Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೆ. ಷರೀಫಾ ಅವರ ‘ನೀರೊಳಗಣ ಕಿಚ್ಚು’...

ಕೆ. ಷರೀಫಾ ಅವರ ‘ನೀರೊಳಗಣ ಕಿಚ್ಚು’ ಕೃತಿಗೆ ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ6 Nov 2023 6:08 PM IST
share
ಕೆ. ಷರೀಫಾ ಅವರ ‘ನೀರೊಳಗಣ ಕಿಚ್ಚು’ ಕೃತಿಗೆ ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ

ಮಂಗಳೂರು, ನ.6: ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿ ವರ್ಷ ಕೊಡಮಾಡುವ 2022ನೇ ಸಾಲಿನ ರಾಜ್ಯ ಮಟ್ಟದ ಮುಸ್ಲಿಮ್ ಸಾಹಿತ್ಯ ಪ್ರಶಸ್ತಿಗೆ ಹಿರಿಯ ಸಾಹಿತಿ, ಚಿಂತಕಿ, 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಷ್ಕೃತೆ ಕೆ. ಷರೀಫಾ ಅವರ ‘ನೀರೊಳಗಣ ಕಿಚ್ಚು’ ಕಥಾಸಂಕಲನ ಆಯ್ಕೆಯಾಗಿದೆ.

ಕೃಷಿ ಮಾರುಕಟ್ಟೆ ಇಲಾಖೆಯಲ್ಲಿ ಮಾರುಕಟ್ಟೆ ಅಧಿಕಾರಿಯಾಗಿ 2017ರಲ್ಲಿ ನಿವೃತ್ತಿ ಹೊಂದಿರುವ ಕೆ. ಷರೀಫಾ ಮುಸ್ಲಿಮ್ ಸಮುದಾಯದಿಂದ ಕನ್ನಡಕ್ಕೆ ಬಂದ (1975) ಮೊದಲ ಕವಿಯತ್ರಿ. ಕರ್ನಾಟಕ ಉರ್ದು ಸಾಹಿತ್ಯ ಅಕಾಡಮಿ, ಹಂಪಿ ಕನ್ನಡ ವಿವಿಯ ಸಿಂಡಿಕೇಟ್, ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನದ ಮಹಿಳಾ ಸಮಿತಿ (ಬೆಳಗಾವಿ), ರಾಷ್ಟ್ರಕವಿ ಆಯ್ಕೆ ಸಮಿತಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕ ಆಯ್ಕೆ ಸಮಿತಿಗಳ ಸದಸ್ಯೆಯಾಗಿ, ರಾಜ್ಯ ಬಂಡಾಯ ಸಾಹಿತ್ಯ ಸಂಘಟನೆಯ ಸಂಚಾಲಕಿಯಾಗಿ, ದೇವರಾಜ ಅರಸು ಶತಮಾನೋತ್ಸವ ಸಮಿತಿಯ ಕಾರ್ಯಕಾರಿ ಸಮಿತಿ ಸದಸ್ಯೆ ಯಾಗಿ ಸೇವೆ ಸಲ್ಲಿಸಿರುವ ಕೆ. ಷರೀಫಾ ಹಲವು ಪ್ರಮುಖ ಸಂಘ- ಸಂಸ್ಥೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿ ಕೊಂಡಿದ್ದಾರೆ.

ಮಹಿಳೆ ಮತ್ತು ಸಮಾಜ, ಬಂಡಾಯ ಮುಸ್ಲಿಮ್ ಸಂವೇದನೆ, ಮುಸ್ಲಿಮ್ ಲೋಕದ ತಲ್ಲಣಗಳು, ಬತ್ತಳಿಕೆ, ಅಮ್ಮ ಮತ್ತು ಯುದ್ಧ, ಮುಸ್ಲಿಂ ಸಂವೇದನೆಯ ಕಾವ್ಯ, ಮಹಿಳೆ, ಚಳುವಳಿ ಮತ್ತು ರಾಜಕಾರಣ, ಹಲವು ಹೆಜ್ಜೆಗಳ ಸದ್ದು ಇವು ಕೆ. ಷರೀಫಾರವರ ಪ್ರಕಟಿತ ವಿಮರ್ಶಾ ಕೃತಿಗಳಾಗಿವೆ.

ಬಿಡುಗಡೆಯ ಕವನಗಳು, ನೂರೇನ್‌ಳ ಅಂತರಂಗ, ಪಾಂಚಾಲಿ, ಮಮ್ತಾಜಳ ಮಹಲು, ಬುರ್ಖಾ ಪ್ಯಾರಡೈಸ್, ಸಂತ ಪಕೀರಳ ಜೋಳಿಗೆಯ ರೊಟ್ಟಿ ಮತ್ತು ಬಯಲಿಗೂ ಬಾಗಿಲು ಇವರ ಪ್ರಕಟಿತ ಕವನ ಸಂಕಲನಗಳು. ನೌಕರರ ಮಿಲನ, ಹೊಸ ಶತಮಾನದ ಕಾವ್ಯ, ಗೀತಾ ನಾಗಭೂಷಣ ಮಹಿಳಾ ಮಾರ್ಗ ಮತ್ತು ಒಡನಾಡಿ ಅರಸು ಇವರ ಪ್ರಕಟಿತ ಸಂಪಾದನಾ ಕೃತಿಗಳು ಹಾಗೂ ಮುಸಿಂ ಮಹಿಳಾ ಸಂವೇದನೆ (ಸಂಶೋದನೆ), ಫೈಜ್ ನಾಮಾ (ಅನುವಾದ) ಮತ್ತು ಮಿರ್ಜಾ ಗಾಲಿಬ್(ವ್ಯಕ್ತಿ ಚಿತ್ರಣ) ಇವರ ಇತರ ಪ್ರಕಟಿತ ಕೃತಿಗಳು.

ಇವರ ಅನೇಕ ಕವಿತೆ ಮತ್ತು ಲೇಖನಗಳು ರಾಜ್ಯದ ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು ಮತ್ತು ಅನೇಕ ವಿವಿ ಅಧೀನದಲ್ಲಿರುವ ಪದವಿ ಕಾಲೇಜುಗಳ ಪಠ್ಯಗಳಿಗೆ ಸೇರ್ಪಡೆಯಾಗಿದೆ. ಕೆ. ಷರೀಫಾ ಅವರ ಸಾಹಿತ್ಯ ಕೃಷಿಯ ಬಗ್ಗೆ ಗುಲ್ಬರ್ಗಾ ಮತ್ತು ತುಮಕೂರು ವಿವಿಗಳ ವಿದ್ಯಾರ್ಥಿಗಳಿಂದ ಪಿಎಚ್‌ಡಿ ಮತ್ತು ಎಂಫಿಲ್ ಅಧ್ಯಯನಗಳು ನಡೆದಿವೆ.

ವನಿತಾ ಸಾಹಿತ್ಯ ಶ್ರೀ ಅತ್ತಿಮಬ್ಬೆ, ನಲ್ಲೂರ್ ಪ್ರಸಾದ್, ಅಂಕ, ಸಿದ್ದಲಿಂಗ ಪಟ್ಟಣ ಶೆಟ್ಟಿ, ವೀಚಿ, ಡಾ. ಅನುಪಮಾ, ಡಾ. ಗೀತಾ ದೇಸಾಯಿ, ಗಡಿನಾಡ ಗೌರವ, ನಾಡ ಪ್ರಭು ಕೆಂಪೇಗೌಡ, ಕವಿ ಸರ್ವಜ್ಞ ಹಾಗೂ ಬಸವ ಚೈತನ್ಯ ಮುಂತಾದ ಪ್ರಮುಖ ಪ್ರಶಸ್ತಿಗಳು ಇವರ ಸಾಹಿತ್ಯ ಸಾಧನೆಗೆ ದೊರೆತಿವೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕೆ. ಷರೀಫಾ ಅವರ ಜೀವಮಾನದ ಸೇವೆಗಾಗಿ ಗೌರವ ಪ್ರಶಸ್ತಿ ನೀಡಿ ಆದರಿಸಿದೆ.

ದಿವಂಗತ ಯು.ಟಿ. ಫರೀದ್ ಸ್ಮರಣಾರ್ಥ ನೀಡಲಾಗುವ ಮುಸ್ಲಿಮ್ ಸಾಹಿತ್ಯ ಪ್ರಶಸ್ತಿಯು ಹತ್ತು ಸಾವಿರ ನಗದು ಮತ್ತು ಪ್ರಶಸ್ತಿ ಫಲಕಗಳನ್ನೊಳಗೊಂಡಿದ್ದು, ನ.23ರಂದು ಬೆಂಗಳೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಹಿರಿಯ ಚಿಂತಕ ಪ್ರೊ. ಮುಝಪ್ಫರ್ ಅಸಾದಿ, ಹಿರಿಯ ಸಾಹಿತಿ ಬಾನು ಮುಷ್ತಾಕ್ ಮತ್ತು ಪ್ರಾಧ್ಯಾಪಕ ಪ್ರೊ ಹೈದರ್ ಅಲಿ ತೀರ್ಪುಗಾರರಾಗಿ ಸಹಕರಿಸಿದ್ದಾರೆ ಎಂದು ಮುಸ್ಲಿಮ್ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು.ಎಚ್. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X