Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಇತರ ಭಾಷೆಗಳ ಸಾಹಿತ್ಯಕ್ಕಿಂತ ಕೊಂಕಣಿ...

ಇತರ ಭಾಷೆಗಳ ಸಾಹಿತ್ಯಕ್ಕಿಂತ ಕೊಂಕಣಿ ಸಾಹಿತ್ಯ ಭಿನ್ನ: ಮಮತಾ ಜಿ ಸಾಗರ್

25ನೇ ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನ ಸಮಾರೋಪ

ವಾರ್ತಾಭಾರತಿವಾರ್ತಾಭಾರತಿ5 Nov 2023 9:39 PM IST
share
ಇತರ ಭಾಷೆಗಳ ಸಾಹಿತ್ಯಕ್ಕಿಂತ ಕೊಂಕಣಿ ಸಾಹಿತ್ಯ ಭಿನ್ನ: ಮಮತಾ ಜಿ ಸಾಗರ್

ಮಂಗಳೂರು: ಇತರ ಭಾಷೆಗಳ ಸಾಹಿತ್ಯಕ್ಕಿಂತ ಕೊಂಕಣಿ ಸಾಹಿತ್ಯ ಬಹಳಷ್ಟು ಭಿನ್ನವಾಗಿದೆ. ಒಂದೊಂದು ರಾಜ್ಯದಲ್ಲಿ ಕೊಂಕಣಿ ಒಂದೊಂದು ಲಿಪಿ, ಭಾಷೆಯಲ್ಲಿ ಮಾತನಾಡುತ್ತಾರೆ ಹಾಗೂ ಸಾಹಿತ್ಯ ಬರೆಯುತ್ತಾರೆ. ಗೋವಾ, ಕರ್ನಾಟಕ, ಕೇರಳದಲ್ಲಿ ಕೊಂಕಣಿ ಸಾಹಿತ್ಯದಲ್ಲಿ ವೈವಿಧ್ಯಮಯ ಲಿಪಿಯಿಂದ ಹಿಡಿದು ಸ್ಥಳೀಯ ಭಾಷೆಯ ಪ್ರಭಾವ ಪ್ರಮುಖವಾಗಿ ಕಾಣಿಸಿಕೊಳ್ಳುತ್ತದೆ ಎಂದು ಖ್ಯಾತ ಸಾಹಿತಿ ಮಮತಾ ಜಿ ಸಾಗರ್ ಹೇಳಿದ್ದಾರೆ.

ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರದಲ್ಲಿ ರವಿವಾರ ಅಖಿಲ ಭಾರತೀಯ ಕೊಂಕಣಿ ಪರಿಷತ್ ವತಿಯಿಂದ ಆಯೋಜಿಸ ಲಾದ 25ನೇ ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭಲ್ಲಿ ಸಾಹಿತ್ಯ ಮತ್ತು ಸಾಮಾಜಿಕ ಜವಾಬ್ದಾರಿ ಎನ್ನುವ ವಿಷಯದಲ್ಲಿ ಮಾತನಾಡಿದರು.

ಭಾರತೀಯ ಭಾಷೆಗಳಲ್ಲಿ ವೈವಿಧ್ಯತೆಗಳು ಇರುವುದರಿಂದಲ್ಲೇ ಏಕತೆ ಹುಟ್ಟಿದೆ. ವೈವಿಧ್ಯತೆ ಇಲ್ಲದೇ ಹೋಗಿದ್ದರೆ ಏಕತೆ ಇರಲು ಸಾಧ್ಯವಿಲ್ಲ. ಭಾರತೀಯ ಸಾಹಿತ್ಯ ಪರಂಪರೆ ಎನ್ನುವ ಕೊಡೆಯಲ್ಲಿ ಕೊಂಕಣಿ ಸಾಹಿತ್ಯದ ಪ್ರತಿಫಲ ಕಾಣುತ್ತೇವೆ. ಗೋವಾದ ಕೊಂಕಣಿಯಲ್ಲಿ ಅಲ್ಲಿನ ಸಂಸ್ಕೃತಿ, ಪೋರ್ಚ್‌ಗೀಸರ ಇತಿಹಾಸದ ಛಾಪು, ಪ್ರವಾಸೋದ್ಯಮದಿಂದಾಗಿ ಅಲ್ಲಿನ ಕೊಂಕಣಿ ಸಾಹಿತ್ಯ ಕೊಂಚ ಭಿನ್ನಹಾದಿಯಲ್ಲಿ ಸಾಗಿದರೆ ಕೇರಳ ಭಾಗದಲ್ಲಿ ಎಡಪಂಥೀಯ ಸಿದ್ಧಾಂತ, ಅಲ್ಲಿನ ರಾಜಕೀಯ ಬೆಳವಣಿಗೆಗಳು ಕೊಂಕಣಿಯ ಸಾಹಿತ್ಯದ ಮೇಲೆ ಪ್ರಭಾವ ಬೀರುತ್ತದೆ. ಇದೇ ರೀತಿಯಲ್ಲಿ ಕರ್ನಾಟಕದಲ್ಲಿ ಬೇರೆಯೇ ರೀತಿಯ ಪ್ರಭಾವ ಕೊಂಕಣಿ ಸಾಹಿತ್ಯದ ಮೇಲೆ ಬಿದ್ದಿದೆ ಎಂದರು.

ವೈವಿಧ್ಯತೆಯಿಂದಲ್ಲೇ ಏಕತೆ ಮೂಡುತ್ತದೆ ಎನ್ನುವುದಾದರೆ ಇಂತಹ ವೈವಿಧ್ಯತೆಯನ್ನು ಸಂಭ್ರಮಿಸಬೇಕು. ಭಾಷೆ ಎನ್ನುವುದು ಒಂದು ಸಂಸ್ಕೃತಿ, ಪರಂಪರೆಯಾಗಿರುವುದರಿಂದ ಕರ್ನಾಟಕದಲ್ಲಿ ಕನ್ನಡ ಭಾಷೆಯ ಜತೆಯಲ್ಲಿ ಕೊಂಕಣಿ ಭಾಷೆಯನ್ನು ಕೂಡ ಬೆಳೆಸಬೇಕು ಎಂದರು.

ಸಮ್ಮೇಳನದ ಅಧ್ಯಕ್ಷ ಹೇಮಾ ನಾಯ್ಕ್ ಮಾತನಾಡಿ, ಕಳೆದ ಎರಡು ದಿನಗಳಲ್ಲಿ ನಡೆದ ಕೊಂಕಣಿ ಸಮ್ಮೇಳನದಲ್ಲಿ ಯುವಜನತೆ ಜಾಸ್ತಿಯಾಗಿ ಕಾಣಿಸಿಕೊಳ್ಳುವ ಮೂಲಕ ಕೊಂಕಣಿ ಸಾಹಿತ್ಯ ಮತ್ತಷ್ಟು ಬೆಳೆಯುವ ಜತೆಯಲ್ಲಿ ಸಮೃದ್ಧವಾಗಿ ಬೆಳೆಯುತ್ತದೆ ಎನ್ನುವ ನಂಬಿಕೆ ಬಲವಾಯಿತು. ಕೊಂಕಣಿ ಭಾಷೆ, ಸಾಹಿತ್ಯವನು ಪ್ರೋತ್ಸಾಹಿಸುವುದು ಎಲ್ಲರ ಕರ್ತವ್ಯ ಎಂದರು.

ಈ ಸಂದರ್ಭ ಡಾ.ಕಸ್ತೂರಿ ಮೋಹನ್ ಪೈ (ಕೊಂಕಣಿ ಶಿಕ್ಷಣ), ರೋನ್ ರೋಚ್ ಕಾಸಿಯಾ( ಕೊಂಕಣಿ ಸಾಹಿತ್ಯ) ಹಾಗೂ ಕುಮಟದ ಡಾ. ಶಿವರಾಮ ಕಾಮತ್( ಕೊಂಕಣಿ ಚಳವಳಿ)ಗಾಗಿ ಸಮ್ಮೇಳನದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಮೈಕಲ್ ಡಿ ಸೋಜ, ಸಮ್ಮೇಳನದ ಉಪಾಧ್ಯಕ್ಷ ಗೋಕುಲ್ ದಾಸ್ ಪ್ರಭು, ಅಖಿಲ ಭಾರತ ಕೊಂಕಣಿ ಪರಿಷತ್‌ನ ಕಾರ್ಯಾಧ್ಯಕ್ಷ ಚೇತನ್ ಆಚಾರ್ಯ, ಖಜಾಂಚಿ ಶೀರಿಸ್ ಪೈ ಉಪಸ್ಥಿತರಿದ್ದರು. ಸಮ್ಮೇಳನ ಸ್ವಾಗತ ಸಮಿತಿ ಕಾರ್ಯದರ್ಶಿ ಟೈಟಸ್ ನೊರೊನ್ಹಾ ವಂದಿಸಿದರು. ಮನೋಜ್ ಫರ್ನಾಂಡೀಸ್ ಕಾರ್ಯಕ್ರಮ ನಿರೂಪಿಸಿದರು.











share
ವಾರ್ತಾಭಾರತಿ
ವಾರ್ತಾಭಾರತಿ
Next Story
X