Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮದ್ದಡ್ಕ: ಡಿ. 21ರಂದು ಸಮಸ್ತ ಆದರ್ಶ...

ಮದ್ದಡ್ಕ: ಡಿ. 21ರಂದು ಸಮಸ್ತ ಆದರ್ಶ ಪ್ರಚಾರ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ19 Dec 2025 7:24 PM IST
share
ಮದ್ದಡ್ಕ: ಡಿ. 21ರಂದು ಸಮಸ್ತ ಆದರ್ಶ ಪ್ರಚಾರ ಸಮ್ಮೇಳನ

ಬೆಳ್ತಂಗಡಿ: ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಎಂಬ ಸಂಘಟನೆಯನ್ನು 1926ರಲ್ಲಿ ಆರಂಭಿಸಿದರು. ಈ ಸಂಘಟನೆಯು ಇದೀಗ ನೂರನೇ ವರ್ಷಕ್ಕೆ ದಾಪುಗಾಲಿಡುತ್ತಿದೆ. ಇದರ ಭಾಗವಾಗಿ ಕಾಸರಗೋಡಿನ ಕುಣಿಯ ಎಂಬಲ್ಲಿ 2026 ಫೆಬ್ರವರಿ 2 ರಿಂದ 8ರವರೆಗೆ 100 ನೇ ವಾರ್ಷಿಕ ಮಹಾ ಸಮ್ಮೇಳನವು ನಡೆಯಲಿಕ್ಕಿದೆ. ಅದರ ಪ್ರಚಾರಾರ್ಥ ಬೆಳ್ತಂಗಡಿ ತಾಲೂಕು ಜಂಇಯ್ಯತುಲ್ ಉಲಮಾ ಮತ್ತು ಎಸ್.ಕೆ.ಎಸ್.ಎಸ್.ಎಫ್ ಮದ್ದಡ್ಕ ಶಾಖೆಯ ಸಹಯೋಗದಲ್ಲಿ ಮದ್ದಡ್ಕದಲ್ಲಿ ಡಿ. 21 ರಂದು ಸಂಜೆ 4 ಗಂಟೆಗೆ ಬೃಹತ್ ಸಮಸ್ತ ಆದರ್ಶ ಪ್ರಚಾರ ಸಮ್ಮೇಳನ ನಡೆಯಲಿದೆ ಎಂದು ಸಮಿತಿಯ ವೈಸ್ ಚೆಯರ್ಮೇನ್ ನಝೀರ್ ಅಝ್ಹರಿ ತಿಳಿಸಿದ್ದಾರೆ.

ಬೆಳ್ತಂಗಡಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಚಾರ ತಿಳಿಸಿದರು. ಕಾರ್ಯಕ್ರಮದ ಮೊದಲಿಗೆ ಕಿನ್ನಿಗೋಳಿಯಿಂದ ಸಂಜೆ 3 ಗಂಟೆಗೆ ರ್ಯಾಲಿ ಆರಂಭಗೊಳ್ಳಲಿದೆ. ತ್ವಾಹ ತಂಙಳ್ ಬೆಳ್ತಂಗಡಿಯವರಿಂದ ಪಣಕಜೆ ಮಕಾಂ ಝಿಯಾರತ್ ಮೂಲಕ ಆರಂಭಗೊಳ್ಳಲಿದೆ, ಮಧ್ಯಾಹ್ನ 2 ಗಂಟೆಗೆ‌‌ ಎಸ್ ಕೆ ಎಸ್.ಬಿ ವಿ ಬೆಳ್ತಂಗಡಿ ರೇಂಜ್ ತಹ್ದೀಸ್ ಮೀಟ್ ವಿಧ್ಯಾರ್ಥಿ ಸಂಗಮದಲ್ಲಿ ಮಜೀದ್ ದಾರಿಮಿಯವರು ತರಗತಿ ನಡೆಸಲಿದ್ದಾರೆ. ನಂತರ SKSSF ಬೆಳ್ತಂಗಡಿ ವಲಯ ವಿಖಾಯ ಸಂಗಮ ನಡೆಯಲಿದೆ. ಕಿನ್ನಿಗೋಳಿಯಿಂದ ನಡೆಯುವ ಪ್ರಚಾರ ಜಾಥಾಕ್ಕೆ ಮುಂಡೂರು ತಂಙಳ್ ಚಾಲನೆಯನ್ನು ನೀಡಲಿದ್ದಾರೆ. ಮಿತ್ತಬೈಲ್ ಇರ್ಷಾದ್ ದಾರಿಮಿ ರ್ಯಾಲಿ ಉದ್ಘಾಟನೆಯನ್ನು ಮಾಡಲಿದ್ದಾರೆ. ಸದಖತುಲ್ಲಾ ದಾರಿಮಿ, ಶಂಸುದ್ದೀನ್ ದಾರಿಮಿ, ನೌಶಾದ್ ಅಝ್ಹರಿ, ಅಝೀಝ್ ಅಶ್ಶಾಫಿ, ಬಶೀರ್ ದಾರಿಮಿ, ಇಸ್ಮಾಯಿಲ್ ತಂಙಳ್, ನೌಶಾದ್ ಮದ್ದಡ್ಕ, ಝುಬೈರ್ ಕಕ್ಕಿಂಜೆ ರ್ಯಾಲಿಯ ನೇತೃತ್ವ ವಹಿಸಲಿದ್ದಾರೆ. ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ವಲಯ ಅಧ್ಯಕ್ಷರಾದ ಅಬ್ದುರ್ರಝಾಕ್ ಅಧ್ಯಕ್ಷತೆ ವಹಿಸಲಿದ್ದಾರೆ. ಆದಂ ದಾರಿಮಿ ದುಆ ನೆರವೇರಿಸುವ ಈ ಕಾರ್ಯಕ್ರಮದಲ್ಲಿ ಮದ್ದಡ್ಕ ಸ್ವಾಗತ ಸಮೀತಿ ಚೆಯರ್ಮೇನ್ ಸಿರಾಜ್ ಚಿಲಿಂಬಿ ಸ್ವಾಗತ ಭಾಷಣ ಮಾಡಲಿದ್ದು ಬೆಳ್ತಂಗಡಿ ರೇಂಜ್ ಅಧ್ಯಕ್ಷರಾದ ಅಶ್ರಫ್ ಫೈಝಿ ಪುಂಜಾಲಕಟ್ಟೆ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ಸಮಸ್ತ ಕರ್ನಾಟಕ ಕೋಶಾಧಿಕಾರಿಯಾದ ಝೈನುಲ್ ಆಬಿದೀನ್ ತಂಙಳ್ ಬೆಳ್ತಂಗಡಿ ಉದ್ಘಾಟಿಸಲಿದ್ದಾರೆ. ಸಮಸ್ತ ಕೇಂದ್ರ ಮುಶಾವರ ಸದಸ್ಯರಾದ ತೋಡಾರ್ ಉಸ್ತಾದ್ ಅನುಗ್ರಹ ಭಾಷಣವನ್ನು ನಡೆಸಲಿದ್ದು ಎಸ್ ಕೆ ಎಸ್ ಎಸ್ ಎಫ್ ರಾಜ್ಯ ಕಾರ್ಯದರ್ಶಿಯವರಾದ ಅನೀಸ್ ಕೌಸರಿ ಮುಖ್ಯ ಪ್ರಭಾಷಣಗೈಯಲಿದ್ದಾರೆ. ನಝೀರ್ ಅಝ್ಹರಿ ಮತ್ತು ಶಂಸುದ್ದೀನ್ ಅಶ್ರಫೀ ಆಶಂಸಾ ಭಾಷಣ ನಡೆಸುವರು.

ಮಗ್ರಿಬ್ ನಮಾಝಿನ ಬಳಿಕ ನಡೆಯುವ ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ಚೆಯರ್ಮಾನ್ ಐ.ಕೆ ಮೂಸಾ ದಾರಿಮಿ ಕಕ್ಕಿಂಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಕನ್ವೀನರ್ ಇಸ್ಮಾಯಿಲ್ ದಾರಿಮಿ ಸ್ವಾಗತ ಭಾಷಣ ಮಾಡಲಿದ್ದಾರೆ. ಸಂಚಾಲಕರಾದ ರಿಯಾಝ್ ಫೈಝಿ ಕಕ್ಕಿಂಜೆ ಪ್ರಾಸ್ತಾವಿಕವಾಗಿ ಮಾತನಾಡಲಿದ್ದು ಜಲಾಲಿ ಉಸ್ತಾದ್ ಕಕ್ಕಿಂಜೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.. ಅಶ್ಫಾಕ್ ಫೈಝಿ ಬ್ಯಾರಿ ಭಾಷಣ ಮಾಡಲಿದ್ದಾರೆ. ಅಝೀಝ್ ದಾರಿಮಿ ಚೊಕ್ಕಬೆಟ್ಟು,ಹೈದರ್ ದಾರಿಮಿ ಕರಾಯ,ಇಸ್ಮಾಯಿಲ್ ಫೈಝಿ ,ಜುನೈದ್ ಜಿಫ್ರಿ ತಂಙಳ್ ಆಶಂಸ ಭಾಷಣವನ್ನು ಮಾಡಲಿದ್ದಾರೆ.ಪ್ರಖ್ಯಾತ ಸುನ್ನತ್ ಜಮಾಅತಿನ ವಾಗ್ಮಿ ಜಝೀಲ್ ಕಮಾಲಿ ಫೈಝಿ ಉಸ್ತಾದ್ ಮುಖ್ಯ ಪ್ರಭಾಷಣಗೈಯಲಿದ್ದಾರೆ. ವಲಯ ಕಾರ್ಯದರ್ಶಿ ಹಾಶಿಂ ಫೈಝಿ ಧನ್ಯವಾದ ನಡೆಸುವರು.

ಈ ಕಾರ್ಯಕ್ರಮದಲ್ಲಿ ಹಲವಾರು ಉಲಮಾ ಉಮರಾ ಗಣ್ಯರು ಭಾಗವಹಿಸಲಿದ್ದಾರೆ‌ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ಜಂಇಯ್ಯತುಲ್ ಉಲಮಾ ಅಧ್ಯಕ್ಷರಾದ ಮೂಸಾ ದಾರಿಮಿ ಕಕ್ಕಿಂಜೆ ಸ್ವಾಗತ ಸಮಿತಿ ಕನ್ವೀನರ್ ರಿಯಾಝ್ ಫೈಝಿ, ರೇಂಜ್ ಅಧ್ಯಕ್ಷರಾದ ಅಶ್ರಫ್ ಫೈಝಿ, ವೈಸ್ ಚೆಯರ್ಮೇನ್ ನಝೀರ್ ಅಝ್ಹರಿ, ಬೆಳ್ತಂಗಡಿ ವಲಯ ಅಧ್ಯಕ್ಷರಾದ ರಝಾಕ್ ಮದ್ದಡ್ಕ ಸಮಿತಿ ಅಧ್ಯಕ್ಷರಾದ ಇಲ್ಯಾಸ್ ಚಿಲಿಂಬಿ, ಅಝೀಝ್ ಅಶ್ಶಾಫಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X