Mangaluru | ಬಜಪೆ ಪಟ್ಟಣ ಪಂಚಾಯತ್ ನಿಂದ ಡಿ.9ರಂದು ಬೀದಿ ನಾಯಿಗಳಿಗೆ ಪುನರ್ವಸತಿ ಕೇಂದ್ರ ಕಲ್ಪಿಸುವ ಕುರಿತು ಸಭೆ

ಸಾಂದರ್ಭಿಕ ಚಿತ್ರ
ಮಂಗಳೂರು,ಡಿ.6: ಬಜ್ಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಆಹಾರ ಸರಬರಾಜು ಮಾಡುವುದಕ್ಕಾಗಿ ಸ್ಥಳ ಗುರುತಿಸಲು ಮತ್ತು ಬೀದಿ ನಾಯಿಗಳಿಗೆ ಪುನರ್ವಸತಿ ಕೇಂದ್ರ ಕಲ್ಪಿಸುವ ಕುರಿತು ಚರ್ಚಿಸಲು ಡಿ.9ರಂದು ಅಪರಾಹ್ನ 3:30ಕ್ಕೆ ಬಜಪೆ ಪಟ್ಟಣ ಪಂಚಾಯತ್ ಸಭಾಭವನದಲ್ಲಿ ಸಭೆ ಕರೆಯಲಾಗಿದೆ.
ಆಸಕ್ತ ಸಾರ್ವಜನಿಕರು ಮತ್ತು ಶ್ವಾನ/ಪ್ರಾಣಿಪ್ರಿಯರು ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡಲು ಬಜಪೆ ಪಪಂ ಮುಖ್ಯಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





