ಕರ್ನಾಟಕ ಜರ್ನಲಿಸ್ಟ್ ಯೂನಿಯನ್: ದ.ಕ. ಜಿಲ್ಲಾ ಅಧ್ಯಕ್ಷರಾಗಿ ತಾರಾನಾಥ್ ಗಟ್ಟಿ ಆಯ್ಕೆ

ತಾರಾನಾಥ್ ಗಟ್ಟಿ
ಮಂಗಳೂರು, ಜು.29: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ನೂತನ ಅಧ್ಯಕ್ಷರಾಗಿ ತಾರಾನಾಥ್ ಗಟ್ಟಿ ಕಾಪಿಕಾಡ್ ಆಯ್ಕೆಯಾಗಿದ್ದಾರೆ.
ಪ್ರಧಾನ ಕಾರ್ಯದರ್ಶಿಯಾಗಿ ಕೆನ್ಯೂಟ್ ಪಿಂಟೋ, ಕೋಶಾಧಿಕಾರಿಯಾಗಿ ಗಿರಿಧರ ಶೆಟ್ಟಿ ಆಯ್ಕೆಯಾದರು.
ಜಿಲ್ಲಾ ಸಮಿತಿಯ ಗೌರವಾಧ್ಯಕ್ಷರಾಗಿ ಹರೀಶ್ ಬಂಟ್ವಾಳ್, ಗೌರವ ಸಲಹೆಗಾರರಾಗಿ ರಿಚರ್ಡ್ ಲಸ್ರಾದೋ, ಸಂಘಟನಾ ಕಾರ್ಯದರ್ಶಿಯಾಗಿ ಹಮೀದ್ ವಿಟ್ಲ, ಉಪಾಧ್ಯಕ್ಷರುಗಳಾಗಿ ಲಕ್ಷ್ಮಣ ಕುಂದರ್, ಮಂದಾರ ರಾಜೇಶ್ ಭಟ್, ಶರೀಫ್ ಜಟ್ಟಿಪಳ್ಳ, ಜ್ಯೋತಿ ಪ್ರಕಾಶ್ ಪುಣಚ, ಕಾರ್ಯದರ್ಶಿಗಳಾಗಿ ಪೂಜಾಶ್ರೀ ವಿತೇಶ್ ಕೋಡಿ, ಹೇಮಾ ಜಯರಾಮ ರೈ, ಗಣೇಶ್ ಕುಕ್ಕುದಡಿ ಆಯ್ಕೆಯಾದರು. ಸದಸ್ಯತ್ವ ಅಭಿಯಾನದ ಸಂಚಾಲಕರಾಗಿ ಈಶ್ವರ ವಾರಣಾಶಿಯವರನ್ನು ಆಯ್ಕೆ ಮಾಡಲಾಯಿತು.
ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ ಗೋಪಾಲ ಅಂಚನ್, ಶಿವಪ್ರಸಾದ್ ಆಲೆಟ್ಟಿ, ರಾಮದಾಸ್ ವಿಟ್ಲ, ಯಶ್ವಿತ್ ಕಾಳಮ್ಮನೆ, ಜಯಶ್ರೀ ಕೊಯಿಂಗೋಡಿ, ಶ್ರೀಧರ ಕಜೆಗದ್ದೆ, ರಮೇಶ್ ಪೆರ್ಲ, ಡೊನಾಲ್ಡ್ ಪಿರೇರ, ರಮೇಶ್ ನೀರಬಿದಿರೆ, ವಿನಯ್ ಜಾಲ್ಸೂರು, ಕೆ.ಟಿ. ಬಾಗೀಶ್ ಕೊಯಿಕುಳಿ, ವಿನಯ್ ಕಲ್ಮಡ್ಕ, ಕುಶಾಂತ್ ಕೊರತ್ಯಡ್ಕ, ಧನರಾಜ್,ಅನುಷ್ ಪಂಡಿತ್, ರಮ್ಯಾ ಸತೀಶ್ ಕಳಂಜ, ರೇಖಾ ಸುಭಾಷ್, ಫ್ಲಾಯ್ಡ್ ಜೀವನ್ ಫರ್ನಾಂಡಿಸ್, ಶಿವಪ್ರಸಾದ್ ಆಲೆಟ್ಟಿ, ರಾಮದಾಸ್ ವಿಟ್ಲ, ಅಶ್ವಿತ್ ಸುಳ್ಯ ಆಯ್ಕೆಯಾದರು.







