Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ವಿವಿ: ಲೇಖಕಿಯರ ಬದುಕು ಮತ್ತು...

ಮಂಗಳೂರು ವಿವಿ: ಲೇಖಕಿಯರ ಬದುಕು ಮತ್ತು ಬರಹ ಕುರಿತ 'ಲೇಖ ಲೋಕ-9' ಕಾರ್ಯಕ್ರಮ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ29 Aug 2023 6:19 PM IST
share
ಮಂಗಳೂರು ವಿವಿ: ಲೇಖಕಿಯರ ಬದುಕು ಮತ್ತು ಬರಹ ಕುರಿತ ಲೇಖ ಲೋಕ-9 ಕಾರ್ಯಕ್ರಮ ಉದ್ಘಾಟನೆ

ಕೊಣಾಜೆ: ಮಹಿಳಾ ಸಾಹಿತ್ಯ ಚರಿತ್ರೆಯು ಆಯಾ ಕಾಲಕ್ಕನುಸಾರವಾಗಿ ಯಾವ ರೀತಿಯ ಬದಲಾವಣೆಗೆ ತೆರೆದು ಕೊಂಡಿತು, ಎದುರಾದ ಅಡ್ಡಿ, ಸವಾಲುಗಳೇನು ಎನ್ನುವುದನ್ನು ಅರ್ಥ ಮಾಡಿಕೊಳ್ಳುವುದಕ್ಕೆ ಹಾಗೂ ಇಂತಹ ಸವಾಲು ಗಳನ್ನು ಲೇಖಕಿಯರು ಯಾವ ರೀತಿಯಲ್ಲಿ ನಿಭಾಯಿಸಿದರು ಎನ್ನುವುದನ್ನು ಲೇಖ ಲೋಕ ಕಾರ್ಯಕ್ರಮದ ಮೂಲಕ ಅರ್ಥ ಮಾಡಿಕೊಳ್ಳಲು ಸಾಧ್ಯ ಎಂದು ವಿಜಯಪುರ ಮಹಿಳಾ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಸಬಿಹಾ ಭೂಮಿಗೌಡ ಅವರು ಹೇಳಿದರು.

ಮಂಗಳೂರು ವಿಶ್ವವಿದ್ಯಾಲಯ, ಕರ್ನಾಟಕ ಲೇಖಕಿಯರ ಸಂಘ( ರಿ) ಬೆಂಗಳೂರು, ಕರಾವಳಿಯ ಲೇಖಕಿಯರ ವಾಚಕಿ ಯರ ಸಂಘ(ರಿ)ದ ಆಶ್ರಯದಲ್ಲಿ ಮಂಗಳವಾರ ಎಸ್ವಿಪಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ನಡೆದ ಲೇಖಕಿಯರ ಬದುಕು ಮತ್ತು ಬರಹ ಕುರಿತ ಕ 'ಲೇಖ ಲೋಕ-9' ಎರಡು ದಿನಗಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯು ಕುಟುಂಬ, ಸಮಾಜ , ಅರ್ಥವ್ಯವಸ್ಥೆ, ರಾಜಕೀಯ ಈ ಎಲ್ಲದರ ಜೊತೆಗೆ ತಮ್ಮನ್ನು ತಾವು ಹೇಗೆ ಗುರುತಿಸಿ ಕೊಂಡಿದ್ದಾರೆ ಎನ್ನುವ ಜೊತೆಗೆ ಬರಹ ಮತ್ತು ಬದುಕುಗಳ ಒಳಕೊಂಡಿಗಳು ಏನು ಎಂಬುದನ್ನು ನಾವು ಅರ್ಥ ಮಾಡಿಕೊ ಳ್ಳಬೇಕು ಎಂದು ಹೇಳಿದರು.

ಒಂದು ನಿಶ್ಚಿತವಾದ ಗುರಿಯನ್ನು ಇಟ್ಟುಕೊಂಡು ಬರವಣಿಗೆಗೆ ಹೊರಟರೆ ನಾವು ಆಗ ವಿಷಯಕ್ಕುನುಸಾರವಾಗಿ ತೆರೆದು ಕೊಳ್ಳುವುದರೊಂದಿಗೆ ಹಾಗೂ ನಾವು ಹೇಳಬೇಕಾದಂತಹ ವಿಷಯವನ್ನು ಸ್ಪಷ್ಟವಾಗಿ ದಾಖಲಿಸು ಸಾಧ್ಯವಾಗುತ್ತದೆ. ಆತ್ಮಕತೆ ಎನ್ನುವಾಗ ಸಹಜವಾಗಿ ವೈಯಕ್ತಿಕ ಬದುಕಿನ ಬಾಲ್ಯ, ಯೌವನ ಅಥವಾ ವೈವಾಹಿಕ ಜೀವನ ಮೊದಲಾದ ಸಂಗತಿಗಳು ಮಹಿಳಾ ಆತ್ಮಕಥನಗಳಲ್ಲಿ ಕಾಣುವ ಸ್ವರೂಪವಾಗಿವೆ. ಪುರುಷರ ಆತ್ಮಕಥನಗಳು ಇದಕ್ಕಿಂತ ಸ್ವಲ್ಪ ಭಿನ್ನವಾಗಿರುವುದನ್ನು ನಾವು ಗಮನಿಸಬಹುದು ಎಂದರು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಕರ್ನಾಟಕ ಲೇಖಕಿಯರ ವಾಚಕಿಯರ ಸಂಘದ ಅಧ್ಯಕ್ಷರಾದ ಡಾ.ಜ್ಯೋತಿ ಚೇಳ್ಯಾರು ಅವರು, ದ.ಕ.ಜಿಲ್ಲೆಯ ಮಹಿಳಾ ಲೇಖಕಿಯರ ಚರಿತ್ರೆಯನ್ನು ಗಮನಿಸಿದರೆ ಬರೆದವರು ತುಂಬಾ ಜನರು ಇದ್ದರೂ ಅದನ್ನು ದಾಖಲಿಸುವ ವ್ಯವಸ್ಥೆ ಇಲ್ಲದೆ ಎಷ್ಟೋ‌ ಮಹಿಳಾ ಲೇಖಕರನ್ನು ಗುರುತಿಸಲು ಸಾಧ್ಯವಾಗಿಲ್ಲ. ಪ್ರಸ್ತುತ ಆಧುನಿಕ ಕಾಲಘಟ್ಟದಲ್ಲಿಯೂ ಮಹಿಳಾಪರವಾದ ಯೋಚನೆ ಯಾಕೆ ಅಗತ್ಯವಾಗಿದೆ ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬೇಕಿದೆ.

ಸಮಾಜದಲ್ಲಿ ಮಹಿಳೆಯ ಘನತೆಯನ್ನು ಕಾಯ್ದುಕೊಳ್ಳಲು ಮತ್ತು ಆಕೆಯ ಮೌಲ್ಯ ಎಂದಿಗೂ ಕಡಿಮೆಯಾಗದಂತೆ ಮಾಡಲು ಇಂತಹ ಕಾರ್ಯಕ್ರಮಗಳು ಪೂರಕವಾಗಿದ್ದು, ಮಹಿಳೆಯು ಮೌನ ಮುರಿದು ದೈರ್ಯವಾಗಿ ಮಾತನಾಡಲು ಕಲಿಯಲು, ಬೆಳೆಯಲು ಇಂತಹ ಸಾಂಸ್ಥಿಕ ಸಂಸ್ಥೆಗಳ ಅಗತ್ಯವಿದೆ ಎಂದರು.

ಸಮಾರಂಭದ ಅಧ್ಯಕ್ಷರತೆಯನ್ನು ವಹಿಸಿ ಮಾತನಾಡಿದ ಪ್ರಭಾರ ಕುಲಪತಿ ಪ್ರೊ.ಜಯರಾಜ್ ಅಮೀನ್ ಅವರು, ಅನುಭವ ಲಿಖಿತ ರೂಪದಲ್ಲಿ ಬಂದಾಗ ಅವುಗಳ ಹಿಂದಿರುವ ಸತ್ಯಾಸತ್ಯತೆಯನ್ನು ಅರಿಯಲು ಸಾಧ್ಯವಾಗುತ್ತದೆ. ಮಹಿಳೆಯರ ಆತ್ಮಕತೆಗಳು ನಮ್ಮ ಸಾಮಾಜಿಕ ವ್ಯವಸ್ಥೆಯ ಅನೇಕ ಸಂಗತಿಗಳನ್ನು ತೆರೆದಿಡುತ್ತದೆ. ಒಬ್ಬರ ಅನುಭವ ಮತ್ತೊಬ್ಬರ ಬದುಕಿಗೆ ದಾರಿದೀಪವಾಗಲೂ ಬಹುದು. ಆದ್ದರಿಂದ‌ ಲೇಖಕಿಯರ ಸಂಘದ ವತಿಯಿಂದ ನಡೆಯುತ್ತಿರುವ ಈ ಕಾರ್ಯಕ್ರಮ ಬಹಳ ಮಹತ್ವಪೂರ್ಣವಾದುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಸ್ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಮುಖ್ಯಸ್ಥರಾದ ಪ್ರೊ.ಸೋಮಣ್ಣ ಹೊಂಗಳ್ಳಿ, ಮಂಗಳೂರು ವಿವಿ ಹಣಕಾಸು ಅಧಿಕಾರಿ ಪ್ರೊ.ವೈ ಸಂಗಪ್ಪ ಮೊದಲಾದವರು ಉಪಸ್ಥಿತರಿದ್ದರು.

ಕರ್ನಾಟಕ ಲೇಖಕಿಯರ‌ ಸಂಘ(ರಿ) ಬೆಂಗಳೂರು ಇದರ ಅಧ್ಯಕ್ಷರಾದ ಡಾ. ಎಚ್ .ಎಲ್ ಪುಷ್ಪ ಅವರು ಆಶಯದ ನುಡಿಗಳನ್ನಾಗಿ ಸ್ವಾಗತಿಸಿದರು. ಸಂಘದ ಕಾರ್ಯದರ್ಶಿ ಭಾರತಿ ಹೆಗಡೆ ಅವರು ಕಾರ್ಯಕ್ರಮ ನಿರೂಪಿಸಿದರು. ಪ್ರಾಧ್ಯಾಪಕರಾದ ಡಾ.ನಾಗಪ್ಪ ಗೌಡ, ಡಾ.ಧನಂಜಯ ಕುಂಬ್ಳೆ, ಪ್ರೊ.ಕಿಶೋರಿ‌ ನಾಯಕ್ ಹಾಗೂ ಲೇಖಕಿಯರ ಸಂಘದ ಪದಾಧಿಕಾರಿಗಳು ಸದಸ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X