Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: 300 ಕವಿಗಳ 300 ರಚನೆಗಳಿಂದ...

ಮಂಗಳೂರು: 300 ಕವಿಗಳ 300 ರಚನೆಗಳಿಂದ ಕೂಡಿದ ‘ಕರಾವಳಿ ಕವನಗಳು’ ಕೃತಿ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ14 Dec 2025 7:28 PM IST
share
ಮಂಗಳೂರು: 300 ಕವಿಗಳ 300 ರಚನೆಗಳಿಂದ ಕೂಡಿದ ‘ಕರಾವಳಿ ಕವನಗಳು’ ಕೃತಿ ಬಿಡುಗಡೆ

ಮಂಗಳೂರು: ಬಹು ಓದು ಬಳಗ ಮಂಗಳೂರು ಮತ್ತು ಆಕೃತಿ ಆಶಯ ಪಬ್ಲಿಕೇಶನ್ಸ್ ಸಹಯೋಗದಲ್ಲಿ 300 ಕವಿಗಳ 300 ರಚನೆಗಳಿಂದ ಕೂಡಿದ ‘ಕರಾವಳಿ ಕವನಗಳು’ ಕೃತಿಯನ್ನು ಮೈಸೂರು ಮಾನಸ ಗಂಗೋತ್ರಿ ಶಾಸ್ತ್ರೀಯ ಅಧ್ಯಯನ ಕೇಂದ್ರದ ಸಂಶೋಧಕ ಡಾ ಚಲಪತಿ ಆರ್. ಬಿಡುಗಡೆಗೊಳಿಸಿದರು.

ಸಹೋದಯ ಸಭಾಂಗಣದಲ್ಲಿ ರವಿವಾರ ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಜಗತ್ತು ವ್ಯವಹಾರ, ವ್ಯಾಪಾರ, ರಾಜಕಾರಣ, ಮೇಲು ಕೀಳೆಂಬ ಹೊಡೆದಾಟದಲ್ಲಿ ಮುಳುಗಿರುವಾಗ ಅದೆಲ್ಲವನ್ನೂ ಮೀರಿದ ಬದುಕಿನ ಸಂಭ್ರಮವನ್ನು ಈ ಕೃತಿ ಬಿಡುಗಡೆಯ ಮೂಲಕ ಆಚರಿಸುತ್ತಿರುವುದು ಮೆಚ್ಚುವಂತದ್ದು ಎಂದು ಅವರು ಹೇಳಿದರು.

ಒಂದು ಕಾಲದಲ್ಲಿ ಸಾಮರಸ್ಯದ ಬದುಕಿನ ಮೂಲಕ ಬುದ್ಧಿವಂತರ ಜಿಲ್ಲೆಯಾಗಿ ಗಮನ ಸೆಳೆದಿದ್ದ ಕರಾವಳಿ ಕಳೆದ ಕೆಲ ವರ್ಷಗಳಿಂದೀಚೆಗೆ ಅವೆಲ್ಲದ್ದಕ್ಕೂ ತದ್ವಿರುದ್ಧ ಚುಟುವಟಿಕೆಗಳಿಂದ ಸುದ್ದಿಯಾಗಿದೆ. ಇಂತಹ ಸಮಯದಲ್ಲಿ ಎಲ್ಲಾ ಸಿದ್ಧಾಂತಗಳನ್ನು ಮೀರಿ ಎಲ್ಲರೂ ಒಂದೇ, ಎಲ್ಲರಿಗೂ ಸಮಬಾಳು ಎನ್ನುವ ರೀತಿಯಲ್ಲಿ ಈ ಕೃತಿ ಮೂಡಿ ಬಂದಿದೆ ಎಂದು ಅವರು ವಿಶ್ಲೇಷಿಸಿದರು.

ಕವನಗಳು ವಿಭಿನ್ನ ಚಿಂತನೆ, ಆಲೋಚನೆ, ಧಾರ್ಮಿಕ ಮನೋಭಾವ, ಸಂಪ್ರದಾಯದ ಜತೆಗೆ ಕರ್ನಾಟಕದ ವಿಭಿನ್ನ ಕನ್ನಡ ಭಾಷೆಗಳನ್ನೂ ಒಳಗೊಂಡಿದೆ. ತುಡಿತ, ಮಿಡಿತ, ಕೌಟುಂಬಿಕ ಸನ್ನಿವೇಶಗಳ ಜತೆಗೆ ಜಾಗತಿಕ ಯುದ್ಧದ ಪರಿಣಾಮಗಳ ಕುರಿತಂತೆಯೂ ಕವನಗಳು ಮೂಡಿಬಂದಿವೆ ಎಂದವರು ಹೇಳಿದರು.

ಹಿರಿಯ ಪತ್ರಕರ್ತ ರಾಧಾಕೃಷ್ಣ ಉಳಿಯತ್ತಡ್ಕ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಅಜ್ಜರಕಾಡಿನ ಡಾ.ಜಿ. ಶಂಕರ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಡಾ. ನಿಕೇತನ ಪುಸ್ತಕ ವಿಮರ್ಶೆ ಮಾಡಿದರು.

ಮುಖ್ಯ ಅತಿಥಿಯಾಗಿ ಸಾಹಿತಿ ಅರವಿಂದ ಚೊಕ್ಕಾಡಿ ಹಾಗೂ ಬಹು ಓದು ಬಳಗದ ಡಾ. ಸತೀಶ್ ಚಿತ್ರಾಪು ವೇದಿಕೆಯಲ್ಲಿದ್ದರು.

ಆಕೃತಿ ಆಶಯ ಪಬ್ಲಿಕೇಶನ್‌ನ ಪ್ರಕಾಶಕ ಕಲ್ಲೂರು ನಾಗೇಶ ಸ್ವಾಗತಿಸಿದರು. ಪುಸ್ತಕದ ಪ್ರಧಾನ ಸಂಪಾದಕರಾದ ಡಾ. ಉಷಾ ಪ್ರಕಾಶ್ ಪ್ರಾಸ್ತಾವಿಕವಾಗಿ ಮಾತನಾಡಿದರೆ, ಡಾ. ರಾಘವೇಂದ್ರ ಜಿಗಳೂರ ವಂದಿಸಿದರು. ಜಾ. ಜ್ಯೋತಿಪ್ರಿಯಾ ಕಾರ್ಯಕ್ರಮ ನಿರೂಪಿಸಿದರು. ವಿನಮ್ರ ಇಡ್ಕಿದು ಆಶಯ ಗೀತೆ ಹಾಡಿದರು.

ಪುಸ್ತಕ ಬಿಡುಗಡೆಗೆ ಮುನ್ನ ಕಿಲ್ಪಾಡಿ ಶ್ರೀ ವ್ಯಾಸ ಮಹರ್ಷಿ ವಿದ್ಯಾಪೀಠದ ವಿದ್ಯಾರ್ಥಿನಿ ದಿಯಾ ಉದಯ್ ಡಿ. ಅಧ್ಯಕ್ಷತೆಯಲ್ಲಿ ಯುವ ಕವಿಗಳಿಂದ ಕವಿಗೋಷ್ಟಿ ನಡೆಯಿತು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X