Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ.ಜಿಲ್ಲೆಯಲ್ಲಿ ಸಕ್ರಿಯ ಕ್ಷಯರೋಗ...

ದ.ಕ.ಜಿಲ್ಲೆಯಲ್ಲಿ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ17 July 2023 10:22 PM IST
share
ದ.ಕ.ಜಿಲ್ಲೆಯಲ್ಲಿ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನಕ್ಕೆ ಚಾಲನೆ

ಮಂಗಳೂರು, ಜು.17: ದ.ಕ.ಜಿಲ್ಲೆಯನ್ನು 2025ರೊಳಗೆ ಕ್ಷಯರೋಗ ಮುಕ್ತಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಆರಂಭಿಸಿರುವ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನಕ್ಕೆ ಸೋಮವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಯ ಕಚೇರಿಯಲ್ಲಿ ಡಿಎಚ್‌ಒ ಡಾ. ಕಿಶೋರ್ ಕುಮಾರ್ ಚಾಲನೆ ನೀಡಿದರು.

ಆಗಸ್ಟ್ 2ರವರೆಗೆ ನಡೆಯುವ ಈ ಆಂದೋಲನದಲ್ಲಿ ಗಂಡಾಂತರಕಾರಿ ಪ್ರದೇಶ ಹಾಗೂ ಹೆಚ್ಚು ಅಪಾಯಕಾರಿ ಪ್ರದೇಶ, ಕಲ್ಲುಕೋರೆ, ಗಣಿಕಾರಿಕೆ, ಕಾರ್ಖಾನೆ, ಕೊಳಚೆ ಪ್ರದೇಶ, ವಲಸಿಗರು, ಅಸಂಘಟಿತ ರ್ಕಾುಕರು, ಆರೋಗ್ಯ ಸೇವೆ ವಂಚಿತರು, ಸಾರಿಗೆ ವ್ಯವಸ್ಥೆ ಇಲ್ಲದೆ ತಲುಪಲಾಗದ ಹಳ್ಳಿಗಳು, ಅತೀ ಹೆಚ್ಚು ಕ್ಷಯ ಪ್ರಕರಣಗಳು ಇರುವ ಪ್ರದೇಶ, ನಿರಾಶ್ರಿತರು, ವೃದ್ಧಾಶ್ರಮಗಳು, ಬೀಡಿಕಾರ್ಮಿಕರು, ನೇಕಾರರು, ಬುಡಕಟ್ಟು ಜನಾಂಗದವರನ್ನು ಗಮನದಲ್ಲಿಟ್ಟುಕೊಂಡು ತರಬೇತಿ ಪಡೆದ 740 ತಂಡಗಳಿಂದ (1 ತಂಡದಲ್ಲಿ ತಲಾ ಇಬ್ಬರು) 3,64,310 ಮಂದಿಯನ್ನು ತಲುಪುವ ಗುರಿ ಹೊಂದಲಾಗಿದೆ.

ಎರಡು ವಾರಕ್ಕಿಂತ ಹೆಚ್ಚು ಕಫ ಸಹಿತ ಕೆಮ್ಮು, ಸಂಜೆ ವೇಳೆ ಜ್ವರ, ಹಸಿವಾಗದಿರುವುದು, ತೂಕ ಕಡಿಮೆ ಆಗುವುದು, ರಾತ್ರಿ ವೇಳೆ ಬೆವರುವುದು, ಎದೆಯಲ್ಲಿ ನೋವು, ಕಫದಲ್ಲಿ ರಕ್ತ ರೋಗಲಕ್ಷಣಗಳಿರುವ ವ್ಯಕ್ತಿಗಳು ತಂಡದ ಸದಸ್ಯರು ಮನೆ ಭೇಟಿ ನೀಡಿದಾಗ ಸೂಕ್ತ ಮಾಹಿತಿಯೊಂದಿಗೆ ಕಫ ಮಾದರಿಯನ್ನು ನೀಡಬೇಕು. ರೋಗವಿದೆ ಖಚಿತಗೊಂಡ ಬಳಿಕ ಉಚಿತ ಚಿಕಿತ್ಸೆಯನ್ನು ಪಡೆಯಬಹುದಾಗಿದೆ.

ಕ್ಷಯರೋಗವು ಸಾಂಕ್ರಾಮಿಕ ರೋಗವಾಗಿದ್ದು, ಮೈಕೋಬ್ಯಾಕ್ಟೀರಿಯಾ ಟ್ಯುಬರ್‌ಕುಲೋಸಿಸ್ ಎಂಬ ಬ್ಯಾಕ್ಟೀರಿಯಾದಿಂದ ಬರುತ್ತಿದೆ. ಕ್ಷಯರೋಗಿ ಕೆಮ್ಮಿದಾಗ, ಸೀನಿದಾಗ ತುಂತುರು ಹನಿಗಳ ಮೂಲಕ ಮತ್ತೊಬ್ಬರಿಗೆ ಹರಡುತ್ತದೆ. ಚಿಕಿತ್ಸೆ ಪಡೆಯದ ಶ್ವಾಸಕೋಶ ಕ್ಷಯರೋಗಿ 1 ವರ್ಷದಲ್ಲಿ ಕನಿಷ್ಠ 10-15 ಮಂದಿಗೆ ಕ್ಷಯರೋಗವನ್ನು ಹರಡುವ ಸಾಧ್ಯತೆ ಇದೆ. ಕ್ಷಯರೋಗವು ಶ್ವಾಸಕೋಶವಲ್ಲದೆ ಇತರೆ ಅಂಗಾಂಗಗಳಿಗೂ ಬರುತ್ತದೆ.

ಜಿಲ್ಲೆಯಲ್ಲಿ 2018ರಲ್ಲಿ 3,256, 2019ರಲ್ಲಿ 3,439, 2020ರಲ್ಲಿ 2,472, 2021ರಲ್ಲಿ 2,438, 2022ರಲ್ಲಿ 2,964 ಮತ್ತು ಪ್ರಸಕ್ತ ವರ್ಷದ ಜನವರಿ 1ರಿಂದ ಜುಲೈ 17ರವರೆಗೆ 1,544 ಮಂದಿ ಕ್ಷಯರೋಗಿಗಳನ್ನು ಗುರುತಿಸಲಾಗಿದೆ. ಕ್ಷಯರೋಗ ಬಂದರೆ ಭಯಪಡುವ ಅಗತ್ಯವಿಲ್ಲ. ಸರಕಾರಿ ಆರೋಗ್ಯ ಕೇಂದ್ರಗಳಲ್ಲಿ ದೊರಕುವ ಉಚಿತ ತಪಾಸಣೆ ಮತ್ತು ಚಿಕಿತ್ಸೆ ಮೂಲಕ ರೋಗ ನಿಯಂತ್ರಿಸಬಹುದಾಗಿದೆ ಎಂದು ದ.ಕ. ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಬದ್ರುದ್ದೀನ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X