Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ವೆನ್ಲಾಕ್ ನಲ್ಲಿ ಸುಸಜ್ಜಿತ...

ಮಂಗಳೂರು: ವೆನ್ಲಾಕ್ ನಲ್ಲಿ ಸುಸಜ್ಜಿತ ಕ್ಯಾಥ್ ಲ್ಯಾಬ್ ಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ21 Sept 2025 2:24 PM IST
share
ಮಂಗಳೂರು: ವೆನ್ಲಾಕ್ ನಲ್ಲಿ ಸುಸಜ್ಜಿತ ಕ್ಯಾಥ್ ಲ್ಯಾಬ್ ಗೆ ಚಾಲನೆ

ಮಂಗಳೂರು, ಸೆ.21: ದ.ಕ. ಜಿಲ್ಲಾಸ್ಪತ್ರೆ ವೆನ್ಲಾಕ್ ನಲ್ಲಿ ಹೃದಯ ಸಂಬಂಧಿ ರೋಗಗಳಿಗೆ ಚಿಕಿತ್ಸೆಗೆ ಪೂರಕವಾದ ಕ್ಯಾಥ್ (ಕಾರ್ಡಿಯಾಕ್ ಕ್ಯಾತಿಟರೈಸೇಶನ್) ಲ್ಯಾಬ್ ಗೆ ರವಿವಾರ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.

ವೆನ್ಲಾಕ್ ನ ಹೊಸ ತುರ್ತು ಚಿಕಿತ್ಸ್ಸಾ ವಿಭಾಗದ ಘಟಕದ ನೆಲ ಮಹಡಿಯಲ್ಲಿ ನೂತನ ಕ್ಯಾಥ್ ಲ್ಯಾಬ್ ರಚನೆಯಾಗಿದ್ದು, ಇದೇ ವೇಳೆ ಅವರು ಕಟ್ಟಡದ ನಾಲ್ಕನೇ ಮಹಡಿಯಲ್ಲಿ 24 ಬೆಡ್ಗಳ ಡಯಾಲಿಸಿಸ್ ವಿಭಾಗವನ್ನು ಉದ್ಘಾಟಿಸಿದರು.

ಕ್ಯಾಥ್ ಲ್ಯಾಬ್ ಮೂಲಕ ಆಂಜಿಯೋಪ್ಲಾಸ್ಟಿ ಹಾಗೂ ಆ್ಯಂಜಿಯೋಗ್ರಾಮ್ ಮೊದಲಾದ ದುಬಾರಿ ವೆಚ್ಚದ ಹೃದಯ ಶಸ್ತ್ರಚಿಕಿತ್ಸೆಗಳು ಬಡ ರೋಗಿಗಳಿಗೆ ಮಿತದರದಲ್ಲಿ ಲಭಿಸಲಿದೆ. ಕ್ಯಾಥ್ ಲ್ಯಾಬ್ ಗೆ ಕೆಎಂಸಿ ಆಸ್ಪತ್ರೆಯಿಂದ ತಜ್ಞ ವೈದ್ಯರು ಸೇರಿದಂತೆ ವೈದ್ಯಕೀಯ ಸಿಬ್ಬಂದಿ ನೇಮಕ ಈಗಾಗಲೇ ನಡೆದಿದೆ.

ಈ ಎರಡು ವಿಭಾಗಗಳ ಉದ್ಘಾಟನೆ ನೆರವೇರಿಸಿ ಸುದ್ದಿಗಾರರ ಜತೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ರಾಜ್ಯದಲ್ಲೇ ವಿನೂತನವಾಗಿ ವೆನ್ಲಾಕ್ ಸರಕಾರಿ ಆಸ್ಪತ್ರೆಯಲ್ಲಿ ಆ್ಯಂಜಿಯೋಪ್ಲಾಸ್ಟಿ ಮತ್ತು ಆ್ಯಂಜಿಯೋಗ್ರಾಮ್ ನಂತಹ ಹೃದಯ ಸಂಬಂಧಿ ಶಸ್ತ್ರ ಚಿಕಿತ್ಸೆಗಳಿಗೆ ಈ ಕ್ಯಾಥ್ ಲ್ಯಾಬ್ ನಿರ್ಮಾಣವಾಗಿದೆ. ಕೆಎಂಸಿಯವರ ಸಹಕಾರದಲ್ಲಿ ಐದು ಕೋಟಿ ರೂ. ವೆಚ್ಚದಲ್ಲಿ ಇದು ನಿರ್ಮಾಣವಾಗಿದ್ದರೆ, ಅಗತ್ಯ ಔಷಧಿ, ಯಂತ್ರೋಪಕರಣಗಳು ಇತರ ಖರ್ಚುವೆಚ್ಚಗಳನ್ನು ಸರಕಾರ ಭರಿಸಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ರೋಗಿಗಳಿಗೆ ಇಲ್ಲಿ ಉಚಿತವಾಗಿ ಚಿಕಿತ್ಸೆ ದೊರೆಯಲಿದೆ ಎಂದರು.

ಆಧುನಿಕ ವ್ಯವಸ್ಥೆ ಸಾರ್ವಜನಿಕರಿಗೆ ವೆನ್ಲಾಕ್ ನ ಕ್ಯಾಥ್ ಲ್ಯಾಬ್ ಮೂಲಕ ದೊರೆಯಲಿದೆ. ಆಂಜಿಯೋಗ್ರಾಮ್ ಗೆ ಸದ್ಯ ಬಿಪಿಎಲ್ಗೂ ದರವಿದ್ದು, ಅದರಲ್ಲೂ ವಿನಾಯಿತಿ ನೀಡುವ ನಿಟ್ಟಿನಲ್ಲಿ ಕೋಡ್ ಅಳವಡಿಸುವ ಕಾರ್ಯ ರಾಜ್ಯ ಮಟ್ಟದಲ್ಲಿ ತೀರ್ಮಾನವಾಗಲಿದೆ ಎಂದು ಅವರು ಹೇಳಿದರು.

ಹಳೆಯ ಕಟ್ಟಡದಲ್ಲಿದ್ದ ಡಯಾಲಿಸಿಸ್ ಕೇಂದ್ರವನ್ನು ನೂತನ ವೆನ್ಲಾಕ್ ನ ಹೊಸ ತುರ್ತು ಚಿಕಿತ್ಸಾ ವಿಭಾಗದ ಘಟಕಕ್ಕೆ ಸ್ಥಳಾಂತರಿಸಲಾಗಿದೆ. ಎಂಆರ್ಪಿಎಲ್, ಕೆಐಒಸಿಎಲ್ ಸೇರಿದಂತೆ ಹಲವು ಖಾಸಗಿ ಸಂಸ್ಥೆಗಳವರು ಕಟ್ಟಡ ನಿರ್ಮಾಣಕ್ಕೆ ಸಹಕಾರ ನೀಡಿದ್ದಾರೆ. ಜನರಿಗೆ ಉಚಿತವಾಗಿ ಚಿಕಿತ್ಸೆ ನೀಡುವ ಸಲುವಾಗಿ ಇಲ್ಲಿ 24 ಹಾಸಿಗೆಗಳಿಗೆ ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸಲಾಗಿದೆ.

ಡಯಾಲಿಸಸ್ ಅಗತ್ಯವಿರುವ ರೋಗಿಗಳು ವಾರಕ್ಕೆ ಎರಡು ಬಾರಿ ಆಸ್ಪತ್ರೆಗೆ ಭೇಟಿ ನೀಡುವ ಅಗತ್ಯವಿದ್ದು, ದಿನಕ್ಕೆ ನಾಲ್ಕು ರೋಗಿಗಳಿಗೆ ಒಂದು ಬೆಡ್ ನಲ್ಲಿ ಡಯಾಲಿಸಿಸ್ ಮಾಡಬಹುದು. ಜಿಲ್ಲೆಯ ಹೊಸ ತಾಲೂಕುಗಳು ಸೇರಿದಂತೆ ಒಂಭತ್ತು ಕಡೆ ಆರೋಗ್ಯ ಕೇಂದ್ರಗಳಲ್ಲಿ ಡಯಾಲಿಸಿಸ್ ಯಂತ್ರಗಳ ಮೂಲಕ ಡಯಾಲಿಸಿಸ್ ನಡೆಸಲಾಗುತ್ತಿದ್ದು, ಒಟ್ಟು ದ.ಕ. ಜಿಲ್ಲೆಯಲ್ಲಿ 94 ಡಯಾಲಿಸಿಸ್ ಯಂತ್ರಗಳು ಕಾರ್ಯಾಚರಿಸುತ್ತಿವೆ. ಹೆಚ್ಚುವರಿ ಯಂತ್ರಗಳ ಬೇಡಿಕೆ ಇದ್ದಾಗ ಪ್ರಾಯೋಜಕರ ನೆರವು ಪಡೆಯಲಾಗುತ್ತದೆ ಎಂದು ಸಚಿವರು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ, ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕ ಡಾ.ಶಿವಪ್ರಕಾಶ, ಕೆಎಂಸಿ ಆಸ್ಪತ್ರೆಯ ಡೀನ್ ಡಾ.ಉನ್ನಿಕೃಷ್ಣನ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಪ್ರತೀ ಜಿಲ್ಲೆಯಲ್ಲಿ 10 ರೋಗಿಗಳಿಗೆ ಪೆರಿಟೋನಿಯಲ್ ಡಯಾಲಿಸಿಸ್

ದ.ಕ. ಜಿಲ್ಲೆಯಲ್ಲಿ ಪೈಲಟ್ ಮಾದರಿಯಲ್ಲಿ ಕಿಡ್ನಿ ವೈಫಲ್ಯಗೊಂಡ, ಆಸ್ಪತ್ರೆಗೆ ಪದೇ ಪದೇ ಭೇಟಿ ನೀಡಲು ಸಾಧ್ಯವಾಗದ ರೋಗಿಗಳಿಗೆ ಪೆರಿಟೋನಿಯಲ್ ಡಯಾಲಿಸಿಸ್ ವ್ಯವಸ್ಥೆ ಜಾರಿಗೊಳಿಸಲಾಗಿತ್ತು. ಅದು ಸದ್ಯಕ್ಕೆ ನಿಂತಿದೆ. ಇದೀಗ ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ 10 ರೋಗಿಳಿಗೆ ಈ ಪೆರಿಟೋನಿಯಲ್ ಡಯಾಲಿಸಿಸ್ ವ್ಯವಸ್ಥೆ ಒದಗಿಸುವಂತೆ ಆದೇಶಿಸಲಾಗಿದೆ. ರೋಗಿಗಳ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮುಖ್ಯವಾಗಿ ಮಕ್ಕಳಿಗೆ ಆದ್ಯತೆ ನೀಡಿ ಈ ವ್ಯವಸ್ಥೆ ಕಾರ್ಯಗತಗೊಳ್ಳಲಿದೆ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ವೆನ್ಲಾಕ್ ಆಸ್ಪತ್ರೆಯ ನರ್ಸಿಂಗ್ ವಿದ್ಯಾರ್ಥಿಗಳಿಗೆ ಕಳೆದ ನಾಲ್ಕು ವರ್ಷಗಳಿಂದ ಶಿಷ್ಯ ವೇತನ ಸಿಗುತ್ತಿಲ್ಲ ಎಂಬ ವಿಷಯ ಈ ದಿನ ನನ್ನ ಗಮನಕ್ಕೆ ತರಲಾಗಿದೆ. ಅದು ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ್ದಾಗಿದ್ದು, ಹಣಕಾಸು ವಿಭಾಗದಲ್ಲಿ ಇದು ಬಾಕಿ ಇರುವುದಾಗಿ ಮಾಹಿತಿ ದೊರಕಿದೆ. ಈ ಬಗ್ಗೆ ಸೋಮವಾರ ಈ ಬಗ್ಗೆ ಏನಾಗಿದೆ ಎಂದು ಪರಿಶೀಲಿಸಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರ ಗಮನಸೆಳೆಯುವುದಾಗಿ ಸುದ್ದಿಗಾರರ ಪ್ರಶ್ನೆಗೆ ಉಸ್ತುವಾರಿ ಸಚಿವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X