Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. MANGALURU | ನಿವೇಶನರಹಿತರಿಂದ...

MANGALURU | ನಿವೇಶನರಹಿತರಿಂದ ಕುಪ್ಪೆಪದವು ಗ್ರಾಪಂ ಎದುರು ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ17 Nov 2025 4:08 PM IST
share
MANGALURU | ನಿವೇಶನರಹಿತರಿಂದ ಕುಪ್ಪೆಪದವು ಗ್ರಾಪಂ ಎದುರು ಪ್ರತಿಭಟನೆ

ಮಂಗಳೂರು: ಕಿಲೆಂಜಾರು ಗ್ರಾಮದ ಅಂಬೆಲೊಟ್ಟು ಎಂಬಲ್ಲಿ ಜಾಗ ಗುರುತಿಸಿ 2017ರಲ್ಲಿ ಹಕ್ಕುಪತ್ರ ಪಡೆದಿರುವ ವಸತಿರಹಿತ 80 ಫಲಾನುಭವಿ ಕುಟುಂಬಗಳಿಗೆ ಈವರೆಗೂ ಜಮೀನು ಸ್ವಾಧೀನ ನೀಡದಿರುವುದನ್ನು ಖಂಡಿಸಿ ನಿವೇಶನರಹಿತರ ಹೋರಾಟ ಸಮಿತಿಯ ನೇತೃತ್ವದಲ್ಲಿ ನಿವೇಶನರಹಿತರು ಕುಪ್ಪೆಪದವು ಗ್ರಾಮ ಪಂಚಾಯತ್ ಎದುರುಗಡೆ ಸೋಮವಾರ ಪ್ರತಿಭಟನೆ ನಡೆಸಿದರು.

ಸಂತ್ರಸ್ತರು ಕಳೆದ ಮೇ ತಿಂಗಳಲ್ಲಿ ಹನ್ನೊಂದು ದಿನಗಳ ಕಾಲ ಪಂಚಾಯತ್ ಕಟ್ಟಡದ ಮುಂಭಾಗ ಅನಿರ್ಧಿಷ್ಟಾವಧಿ ಧರಣಿಯನ್ನು ನಡೆಸಿದ್ದರು. ಆ ಸಂದರ್ಭ ಜಿಲ್ಲಾ ಪಂಚಾಯತ್ ಅಧಿಕಾರಿಗಳು, ತಹಶೀಲ್ದಾರ್ ಸ್ಥಳಕ್ಕೆ ಬಂದು ಹಲವು ಭರವಸೆಗಳನ್ನು ನೀಡಿದ್ದರು.

ಮೂರು ತಿಂಗಳಲ್ಲಿ ಸಮಸ್ಯೆ ಬಗೆಹರಿಸಿ ಹಕ್ಕು ಪತ್ರ ಪಡೆದಿರುವ ಎಲ್ಲಾ ಕುಟುಂಬಗಳಿಗೂ ನಿವೇಶನ ಸ್ವಾಧೀನ ನೀಡುವುದಾಗಿ ತಿಳಿಸಿದ್ದರು. ಅದರಂತೆ ಅಧಿಕಾರಿಗಳ ಮಾತಿನ ಮೇಲೆ ನಂಬಿಕೆ ಇಟ್ಟು ಅನಿರ್ಧಿಷ್ಟಾವಧಿ ಧರಣಿ ಹಿಂಪಡೆದುಕೊಂಡಿದ್ದರು.

ಕಲ್ಲಾಡಿ ಎಂಬಲ್ಲಿ ಮಂಜೂರಾಗಿದ್ದ 15 ಫಲಾನುಭವಿ ಕುಟುಂಬಗಳಿಗಷ್ಟೇ ನಿವೇಶನ ನೀಡಿದ್ದರು. ಆದರೆ, ಅಂಬಲೊಟ್ಟಿನಲ್ಲಿ 80 ಕುಟುಂಬಗಳಿಗೆ ಸಮಸ್ಯೆ ಬಗೆಹರಿಸಿ ನಿವೇಶನ ಹಂಚಿಕೆಯ ಭರವಸೆ ಈಡೇರಿರಲಿಲ್ಲ. ಹಾಗಾಗಿ ಇಂದು ಕುಪ್ಪೆಪದವು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಸಾಂಕೇತಿಕ ಧರಣಿ ನಡೆಸಿದ್ದೇವೆ. ವಿಳಂಬ ಇಲ್ಲದೆ ಜಮೀನು ಸ್ವಾಧೀನ ನೀಡಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರ ಜೊತೆ ಮಾತನಾಡಿದ ಮಂಗಳೂರು ತಹಶೀಲ್ದಾರ್ ರಮೇಶ್ ಬಾಬು, ಮುಂದಿನ 15 ದಿನಗಳ ಒಳಗಾಗಿ ಗ್ರಾಮದಲ್ಲಿರುವ ಕುಮ್ಕಿ ರಹಿತ ಜಾಗವನ್ನು ಗುರುತಿಸಿ ನಿವೇಶನ ಹಂಚಿಕೆಗೆ ಕೃಮ ಕೈಗೊಳ್ಳುವ ಭರವಸೆ ನೀಡಿದರು.

ಈ ವೇಳೆ ವಿವರಣೆ ನೀಡಲು ಗ್ರಾಮ ಕರಣಿಕ ಮುತ್ತಪ್ಪ ಮುಂದಾದಾಗ ಧರಣಿನಿರತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಈ ವೇಳೆ ಧರಣಿನಿರತರನ್ನು ಸಮಾಧಾನಪಡಿಸಿದ ತಹಶೀಲ್ದಾರ್, ಮುಂದಿನ ಒಂದು ವಾರದಲ್ಲಿ ಕುಮ್ಕಿ ರಹಿತ ಜಾಗವನ್ನು ಗುರುತಿಸಿ, ನಿವೇಶನ ರಹಿತರಿಗೆ ಜಾಗ ಹಂಚಿಕೆ ಮಾಡಲಾಗದಿದ್ದ ಪಕ್ಷದಲ್ಲಿ 2026ರ ಜನವರಿ ಒಳಗೆ ನಿವೇಶನ ಹಂಚಿಕೆ ಮಾಡುವ ಭರವಸೆ ನೀಡಿದರು.

ಅಂತಿಮವಾಗಿ ತಹಶೀಲ್ದಾರ್ ಅವರ ಭರವಸೆ ಒಪ್ಪಿಕೊಂಡ ಸಂತ್ರಸ್ತರು ಧರಣಿಯನ್ನು ಹಿಂಪಡೆದರು.

ಈ ವೇಳೆ ತಹಶೀಲ್ದಾರ್ ಜತೆಗೆ ಕುಪ್ಪೆಪದವು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಕ್ಷಿತಾ ಡಿ. ಗ್ರಾಮಕರಣಿಕ ಮುತ್ತಪ್ಪ ಹಾಗೂ ಕಂದಾಯ ಸಿಬ್ಬಂದಿ ಇದ್ದರು.

ಧರಣಿಯಲ್ಲಿ ಸಾಮಾಜಿಕ ಹೋರಾಟಗಾರ ಮುನೀರ್ ಕಾಟಿಪಳ್ಳ, ಮುಖಂಡರಾದ ಸದಾಶಿವ ದಾಸ್, ಸಮಿತಿಯ ಸಂಚಾಲಕಿ ವಸಂತಿ ಕುಪ್ಪೆಪದವು ಭಾಗವಹಿಸಿ ಮಾತನಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X