Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು | ಸಂಸದ ನಳಿನ್ ನಿವಾಸಕ್ಕೆ...

ಮಂಗಳೂರು | ಸಂಸದ ನಳಿನ್ ನಿವಾಸಕ್ಕೆ ಮುತ್ತಿಗೆ ಯತ್ನ; ಎನ್.ಎಸ್.ಯು.ಐ. ಕಾರ್ಯಕರ್ತರು ವಶಕ್ಕೆ

ಅನುದಾನ ತರುವಲ್ಲಿ ವಿಫಲ ಆರೋಪ

ವಾರ್ತಾಭಾರತಿವಾರ್ತಾಭಾರತಿ8 Feb 2024 2:20 PM IST
share
ಮಂಗಳೂರು | ಸಂಸದ ನಳಿನ್ ನಿವಾಸಕ್ಕೆ ಮುತ್ತಿಗೆ ಯತ್ನ; ಎನ್.ಎಸ್.ಯು.ಐ. ಕಾರ್ಯಕರ್ತರು ವಶಕ್ಕೆ

ಮಂಗಳೂರು, ಫೆ.8: ಸಂಸದ ನಳಿನ್ ಕುಮಾರ್ ಕಟೀಲು ಅವರು ಜಿಲ್ಲೆಗೆ ಸಮರ್ಪಕ ಅನುದಾನ ತರುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿ ಎನ್.ಎಸ್.ಯು.ಐ. ಕಾರ್ಯಕರ್ತರು ಸಂಸದರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಗುರುವಾರ ನಡೆಯಿತು.

ಎನ್.ಎಸ್.ಯು.ಐ. ಜಿಲ್ಲಾ ಅಧ್ಯಕ್ಷ ಸುಹಾನ್ ಆಳ್ವ ನೇತೃತ್ವದಲ್ಲಿ ಕಾರ್ಯಕರ್ತರು ಉರ್ವಾ ಬಳಿ ಸಂಸದ ನಳಿನ್ ಕುಮಾರ್ ಕಟೀಲು ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ಸಂದರ್ಭ ಸ್ಥಳದಲ್ಲಿದ್ದ ಪೊಲೀಸರು ಅವರನ್ನು ತಡೆದು ವಶಕ್ಕೆ ಪಡೆದರು.

ಬಿಜೆಪಿಗೆ ಧಿಕ್ಕಾರ ಕೂಗುತ್ತಾ ಸಂಸದರ ಮನೆಯೆದುರು ಜಮಾಯಿಸಿದ ಕಾರ್ಯಕರ್ತರನ್ನು ಪೊಲೀಸರು ಬ್ಯಾರಿಕೇಡ್ ಗಳನ್ನು ಬಳಸಿ ತಡೆದರು.

ಈ ಸಂದರ್ಭ ಮಾತನಾಡಿದ ಸುಹಾನ್ ಆಳ್ವ, ಜಿಲ್ಲೆಯ ಅಭಿವೃದ್ಧಿ ಕುಂಠಿತವಾಗಿದೆ. ಜಿಲ್ಲೆಯಲ್ಲಿ ಸಾಕಷ್ಟು ಶಾಲಾ ಕಾಲೇಜುಗಳಿದ್ದರೂ ಯುವಕರು ಉದ್ಯೋಗದಿಂದ ವಂಚಿತರಾಗಿದ್ದಾರೆ. ಕೇಂದ್ರ ಸರಕಾರದಿಂದ ರಾಜ್ಯಕ್ಕೆ ನೀಡುವ ಅನುದಾನದಲ್ಲಿ ತಾರಮತ್ಯ ಮಾಡಲಾಗುತ್ತಿದೆ. ನಮ್ಮ ತೆರಿಗೆ ಹಣ ನಮಗೆ ನೀಡಲು ನಿರಾಕರಿಸಲಾಗುತ್ತಿದೆ. ಜಿಲ್ಲೆಗೆ ಸಂಸದ ಕೊಡುಗೆ ಏನು ಎಂದು ಪ್ರಶ್ನಿಸಿದರು.

ಮುತ್ತಿಗೆ ಯತ್ನ ನಡೆಸಿದ ವೇಳೆ ಅಲ್ಲಿದ್ದ ಉರ್ವಾ ಠಾಣಾಧಿಕಾರಿ ಭಾರತಿ ತಡೆದಾಗ ಎನ್.ಎಸ್.ಯು.ಐ. ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದರು. ಬ್ಯಾರಿಕೇಡ್ ತಳ್ಳಿ ಮುತ್ತಿಗೆಗೆ ಮುಂದಾದಾಗ ಪೊಲೀಸರು ಎನ್.ಎಸ್.ಯು.ಐ. ಕಾರ್ಯಕರ್ತರನ್ನು ವಶಕ್ಕೆ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X