Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಕ್ಸ್‌ಪರ್ಟ್ ಇ-ಲರ್ನ್ ಆ್ಯಪ್ ಬಿಡುಗಡೆ

ಎಕ್ಸ್‌ಪರ್ಟ್ ಇ-ಲರ್ನ್ ಆ್ಯಪ್ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ24 Aug 2024 2:22 PM IST
share
ಎಕ್ಸ್‌ಪರ್ಟ್ ಇ-ಲರ್ನ್ ಆ್ಯಪ್ ಬಿಡುಗಡೆ

ಮಂಗಳೂರು,ಆ.24;ನಗರದ ಎಕ್ಸ್‌ಪರ್ಟ್ ಸಮೂಹ ಶಿಕ್ಷಣ ಸಂಸ್ಥೆಯು ಅಭಿವೃದ್ಧಿ ಪಡಿಸಿದ ಕೃತಕ ಬುದ್ಧಿಮತ್ತೆ (ಆರ್ಟಿ ಫಿಶಿ ಯಲ್ ಇಂಟೆಲಿಜೆನ್ಸ್-ಎಐ) ಆಧಾರಿತ ಕಲಿಕಾ ವೇದಿಕೆ ಎಕ್ಸ್‌ಪರ್ಟ್ ಇ-ಲರ್ನ್ ಅನ್ನು ಶನಿವಾರ ನಗರದ ಹೋಟೆಲ್ ಒಶಿಯನ್ ಪರ್ಲ್ ಸಭಾಂಗಣದಲ್ಲಿ ಹಮ್ಮಿಕೊಂಡ ಸಮಾರಂಭದಲ್ಲಿ ಐ.ಟಿ ಉದ್ಯಮಿ ಕೆ.ಉಲ್ಲಾಸ್ ಕಾಮತ್ ಬಿಡುಗಡೆ ಗೊಳಿಸಿದ್ದಾರೆ.

ಸಮಾರಂಭದಲ್ಲಿ ಅತಿಥಿಗಳಾಗಿ ಭಾಗವಹಿಸಿದ್ಧ ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ,ಐ.ಟಿ ಉದ್ಯಮಿ ರೋಹಿತ್ ಭಟ್ ಶುಭ ಹಾರೈಸಿದರು.

ಎಕ್ಸ್‌ಪರ್ಟ್ ಸಂಸ್ಥೆಯ ಐ.ಟಿ ನಿರ್ದೇಶಕ ಅಂಕುಶ್ ಎನ್ ನಾಯಕ್ ವಿವರಣೆ ನೀಡುತ್ತಾ, ಸಮಾರಂಭದಲ್ಲಿ ಎಕ್ಸ್‌ಪರ್ಟ್ ಇ-ಲರ್ನ್, ಕೃತಕ ಬುದ್ಧಿಮತ್ತೆ ಆಧಾರಿತ 'ಇಝಿ' (EZ) ಹಾಗೂ ವಿಸ್ತ್ರತ ಅಧ್ಯಯನದ 'ಎಕ್ಸ್‌ಪೆಡಿಷನ್' ಎಂಬ ಮೂರು ಹೊಸ ಆವಿಷ್ಕಾರವನ್ನು ಎಕ್ಸ್‌ಪರ್ಟ್ ಸಮೂಹ ಶಿಕ್ಷಣ ಸಂಸ್ಥೆ ಲೋಕಾರ್ಪಣೆಗೊಳಿಸಿದೆ.ಆ್ಯಂಡ್ರಾಯ್ಡ್ ಆಧಾರಿತ ಎಕ್ಸ್‌ಪರ್ಟ್ ಇ-ಲರ್ನ್ ಆ್ಯಪ್ ನ್ನು ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜು ಹಾಗೂ ಎಕ್ಸ್‌ಪರ್ಟ್ ಕೋಚಿಂಗ್ ಕ್ಲಾಸಸ್‌ನ ವಿದ್ಯಾರ್ಥಿಗಳಿಗೆ ಪೂರೈಸಿದರೆ, ಮುಂದಿನ ಶೈಕ್ಷಣಿಕ ವರ್ಷದಿಂದ ಮುಕ್ತ ಮಾರುಕಟ್ಟೆಗೆ ಪೂರೈಸಲಾಗುವುದು. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಇದರ ಲಾಭ ಪಡೆದುಕೊಳ್ಳಬಹುದು.

ಎಕ್ಸ್‌ಪರ್ಟ್ ಸಮೂಹ ಸಂಸ್ಥೆಯ ಅನುಭವಿ ಅಧ್ಯಾಪಕರು ಮಾಡಿರುವ ಪಾಠಗಳ ವಿಡಿಯೊವನ್ನು ಎಕ್ಸ್‌ಪರ್ಟ್ ಇ-ಲರ್ನ್‌ ನಲ್ಲಿ ನೋಡಬಹುದಾಗಿದೆ ಎಂದರು.

ಪ್ರತಿ ವಿಷಯದಲ್ಲಿ ಸುಮಾರು 10 ನಿಮಿಷಗಳ ವಿಡಿಯೋ ಇದ್ದು, ವಿಡಿಯೋ ಪಾಠದ ನಡುವೆ ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆಯು ಪ್ರಶ್ನೆಯನ್ನು ಕೇಳುತ್ತದೆ. ಪ್ರಶ್ನೆಗೆ ಉತ್ತರ ಕೊಟ್ಟರೆ ಮಾತ್ರ ವಿಡಿಯೋ ಮತ್ತೆ ಮುಂದುವರಿಯುತ್ತದೆ. ಇಲ್ಲದಿದ್ದರೆ ಮತ್ತೆ ಮೊದಲಿನಿಂದ ಪ್ಲೇ ಮಾಡಿ ಮನನ ಮಾಡಬೇಕು. ಹೀಗೆ ಒಂದರ್ಥದಲ್ಲಿ ತರಗತಿಯಲ್ಲಿ ಅಧ್ಯಾಪಕರು ಪ್ರಶ್ನೆ ಕೇಳಿದಂತೆ ಇಲ್ಲೂ ಕೇಳಲಾಗುತ್ತದೆ ಎಂದವರು ವಿವರಿಸಿದ್ದಾರೆ.

ಎಕ್ಸ್‌ಪರ್ಟ್‌ನ ಇಝಿ ಎಂಬುದು ಕೃತಕ ಬುದ್ದಿಮತ್ತೆ ಆಧಾರಿತವಾಗಿರುವುದರಿಂದ ವಿದ್ಯಾರ್ಥಿಗಳು ತಮ್ಮ ಸಂದೇಹವನ್ನು ಟೈಪ್ ಮಾಡಿ ಕೇಳಿದಾಗ, ವಿಡಿಯೋ, ನೋಟ್ಸ್ ವಿವರಣೆಯನ್ನು ಉದಾಹರಣೆ ಸಹಿತ ವಿವರಿಸಲಾಗುತ್ತದೆ. ಇದು ಎನ್‌ಸಿಆರ್‌ಟಿ ಮತ್ತು ಎಕ್ಸ್‌ಪರ್ಟ್ ಪಬ್ಲಿಷಿಂಗ್ ಹೌಸ್ ಹೊರತಂದಿರುವ ಪುಸ್ತಕಗಳ ಆಧಾರದಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುತ್ತದೆ. ಇದು ಇತರ ಸರ್ಚ್ ಎಂಜಿನ್ ಗಿಂತ ಹೆಚ್ಚು ನಿಖರವಾದ ಉತ್ತರವನ್ನು ನೀಡುತ್ತದೆ.

ವಿದ್ಯಾರ್ಥಿಗಳಿಗೆ ವಿಷಯದ ಬಗ್ಗೆ ಆಳವಾಗಿ ಅರಿತುಕೊಳ್ಳಲು ಸಹಾಯ ಮಾಡುತ್ತದೆ. ಮಾತ್ರವಲ್ಲ ಈ ರೀತಿಯ ರಿವಿಷನ್ ಪರಿಣಾಮಕಾರಿಯಾಗಿರುತ್ತದೆ. ಕೃತಕ ಬುದ್ದಿಮತ್ತೆ ಒಂದು ಹೆಜ್ಜೆ ಮುಂದೆ ಹೋಗಿ ವಿದ್ಯಾರ್ಥಿಗಳಿಗೆ ನೋಟ್ಸ್ ಮಾತೃಭಾಷೆಯಲ್ಲೂ ಕೊಡುತ್ತದೆ. ಇದು ವಿದ್ಯಾರ್ಥಿಗಳಿಗೆ ಸುಲಭದಲ್ಲಿ ಅರ್ಥ ಮಾಡಿಕೊಳ್ಳಲು ಸಹಕಾರಿಯಾಗಿದೆ ಎಂದರು.

ಸಾಮಾನ್ಯವಾಗಿ ಎಲ್ಲ ಆನ್‌ಲೈನ್ ಕ್ಲಾಸ್‌ಗಳು ವನ್ ವೇ ಕಮ್ಯೂನಿಕೇಷನ್‌ ನಿಂದ ಕೂಡಿದ್ದರೆ, ಇಲ್ಲಿ ವಿದ್ಯಾರ್ಥಿಗಳು ಪ್ರಶ್ನೆಗಳನ್ನು ಕೇಳಬಹುದು. ಪಠ್ಯದ ವಿಷಯಗಳ ಕುರಿತು ಎಲ್ಲ ಮಗ್ಗಲುಗಳಿಂದ ಪ್ರಶ್ನೆ ಕೇಳಬಹುದು, ತುಲನೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಪರೀಕ್ಷೆಗಳ ಸಿದ್ದತೆಗಾಗಿ ಮಾದರಿ ಪ್ರಶ್ನೆಗಳನ್ನು ಕೊಡುವಂತೆಯೂ ಕೇಳಬಹುದು. ಮಾದರಿ ಪ್ರಶ್ನೆಗಳಿಗೆ ಉತ್ತರಿಸಿದರೆ ತಕ್ಷಣ ಮೌಲ್ಯಮಾಪನ ಮಾಡಲಾಗುತ್ತದೆ. ಕೀ ಉತ್ತರಗಳನ್ನು ನೀಡುತ್ತದೆ. ಈ ನಡುವೆ ಕಾಲಮಿತಿಯಲ್ಲೂ ಪದವಿ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯನ್ನೂ ಅನ್‌ಲೈನ್‌ ನಲ್ಲಿ ಮಾಡಲಾಗುತ್ತದೆ.

ವಿದ್ಯಾರ್ಥಿಗಳಿಗೆ ನೀಡುವ ಟ್ಯಾಬ್ ಸುರಕ್ಷಿತವಾಗಿದ್ದು, ಎಕ್ಸ್‌ಪರ್ಟ್‌ನ ಇ-ಲರ್ನ್ ಆ್ಯಪ್ ಹೊರತುಪಡಿಸಿ ಇತರ ಯಾವುದೇ ಆ್ಯಪ್ ಡೌನ್ಲೋಡ್ ಮಾಡಲು ಸಾಧ್ಯವಿಲ್ಲ. ಇದನ್ನು ಎಕ್ಸ್‌ಪರ್ಟ್‌ನ ಸರ್ವರ್ ಕೊಠಡಿಯಲ್ಲಿ ಸಂಪೂರ್ಣ ಮಾನಿಟರ್ ಮಾಡಲಾಗುತ್ತದೆ. ಮಕ್ಕಳಲ್ಲಿ ಶಿಸ್ತು ಕಾಪಾಡುವ ಉದ್ದೇಶದಿಂದ ಹಾಗೂ ಆರೋಗ್ಯ ದೃಷ್ಟಿಯಿಂದ ರಾತ್ರಿ 11ರಿಂದ ಮುಂಜಾನೆ 5 ಗಂಟೆಯವರೆಗೆ ಸ್ಟೀನ್ ಸಂಪೂರ್ಣ ಆಫ್ ಆಗುತ್ತದೆ. ಈ ವೇಳೆ ಕೇವಲ ಅಲಾರ್ಮ್ ಮಾತ್ರ ಕೆಲಸ ಮಾಡುತ್ತದೆ ಎಂದರು.

ಚಿಕ್ಕ ಮಕ್ಕಳಿಗೆ ಇರುವ ಪ್ರಶ್ನಿಸುವ ಮನೋಭಾವ ಹಾಗೂ ಕುತೂಹಲದಿಂದ ನೋಡುವ ಆಸಕ್ತಿಯನ್ನು ನಿರಂತರವಾಗಿಸುವ ಉದ್ದೇಶದಿಂದ ಪಠ್ಯದ ವಿಭಿನ್ನ ರೀತಿಯ ಪ್ರಸ್ತುತತೆಯೇ ಎಕ್ಸ್‌ಪೆಡಿಷನ್. ಫಿಸಿಕ್ಸ್, ಕೆಮೆಸ್ಟ್ರಿ, ಬಯಾಲಜಿ, ಮ್ಯಾತ್ಸ್, ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಸ್ಟಾಟಿಸ್ಟಿಕ್ಸ್, ಇಂಗ್ಲಿಷ್, ಕನ್ನಡ, ಸಂಸ್ಕೃತ, ಹಿಂದಿ ವಿಷಯದಲ್ಲೂ ಈ ಪ್ರಯೋಗ ಮಾಡಲಾಗಿದೆ. ಇದು ಪುಸ್ತಕ ರೂಪದಲ್ಲಿ ಎಲ್ಲರಿಗೆ ದೊರೆತರೆ, ಡಿಜಿಟಲ್ ಮಾದರಿಯಲ್ಲಿ ಎಕ್ಸ್‌ಪರ್ಟ್ ಇ-ಲನ್ ಆ್ಯಪ್‌ನಲ್ಲಿ ದೊರೆಯಲಿದೆ.

ವಿಷಯದಲ್ಲಿ ಮೇಲಿನ ಆಸಕ್ತಿ ಹೆಚ್ಚಿಸಿ, ವಿಷಯವನ್ನು ಬೇರೆ ಬೇರೆ ಮಗ್ಗುಲುಗಳಿಂದ ವಿಭಿನ್ನ ರೀತಿಯಲ್ಲಿ ಪರಾಮರ್ಶೆ ಮಾಡಲಾಗುತ್ತದೆ. ಯಾವುದೇ ರೀತಿಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಾಮರ್ಥ್ಯ ಬೆಳೆಸುವ ಉದ್ದೇಶವೇ ಎಕ್ಸ್‌ಪೆಡಿಷನ್, ಕಲಿಕೆಯಲ್ಲಿ ವಿಷಯಕ್ಕೆ ಹೊಸ ಪ್ರಸ್ತುತತೆಯನ್ನು ಇಲ್ಲಿ ನೀಡಲಾಗಿದೆ. ಸುಲಭವಾಗಿ ಮತ್ತು ಹೆಚ್ಚು ಸೃಜನಾತ್ಮಕ ರೀತಿಯಲ್ಲಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರೇರಣೆ ನೀಡಲು ಸಿದ್ಧಪಡಿಸಲಾಗಿದೆ ಎಂದು ಅಂಕುಶ್ ತಿಳಿಸಿದ್ದಾರೆ.

ಸಮಾರಂಭದಲ್ಲಿ ಎಕ್ಸ ಫರ್ಟ್ ಸಂಸ್ಥೆಯ ಅಧ್ಯಕ್ಷ ನರೇಂದ್ರ ಎಲ್ ನಾಯಕ್, ಉಪಾಧ್ಯಕ್ಷೆ ಡಾ.ಉಷಾ ಪ್ರಭಾ ನಾಯಕ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X