Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜೇಸಿ ಸಪ್ತಾಹ: ಆರೋಗ್ಯ ಮತ್ತು ನೀರಿನ...

ಜೇಸಿ ಸಪ್ತಾಹ: ಆರೋಗ್ಯ ಮತ್ತು ನೀರಿನ ಮಹತ್ವ ಕುರಿತು ಉಪನ್ಯಾಸ

ವಾರ್ತಾಭಾರತಿವಾರ್ತಾಭಾರತಿ11 Sept 2023 9:52 PM IST
share
ಜೇಸಿ ಸಪ್ತಾಹ: ಆರೋಗ್ಯ ಮತ್ತು ನೀರಿನ ಮಹತ್ವ ಕುರಿತು ಉಪನ್ಯಾಸ

ಮಂಗಳೂರು, ಸೆ.11: ಭಾರತದಲ್ಲಿ ಅಸುರಕ್ಷಿತ ಕುಡಿಯುವ ನೀರು ಮತ್ತು ಅನೈರ್ಮಲ್ಯ ಕಾರಣದಿಂದ ಪ್ರತಿ ವರ್ಷ ಸುಮಾರು 8,29,000 ಜನರು ಅತಿಸಾರ ಕಾಯಿಲೆಗಳಿಂದ ಸಾಯುತ್ತಾರೆ ಎಂದು ಅಂದಾಜಿಸಲಾಗಿದೆ. ಜೊತೆಗೆ ಕ್ಯಾನ್ಸರ್ ನಂತಹ ಕಾಯಿಲೆಗಳೂ ಹರಡುತ್ತವೆ. ಹಾಗಾಗಿ ಶುದ್ಧ ನೀರನ್ನು ಕುಡಿಯುವುದರ ಜೊತೆಗೆ, ಜಲ ಮೂಲಗಳ ಸಂರಕ್ಷಣೆಯ ಬಗ್ಗೆಯೂ ನಾವು ಕಾಳಜಿ ವಹಿಸಬೇಕು, ಎಂದು ಮಂಗಳೂರು ವಿವಿಯ ಜೀವವಿಜ್ಞಾನ ಪ್ರಾಧ್ಯಾಪಕ ಜೆ. ಎಫ್. ಎಂ. ಡಾ. ಪ್ರಶಾಂತ ನಾಯ್ಕ ಅಭಿಪ್ರಾಯಪಟ್ಟಿದ್ದಾರೆ

ಜೆಸಿಐ ಮಂಗಳಗಂಗೋತ್ರಿ ಕೊಣಾಜೆ ಇದರ ‘ಜೇಸಿ ಸಪ್ತಾಹ 2023’ರ ಎರಡನೇ ದಿನದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕೊಣಾಜೆ ಪದವಿನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಯೋಗಕ್ಷೇಮದಲ್ಲಿ ನೀರಿನ ಮಹತ್ವ’ ಕುರಿತು ಉಪನ್ಯಾಸ ನೀಡಿದರು.

ಜೀವಾಮೃತವಾದ ನೀರು ವಿವಿಧ ದೈಹಿಕ, ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಔಷಧಿಯಾಗಿಯೂ ಕಾರ್ಯನಿರ್ವಹಿಸು ತ್ತದೆ. ಜೊತೆಗೆ ಸೌಂದರ್ಯವರ್ಧಕವಾಗಿಯೂ ನೆರವಾಗುತ್ತದೆ, ಎಂದರು.

ಮುಖ್ಯ ಅತಿಥಿ, ಕೊಣಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಅಚ್ಚುತ ಗಟ್ಟಿ ಕೊಣಾಜೆ ಮಾತನಾಡಿ, ಬಡ ಮತ್ತು ಅತಿ ಬಡ ಕುಟುಂಬದ ಮಕ್ಕಳು ವಿದ್ಯಾಭಾಸ ಮಾಡುವ ಸರಕಾರಿ ಶಾಲೆಗಳನ್ನು ಉನ್ನತೀಕರಿಸುವ ಅಗತ್ಯವಿದೆ. ಇಂತಹ ಶಾಲೆಗಳಿಗೆ ಶುದ್ಧನೀರಿನ ಘಟಕವನ್ನು ಕೊಡುಗೆಯಾಗಿ ನೀಡಿರುವುದು ಒಂದು ಮಾದರಿ ಕಾರ್ಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಜೆಸಿಐ ಮಂಗಳಗಂಗೋತ್ರಿ ಕೊಣಾಜೆ ಘಟಕದ ಅಧ್ಯಕ್ಷ ಜೆಎಫ್ ಎಂ. ಡಾ. ನರಸಿಂಹಯ್ಯ ಎನ್, ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ, ಅಂತರ್‌ರಾಷ್ಟ್ರೀಯ ಸಂಸ್ಥೆ ಜೆಸಿಐ, ವ್ಯಕ್ತಿತ್ವ ರೂಪಿಸುವ ಜೊತೆಗೆ ಸಮಾಜಸೇವೆಗೆ ಅವಕಾಶ ಮಾಡಿಕೊಟ್ಟಿದೆ, ಎಂದರು.

ಇದೇ ಸಂದರ್ಭದಲ್ಲಿ ಸೀತಾ ಆರ್ . ನಾಯ್ಕ ಬೈಂದೂರು ಶಾಲೆಗೆ ನೀರು ಶುದ್ಧೀಕರಣ ಘಟಕವನ್ನು ಕೊಡುಗೆಯಾಗಿ ನೀಡಿದರು.

ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಯ (ಎಸ್ . ಡಿ. ಎಂ. ಸಿ. ) ಅಧ್ಯಕ್ಷ ದಯಾನಂದ ಗಟ್ಟಿ ಕೆಳಗಿನ ಮನೆ ಇವರು ಶಾಲಾ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿದರು.

ಮಿನೆಜಸ್ ಶಾಲೆಯ ಮುಖ್ಯ ಶಿಕ್ಷಕಿ ಸಿಲ್ವಿಯಾ ಬಿ. ಎಂ. ಕೊಡುಗೆಯನ್ನು ಸ್ವೀಕರಿಸಿದರು.

ನಿಕಟಪೂರ್ವ ಅಧ್ಯಕ್ಷ ಜೇಸಿ ಕಮಲಾಕ್ಷ ಶೆಟ್ಟಿಗಾರ್, ಮಾಜಿ ಅಧ್ಯಕ್ಕ್ಷ ಜೇಸಿ ಫ್ರಾಂಕಿ ಫ್ರಾನ್ಸಿಸ್ ಕುಟಿನೋ, ಸ್ಥಾಪಕ ಅಧ್ಯಕ್ಷ ಜೇಸಿ ತ್ಯಾಗಂ ಹರೇಕಳ, ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ಪುಷ್ಪಾ, ಶಿಕ್ಷಕಿ ಸುಗಂಧಿ ಕೆ., ಶಿಕ್ಷಕ ರಝಾಕ್, ಸಮಾಜ ಸೇವಕ ಮೊಹಮ್ಮದ್ ಇಕ್ಬಾಲ್, ಎಸ್.ಡಿ.ಎಂ.ಸಿ. ಸದಸ್ಯರುಗಳು, ಊರಿನ ನಾಗರಿಕರು, ಉಪಸ್ಥಿತರಿದ್ದರು. ಕಾರ್ಯಕ್ರಮ ನಿರ್ದೇಶಕರಾದ ಜೇಸಿ ಚನಿಯಪ್ಪ ನಾಯ್ಕ ಬಿ. ಜೇಸಿ ವಾಣಿ ವಾಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X