈನಂದಿನ, ಸಾಪ್ತಾಹಿಕ ಮತ್ತು ಮಾಸಿಕ ಯೋಜನೆಗಳಿದ್ದು, ಸುಸಜ್ಜಿತ ಹಾಸಿಗೆಗಳು, ದೈನಂದಿನ ಹೌಸ್‌ಕೀಪಿಂಗ್, ಹೈ-ಸ್ಪೀಡ್ ವೈ-ಫೈ, ಸಿಸಿಟಿವಿ ಕಣ್ಗಾವಲು, ಲಿಫ್ಟ್ ಸೌಲಭ್ಯ, ಅಗತ್ಯ ವಸ್ತುಗಳ ಕಿಟ್ ಹಾಗೂ ಕಾರ್ ಪಾರ್ಕಿಂಗ್‌ನಂತಹ ಸೌಲಭ್ಯಗಳನ್ನು ಒದಗಿಸಲಾಗಿದೆ.

ಕಾರ್ಯಕ್ರಮದಲ್ಲಿ ಮಾತನಾಡಿದ ವಾಸ್ ಲೇನ್ ವಾರ್ಡ್ ಕಾರ್ಪೊರೇಟರ್ ನವೀನ್ ಡಿ'ಸೋಜಾ, "ಈ ಉದ್ಯಮವು ಮಂಗಳೂರಿನಂತಹ ಸ್ಮಾರ್ಟ್ ಸಿಟಿಯಲ್ಲಿ ನಿರೀಕ್ಷಿಸುವ ವಸತಿ ಮಾನದಂಡಗಳನ್ನು ಪೂರೈಸುತ್ತದೆ" ಎಂದು ಹೇಳಿ, ಮಾಲೀಕರ ಈ ಹೊಸ ಪ್ರಯತ್ನಕ್ಕೆ ಯಶಸ್ಸನ್ನು ಹಾರೈಸಿದರು.

ಮೊಹಮ್ಮದ್ ಕುಂಞಿ ಅವರು ಮಾತನಾಡಿ, "ಈ ಪರಿಕಲ್ಪನೆಯು ವಿಶಿಷ್ಟ ಮತ್ತು ಸಮಯೋಚಿತವಾಗಿದೆ. ನಗರಕ್ಕೆ ಭೇಟಿ ನೀಡುವವರು ಕೇವಲ ಫ್ರೆಶ್ ಅಪ್ ಆಗಲು ದುಬಾರಿ ಹೋಟೆಲ್ ಕೊಠಡಿಗಳನ್ನು ಕಾಯ್ದಿರಿಸಬೇಕಾದ ಸಂದರ್ಭಗಳಿರುತ್ತವೆ. ಅಂತಹ ಪ್ರಯಾಣಿಕರಿಗೆ ಈ ಡಾರ್ಮಿಟರಿ ಮಾದರಿಯು ಅತ್ಯಂತ ಅನುಕೂಲಕರ ಪರ್ಯಾಯವಾಗಿದೆ" ಎಂದರು.

ಮಾಲೀಕರಾದ ರಿಝ್ವಾನ್ ಪಾಂಡೇಶ್ವರ, ಅಶ್ರಫ್ ಮತ್ತು ನೌಶಾದ್ ಮೆಟ್ರೋ ಅವರು ಮಾತನಾಡಿ, ಸಾಮಾನ್ಯ ವಸತಿ ಯೋಜನೆಗಳ ಜೊತೆಗೆ, ರೂ. 200 ಕ್ಕೆ 'ಫ್ರೆಶೆನ್-ಅಪ್' ಆಯ್ಕೆಯನ್ನು ಪರಿಚಯಿಸಲಾಗಿದೆ. ಇದರ ಅಡಿಯಲ್ಲಿ ಅತಿಥಿಗಳು ಚೆಕ್-ಇನ್ ಮಾಡಿ, ಎರಡು ಗಂಟೆಗಳ ಒಳಗೆ ಫ್ರೆಶ್ ಆಗಿ, ಚೆಕ್-ಔಟ್ ಮಾಡಬಹುದು. 24 ಗಂಟೆಗಳ ವಾಸ್ತವ್ಯಕ್ಕೆ ದೈನಂದಿನ ದರ 500 ರೂ. ಆಗಿರುತ್ತದೆ ಎಂದು ವಿವರಿಸಿದರು.

ಉದ್ಘಾಟನಾ ಸಮಾರಂಭದಲ್ಲಿ ಎ.ಕೆ. ಗ್ರೂಪ್ ಆಫ್ ಕಂಪೆನೀಸ್ ಅಧ್ಯಕ್ಷರಾದ ನಿಯಾಝ್ ಎ.ಕೆ., ಆ್ಯಪಲ್ ಮಾರ್ಟ್ ಪಾಲುದಾರ ಹನೀಫ್ ಪಿ.ಎಸ್., ಸ್ವದೇಶ್ ಗ್ರೂಪ್ ಅಧ್ಯಕ್ಷರಾದ ಕೆ. ಹಸೈನಾರ್, ಎಚ್‌ಐಎಫ್ ಇಂಡಿಯಾ ಅಧ್ಯಕ್ಷ ಆದಿಲ್ ಫರ್ವೇಝ್, ಮೊಹಿದ್ದೀನ್ ಉಸ್ಮಾನ್, ಯು.ಕೆ. ಬಾವ, ನವಾಝುದ್ದೀನ್, ಸಾಜಿದ್ ಎ.ಕೆ, ಎಸ್‌.ಎಂ. ಗ್ರೂಪ್ ಆಫ್ ಕಂಪೆನೀಸ್ ನಿರ್ದೇಶಕರಾದ ಎಸ್ ಎಂ ಫಾರೂಕ್ ಮತ್ತು ಶೆಫರ್ಡ್ ಇಂಟರ್‌ನ್ಯಾಶನಲ್ ಅಕಾಡೆಮಿ ಅಧ್ಯಕ್ಷರಾದ ಆರ್ಕಿಟೆಕ್ಟ್ ನಿಸಾರ್ ಉಪಸ್ಥಿತರಿದ್ದರು.








































share
ವಾರ್ತಾಭಾರತಿ
ವಾರ್ತಾಭಾರತಿ
Next Story
X