Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಮೇ 2ರಿಂದ 4ರ ವರೆಗೆ ದಕ್ಷಿಣ...

ಮಂಗಳೂರು: ಮೇ 2ರಿಂದ 4ರ ವರೆಗೆ ದಕ್ಷಿಣ ಏಷ್ಯಾ ಪ್ರಾದೇಶಿಕ ಚರ್ಮರೋಗ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ30 April 2025 1:10 PM IST
share
ಮಂಗಳೂರು: ಮೇ 2ರಿಂದ 4ರ ವರೆಗೆ ದಕ್ಷಿಣ ಏಷ್ಯಾ ಪ್ರಾದೇಶಿಕ ಚರ್ಮರೋಗ ಸಮ್ಮೇಳನ

ಮಂಗಳೂರು, ಎ.30: ಭಾರತೀಯ ಚರ್ಮರೋಗ, ಲೈಂಗಿಕ ರೋಗ ಹಾಗೂ ಕುಷ್ಠ ರೋಗಿಗಳ ಸಂಘ (ಐಎಡಿವಿಎಲ್) ವು ಮೇ. 2ರಿಂದ 4ರವರೆಗೆ ಮಂಗಳೂರಿನಲ್ಲಿ 13ನೇ ದಕ್ಷಿಣ ಏಷ್ಯಾ ಪ್ರಾದೇಶಿಕ ಚರ್ಮ ರೋಗ ಸಮ್ಮೇಳನ ಆಯೋಜಿಸುತ್ತಿದೆ.

ಐಎಡಿವಿಎಲ್ನ ರಾಷ್ಟ್ರೀಯ ಹಾಗೂ ಕರ್ನಾಟಕ ಮತ್ತು ಕರಾವಳಿ ಶಾಖೆಯ ಸಹಯೋಗದೊಂದಿಗೆ ಪ್ರಾದೇಶಿಕ ವೈದ್ಯಕೀಯ ಕಾಲೇಜುಗಳ ಸಹಯೋಗದಲ್ಲಿ ಸಮ್ಮೇಳನ ಟಿಎಂಎಎ ಪೈ ಇಂಟರ್ ನ್ಯಾಶನಲ್ ಕನ್ವೆನ್ಶನ್ ಸೆಂಟರ್ ನಲ್ಲಿ ನಡೆಯಲಿದೆ ಎಂದು ಸಮ್ಮೇಳನದ ಸಂಘಟನಾ ಸಮಿತಿಯ ಅಧ್ಯಕ್ಷ ಡಾ. ಗಣೇಶ್ ಎಸ್. ಪೈ ತಿಳಿಸಿದ್ದಾರೆ.

ಮಂಗಳೂರು ಪ್ರೆಸ್ಕ್ಲಬ್ ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಮೇ 2ರಂದು ಸಂಜೆ 6:30ಕ್ಕೆ ಸಮ್ಮೇಳನ ಉದ್ಘಾಟಿಸುವರು ಎಂದರು.

ಸಮ್ಮೇಳನದಲ್ಲಿ 1,200ಕ್ಕೂ ಅಧಿಕ ಚರ್ಮರೋಗ ತಜ್ಞರು ಮತ್ತು ಇತರ ಗಣ್ಯರು ಭಾಗವಹಿಸಲಿದ್ದಾರೆ. 600 ವೈಜ್ಞಾನಿಕ ಪ್ರಬಂಧಗಳು ಮಂಡನೆಯಾಗಲಿದ್ದು, ಸಮ್ಮೇಳನವು ಚರ್ಮರೋಗ ಲೇಸರ್ ಗಳು ಮತ್ತು ಶಸ್ತ್ರ ಚಿಕಿತ್ಸಾ ತಂತ್ರಗಳ ಇತ್ತೀಚಿನ ಪ್ರಗತಿ ಸೇರಿದಂತೆ ಆಧುನಿಕ ಅವಿಷ್ಕಾರಗಳನ್ನು ಪ್ರದರ್ಶಿಸಲಿದೆ. ದಕ್ಷಿಣ ಏಷ್ಯಾವನ್ನು ಬಾಧಿಸುವ ನಿರ್ಲಕ್ಷಿತ ಉಷ್ಣ ವಲಯದ ಕಾಯಿಲೆಗಳ ಮೇಲೆ ವಿಶೇಷ ಗಮನ ಸೆಳೆಯಲಾಗುವುದು ಎಂದು ಸಮ್ಮೇಳನ ಸಂಘಟನಾ ಸಮಿತಿಯ ಸಂಯೋಜಕ ಡಾ.ರಮೇಶ್ ಭಟ್ ಮಾಹಿತಿ ನೀಡಿದರು.

ಪುಸ್ತಕ ಬಿಡುಗಡೆ- ಮೊತ್ತ ಆ್ಯನಿಮಲ್ ಕೇರ್ ಟ್ರಸ್ಟ್ ಗೆ

ಸಮ್ಮೇಳನದಲ್ಲಿ ಡಾ. ಗಣೇಶ್ ಪೈಯವರ 47 ವರ್ಷಗಳ ವೃತ್ತಿ ಅನುಭವದ ಕುರಿತಾದ ‘100 ತೌಸಂಡ್ ಹವರ್ಸ್’ ಹ್ಯಾಮ್ ಸ್ಟರ್ಸ್ ವೀಲ್ ಆಫ್ ಪ್ರಾಕ್ಟೀಸ್ ಎಂಬ ಪುಸ್ತಕ ಬಿಡುಗಡಗೊಳ್ಳಲಿದೆ. ಆ ಪುಸ್ತಕ ಮಾರಾಟದಿಂದ ಬರುವ ಸಂಪೂರ್ಣ ಮೊತ್ತ ಆ್ಯನಿಮಲ್ ಕೇರ್ ಟ್ರಸ್ಟ್ ಗೆ ನೀಡಲಾಗುತ್ತದೆ. ಡಾ.ಗಣೇಶ್ ಪೈಯವರ ಮೂರನೇ ಪುಸ್ತಕ ಇದಾಗಿದ್ದು, ಈ ಹಿಂದಿನ ಪುಸ್ತಕದಿಂದ ದೊರೆತ ಸುಮಾರು 6 ಲಕ್ಷ ರೂ. ಮೊತ್ತದಲ್ಲಿ ಆ್ಯನಿಮಲ್ ಕೇರ್ ಟ್ರಸ್ಟ್ ಗೆ ಆಂಬುಲೆನ್ಸ್ ಖರೀದಿಗೆ ಒದಗಿಸಲಾಗಿದೆ ಎಂದು ಡಾ.ರಮೇಶ್ ಭಟ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಮ್ಮೇಳನ ಸಂಘಟನಾ ಸಮಿತಿಯ ಸಹ ಅಧ್ಯಕ್ಷ ಡಾ.ಸುಕುಮಾರ್, ಸಂಘಟನಾ ಕಾರ್ಯದರ್ಶಿ ಜ್ಯೋತಿ ಜಯರಾಮನ್, ಕೋಶಾಧಿಕಾರಿ ಡಾ.ರೊಚೆಲ್ ಮೊಂತೆರೋ, ಡಾ.ಜೆಸಿಂತಾ ಮಾರ್ಟಿಸ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X