Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೈಕಂಬ: ಮಾದಕ ವ್ಯಸನದ ಅರಿವು ಜಾಗೃತಿ...

ಕೈಕಂಬ: ಮಾದಕ ವ್ಯಸನದ ಅರಿವು ಜಾಗೃತಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ21 Nov 2023 10:15 PM IST
share
ಕೈಕಂಬ: ಮಾದಕ ವ್ಯಸನದ ಅರಿವು ಜಾಗೃತಿ ಕಾರ್ಯಕ್ರಮ

ಕೈಕಂಬ: ಖಿದ್ಮಾ ಫೌಂಡೇಶನ್ ಗುರುಕಂಬಳ, ಜಿಎನ್ಆರ್ ಇ ವೆಲ್ಫೇರ್ ಆ್ಯಂಡ್ ಎಜುಕೇಶನ್ ಟ್ರಸ್ ಗಂಜಿಮಠ ಇದರ ಸಹಯೋಗದಲ್ಲಿ ಮಾದಕ ವ್ಯಸನದ ಅರಿವು ಜಾಗೃತಿ ಕಾರ್ಯಕ್ರಮವು ಗಂಜಿಮಠದ ಝಾರ ಕನ್ವೆನ್ಶನ್ ಸೆಂಟರ್ ನಲ್ಲಿ ಮಂಗಳವಾರ ನಡೆಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದ ಮಂಗಳೂರು ಶಾಂತಿ ಪ್ರಕಾಶನ ವ್ಯವಸ್ಥಾಪಕ ಮುಹಮ್ಮದ್ ಕುಂಞಿ, ಮಕ್ಕಳು ದಾರಿ ತಪ್ಪಲು ಮಾದಕ ವ್ಯಸನಗಳ ದಾಸರಾಗಲು ಮನೆಯ ವಾತಾವರಣ ಮುಖ್ಯ ಕಾರಣ. ಮಕ್ಕಳ ಜೀವನ ಶೈಲಿಗೆ ತಂದೆ ತಾಯಿ ಕಾರಣ. ಅವರ ಪ್ರತಿಯೊಂದು ಆಗು ಹೋಗುಗಳ ಕುರಿತು ಗಮನ ಹರಿಸುತ್ತಿರಬೇಕು. ಮನೆಯಲ್ಲಿ ಲಭಿಸುವ ಶಿಕ್ಷಣ ಮಕ್ಕಳ ಭವಿಷ್ಯವನ್ನು ರೂಪಿಸುತ್ತದೆ ಎಂದು ನುಡಿದರು.

ಮಕ್ಕಳು 12ವರ್ಷದವರಾಗುವಾಗ ಅಮಲು ಪದಾರ್ಥ ಸೇವನೆಯಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಇದಕ್ಕೆ ಮನೆಯವರು ಮಕ್ಕಳೊಂದಿಗೆ ಕಾಲ ಕಳೆಯದಿರುವುದು ಮುಖ್ಯ ಕಾರಣ. ತಮ್ಮ ಮಕ್ಕಳ ಜೊತೆ ಪೋಷಕರು ಸ್ನೇಹಿತರಾಗಿರಬೇಕು ಹೊರತು ವೈರಿಗಳಂತೆ ಕಾಣಬಾರದು. ಅದ್ಯಯನಗಳ ಪ್ರಕಾರ, ಮನೆಯ ಸದಸ್ಯರ ನಡುವೆ ಉತ್ತಮ ಸಹಭಾಳ್ವೆ ಇರುವ ಮನೆಗೆಳ ಮಕ್ಕಳು ಅಮಲು ಪದಾರ್ಥಗಳ ದಾಸರಾಗಲು ಸಾಧ್ಯವಿಲ್ಲ ಎಂದು ಹೇಳಿದರು.

ಬಳಿಕ ಮಾತನಾಡಿದ ಮೂಡಬಿದಿರೆ ಆಳ್ವಾಸ್ ಪುನರ್ಜನ್ಮ ದುಶ್ಚಟ ನಿವಾರಣಾ ಕೇಂದ್ರದ ಆಪ್ತ ಸಮಾಲೋಚಕ ಲೋಹಿತ್ ಕೆ. ಅವರು, ಮುಂಜಾಗ್ರತೆಯಿಂದ ಮಾತ್ರ ಮದ್ಯ, ಮಾದಕ ವ್ಯಸನದಿಂದ ದೂರ ಇರಲು ಸಾಧ್ಯ. ಮನುಷ್ಯನ ಸಾವಿಗೆ ಎರಡನೇ ದೊಡ್ಡ ಕಾರಣ ಆತ್ಮಹತ್ಯೆ. ಜಗತ್ತಿನಲ್ಲಿ ಆತ್ಮಹತ್ಯೆಗಳು ಹೆಚ್ಚಾಗುತ್ತಿವೆ. ಇದಕ್ಕೆ ಮಾದಕ ಪದಾರ್ಥಗಳು ಮುಖ್ಯ ಕಾರಣ ಎಂದರು.

ವ್ಯಸನಿಗಳಲ್ಲಿ ಬಡವರು-ಶ್ರೀಮಂತರು, ಉದ್ಯೋಗಿ-ನಿರುದ್ಯೋಗಿ ಜಾತಿ-ಧರ್ಮಗಳೆಂದಿಲ್ಲ, ಯಾರು ಬೇಕಾದರೂ ಇದರ ದಾಸರಾಗಬಹುದು. ರುಚಿ ನೋಡುವುದರೊಂದಿಗೆ ಆರಂಭವಾಗುವ ಅಮಲು ಪದಾರ್ಥದ ಸಹವಾಸ ಅಪರಾಧಿಯಾಗಿ ಅಥವಾ ಸಾವಿನೊಂದಿಗೆ ಅಂತ್ಯವಾಗುತ್ತದೆ. ಕೆಲವೊಬ್ಬರು ನಿತ್ಯ ಜೀವನದ ಒತ್ತಡ ಕಡಿಮೆ ಮಾಡುವ ನೆಪದಲ್ಲಿ ದಾಸರಾಗುತ್ತಿದ್ದಾರೆ. ಆದರೆ, ಯಾವುದೇ ಕಾರಣಕ್ಕೂ ಮಾದಕ ವಸ್ತುಗಳಿಂದ ಒತ್ತಡ ಕಡಿಮೆಯಾಗುವುದಿಲ್ಲ. ಯುವ ಜನರು ಮೊಬೈಲ್‌ ಗಳ ನಿರಂತರ ಬಳಕೆಯಿಂದ ಮಾದಕ ವಸ್ತುಗಳಿಗೆ ಹತ್ತಿರವಾಗುತ್ತಿದ್ದಾರೆ ಎಂದು ನುಡಿದರು.

ಕಾರ್ಯಕ್ರದ ಅಧ್ಯಕ್ಷತೆಯನ್ನು ಖಿದ್ಮಾ ಫೌಂಡೇಶನ್ ಅಂತಾರಾಷ್ಟ್ರೀಯ ಅಧ್ಯಕ್ಷ ಸಿದ್ದೀಕ್ ಮಿರ್ಝಾ ವಹಿಸಿ ಮಾತನಾಡಿ ದರು. ಗುರುಪುರ ಪೊಂಪೈ ಮಾತೆಯ ದೇವಾಲಯದ ಧರ್ಮಗುರು ಫಾ. ರುಡಾಲ್ಫ್ ರವಿ ಡೇಸ, ಜಿಎನ್ಆರ್ ಇ ವೆಲ್ಫೇರ್ ಆ್ಯಂಡ್ ಎಜುಕೇಶನ್ ಟ್ರಸ್ಟ್ ಪ್ರತಿನಿಧಿ ಇರ್ಶಾದ್ ಅಹ್ಮದ್ ಉಪಸ್ಥಿತರಿದ್ದು ಮಾತನಾಡಿದರು.

ಖಿದ್ಮಾ ಫೌಂಡೇಶನ್ ಅಧ್ಯಕ್ಷ ಸೈಯ್ಯದ್ ಅನ್ವರ್ ಪ್ರಾಸ್ತಾವಿಕ ಮಾತುಗಳನ್ನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಅಖಿಲ ಭಾರತ ಬ್ಯಾರಿ ಪರಿಷತ್ ಉಪಾಧ್ಯಕ್ಷ ಡಾ‌. ಇ.ಕೆ.ಎ. ಸಿದ್ದೀಕ್ ಅಡ್ಡೂರು ಉಪಸ್ಥಿತರಿದ್ದರು. ಜಿಎನ್ಆರ್ ಇ ವೆಲ್ಫೇರ್ ಆ್ಯಂಡ್ ಎಜುಕೇಶನ್ ಟ್ರಸ್ಟ್ ಸೌದಿ ಅರೆಬಿಯಾ ಘಟಕದ ಕಾರ್ಯದರ್ಶಿ ಝಾಹಿರ್‌ ಬಿ. ನಝೀರ್‌ ಧನ್ಯವಾದ ಸಮರ್ಪಿಸಿದರು. ಪ್ರಮೋದ್‌ ಕುಮಾರ್‌ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.



















share
ವಾರ್ತಾಭಾರತಿ
ವಾರ್ತಾಭಾರತಿ
Next Story
X