Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಶಕ್ತರಿಗೆ ಮಾನವೀಯ ನೆಲೆಯ ಸಹಾಯ...

ಅಶಕ್ತರಿಗೆ ಮಾನವೀಯ ನೆಲೆಯ ಸಹಾಯ ಸಮಾಜಕ್ಕೆ ಪ್ರೇರಣೆಯಾಗಲಿ: ಸ್ಪೀಕರ್ ಯು.ಟಿ. ಖಾದರ್

ವಾರ್ತಾಭಾರತಿವಾರ್ತಾಭಾರತಿ25 Dec 2025 6:43 PM IST
share
ಅಶಕ್ತರಿಗೆ ಮಾನವೀಯ ನೆಲೆಯ ಸಹಾಯ ಸಮಾಜಕ್ಕೆ ಪ್ರೇರಣೆಯಾಗಲಿ: ಸ್ಪೀಕರ್ ಯು.ಟಿ. ಖಾದರ್
► ಆಶಾ ಪ್ರಕಾಶ್ ಶೆಟ್ಟಿ 'ನೆರವು' ಕಾರ್ಯಕ್ರಮ ► 4 ಸಾವಿರ ಕುಟುಂಬಗಳಿಗೆ 9.5 ಕೋ.ರೂ ನೆರವು

ಮಂಗಳೂರು: ಜಾತಿ, ಧರ್ಮ ತಾರತಮ್ಯ ಮಾಡದೆ ಅಶಕ್ತರಿಗೆ ಮಾನವೀಯತೆಯ ನೆಲೆಯಲ್ಲಿ ಆರ್ಥಿಕ ಸಹಾಯ ನೀಡುತ್ತಿರುವ ಎಂಆರ್ ಜಿ ಸಂಸ್ಥೆಯ ನೆರವು ಕಾರ್ಯಕ್ರಮ ಸಮಾಜಕ್ಕೆ ಪ್ರೇರಣೆಯಾಗಲಿ ಎಂದು ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.

ಅವರು ಗುರುವಾರ ಗೋಲ್ಡ್ ಫಿಂಚ್ ಮೈದಾನದಲ್ಲಿ ಹಮ್ಮಿಕೊಂಡ ಅಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜ ನೆಯ "ನೆರವು" ಕಾರ್ಯ ಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಈ ರೀತಿಯ ಆರ್ಥಿಕ ನೆರವು ಸಮಾಜದ ದುರ್ಬಲರಿಗೆ ಮಾನಸಿಕಸ್ಥೈರ್ಯ ವನ್ನು ನೀಡುವ ಕಾರ್ಯಕ್ರಮ. ಇದು ಯುವ ಜನರ ಮೂಲಕ ಮುಂದುವರಿಯಬೇಕು ಎಂದರು.‌

ಸಾಮರಸ್ಯ, ಒಗ್ಗಟ್ಟು ದೇಶದ ದೊಡ್ಡ ಶಕ್ತಿ ದ್ವೇಷ ಮುಕ್ತ ಸಮಾಜ ನಿರ್ಮಾಣದ ಮೂಲಕ ದೇಶ ಕಟ್ಟುವ ಸಮಾಜ ವನ್ನು ಒಗ್ಗೂಡಿಸುವ ಕೆಲಸವಾಗಬೇಕಾಗಿದೆ.ತಂದೆ ತಾಯಿಯ ಗೌರವ ಉಳಿಸುವ ಕೆಲಸದ ಮೂಲಕ ಎಂಆರ್ ಜಿ ಸಂಸ್ಥೆ ಸಮಾಜಕ್ಕೆ ಮಾದರಿಯಾಗಿದೆ.ಬದುಕಿನಲ್ಲಿ ತಾಳ್ಮೆ,ಪ್ರೀತಿ,ಸಹೋದರತ್ವ ಸಹಬಾಳ್ವೆ ರೂಢಿಸಿಕೊಂಡಾಗ ಬದುಕು ಸಾರ್ಥಕ ಎಂದರು.

ಮುಖ್ಯ ಅತಿಥಿ ಆಳ್ವಾಸ್ ಶಿಕ್ಷಣ ಸಂಸ್ಥೆಗಳಲಣ ಅಧ್ಯಕ್ಷ ಡಾ.ಮೋಹನ್ ಆಳ್ವ ಮಾತನಾ ಡುತ್ತಾ,ಪ್ರಕಾಶ್ ಶೆಟ್ಟಿ ಯವರು ಜಾತಿ, ಧರ್ಮ, ಪಂಗಡ ಎಂಬ ಇಲ್ಲದೆ ಅವಶ್ಯಕತೆ ಇರುವವರಿಗೆ ಆರ್ಥಿಕ ಸಹಾಯ ನೀಡಿದ್ದಾರೆ.ಹಲವಾರು ಸಭಾ ಗೃಹ ನಿರ್ಮಾಣ, ನಿರಂತರ ಸಮಾಜ ಸೇವೆಯ ಮೂಲಕ ,ವಿಶಾಲ ಹೃದಯ ವಂತಿಕೆಯ ಮೂಲಕ ಜನರ ಪ್ರೀತಿಗೆ ಪಾತ್ರ ರಾಗಿದ್ದಾರೆ ಎಂದರು .ಎಂಆರ್ ಜಿ ಸಂಸ್ಥೆಯ ಅಧ್ಯಕ್ಷ ಚೇರ್ಮನ್ ಡಾ.ಪ್ರಕಾಶ್ ಶೆಟ್ಟಿ ಅವರು, ಮಾತನಾಡುತ್ತಾ,"ನಾನೊಬ್ಬ ಸಾಮಾನ್ಯ ಕುಟುಂಬದಲ್ಲಿ ಒಂದು ಸಣ್ಣ ಹಳ್ಳಿಯಲ್ಲಿ ಜನಿಸಿದೆ. ತಂದೆ ಮಾಧವ ಶೆಟ್ಟಿ, ತಾಯಿ ರತ್ನ ಶೆಟ್ಟಿ ಅವರೊಂದಿಗೆ ಕಷ್ಟದ ಜೀವನ ನಡೆಸಿ ಶಾಲಾ ದಿನಗಳಲ್ಲಿ ಜಾತಿ, ಧರ್ಮ ಯಾವುದನ್ನು ನೋಡದೆ ಎಲ್ಲರ ಮನೆಗಳಲ್ಲಿ ತಿಂದು ಅವರ ಅಂಗಳದಲ್ಲಿ ಆಡಿದ ನೆನಪು ಇನ್ನೂ ಇದೆ. ಅಮ್ಮನಿಗಿಂತ ಶ್ರೇಷ್ಠವಾದುದು ಜಗತ್ತಿನಲ್ಲಿ ಯಾವುದೂ ಇಲ್ಲ. ನಮ್ಮ ಮುಂದಿನ ಬದುಕನ್ನು ರೂಪಿಸುವುದು ನಮ್ಮ ಅಮ್ಮ ಮಾತ್ರ. ಅಮ್ಮನ ಮಮತೆ, ತಂದೆಯ ಪ್ರೀತಿ, ತುಳುನಾಡಿನ ಸಂಸ್ಕೃತಿ ಜೊತೆಗಿನ ಬದುಕು ನನ್ನನ್ನು ಇಂದು ಈ ಮಟ್ಟಕ್ಕೆ ಬೆಳೆಸಿದೆ. 1983ರಲ್ಲಿ ಬದುಕು ಕಟ್ಟಿಕೊಳ್ಳಲು ಬೆಂಗಳೂರು ತಲುಪಿ 15 ವರ್ಷಗಳ ಕಾಲ ಅವಮಾನ, ಕಷ್ಟ ಎಲ್ಲವನ್ನು ಮೆಟ್ಟಿನಿಂತು ಯಶಸ್ಸಿನತ್ತ ಒಂದೊಂದೇ ಮೆಟ್ಟಿಲು ಹತ್ತತೊಡಗಿದೆ. ರಿಯಲ್ ಎಸ್ಟೇಟ್, ಹೋಟೆಲ್ ಉದ್ಯಮಕ್ಕೆ ಕೈಹಾಕಿದೆ. ದೇವರ ಶಕ್ತಿ ಆಶೀರ್ವಾದದಿಂದ ನಾನೊಬ್ಬ ಉದ್ಯಮಿಯಾಗಿ ಬೆಳೆದೆ. ಆಗ ನನಗೆ ಕಂಡಿದ್ದು ನನ್ನ ಉಡುಪಿ, ಮಂಗಳೂರಿನ ಜನತೆ. ನನ್ನ ಊರಿಗೆ ಏನಾದರೂ ಮಾಡಬೇಕು ಎಂಬ ನಿಟ್ಟಿನಲ್ಲಿ 2019ರಲ್ಲಿ ನನ್ನ ಆತ್ಮೀಯರು ಹೇಳಿದ್ದಕ್ಕೆ ಧ್ವನಿಗೂಡಿಸಿ ನೆರವು ಯೋಜನೆ ಪ್ರಾರಂಭಿಸಿದೆ. ಏಳು ಜಿಲ್ಲೆಗಳ ಫಲಾನುಭವಿಗಳಿಗೆ ಇಂದು ನೀಡುತ್ತಿರುವ ಆರ್ಥಿಕ ಸಹಾಯದ ಸದುಪಯೋಗವಾಗಬೇಕು. ಹಿಂದೆ ನಾನು ನಿಮ್ಮಂತೆ ವೇದಿಕೆಯ ಕೆಳಗಡೆ ಕೂತಿರುತ್ತಿದ್ದೆ. ಇಂದು ನಿಮ್ಮನ್ನು ನೋಡುವಾಗ ಖುಷಿಯಾಗುತ್ತದೆ. ನಿಮಗೆಲ್ಲರಿಗೂ ಪ್ರೇರಣೆಯಾಗಬೇಕು ಎಂದು ಕಾರ್ಯಕ್ರಮ ಆಯೋಜಿಸುತ್ತಿದ್ದೇವೆ. ಮಕ್ಕಳು ಇದರ ಪ್ರಯೋಜನ ಪಡೆದುಕೊಂಡು ಸಮಾಜದಲ್ಲಿ ಎತ್ತರದ ಸ್ಥಾನಕ್ಕೇರಬೇಕು. ಮುಂದೆ ನನ್ನಂತೆ ಸಮಾಜದ ನೊಂದವರ ಶೋಷಿತರ ಪರ ನೀವೆಲ್ಲರೂ ನಿಲ್ಲಬೇಕು“ ಎಂದು ಆಶಯ ವ್ಯಕ್ತಪಡಿಸಿದರು.

”ಈ ವರ್ಷ ನೆರವು ಯೋಜನೆ ಏಳನೇ ವರ್ಷವನ್ನು ಪೂರೈಸುತ್ತಿದೆ. ಇನ್ನು ಮೂರು ವರ್ಷಗಳ ಕಾಲ ಯೋಜನೆ ಮುಂದುವರಿಯುತ್ತದೆ. ದಶಮಾನೋತ್ಸವ ಬಳಿಕ 'ನೆರವು' ಯೋಜನೆಯ ಫಲಾನುಭವಿಗಳನ್ನು ಸೇರಿಸಿಕೊಂಡು ಅದಕ್ಕೊಂದು ಸಾಮೂಹಿಕ ರೂಪ ಕೊಡುವ ಚಿಂತನೆ ಇದೆ. ಈ ವಿಸ್ತರಣೆಯಿಂದ ಪ್ರತೀ ವರ್ಷ ಕನಿಷ್ಠ ಹದಿನಾಲ್ಕು ಸಾವಿರ ಕುಟುಂಬಗಳಿಗೆ ನೆರವು ಕೊಡಲು ಸಾಧ್ಯವಾಗಲಿದೆ. ಈ ಬಾರಿ 4 ಸಾವಿರ ಕುಟುಂಬಗಳಿಗೆ 9.5 ಕೋ.ರೂ ನೆರವು ನೀಡಲಾಗುತ್ತಿದೆ. ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ ವೈದ್ಯಕೀಯ ಚಿಕಿತ್ಸೆ ಸುಲಭವಾಗಿದೆ. ಆದರೆ ಆ ಸವಲತ್ತುಗಳಿಗೆ ಎಲ್ಲರಿಗೂ ಪ್ರವೇಶ ಸಾಧ್ಯವಾಗುತ್ತಿಲ್ಲ ಎಂಬುದೂ ಅಷ್ಟೇ ಸತ್ಯ, ನಮ್ಮ ನೆರವಿನ ಮೊತ್ತದಲ್ಲಿ ದೊಡ್ಡ ಭಾಗ ಇದಕ್ಕೆ ಮೀಸಲಾಗಿದೆ. ಆಧುನಿಕ ಚಿಕಿತ್ಸೆಯ ಪ್ರಜಾಪ್ರಭುತ್ವೀಕರಣದ ನಿಟ್ಟಿನಲ್ಲಿ ನಮ್ಮದೊಂದು ಕಿರು ಹೆಜ್ಜೆ ಎಂದು ನಾವು ಪ್ರಾಮಾಣಿಕವಾಗಿ ಮತ್ತು ನಮ್ಯತೆಯಿಂದ ಭಾವಿಸುತ್ತೇವೆ. ಈ ಯೋಜನೆಯನ್ನು ಆರಂಭ ಮಾಡಿದ ಮೊದಲ ವರ್ಷ ಒಟ್ಟು 1.25 ಕೋ.ರೂ. ನೆರವು ವಿತರಿಸಿದ್ದೇವೆ. ಆಗ 28 ಸಂಘ ಸಂಸ್ಥೆಗಳು ಪ್ರಯೋಜನ ಪಡೆದಿವೆ. ಈಗ 7ನೇ ವರ್ಷದಲ್ಲಿ 100ಕ್ಕೂ ಅಧಿಕ ಸಂಘ ಸಂಸ್ಥೆಗಳಿಗೆ ನೆರವು ವಿತರಣೆಯಾಗಲಿದೆ“ ಎಂದರು.

ಶಿವಮೊಗ್ಗ, ಸಾಗರ, ತೀರ್ಥಹಳ್ಳಿ, ಕೊಪ್ಪ, ಸಕಲೇಶಪುರ ಮತ್ತು ನಮ್ಮ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳಿಂದ ಬಂದ ಅರ್ಜಿಗಳನ್ನು ಪರಿಶೀಲಿಸಿ ಆಯ್ಕೆ ಮಾಡಲಾಗಿದೆ ಎಂದವರು ತಿಳಿಸಿದ್ದಾರೆ.

ಕಳೆದ ವರ್ಷ 3000 ಕುಟುಂಬಗಳಿಗೆ ಆರು ಕೋಟಿ ನೆರವು ವಿತರಿಸಲಾಗಿತ್ತು. ಕಳೆದ ವರ್ಷದವರೆಗೆ ಪ್ರಧಾನವಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿದ್ದ ಯೋಜನೆಯ ಭೌಗೋಳಿಕ ವ್ಯಾಪ್ತಿ ಶಿವಮೊಗ್ಗ, ಚಿಕ್ಕಮಗಳೂರು ಭಾಗಶಃ ಉತ್ತರ ಕನ್ನಡ ಜಿಲ್ಲೆಗಳಿಗೂ ವಿಸ್ತರಣೆಯಾಗಿದೆ.ಮೊತ್ತವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ ಮೂಲಕ ಅಥವಾ ಕೆಲವು ಸಂದರ್ಭಗಳಲ್ಲಿ ಚೆಕ್ ಮೂಲಕ ಪಾವತಿಸಲಾಗುತ್ತದೆ. ಸಮುದಾಯದ ಅಸ್ತಿಗಳನ್ನು ಸೃಷ್ಟಿಸುವ ಧಾರ್ಮಿಕ ಕ್ಷೇತ್ರ, ಪರಂಪರೆಯ ಕ್ಷೇತ್ರಗಳಿಗೆ ನೆರವು ನೀಡಲಾಗಿದೆ ಎಂದು ಪ್ರಕಾಶ್ ಶೆಟ್ಟಿ ತಿಳಿಸಿದ್ದಾರೆ.

ಸಮಾರಂಭದಲ್ಲಿ ಚಲನ ಚಿತ್ರ ನಿರ್ದೇಶಕಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಶುಭ ಹಾರೈಸಿದರು. ಎಂಆರ್ ಜಿ ಸಮೂಹ ಸಂಸ್ಥೆಗಳ ಪಾಲುದಾರರಾದ ಆಶಾ ಪ್ರಕಾಶ್ ಶೆಟ್ಟಿ, ಗೌರವ್ .ಪಿ .ಶೆಟ್ಟಿಮೊದಲಾದವರು ಉಪಸ್ಥಿತರಿದ್ದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸ್ವಾಗತಿಸಿದರು.
















share
ವಾರ್ತಾಭಾರತಿ
ವಾರ್ತಾಭಾರತಿ
Next Story
X