Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ಮಹಾನಗರ ಪಾಲಿಕೆ| ಇನ್ನೂ...

ಮಂಗಳೂರು ಮಹಾನಗರ ಪಾಲಿಕೆ| ಇನ್ನೂ ಪ್ರಕಟಗೊಳ್ಳದ ಮೇಯರ್-ಉಪಮೇಯರ್ ಮೀಸಲಾತಿ

ವಾರ್ತಾಭಾರತಿವಾರ್ತಾಭಾರತಿ26 Aug 2024 7:49 PM IST
share
ಮಂಗಳೂರು ಮಹಾನಗರ ಪಾಲಿಕೆ| ಇನ್ನೂ ಪ್ರಕಟಗೊಳ್ಳದ ಮೇಯರ್-ಉಪಮೇಯರ್ ಮೀಸಲಾತಿ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮುಂದಿನ ಮೇಯರ್-ಉಪಮೇಯರ್ ಯಾರು ಎಂಬುದರ ಬಗ್ಗೆ ಚರ್ಚೆಯಾಗುತ್ತಿದೆ. ಆದರೆ ಸರಕಾರ ಇನ್ನೂ ಕೂಡ ಮೀಸಲು ನೀತಿ ಪ್ರಕಟಿಸದ ಕಾರಣ ಯಾರು ಎಂಬುದು ಪ್ರಶ್ನೆಯಾಗಿಯೇ ಉಳಿದಿದೆ.

ಹಾಲಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮತ್ತು ಉಪ ಮೇಯರ್ ಸುನೀತಾ ಅವರ ಅವಧಿಯು ಸೆ.8ರಂದು ಮುಗಿಯ ಲಿದೆ. ಅದೇ ದಿನ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಮುಂದಿನ ಅವಧಿಯ ಮೇಯರ್-ಉಪಮೇಯರ್ ಆಯ್ಕೆಗೆ ಚುನಾವಣೆ ನಡೆಯಬೇಕಿದೆ.

ಆದರೆ ಅದಕ್ಕೂ ಮೊದಲು ಸರಕಾರ ಮೀಸಲು ಅಧಿಸೂಚನೆ ಪ್ರಕಟಿಸಬೇಕು. ಆ ಬಳಿಕ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಚುನಾವಣೆ ದಿನ ಘೋಷಿಸಬೇಕು. ಅಲ್ಲದೆ ಎಲ್ಲಾ ಕಾರ್ಪೊರೇಟರ್‌ಗಳಿಗೆ ಎರಡು ವಾರದ ಮೊದಲು ಚುನಾವಣೆ ಕುರಿತು ನೋಟಿಸ್ ನೀಡಬೇಕು. ಮೇಯರ್-ಉಪಮೇಯರ್ ಅವಧಿಯು ಕೇವಲ 13 ದಿನಗಳು ಮಾತ್ರ ಇವೆ. ಆದರೆ ಈವರೆಗೆ ಸರಕಾರ ಮೀಸಲು ಪ್ರಕಟಿಸದ ಕಾರಣ ಗೊಂದಲ ಮುಂದುವರಿದಿದೆ.

ನೂತನ ಮೇಯರ್-ಉಪಮೇಯರ್ ಅವಧಿಯು ಕೇವಲ ಆರು ತಿಂಗಳು ಮಾತ್ರವಿದೆ. ಹಾಗಾಗಿ ಹಿರಿಯ ಕಾರ್ಪೊರೇಟರ್‌ ಗಳು ಹೆಚ್ಚಿನ ಆಸಕ್ತಿ ವಹಿಸುತ್ತಿರುವುದು ಕಂಡು ಬರುತ್ತಿಲ್ಲ. ಆದರೆ ಹೊಸಬರು ಸಿಕ್ಕಿದ ಅವಕಾಶ ಬಳಸಿಕೊಳ್ಳಲು ಮುಂದಾಗಿರುವುದಾಗಿ ಬಿಜೆಪಿಯ ಮೂಲಗಳು ತಿಳಿಸಿವೆ.

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿಯ 44, ಕಾಂಗ್ರೆಸ್‌ನ 14, ಎಸ್‌ಡಿಪಿಐ ಪಕ್ಷದ 2 ಕಾರ್ಪೊರೇಟರ್‌ ಗಳಿದ್ದಾರೆ. ಬಿಜೆಪಿಗೆ ಬಹುಮತವಿರುವ ಕಾರಣ ಅನಾಯಸವಾಗಿ ಮೇಯರ್-ಉಪಮೇಯರ್ ಸ್ಥಾನವನ್ನು ದಕ್ಕಿಸಿಕೊಳ್ಳಲಿದೆ.

2019ರ ನ.12ರಂದು ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆದಿತ್ತು. ಆದರೆ ಮೇಯರ್-ಉಪಮೇಯರ್ ಆಯ್ಕೆ ವಿಳಂಬವಾಗಿತ್ತು. ಅಂದರೆ ಪ್ರಥಮ ಅವಧಿಗೆ 2020ರ ಫೆ.28ರಿಂದ 2021ರ ಮಾ.2ರ ತನಕ ದಿವಾಕರ ಪಾಂಡೇಶ್ವರ ಮೇಯರ್ ಆಗಿದ್ದರು. ಎರಡನೇ ಅವಧಿಗೆ ಪ್ರೇಮಾನಂದ ಶೆಟ್ಟಿ ಅವರ ಮೇಯರ್ ಅವಧಿಯು 2021ರ ಮಾ.2ರಂದು ಆರಂಭಗೊಂಡಿದ್ದರೂ, ಕಾನೂನು ಸಮಸ್ಯೆಯಿಂದ ಆರು ತಿಂಗಳು ವಿಸ್ತರಿಸಿ ಸೆ.9ರಂದು ಅವಧಿ ಕೊನೆ ಗೊಂಡಿತ್ತು. ಮೂರನೇ ಅವಧಿಗೆ ಜಯಾನಂದ ಅಂಚನ್ 2022ರ ಸೆ.9ರಿಂದ 2023ರ ಸೆ.8ರ ತನಕ ಮೇಯರ್ ಆಗಿದ್ದರು. ನಾಲ್ಕನೇ ಅವಧಿಗೆ 2023ರ ಸೆ.8ರಿಂದ ಸುಧೀರ್ ಶೆಟ್ಟಿ ಕಣ್ಣೂರು ಮೇಯರ್ ಆಗಿದ್ದರು. ಅವರ ಅವಧಿಯು ಸೆ.8ರಂದು ಕೊನೆಗೊಳ್ಳಲಿದೆ.

ಪ್ರೇಮಾನಂದ ಶೆಟ್ಟಿಗೆ ಆರು ತಿಂಗಳು ಹೆಚ್ಚುವರಿ ಅಧಿಕಾರ ಸಿಕ್ಕಿದ್ದರಿಂದ ಐದನೇ ಅವಧಿಯ ಮೇಯರ್‌ಗೆ ಸೆ.8ರಿಂದ 2025ರ ಫೆ.28ರ ತನಕ ಕೇವಲ ಆರು ತಿಂಗಳ ಅಧಿಕಾರ ಅವಧಿ ಸಿಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

*ಮೀಸಲಾತಿ ಯಾವುದೇ ಬಂದರೂ ಕೂಡ ಆಡಳಿತಾರೂಢ ಬಿಜೆಪಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳೆ, ಹಿಂದುಳಿದ ವರ್ಗ, ಸಾಮಾನ್ಯ ವರ್ಗದ ಕಾರ್ಪೊರೇಟರ್‌ಗಳಿದ್ದಾರೆ.

*ಪ್ರಥಮ ಮತ್ತು ಎರಡನೇ ಅವಧಿಗೆ ಮಂಗಳೂರು ನಗರ ದಕ್ಷಿಣ ವಿಧಾನಸಭೆ ಕ್ಷೇತ್ರದಿಂದ, ಮೂರನೇ ಅವಧಿಗೆ ಮಂಗಳೂರು ನಗರ ಉತ್ತರ ಕ್ಷೇತ್ರದಿಂದ, ನಾಲ್ಕನೇ ಅವಧಿಗೆ ಮಂಗಳೂರು ನಗರ ದಕ್ಷಿಣ ಕ್ಷೇತ್ರದಿಂದ ಮೇಯರ್ ಆಯ್ಕೆ ನಡೆದಿತ್ತು. ಕೊನೆಯ ಅವಧಿಗೆ ಯಾವ ಕ್ಷೇತ್ರದಿಂದ ಆಯ್ಕೆ ನಡೆಯಲಿದೆ ಎಂಬ ಕುತೂಹಲವು ಬಿಜೆಪಿಗರಲ್ಲಿದೆ.

*ಪಾಲಿಕೆಯ ಸದಸ್ಯತ್ವವು ಶೇ.50 ಮಹಿಳಾ ಮೀಸಲಾದರೂ ಕೂಡ ಮಹಿಳೆಯರಿಗೆ ಮೇಯರ್ ಭಾಗ್ಯ ನಾಲ್ಕು ಅವಧಿ ಯಲ್ಲಿ ಸಿಕ್ಕಿಲ್ಲ. ಈವರೆಗಿನ ನಾಲ್ಕು ಮೇಯರ್‌ಗಳು ಕೂಡ ಪುರುಷರಿಗೆ ಲಭಿಸಿತ್ತು. ಹಾಗಾಗಿ ಕೊನೆಯ ಅವಧಿಯು ಮಹಿಳೆಯರಿಗೆ ಲಭಿಸುವ ಸಾಧ್ಯತೆಯ ಮಾತು ಕೇಳಿ ಬರುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X