Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಜೋಗಿ ಸಮುದಾಯದಿಂದ ಉಪವಾಸ...

ಮಂಗಳೂರು: ಜೋಗಿ ಸಮುದಾಯದಿಂದ ಉಪವಾಸ ಸತ್ಯಾಗ್ರಹ

ವಾರ್ತಾಭಾರತಿವಾರ್ತಾಭಾರತಿ27 Aug 2023 7:13 PM IST
share
ಮಂಗಳೂರು: ಜೋಗಿ ಸಮುದಾಯದಿಂದ ಉಪವಾಸ ಸತ್ಯಾಗ್ರಹ

ಮಂಗಳೂರು, ಆ.27: ಕದ್ರಿ ಜೋಗಿಮಠ ಹಿತರಕ್ಷಣಾ ಸಮಿತಿ, ದ.ಕ. ಜೋಗಿ ಸಮಾಜ ಸುಧಾರಕ ಸಂಘ, ಕದ್ರಿ ಶ್ರೀ ಜೋಗಿಮಠ ಜೀರ್ಣೋದ್ಧಾರ ಮತ್ತು ನಿರ್ವಹಣಾ ಸಮಿತಿಯ ವತಿಯಿಂದ ನಗರದ ಕದ್ರಿ ಜೋಗಿಮಠದಲ್ಲಿ ಶ್ರೀಕಾಲ ಬೈರವ ದೇವರ ಮೂಲಮೂರ್ತಿ ಪ್ರತಿಷ್ಠಾಪಿಸುವಂತೆ ಒತ್ತಾಯಿಸಿ ರವಿವಾರ ಜೋಗಿ ಸಮಾಜದ ಬಂಧುಗಳಿಂದ ಉಪವಾಸ ಸತ್ಯಾಗ್ರಹ ನಡೆಯಿತು.

ಕಾಲಭೈರವದೇವರಿಗೆ ಬ್ರಹ್ಮಕಲಶೋತ್ಸವ ಹಾಗೂ ಮೂರ್ತಿ ಪುನಃ ಪ್ರತಿಷ್ಠಾಪನೆಯು ಕಳೆದ ಫೆಬ್ರವರಿಯಲ್ಲಿ ನಡೆದಿದ್ದು, ಸಾವಿರಾರು ವರ್ಷ ಇತಿಹಾಸ ಇರುವ ಮೂಲ ಮೂರ್ತಿಯನ್ನು ಬಿಟ್ಟು ಯಾರೋ ಮಾರ್ವಾಡಿಗಳು ಕೊಡಮಾಡಿದ ಅಮೃತ ಶಿಲೆಯನ್ನು ಇಟ್ಟು ಬ್ರಹ್ಮಕಲಶ ಮಾಡಿದ್ದು ಬಹುದೊಡ್ಡ ಅಪಚಾರವಾಗಿದೆ. ಈ ಬಗ್ಗೆ ಪುರಾತತ್ವ ಇಲಾಖೆ ನೀಡಿದ ಆದೇಶವನ್ನು ಜಾರಿಗೊಳಿಸಿ ಶ್ರೀ ಕಾಲಬೈರವ ದೇವರ ಮೂಲ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಎಂದು ಮಾಜಿ ಮೇಯರ್, ಜೋಗಿ ಸಮಾಜದ ಮುಖಂಡ ಹರಿನಾಥ್ ಜೋಗಿ ಒತ್ತಾಯಿಸಿದರು.

ಈಗಿನ ನಿರ್ಮಲನಾಥ ಸ್ವಾಮೀಜಿ ಮಠಾಧಿಪತಿಗಳು ಕಾಲಬೈರವನ ಆರಾಧಕರಾದ ಸ್ಥಳೀಯ ಜೋಗಿ ಸಮಾಜದ ಬಂಧುಗಳ ಮನಸ್ಸಿಗೆ ನೋವುಂಟು ಮಾಡುತ್ತಿದ್ದಾರೆ. ರಾಜಸ್ಥಾನದ ಭಕ್ತರು ಹಾಗೂ ಕೆಲವರು ಸೇರಿಕೊಂಡು ಪುರಾತನ ಕಾಲದಿಂದ ಆರಾಧಿಸಿಕೊಂಡು ಬರುತ್ತಿದ್ದ ಕಾಲಭೈರವ ದೇವರ ವಿಗ್ರಹವನ್ನು ಬಟ್ಟೆಯಲ್ಲಿ ಸುತ್ತಿ ಬಿಸಾಡಿದ್ದರು. ಯಾವುದೇ ವಿಧಿವಿಧಾನ ಅನುಸರಿಸದೆ ಚೀಲದಿಂದ ತೆಗೆದು ಹೊಸ ವಿಗ್ರಹ ಕೂರಿಸಿದ್ದಾರೆ. ಮಠ ಜೋಗಿ ಸಮುದಾಯಕ್ಕೆ ಸೇರಿದ್ದು, ಮಠಾಧೀಶರ ನಿರ್ದೇಶನದಲ್ಲಿ ಜೋಗಿಗಳೇ ಪ್ರತಿನಿತ್ಯ ಪೂಜೆ ನಡೆಸಬೇಕು ಎಂದರು.

ಹಳೆಯ ಕಾಲಭೈರವ ದೇವರ ವಿಗ್ರಹವನ್ನು ಮಠಾಧಿಪತಿಗಳು ಮಾರಾಟಕ್ಕೆ ಯತ್ನಿಸಿದ್ದರು. ನಾವು ಪ್ರಾಚ್ಯವಸ್ತು ಇಲಾಖೆ ಯನ್ನು ಸಂಪರ್ಕಿಸಿ ಮಾರಾಟ ತಡೆದಿದ್ದೇವೆ. ಮೊದಲಿನ ವಿಗ್ರಹವನ್ನೇ ಪ್ರತಿಷ್ಠಾಪಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದು, ಈ ಬಗ್ಗೆ ಪ್ರತಿಕ್ರಿಯೆ ಬಂದಿಲ್ಲ. ಇದರಿಂದ ಬೇಸತ್ತು ಉಪವಾಸ ಸತ್ಯಾಗ್ರಹ ಮಾಡಿದ್ದೇವೆ. ಇದು ಸಾಂಕೇತಿಕ ವಾಗಿದ್ದು ಬೇಡಿಕೆ ಈಡೇರದಿದ್ದರೆ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದರು.

ಕದ್ರಿ ಜೋಗಿ ಮಠ ಹಿತರಕ್ಷಣಾ ಸಮಿತಿ ಅಧ್ಯಕ್ಷ ಶರತ್ ಕುಮಾರ್, ಜೀರ್ಣೋದ್ದಾರ ಮತ್ತು ಕಾರ್ಯನಿರ್ವಹಣ ಸಮಿತಿಯ ಕಾರ್ಯದರ್ಶಿ ಹರೀಶ್ ಎಸ್. ಜೋಗಿ, ಸಮಾಜದ ಪ್ರಮುಖರಾದ ಕೆ. ದಯಾನಂದ ಜೋಗಿ, ಬಾಲಕೃಷ್ಣಕದ್ರಿ, ನಾಗೇಂದ್ರ ಚಿಲಿಂಬಿ, ಸತೀಶ್ ಜೋಗಿ ಮಾಲೆಮಾರ್, ದಿವ್ಯಾ ನವೀನ್, ವಿದ್ಯಾ ಗಣೇಶ್, ಶರತ್ ಕುಮಾರ್, ಜಗಜೀವನ್‌ದಾಸ್, ಸುರೇಶ್ ಕುಮಾರ್, ನಾಗೇಶ್, ಗಣೇಶ್, ಕಾನೂನು ಸಲಹೆಗಾರರಾದ ಹರೀಶ್ ಎಸ್., ಮೋಹನ್, ವಸಂತ್ ಜೋಗಿ, ಜಯಂತ್ ಜೋಗಿ, ದಯಾನಂದ ಜೋಗಿ, ಪ್ರಮಿತ್ ಜೋಗಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X