Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಾಪು: ಭಾರೀ ಮಳೆಗೆ ಹಲವು ಮನೆಗಳಿಗೆ...

ಕಾಪು: ಭಾರೀ ಮಳೆಗೆ ಹಲವು ಮನೆಗಳಿಗೆ ಹಾನಿ; ಅಪಾರ ನಷ್ಟ

ವಾರ್ತಾಭಾರತಿವಾರ್ತಾಭಾರತಿ25 July 2023 9:48 PM IST
share
ಕಾಪು: ಭಾರೀ ಮಳೆಗೆ ಹಲವು ಮನೆಗಳಿಗೆ ಹಾನಿ; ಅಪಾರ ನಷ್ಟ

ಕಾಪು : ಕಾಪು ತಾಲ್ಲೂಕಿನಾದ್ಯಂತ ಕಳೆದ ರಾತ್ರಿಯಿಂದ ಗಾಳಿ, ಮಳೆಗೆ ಮರಗಳು ಬಿದ್ದು ಹಲವು ಮನೆಗಳಿಗೆ ಹಾನಿಯಾಗಿವೆ. ಕಾಪು ತಾಲ್ಲೂಕಿನಲ್ಲಿ ಗಾಳಿ, ಮಳೆಗೆ ಮನೆಗಳಿಗೆ ಒಟ್ಟು 2.73 ಲಕ್ಷ ರೂ, ನಷ್ಟ ಉಂಟಾಗಿದೆ

ಎರಡು ದಿನಗಳಿಂದ ಕಾಪು ತಾಲ್ಲೂಕಿನ ಪಡುಬಿದ್ರಿ, ಶಿರ್ವ, ಕಾಪು ಪರಿಸರಿದಲ್ಲಿ ಭಾರೀ ಮಳೆಯಾಗುತಿದೆ. ಮಂಗಳವಾರ ಮುಂಜಾನೆ ಭಾರೀ ಗಾಳಿ ಬೀಸಿದ್ದು, ಹಲವಡೆ ಮರಗಳು ಉರಳಿಬಿದ್ದಿದೆ. ನಡ್ಸಾಲು ಗ್ರಾಮದ ಸಾವಿತ್ರಿ ಇವರ ಮನೆ ಗಾಳಿ, ಮಳೆಗೆ ಹಾನಿಯಾಗಿದ್ದು, 2.15ಲಕ್ಷ ರೂ. ನಷ್ಟ ಉಂಟಾಗಿದೆ. ಮಜೂರು ಗ್ರಾಮದ ಕಾಸಿಂ ಸಾಹೇಬ್ ಇವರ ಮನೆಗೆ ಭಾಗಶಃ ಹಾನಿಯಾಗಿದ್ದು, ಸುಮಾರು 30ಸಾವಿರ ನಷ್ಟ ಉಂಟಾಗಿದೆ. ಮಲ್ಲಾರು ಗ್ರಾಮದ ಅಖ್ತರ್ ಆದಿಲ್ ಇವರ ಮನೆಗೆ ಭಾಗಶಃ ಹಾನಿಯಾಗಿದ್ದು, 28 ಸಾವಿರ ರೂ. ನಷ್ಟ ಉಂಟಾಗಿದೆ ಎಂದು ಕಾಪು ತಹಶೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 66ರ ಉಳಿಯಾರಗೋಳಿ ದಂಡತಿರ್ಥ ಶಾಲೆ ಬಳಿ ಬೃಹತ್ ಗಾತ್ರದ ನಂದಿ ಮರ ರಾಷ್ಟ್ರೀಯ ಹೆದ್ದಾರಿ 66ಕ್ಕೆ ಉರಳಿಬಿದ್ದಿದೆ. ಇದರಿಂದ ಮೂರು ವಿದ್ಯುತ್ ಕಂಬಗಳು ತುಂಡಾಗಿವೆ. ಇದರಿಂದ ಮೆಸ್ಕಾಂ ಇಲಾಖೆಗೆ ಐವತ್ತು ಸಾವಿರ ರೂಪಾಯಿಗಳು ಅಧಿಕ ಮೊತ್ತದ ಸೊತ್ತು ನಷ್ಟ ಅಂದಾಜಿಸಲಾಗಿದೆ. ಘಟನೆಯಿಂದಾಗಿ ಹೆದ್ದಾರಿ ಸಂಚಾರ ವೃತ್ಯಯಗೊಂಡಿದ್ದು, ಬ್ಯಾರಿಕೇಡ್‍ಗಳನ್ನು ಇರಿಸಿ, ರಸ್ತೆ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಯಿತು.

ಎರಡು ದಿನಗಳ ಅಂತರದಲ್ಲಿ ಉಳಿಯಾರಗೋಳಿ, ಕರಂದಾಡಿ, ಪಕೀರಣಕಟ್ಟೆ ವ್ಯಾಪ್ತಿಯಲ್ಲಿ ಐದು ಕಂಬಗಳು ಉರುಳಿ ಬಿದ್ದಿದ್ದು ಮೆಸ್ಕಾಂಗೆ 1 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಸೊತ್ತು ನಷ್ಟವುಂಟಾಗಿದೆ ಎಂದು ಅಂದಾಜಿಸಲಾಗಿದೆ.

ಪಡುಬಿದ್ರಿ-ಅವರಾಲು ಮಟ್ಟು ರಸ್ತೆಯ ಅಂಗನವಾಡಿ ಬಳಿಯ ಮಾವಿನ ಮರವೊಂದು ಬುಡ ಸಮೇತ ಉರುಳಿದ್ದು, ಇದರಿಂದ ಈ ರಸ್ತೆಯಲ್ಲಿ ಸಂಚಾ ರಕ್ಕೆ ವ್ಯತ್ಯಯ ಉಂಟಾಯಿತು. ಇದರಿಂದ ಹಲವು ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಒಂದು ಕಂಬ ವ್ಯವಸಾಯ ಸಹಕಾರಿ ಬ್ಯಾಂಕ್ ಕಚೇರಿಯ ನಾಮಫಲಕಕ್ಕೆ ಬಿದ್ದು, ಹಾನಿಯಾಗಿದೆ. ಬೆಳಗಿನ ಜಾವ ಬೀಸಿದ ಭಾರೀ ಗಾಳಿಗೆ ಈ ಮರ ಉರುಳಿದ್ದು, ಮಧ್ಯಾಹ್ನದ ವೇಳೆಗೆ ಮರ ತೆರವುಗೊಳಿಸಿ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಯಿತು.

ಪಡುಬಿದ್ರಿ-ಕಾರ್ಕಳ ರಸ್ತೆಯಲ್ಲಿ ಸುಮಗ ಸಂಚಾರಕ್ಕೆ ಇರಿಸಲಾದ ಪೊಲೀಸ್ ಚೌಕಿ ಗಾಳಿಗೆ ಉರುಳಿ ಬಿದ್ದಿದ್ದು, ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾಯಿತು. ಬಳಿಕ ರಿಕ್ಷಾ ಚಾಲಕರ ಸಹಾಯದಿಂದ ಸರಿಪಡಿಸಲಾಯಿತು. ಹಲವು ಅಂಗಡಿಗಳ ನಾಮಫಲಕಗಳು ಗಾಳಿಗೆ ಹಾರಿಹೋಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X