Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು| ಸೇವಾ ನ್ಯೂನ್ಯತೆ ಆರೋಪ: ಸೂಪರ್...

ಮಂಗಳೂರು| ಸೇವಾ ನ್ಯೂನ್ಯತೆ ಆರೋಪ: ಸೂಪರ್ ಮಾರ್ಕೆಟ್‌ಗೆ ದಂಡ

ವಾರ್ತಾಭಾರತಿವಾರ್ತಾಭಾರತಿ7 July 2025 9:30 PM IST
share
ಮಂಗಳೂರು| ಸೇವಾ ನ್ಯೂನ್ಯತೆ ಆರೋಪ: ಸೂಪರ್ ಮಾರ್ಕೆಟ್‌ಗೆ ದಂಡ

ಮಂಗಳೂರು, ಜು.7: ಗ್ರಾಹಕರಿಗೆ ಸೇವಾ ನ್ಯೂನ್ಯತೆ ಮಾಡಿರುವ ಆರೋಪದಲ್ಲಿ ನಗರದ ಚಿಲಿಂಬಿಯಲ್ಲಿ ರುವ ಮೋರ್ ಸೂಪರ್ ಮಾರ್ಕೆಟ್‌ಗೆ 39,105 ರೂ. ದಂಡ ವಿಧಿಸಿ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶ ನೀಡಿದೆ.

*ಪ್ರಕರಣದ ವಿವರ: 2022 ಆ.28 ರಂದು ಸಾಮಾಜಿಕ ಹೋರಾಟಗಾರ ಎಚ್. ಶಶಿಧರ್ ಶೆಟ್ಟಿ ಅವರು ದೈನಂದಿನ ಅಗತ್ಯ ವಸ್ತುಗಳನ್ನು ಖರೀದಿಸಲು ಮಂಗಳೂರಿನ ಚಿಲಿಂಬಿ ಬಳಿಯ ಸೂಪರ್ ಮಾರುಕಟ್ಟೆಗೆ ಹೋದಾಗ ಅಗತ್ಯ ವಸ್ತುಗಳನ್ನು ಖರೀದಿಸಿದ ನಂತರ, ರೂ .1,890.89 ವನ್ನು ತಮ್ಮ ಕರ್ನಾಟಕ ಎಸ್‌ಬಿ ಖಾತೆಯಿಂದ ಹಣವನ್ನು ಆನ್‌ಲೈನ್ ಮೂಲಕ ವರ್ಗಾಯಿಸಿದ್ದರು, ಆದರೆ ಬಿಲ್ಲಿಂಗ್ ಕೌಂಟರ್‌ ನಲ್ಲಿರುವ ಸಿಬ್ಬಂದಿ ಈ ಮೊತ್ತ ನಿಮ್ಮ ಖಾತೆಯಿಂದ ನಮಗೆ ಬಂದಿರುವುದಿಲ್ಲ, ಇನ್ನೊಮ್ಮೆ ನಗದು ರೂ.1890.89 ಪಾವತಿಸಲು ಒತ್ತಾಯಿಸಿದ್ದರೆನ್ನಲಾಗಿದೆ. ಆಗ ಸಮಸ್ಯೆಯನ್ನು ಪರಿಹರಿಸಲು ದೂರುದಾರರು 20 ರೂ. ಮೌಲ್ಯದ ಮತ್ತೊಂದು ವಸ್ತುವನ್ನು ಖರೀದಿಸಿ ರೂ .1890.89ಕ್ಕೆ ಸೇರಿಸಿ ಪುನಃ ತಮ್ಮ ಖಾತೆಯಿಂದ ರೂ .1,910.89 ಅನ್ನು ವರ್ಗಾಯಿಸಿದ್ದರು.

ಆದರೂ ಅಲ್ಲಿನ ಸಿಬ್ಬಂದಿ ತಮ್ಮ ಖಾತೆಗೆ ಇನ್ನೂ ರೂ .1,910.89 ಬಂದಿಲ್ಲ ಎಂದು ಹೇಳಿರುವುದರಿಂದ ರೂಪಾಯಿ 1911ನ್ನು ನಗದು ರೂಪದಲ್ಲಿ ಕೊಟ್ಟು ಬಂದಿದ್ದರು ಎಂದು ತಿಳಿದು ಬಂದಿದೆ.

ತಮ್ಮ ಬ್ಯಾಂಕ್ ಖಾತೆಯಿಂದ ಎರಡು ಬಾರಿ ಮೋರ್ ಸೂಪರ್ ಮಾರ್ಕೆಟ್ ಖಾತೆಗೆ ಹಣ ವರ್ಗಾವಣೆ ಆದ ಬ್ಯಾಂಕ್ ಪಾಸ್ ಬುಕ್ ಪ್ರತಿ ತೋರಿಸಿದರೂ ಮೋರ್ ಸೂಪರ್ ಮಾರ್ಕೆಟ್‌ನಿಂದ ಹಣ ಹಿಂತಿರಿಗಿಸಿ ರಲಿಲ್ಲ. ಇದರಿಂದ ನೊಂದ ದೂರುದಾರ ಶಶಿಧರ್ ಶೆಟ್ಟಿ ಮೋರ್ ಸುಪರ್ ಮಾರ್ಕೆಟ್ ವಿರುದ್ಧ ಗ್ರಾಹಕ ಸಂರಕ್ಷಣಾ ಕಾಯ್ದೆ 2019ರ ಯು/ಎಸ್ 35 ಅನ್ವಯ ದೂರು ದಾಖಲಿಸಿದ್ದರು.

ಸಾಕ್ಷ್ಯಾಧಾರಗಳನ್ನು ಪರಿಶೀಲನೆ ಮಾಡಿದ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಗ್ರಾಹಕರ ಸಂರಕ್ಷಣಾ ಕಾಯ್ದೆ - 2019 ಕಾಯಿದೆಯ ಸೆಕ್ಷನ್ 71 ಮತ್ತು 72 ಪ್ರಕಾರ ಸೂಪರ್ ಮಾರ್ಕೆಟ್‌ನ ಆಡಳಿತ ಮಂಡಳಿಯ ಸೇವೆಯ ಕೊರತೆ, ದೂರುದಾರರ ಮಾನಸಿಕ ಸಂಕಟ ಮತ್ತು ಅನಾನುಕೂಲತೆಗಾಗಿ ಒಟ್ಟು 39,105 ರೂ. ಪರಿಹಾರವನ್ನು ದೂರುದಾರಿಗೆ ನೀಡುವಂತೆ ಮೋರ್ ಆಡಳಿತ ಮಂಡಳಿಗೆ ದಂಡ ವಿಧಿಸಿ ಆದೇಶ ನೀಡಿದೆ.

ದೂರುದಾರ ಎಚ್.ಶಶಿಧರ್ ಶೆಟ್ಟಿ ಪರವಾಗಿ ವಕೀಲರಾದ ಬಿ.ಪಿ. ಭಟ್ ವಾದಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X