Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಹಾತ್ಮಗಾಂಧಿ ಹೆಸರು ಅಳಿಸುವುದು ಘೋರ...

ಮಹಾತ್ಮಗಾಂಧಿ ಹೆಸರು ಅಳಿಸುವುದು ಘೋರ ಅಪರಾಧ: ಮಾಜಿ ಸಚಿವ ರಮಾನಾಥ ರೈ

ವಾರ್ತಾಭಾರತಿವಾರ್ತಾಭಾರತಿ19 Dec 2025 12:45 PM IST
share
ಮಹಾತ್ಮಗಾಂಧಿ ಹೆಸರು ಅಳಿಸುವುದು ಘೋರ ಅಪರಾಧ: ಮಾಜಿ ಸಚಿವ ರಮಾನಾಥ ರೈ

ಮಂಗಳೂರು, ಡಿ.19: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ತಿದ್ದುಪಡಿ ಮಾಡಿ ಹೆಸರು ಅಳಿಸುತ್ತಿರುವುದು ಘೋರ ಅಪರಾಧವಾಗಿದ್ದು, ಕೇಂದ್ರ ಸರಕಾರದ ಈ ನಡೆಯನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಖಂಡಿಸುವುದಾಗಿ ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಯುಪಿಎ ಆಡಳಿತಾವಧಿಯಲ್ಲಿ ನೀಡಲಾದ ಮಹತ್ತರ ಯೋಜನೆ ಇದಾಗಿದ್ದು, ಜಗತ್ತು ಈ ಕಾರ್ಯಕ್ರಮವನ್ನು ಮೆಚ್ಚಿದೆ ಎಂದರು.

ಈ ಯೋಜನೆ ಮಂಡಿಸಲಾದ ಸಂದರ್ಭ ವಿರೋಧ ಪಕ್ಷಗಳು ಟೀಕೆ ಮಾಡಿದ್ದವು. ಭ್ರಷ್ಟಾಚಾರ ಕಾರ್ಯಕ್ರಮ ಎಂದು ಹೇಳಿದ್ದವು. ಮಹಾತ್ಮಗಾಂಧಿ ಹೆಸರಿನಲ್ಲಿ ಜಾರಿಗೆ ಬಂದಿದ್ದ ಈ ಯೋಜನೆ ಸಮಾಜದ ಬಡ, ರೈತ, ಕಾರ್ಮಿಕ ವರ್ಗಕ್ಕೆ ಮನರೇಗಾ ಕಾರ್ಯಕ್ರಮದಿಂದ ಅನುಕೂಲವಾಗಿದೆ. ಇದೀಗ ಮಹಾತ್ಮ ಗಾಂಧಿ ಹೆಸರನ್ನು ಕೈಬಿಡುವ ಮೂಲಕ ಅವಮಾನ ಮಾಡಲಾಗಿದೆ. ಈಗಾಗಲೇ ಮಹಾತ್ಮಗಾಂಧಿ ವಿರುದ್ಧ ಸಂಘ ಪರಿವಾರದ ಶಕ್ತಿಗಳಿಂದ ನಡೆಯುತ್ತಿರುವ ಮಹಾತ್ಮಗಾಂಧಿ ವಿರುದ್ಧದ ಅವಹೇಳನದ ಭಾಗ ಇದಾಗಿದೆ ಎಂದು ಅವರು ಆರೋಪಿಸಿದರು.

ಹಿಂದೆ ಈ ಯೋಜನೆಯಡಿ ವೇತನವನ್ನು ಕೇಂದ್ರ ಸರಕಾರದಿಂದ ಪಾವತಿಸಲಾಗುತ್ತಿತ್ತು. ಈಗ ಕೇಂದ್ರ ಶೇ.60, ರಾಜ್ಯ ಶೇ.40 ಪಾಲು ಎಂದು ಹೇಳಿರುವುದು ಈ ಯೋಜನೆಯ ಗಾಂಧೀಜಿ ಹೆಸರು ಬದಲಾವಣೆಯ ಜತೆಗೆ ಯೋಜನೆಯನ್ನು ದುರ್ಬಲಗೊಳಿಸುವ ಯತ್ನವೂ ನಡೆದಿದೆ. ಗಾಂಧೀಜಿ ಬಗೆಗಿನ ಬಿಜೆಪಿ ಧೋರಣೆ ಏನೆಂಬುದು ಇದರಿಂದ ಸ್ಪಷ್ಟವಾಗಿದೆ. ಇತಿಹಾಸವನ್ನು ತಿದ್ದುವ ಕೆಲಸ ಬಿಜೆಪಿಯಿಂದ ನಡೆಯುತ್ತಿದ್ದು, ದೇಶಕ್ಕಾಗಿ ತ್ಯಾಗ ಮಾಡಿದವರನ್ನು, ಇತಿಹಾಸದ ಪುಟಗಳಿಂದ ಅಳಿಸುವ ಕಾರ್ಯ ನಡೆಯುತ್ತಿದೆ. ಪ್ರಪಂಚದ 80 ದೇಶಗಳಲ್ಲಿ ಗಾಂಧೀಜಿ ಪ್ರತಿಮೆ ಮೂಲಕ ಗೌರವ ಸಲ್ಲಿಸಲಾಗುತ್ತದೆ. ಪ್ರಧಾನಿ ಮೋದಿಯವರು ಬೇರೆ ದೇಶಕ್ಕೆ ಹೋದಾಗ ಗಾಂಧೀ ಪ್ರತಿಮೆಗೆ ಮಾಲಾರ್ಪಣೆ ಮಾಡುತ್ತಾರೆ. ಆದರೆ ದೇಶದಲ್ಲಿ ಅವರ ಹೆಸರನ್ನೇ ಅಳಿಸುವ ಕಾರ್ಯ ನಡೆಯುತ್ತಿದೆ ಎಂದು ಅವರು ಹೇಳಿದರು.

ಗೋಷ್ಠಿಯಲ್ಲಿ ಮಾಜಿ ಮೇಯರಂ ಶಶಿಧರ ಹೆಗ್ಡೆ, ಅಶ್ರಫಂ ಕೆ.ಇ., ಬ್ಲಾಕ್ ಅಧ್ಯಕ್ಷರಾದ ಬಿ.ಎಲ್.ಪದ್ಮನಾಭ ಕೋಟ್ಯಾನ್, ಪ್ರಕಾಶ್ ಸಾಲ್ಯಾನ್, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಡೆನ್ನಿಸ್ ಡಿಸಿಲ್ವಾ, ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಮಂಜುಳಾ ನಾಯಕ್, ಮಹಿಳಾ ಮುಂಚೂಣಿ ಘಟಕದ ನಗರ ಅಧ್ಯಕ್ಷೆ ಅಪ್ಪಿ, ಡಿಸಿಸಿ ಉಪಾಧ್ಯಕ್ಷ ಶುಭೋದಯ ಆಳ್ವ, ಪ್ರಧಾನ ಕಾರ್ಯದರ್ಶಿ ಜಯಶೀಲ ಅಡ್ಯಂತಾಯ, ಟಿ.ಕೆ.ಸುಧೀರ್, ದಿನೇಶ್ ಮೂಳೂರ್, ಸಮರ್ಥ್ ಭಟ್, ಶಬೀರ್ ಸಿದ್ದಕಟ್ಟೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X