Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಗುಂಡಿಗಳನ್ನು ಮುಚ್ಚುವ ಸಲುವಾಗಿ ಕೂಳೂರು...

ಗುಂಡಿಗಳನ್ನು ಮುಚ್ಚುವ ಸಲುವಾಗಿ ಕೂಳೂರು ಹಳೆ ಸೇತುವೆ ಬಂದ್‌: ಸಾಲುಗಟ್ಟಿ ನಿಂತ ವಾಹನಗಳು

ವಾರ್ತಾಭಾರತಿವಾರ್ತಾಭಾರತಿ5 Aug 2025 7:18 PM IST
share
ಗುಂಡಿಗಳನ್ನು ಮುಚ್ಚುವ ಸಲುವಾಗಿ ಕೂಳೂರು ಹಳೆ ಸೇತುವೆ ಬಂದ್‌: ಸಾಲುಗಟ್ಟಿ ನಿಂತ ವಾಹನಗಳು

ಕೂಳೂರು: ಕೂಳೂರು ಹಳೆ ಸೇತುವೆ ತೇಪೆ ಕಾರ್ಯ ನಡೆಸಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 66 ಬ್ಲಾಕ್‌ ಆಗಿದ್ದು, ಜನರು ಪರದಾಡುವಂತಾಯಿತು.

ಉಡುಪಿ- ಮಂಗಳೂರು ಸಂಚರಿಸುವ ಕೂಳೂರು ಹಳೆ ಸೇತುವೆಯಲ್ಲಿನ ಗುಂಡಿಗಳನ್ನು ಮುಚ್ಚುವ ಸಲುವಾಗಿ ಇಂದು ಕೂಳೂರಿನ ಹಳೆ ಸೇತುವೆಯನ್ನು ಬಂದ್‌ ಮಾಡಲಾಗಿತ್ತು. ಉಡುಪಿ ಮಂಗಳೂರು ಸಂಚರಿಸುವ ವಾಹನಗಳನ್ನು ಪಣಂಬೂರು ಬಂದರು ಬಳಿ ಡೈವರ್ಟ್‌ ಮಾಡಿ ಏಕಮುಖ ಸಂಚಾರ ಹೊಂದಿದ್ದ ಮಂಗಳೂರು - ಉಡುಪಿ ಹೆದ್ದಾರಿಯನ್ನು ದ್ವಿಮುಖ ರಸ್ತೆಯಾಗಿ ವಾಹನಗಳನ್ನು ಬಿಡಲಾಗುತ್ತಿತ್ತು.

ಈ ಹಿನ್ನೆಲೆಯಲ್ಲಿ ಮಂಗಳೂರು ಭಾಗಕ್ಕೆ ತೆರಳುತ್ತಿದ್ದ ವಾಹನಗಳು ಬೈಕಂಪಾಡಿವರೆಗೂ ಸಾಲುಗಟ್ಟಿ ನಿಲ್ಲುವಂತಾಯಿತು. ಅಲ್ಲದೆ, ಉಡುಪಿ ಭಾಗಕ್ಕೆ ತೆರಳುತ್ತಿದ್ದ ವಾಹನಗಳು ಕೊಟ್ಟಾರ ಫೈಓವರ್‌ ವರೆಗೂ ಬ್ಲಾಕ್‌ ಆಗಿತ್ತು. ಇದರಿಂದಾಗಿ ಶಾಲೆ- ಕಾಲೇಜು ಬಿಟ್ಟು ಮನೆಕಡೆಗೆ ತೆರಳುತ್ತಿದ್ದ ಮಕ್ಕಳು, ಕೆಲಸ ಕಾರ್ಯಗಳಿಗಾಗಿ ಬಂದಿದ್ದ ಮಕ್ಕಳು ಹೈರಾಣಾಗುವಂತಾಯಿತು.

ಹೆದ್ದಾರಿಯ ಎರಡೂ ಕಡೆಗಳಲ್ಲಿ ಭಾರೀ ಪ್ರಮಾಣದ ಬ್ಲಾಕ್‌ ಇದ್ದ ಕಾರಣ ರೋಗಿಗಳನ್ನು ಹೊತ್ತು ತುರ್ತಾಗಿ ಆಸ್ಪತ್ರೆ ಗಳ ಕಡೆ ತೆರಳುತ್ತಿದ್ದ ಅಂಬುಲೆನ್ಸ್‌ ಗಳು ರಸ್ತೆಯ ಮಧ್ಯದಲ್ಲೇ ಸಿಲುಕಿ ಪರದಾಡುವಂತಾಯಿತು. ಅಲ್ಲದೆ, ರೋಗಿ ಗಳೊಂದಿಗೆ ಪ್ರಯಾಣಿಸುತ್ತಿದ್ದವರು ಕಣ್ಣೀರು ಹಾಕುತ್ತಾ ರಸ್ತೆ ತೆರವು ಮಾಡಿಕೊಡುವಂತೆ ವಿನಂತಿಸುತ್ತಿದ್ದುದ್ದು ಕಂಡು ಬಂತು. ಇನ್ನು ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಪ್ರಯಾಣಿಕರು ರಸ್ತೆ ಮಧ್ಯೆ ವಾಹನಗಳಿಂದ ಇಳಿದು ನಡೆದು ಕೂಳೂರು ಜಂಕ್ಷನ್‌ ವರೆಗೆ ನಡೆದು ಬಳಿ ಆಟೊ ರಿಕ್ಷಾಗಳ ಮೂಲಕ ತೆರಳುತ್ತಿದ್ದರು. ಇನ್ನೂ ಕೆಲವು ವಾಹನ ಸವಾರರು ಬಂದ ದಾರಿಗೆ ಸಂಕವಿಲ್ಲ ಎಂದು ಹಿಂದೆ ತಿರುಗಿ ತಮ್ಮ ಮನೆಗೆಳ ಕಡೆಗೆ ತೆರಳುತ್ತಿದ್ದರು.

ಭಾರೀ ಬ್ಲಾಕ್‌ ನಿಂದಾಗಿ ಖಾಸಗಿ ಬಸ್‌ಗಳು ಟ್ರಿಪ್‌ ಕಟ್‌ ಮಾಡಿ ರಸ್ತೆ ಬದಿ ನಿಲ್ಲಿಸುತ್ತಿದ್ದರು. ಅಲ್ಲದೆ, ಹೆದ್ದಾರಿ ರಿಪೇರಿಯ ಅರಿವಿಲ್ಲದೆ ಬಂದಿದ್ದ ಘನ ವಾಹನಗಳನ್ನು ಮಂಗಳೂರು ಉತ್ತರ ಸಂಚಾರ ಪೊಲೀಸರು ಸೇತುವೆ ಪಕ್ಕದಲ್ಲಿನ ಜಾಗಗಳಲ್ಲಿ ಘನ ವಾಹನಗಳನ್ನು ಪಾರ್ಕ್‌ ಮಾಡಿಸುತ್ತಿದ್ದುದು ಕಂಡು ಬಂತು. ಟ್ರಾಫಿಕ್‌ ಪೊಲೀಸರ ಸಮಯೋಚಿತ ಕಾರ್ಯದಿಂದಾಗಿ ವಾಹನಗಳು ನಿಧಾನಗತಿಯಲ್ಲಿ ಸಾಗುವಂತಾಗಿತ್ತು. ವಾಹನ ದಟ್ಟನೆ, ಸಾರ್ವಜನಿಕರ ಹಿಡಿಶಾಪಗಳ ನಡುವೆ ಪೊಲೀಸರು ವಾಹನ ದಟ್ಟನೆ ನಿಭಾಯಿಸುವಾಗ ಹೈರಾಣಾಗಿದ್ದರು.

ಒಟ್ಟಾರೆಯಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅವೈಜ್ಞಾನಿಕ ಮತ್ತು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದೇ ನಡೆಸಿರುವ ಹೆದ್ದಾರಿ ತೇಪೆ ಕಾರ್ಯದಿಂದಾಗಿ ಪೊಲೀಸರು, ಸಾರ್ವಜನಿಕರು ಪೇಚಿಗೆ ಸಿಲುಕುವಂತಾಗಿದ್ದಂತೂ ಸತ್ಯ.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X