Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ಅಂತರರಾಷ್ಟ್ರೀಯ ವಿಮಾನ...

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 18 ಇಂಡಿಗೋ ವಿಮಾನಗಳ ಹಾರಾಟ ರದ್ದು

ವಾರ್ತಾಭಾರತಿವಾರ್ತಾಭಾರತಿ5 Dec 2025 9:14 PM IST
share
ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 18 ಇಂಡಿಗೋ ವಿಮಾನಗಳ ಹಾರಾಟ ರದ್ದು
ಪ್ರಯಾಣಿಕರ ಪರದಾಟ

ಮಂಗಳೂರು, ಡಿ.5: ದೇಶದ ಅತಿ ದೊಡ್ಡ ವಿಮಾನ ಯಾನ ಸಂಸ್ಥೆಯಾಗಿರುವ ಇಂಡಿಗೊ ಏರ್‌ಲೈನ್ಸ್‌ನ ಭಿಕ್ಕಟ್ಟು ಮುಂದುವರಿದಿದ್ದು, ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ 18 ವಿಮಾನಗಳ ಹಾರಾಟ ರದ್ದಾಗಿದೆ.

9 ನಿರ್ಗಮನದ ಮತ್ತು 9 ಆಗಮನದ ವಿಮಾನಗಳು ರದ್ದಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿದೆ. 4 ವಿಮಾನಗಳು ಮಾತ್ರ ಕಾರ್ಯಚರಣೆ ನಡೆಸಿದ್ದು, ಈ ಪೈಕಿ 3 ವಿಮಾನಗಳ ನಿಗದಿತ ಸಮಯಕ್ಕಿಂತ 30 ನಿಮಿಷಗಳಷ್ಟು ವಿಳಂಬವಾಗಿ ಸಂಚರಿಸಿದೆ.

ಇಂಡಿಗೋದ ದೊಡ್ಡ ಪ್ರಮಾಣದ ಕಾರ್ಯಾಚರಣೆಯ ಸ್ಥಗಿತದಿಂದಾಗಿ ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ. ಇಂಡಿಗೊ ವಿಮಾನಗಳ ಹಾರಾಟಕ್ಕೆ ತೊಂದರೆಯಾಗಿರುವ ಹಿನ್ನೆಲೆಯಲ್ಲಿ ಇತರ ವಿಮಾನಗಳ ಹಾರಾಟಕ್ಕೂ ಸ್ವಲ್ಪ ಮಟ್ಟಿನ ಅಡಚಣೆ ಉಂಟಾಗಿದೆ.

ಇಂಡಿಗೋದ ಸಮಸ್ಯೆಯ ಹಿನ್ನೆಲೆಯಲ್ಲಿ ನಾಗರಿಕ ವಿಮಾನಯಾನ ಸಚಿವಾಲಯವು ಹಲವಾರು ಪ್ರಯಾಣಿಕ-ಕೇಂದ್ರಿತ ಕ್ರಮಗಳನ್ನು ಜಾರಿಗೆ ತಂದಿದ್ದು, ಅವುಗಳಲ್ಲಿ ರದ್ದಾದ ವಿಮಾನಗಳ ಪ್ರಯಾಣಿಕರಿಗೆ ಸ್ವಯಂಚಾಲಿತವಾಗಿ ಟಿಕೆಟ್ ಹಣ ವಾಪಸ್ ನೀಡುವುದು. ಸಿಲುಕಿಕೊಂಡಿರುವ ಪ್ರಯಾಣಿಕರಿಗೆ ವಸತಿ, ಹಿರಿಯ ನಾಗರಿಕರಿಗೆ ವಿಶ್ರಾಂತಿ ಕೊಠಡಿ ಪ್ರವೇಶ ಮತ್ತು ವಿಳಂಬಿತ ಪ್ರಯಾಣಿಕರಿಗೆ ಉಪಹಾರಗಳ ವ್ಯವಸ್ಥೆ ಮಾಡಿದೆ. ಅಡಚಣೆಯ ನಡುವೆ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು ವಿಮಾನ ನಿಲ್ದಾಣಗಳು ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿವೆ.

ಇಂಡಿಗೋ ಭಿಕ್ಕಟ್ಟಿನಿಂದ ತೊಂದರೆ ಅನುಭವಿಸಿರುವ ಪ್ರಯಾಣಿಕರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವ ಪ್ರಯತ್ನಗಳಿಗೆ ಇಂಡಿಗೋ ಜೊತೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಕೈಜೋಡಿಸಿದೆ. ವಿಮಾನ ನಿಲ್ದಾಣದ ನಿರ್ಗಮನ ಪ್ರದೇಶದಲ್ಲಿ ಪ್ರಯಾಣಿಕರಿಗೆ ಆಸನಗಳ ವ್ಯವಸ್ಥೆ, ಪ್ರಯಾಣಿಕರಿಗೆ ಕುಡಿಯಲು ನೀರಿನ ವ್ಯವಸ್ಥೆಯನ್ನು ಮಾಡಿತ್ತು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಅಸ್ವಸ್ಥಗೊಂಡ ಪ್ರಯಾಣಿಕರೊಬ್ಬರಿಗೆ ಚಿಕಿತ್ಸೆ :

ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನದ ಹಾರಾಟ ರದ್ದತಿಯಿಂದಾಗಿ ತೊಂದರೆ ಅನುಭವಿಸಿ ಅಸ್ವಸ್ಥಗೊಂಡ ಪ್ರಯಾಣಿಕರೊಬ್ಬರಿಗೆ ವೈದ್ಯಕೀಯ ತಂಡವು ಚಿಕಿತ್ಸೆ ನೀಡಿತು.

30 ಹರೆಯದ ಪ್ರಯಾಣಿಕರೊಬ್ಬರು ವಿಮಾನಯಾನ ಕಾಯ್ದಿರಿಸುವಿಕೆ ಕೌಂಟರ್ ಹೊರಗೆ ತಲೆ ಸುತ್ತು ಮತ್ತು ಸಾಮಾನ್ಯ ದೌರ್ಬಲ್ಯದ ಬಗ್ಗೆ ದೂರು ನೀಡಿದರು. ವೈದ್ಯಕೀಯ ತಂಡ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಚೇತರಿಸಿಕೊಂಡಿದ್ದಾರೆ.

Tags

MangaluruIndiGo flightsMangaluru International Airport
share
ವಾರ್ತಾಭಾರತಿ
ವಾರ್ತಾಭಾರತಿ
Next Story
X