Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಳ್ಳಾಲ ಕಸಾಪದಿಂದ 'ಭಾಷಾ ಬಾಂಧವ್ಯ'...

ಉಳ್ಳಾಲ ಕಸಾಪದಿಂದ 'ಭಾಷಾ ಬಾಂಧವ್ಯ' ಕಾರ್ಯಕ್ರಮ

ವಿಕಾಸಕ್ಕೆ ಭಾಷೆಯೇ ಕೀಲಿಕೈ : ಡಾ. ಕೈರೋಡಿ.

ವಾರ್ತಾಭಾರತಿವಾರ್ತಾಭಾರತಿ11 Aug 2023 3:16 PM IST
share
ಉಳ್ಳಾಲ ಕಸಾಪದಿಂದ ಭಾಷಾ ಬಾಂಧವ್ಯ ಕಾರ್ಯಕ್ರಮ

ಮಂಗಳೂರು: ಮಾನವನ ವಿಕಾಸಕ್ಕೆ ಭಾಷೆಯೇ ಕೀಲಿಕೈ. ಬಹುಭಾಷೆಗಳ ಕಲಿಕೆ ಮತ್ತು ಭಾಷಿಕರ ನಡುವಿನ ಬಾಂಧವ್ಯ ಹಾಗೂ ಸಾಮರಸ್ಯದ ಬದುಕು ಸಮಾಜದ ನೆಮ್ಮದಿಯನ್ನು ಹೆಚ್ಚಿಸುತ್ತದೆ. ಸಾಮರಸ್ಯವನ್ನು ಕದಡುವ ವಿಷಯಗಳನ್ನು ಕೆದಕಬಾರದು ಎಂದು ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಯೋಗೀಶ್ ಕೈರೋಡಿ ಅವರು ಅಭಿಪ್ರಾಯಪಟ್ಟರು.

ಅವರು ದಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕ, ಕರಾವಳಿ ಸಂಗೀತ ಕಲಾವಿದರ ಒಕ್ಕೂಟ (ರಿ.) ದಕ ಉಡುಪಿ ಜಿಲ್ಲೆ, ಸೈಂಟ್ ಜೋಸೆಫ್ ಜೋಯ್ ಲ್ಯಾಂಡ್ ಹೈಸ್ಕೂಲ್, ಕೊಲ್ಯ, ಸೋಮೇಶ್ವರ ಇವರ ಸಂಯುಕ್ತ ಸಹಯೋಗದೊಂದಿಗೆ ಸೈಂಟ್ ಜೋಸೆಫ್ ಜೋಯ್ ಲ್ಯಾಂಡ್ ಹೈಸ್ಕೂಲ್ ಸಭಾಂಗಣದಲ್ಲಿ ನಡೆದ 'ಕನ್ನಡ ಕಲರವ - ಭಾಷಾ ಬಾಂಧವ್ಯ ಮತ್ತು ಸಾಮರಸ್ಯ ಚಿಂತನ' ಎಂಬ ವಿಷಯದ ಕುರಿತಾಗಿ ಉಪನ್ಯಾಸ ವನ್ನು ನೀಡಿದರು.

ಭಾಷೆ ಬೆಳೆಯುವುದು ಸಮೂಹದ ಜೊತೆಗಿನ ಸಂವಹನದೊಂದಿಗೆ. ಭಾಷೆಯ ಬಗೆಗಿನ ದುರಭಿಮಾನ ಸಲ್ಲದು. ನಾಡಗೀತೆಯಲ್ಲಿ ಹೇಳಿರುವ ಸೋದರ ಭಾವದ ಮನೋಭಾವವು ಎಲ್ಲರಲ್ಲೂ ಜಾಗೃತವಾಗಬೇಕು. ಕನ್ನಡ ಭಾಷೆಯು ಬೇರೆ ಭಾಷೆಯ ಜೊತೆಗೆ ಕೊಡುಕೊಳ್ಳುವಿಕೆಯೊಂದಿಗೆ ಒಡನಾಡುವ ಕೊಂಡಿಯಾಗಬೇಕು ಎಂದರು.

ಶಾಲಾ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಸತೀಶ್ ನಾಯಕ್ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.

ಕೆಡಿಸುವ ಮಾತಿಗೆ ಕಿವಿಕೊಡದಿರಿ : ಕುಂಬ್ಳೆ

ಉಳ್ಳಾಲ ತಾಲೂಕು ಕಸಾಪ ಘಟಕದ ಅಧ್ಯಕ್ಷರಾದ ಡಾ. ಧನಂಜಯ ಕುಂಬ್ಳೆ ಅವರು ಅಧ್ಯಕ್ಷತೆಯನ್ನು ವಹಿಸಿ ಕರಾವಳಿಯಲ್ಲಿ ಸಾಮರಸ್ಯದ ಬೇರುಗಳು ಗಟ್ಟಿಯಾಗಿವೆ. ಅದನ್ನು ಕೆಡಿಸುವ ಮಾತುಗಳಿಗೆ ಕಿವಿಕೊಡದೆ ಎಲ್ಲ ಭಾಷೆ, ಜಾತಿ ಧರ್ಮ ವಿಚಾರಗಳ ಒಳಿತನ್ನು ಸ್ವೀಕಾರ ಮಾಡಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕರಾವಳಿ ಸಂಗೀತ ಕಲಾವಿದರ ಒಕ್ಕೂಟದ ಕಾರ್ಯದರ್ಶಿಗಳಾಗಿರುವ ದೀಪಕ್ ರಾಜ್, ಉಪಾಧ್ಯಕ್ಷರಾಗಿರುವ ಮುರಳೀಧರ ಕಾಮತ್, ಶಾಲಾ ಮುಖ್ಯೋಪಾಧ್ಯಾಯಿನಿ ವೀಣಾ ಭಟ್ , ಉಳ್ಳಾಲ ತಾಲೂಕು ಘಟಕದ ಕಾರ್ಯದರ್ಶಿಗಳಾಗಿರುವ ಎಡ್ವರ್ಡ್ ಲೋಬೋ, ಕೋಶಾಧಿಕಾರಿಗಳಾಗಿರುವ ಲಯನ್ ಚಂದ್ರಹಾಸ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯದರ್ಶಿಗಳಾದ ರವೀಂದ್ರ ರೈ ಕಲ್ಲಿಮಾರು ಸ್ವಾಗತಿಸಿದರು. ಸಂಚಾಲಕರಾದ ತೋನ್ಸೆ ಪುಷ್ಕಳ ಕುಮಾರ್ ಕಾರ್ಯಕ್ರಮವನ್ನು ನಿರೂಪಿಸಿದರು.

ಸೌಹಾರ್ದ ಸಂಗೀತ

ಕಾರ್ಯಕ್ರಮದಲ್ಲಿ ತೋನ್ಸೆ ಸಾಂಸ್ಕೃತಿಕ ತರಬೇತಿ ಕೇಂದ್ರ ಕೊಲ್ಯ ಸೋಮೇಶ್ವರ ಇದರ ಸಹಕಾರದೊಂದಿಗೆ ಕರಾವಳಿ ಸಂಗೀತ ಕಲಾವಿದರ ಒಕ್ಕೂಟದ ವತಿಯಿಂದ ಸೌಹಾರ್ದ ಸಂಗೀತ ಕಾರ್ಯಕ್ರಮ ನಡೆಯಿತು. ಕನ್ನಡ, ತುಳು, ಬ್ಯಾರಿ, ಕೊಂಕಣಿ, ಹಿಂದಿ ಭಾಷೆಗಳ ಗೀತಗಾಯನವನ್ನು ತೋನ್ಸೆ ಪುಷ್ಕಳ ಕುಮಾರ್, ಮುರಳೀಧರ ಕಾಮತ್, ಹುಸೇನ್ ಕಾಟಿಪಳ್ಳ, ರಮೇಶ್ ಸಾಲ್ಯಾನ್, ಮಲ್ಲಿಕಾ ಶೆಟ್ಟಿ, ರೋನಿ ಕ್ರಾಸ್ತಾ, ವೈಷ್ಣವಿ, ಪರಮೇಶ್ವರಿ ಅವರು ನಡೆಸಿಕೊಟ್ಟರು. ಪ್ರಕಾಶ್ ಕುಂಬ್ಳೆ ಅವರು ಕೀಬೋರ್ಡ್, ದೀಪಕ್ ರಾಜ್ ಉಳ್ಳಾಲ್ ಅವರು ತಬ್ಲಾದಲ್ಲಿ, ನವಗಿರಿ ಗಣೇಶ್ ಅವರು ರಿದಂ ಪ್ಯಾಡ್ ನಲ್ಲಿ ಸಹಕರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X