Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: AI ಚಾಲಿತ ಟೆಕ್ ಕಲಿಕಾ ವೇದಿಕೆ...

ಮಂಗಳೂರು: AI ಚಾಲಿತ ಟೆಕ್ ಕಲಿಕಾ ವೇದಿಕೆ ಪ್ರಾರಂಭಿಸಿದ 'ಜಂಪ್ ವೇರ್'

ವಾರ್ತಾಭಾರತಿವಾರ್ತಾಭಾರತಿ26 Sept 2025 12:03 PM IST
share
ಮಂಗಳೂರು: AI ಚಾಲಿತ ಟೆಕ್ ಕಲಿಕಾ ವೇದಿಕೆ ಪ್ರಾರಂಭಿಸಿದ ಜಂಪ್ ವೇರ್

ಮಂಗಳೂರು: ಎಡ್-ಟೆಕ್ ಮತ್ತು ಉದ್ಯೋಗ ಕೌಶಲ್ಯಾಭಿವೃದ್ಧಿ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಜಂಪ್ ವೇರ್ (JumpWhere) ಕಂಪೆನಿಯು ಮಂಗಳೂರಿನಲ್ಲಿ ಸೆ.24ರಂದು ನಡೆದ 'ಟೆಕ್ನೋವಾಂಝ 2025' ಕಾರ್ಯಕ್ರಮದಲ್ಲಿ ತನ್ನ AI ಆಧರಿತ ನವೀಕೃತ ತಂತ್ರಜ್ಞಾನ ಕಲಿಕೆ ವೇದಿಕೆ(Next-Gen Tech Learning Platform)ಯನ್ನು ಅನಾವರಣಗೊಳಿಸಿತು.

ಈ ಕಾರ್ಯಕ್ರಮವನ್ನು ಮಾಹಿತಿ ತಂತ್ರಜ್ಞಾನ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಿದರು. ಶಾಸಕ ವೇದವ್ಯಾಸ ಕಾಮತ್, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಹಲವಾರು ಉದ್ಯಮ ಕ್ಷೇತ್ರದ ಗಣ್ಯರು ಈ ವೇಳೆ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಮತ್ತು ವೃತ್ತಿಪರರಿಗೆ AI ಆಧಾರಿತ ವೈಯಕ್ತಿಕ ಕಲಿಕೆ ಅವಕಾಶಗಳು, ಉದ್ಯಮದ ನೈಜ ಅವಶ್ಯಕತೆಗಳಿಗೆ ಅನುಗುಣವಾಗಿ ಪ್ರಾಜೆಕ್ಟ್ ಗಳು ಮತ್ತು ಅಸೈನ್ಮೆಂಟ್ ಗಳು, AI/ML, ವೆಬ್ ಮತ್ತು ಮೊಬೈಲ್ ಡೆವಲಪ್ಮೆಂಟ್, ಕ್ಲೌಡ್, ಸೈಬರ್ ಸುರಕ್ಷತೆ ಮುಂತಾದ ಕ್ಷೇತ್ರಗಳ ಜಾಗತಿಕ ತಜ್ಞರ ವಿಷಯಗಳ ಕುರಿತ ಕಲಿಕೆ, ಉದ್ಯೋಗ ಸಿದ್ಧತಾ ತರಬೇತಿಗಳು, ಅಣಕು ಸಂದರ್ಶನಗಳು ಮತ್ತು ಮಾರ್ಗದರ್ಶನಗಳು ಜಂಪ್ ವೇರ್ ಟೆಕ್ ಲರ್ನಿಂಗ್ ಪ್ಲಾಟ್ ಫಾರ್ಮ್ ನ ಪ್ರಮುಖ ವೈಶಿಷ್ಟ್ಯಗಳಾಗಿವೆ.

ಜಂಪ್ ವೇರ್ ಸ್ಥಾಪಕ ಮುಹಮ್ಮದ್ ಸಾಕಿಬ್ ಮಾತನಾಡಿ, ನಮ್ಮ ಉದ್ದೇಶ ಪ್ರಥಮ ವರ್ಷದ ವಿದ್ಯಾರ್ಥಿಯಿಂದ ಹಿಡಿದು ಉದ್ಯೋಗದಲ್ಲಿರುವ ವೃತ್ತಿಪರರ ತನಕ ಎಲ್ಲರೂ ಉದ್ಯಮಕ್ಕೆ ಬೇಕಾದ ಕೌಶಲ್ಯಗಳನ್ನು ಕಲಿಯವುದು ಮತ್ತು ಆತ್ಮವಿಶ್ವಾಸದಿಂದ ಸಾಮರ್ಥ್ಯ ತೋರಿಸಲು ಸಾಧ್ಯವಾಗುವಂತಹ ವೇದಿಕೆ ನಿರ್ಮಿಸುವುದು. ಇದು ತಂತ್ರಜ್ಞಾನ ಶಿಕ್ಷಣವನ್ನು ಎಲ್ಲರಿಗೂ ಲಭ್ಯವಾಗುವಂತೆ ಮಾಡಿ ಭಾರತದ ಡಿಜಿಟಲ್ ಅಭಿವೃದ್ಧಿಗೆ ಕೊಡುಗೆ ನೀಡುವ ಪ್ರಯತ್ನ ಎಂದು ಹೇಳಿದರು.

ಭಾರತದ ʼಐಟಿ ವಿಷನ್ 2030ʼ ಗುರಿಗಳಾದ ಉದ್ಯೋಗ ಸೃಷ್ಟಿ ಮತ್ತು ಡಿಜಿಟಲ್ ರಫ್ತುಗಳಿಗೆ ಅನುಗುಣವಾಗಿ ಈ ಕಾರ್ಯಕ್ರಮದಲ್ಲಿ ಮಂಗಳೂರಿನಂತಹ ಸಣ್ಣ ನಗರಗಳಿಂದ ಹೊಸ ಆವಿಷ್ಕಾರ ಮತ್ತು ಉದ್ಯಮಶೀಲತೆಗೆ ಉತ್ತೇಜನ ನೀಡುವ ಗುರಿಯನ್ನು ಹೊಂದಿದೆ. ಸರಕಾರದ ಬೆಂಬಲ ಮತ್ತು ಉದ್ಯಮ ಸಹಯೋಗದೊಂದಿಗೆ, ಜಂಪ್ ವೇರ್ ಮುಂದಿನ ಮೂರು ವರ್ಷಗಳಲ್ಲಿ ಒಂದು ಲಕ್ಷ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳುವ ಗುರಿಯನ್ನು ಹೊಂದಿದೆ.

ಜಂಪ್ವೇರ್ ಒಂದು ಎಡ್-ಟೆಕ್ ವೇದಿಕೆ. ಇದು ವಿದ್ಯಾರ್ಥಿಗಳು ಮತ್ತು ವೃತ್ತಿಪರರಿಗೆ ಉದ್ಯಮಕ್ಕೆ ತಕ್ಕ ಕೌಶಲ್ಯ ಕಲಿಸುವಲ್ಲಿ ಸಹಾಯ ಮಾಡುತ್ತದೆ. ಪ್ರಮಾಣಿತ ಇಂಟರ್ನ್ ಶಿಪ್ ಗಳು, ಉದ್ಯೋಗ ಮಾರ್ಗದರ್ಶನ ಮತ್ತು ಪ್ರಾಯೋಗಿಕ ತರಬೇತಿ ಮೂಲಕ ಮುಂದಿನ ಪೀಳಿಗೆಯ ಹೊಸ ಆವಿಷ್ಕಾರಕರು, ಡೆವಲಪರ್ ಗಳನ್ನು ಬೆಳೆಸುವ ಗುರಿ ಹೊಂದಿದೆ. ಕಲಿಕೆ ಮತ್ತು ಉದ್ಯಮದ ಅವಶ್ಯಕತೆಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಕೇವಲ ಇಂಟರ್ನ್ ಶಿಪ್ ಮಾತ್ರವಲ್ಲ, ಉದ್ಯೋಗ ಹಾಗೂ ಭವಿಷ್ಯದ ವೃತ್ತಿ ಯಶಸ್ಸಿಗೆ ಸಹಾಯ ಮಾಡುತ್ತದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X