Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು | ಗುರು-ಗಾಂಧಿ ಸಂವಾದ ಸಮಾಜದ...

ಮಂಗಳೂರು | ಗುರು-ಗಾಂಧಿ ಸಂವಾದ ಸಮಾಜದ ಮೇಲೆ ಅಗಾಧ ಪರಿಣಾಮ: ಗಣೇಶ್ ದೇವಿ

ವಾರ್ತಾಭಾರತಿವಾರ್ತಾಭಾರತಿ3 Dec 2025 10:56 PM IST
share
ಮಂಗಳೂರು | ಗುರು-ಗಾಂಧಿ ಸಂವಾದ ಸಮಾಜದ ಮೇಲೆ ಅಗಾಧ ಪರಿಣಾಮ: ಗಣೇಶ್ ದೇವಿ
ಶತಮಾನದ ಮಹಾಪ್ರಸ್ಥಾನದ ಪ್ರಯುಕ್ತ ಸರ್ವಮತ ಸಮ್ಮೇಳನ

ಮಂಗಳೂರು, ಡಿ.3: ನೂರು ವರ್ಷದ ಹಿಂದೆ ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಮಹಾತ್ಮಾ ಗಾಂಧೀಜಿ ಅವರ ಮಧ್ಯೆ ನಡೆದ ಸಂವಾದವು ಸಮಾಜದ ಮೇಲೆ ಅಗಾಧ ಪರಿಣಾಮ ಬೀರಿತ್ತು. ಮುಖ್ಯವಾಗಿ ದೇಶದ ಸ್ವಾತಂತ್ರ್ಯ ಹೋರಾಟ ಮತ್ತು ಸಂವಿಧಾನ ರಚನೆಗೆ ಹೊಸ ಆಯಾಮ ನೀಡಿತ್ತು ಎಂದು ಸಂಸ್ಕೃತಿ ಚಿಂತಕ ಗಣೇಶ್ ದೇವಿ ಹೇಳಿದರು.

ಕೇರಳದ ವರ್ಕಳ ಶಿವಗಿರಿ ಮಠ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ನಾರಾಯಣ ಗುರು ಅಧ್ಯಯನ ಪೀಠದ ಸಹಭಾಗಿತ್ವದಲ್ಲಿ ಕೊಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಗಂಗೋತ್ರಿ ಕ್ಯಾಂಪಸ್ ಆವರಣದಲ್ಲಿ ಬುಧವಾರ ನಡೆದ ಸರ್ವಮತ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ದಲಿತರು, ಹಿಂದುಳಿದ ವರ್ಗದ ಜನರಿಗೆ ದೇವಸ್ಥಾನಕ್ಕೆ ಪ್ರವೇಶವಿಲ್ಲದಂತಹ ಆ ಕಾಲದಲ್ಲಿ ಸಮಾಜದ ಪರಿವರ್ತನೆಗೆ ಮುಂದಾದ ಬ್ರಹ್ಮಶ್ರೀ ನಾರಾಯಣ ಗುರು ಮತ್ತು ದೇಶದ ಸ್ವಾತಂತ್ರ್ಯಕ್ಕಾಗಿ ಮಿಡಿದ ಮಹಾತ್ಮಾ ಗಾಂಧೀಜಿ ಅವರ ಆಶಯ ಮತ್ತು ಗುರಿ ಒಂದೇ ಆಗಿತ್ತು. ಇಬ್ಬರೂ ಅವ್ಯವಸ್ಥೆಯ ವಿರುದ್ಧ ಹೋರಾಟ ಮಾಡಿದ್ದರು. ಆ ಕಾಲದಲ್ಲಿ ದೇಶದಲ್ಲಿ ನಡೆದ ಅನೇಕ ಮಹತ್ವದ ಘಟನೆಗಳಿಗೆ ಆ ಸಂವಾದವು ಹೊಸ ದಿಕ್ಕನ್ನು ತೋರಿಸಿತು ಎಂದ ಗಣೇಶ್ ದೇವಿ, ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಮಹಾತ್ಮಾ ಗಾಂಧೀಜಿ ಅವರ ಪ್ರತಿಮೆ, ಭಾವಚಿತ್ರಕ್ಕೆ ನಮನ ಸಲ್ಲಿಸುವುದು ಅಥವಾ ಬಿಡುವುದು ವೈಯಕ್ತಿಕ ವಿಚಾರವಾಗಿದೆ. ಆದರೆ ಅವರಿಬ್ಬರ ಸಂದೇಶವನ್ನು ಪ್ರತಿಯೊಬ್ಬರೂ ಪಾಲಿಸುವ ಅಗತ್ಯವಿದೆ ಎಂದು ಗಣೇಶ್ ದೇವಿ ಹೇಳಿದರು.

ಕಾರ್ಯಕ್ರಮದ ಸ್ವಾಗತ ಸಮಿತಿಯ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು.

ಮಂಗಳೂರು ಬಿಷಪ್ ಡಾ. ಪೀಟರ್ ಪೌಲ್ ಸಲ್ದಾನ ಮಾತನಾಡಿ, ಜಾತಿ ವ್ಯವಸ್ಥೆ ಎಂಬುದು ಸಮಾಜಕ್ಕೆ ಅಂಟಿದ ಕ್ಯಾನ್ಸರ್ ರೋಗದಂತೆ. ಅದನ್ನು ಹೋಗಲಾಡಿಸಲು ನಾರಾಯಣ ಗುರು ಮತ್ತು ಮಹಾತ್ಮಾ ಗಾಂಧೀಜಿ ಅವರ ಪ್ರಯತ್ನವನ್ನು ಇಂದಿನ ಪೀಳಿಗೆ ಅರ್ಥ ಮಾಡಿಕೊಳ್ಳಬೇಕಿದೆ. ಅವರಿಬ್ಬರ ಸಂವಾದವು ದೇಶದ ರಾಜಕೀಯ, ಸಾಮಾಜಿಕ ಬದುಕಿನ ಮೇಲೆ ಪರಿಣಾಮ ಬೀರಿತ್ತು ಎಂದು ಹೇಳಿದರು.

ಶಿರಸಿಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾನಿಲಯದ ವೀಣಾ ಬೆಹನ್ಜಿ ಮಾತನಾಡಿ, ಅಂಧಶ್ರದ್ಧೆ ಮತ್ತು ಅಸಮಾನತೆಯ ವಿರುದ್ಧ ಹೋರಾಡಿದ್ದ ನಾರಾಯಣ ಗುರು ಮತ್ತು ಬ್ರಿಟಿಷರಿಂದ ಭಾರತವನ್ನು ಮುಕ್ತಗೊಳಿಸಿದ ಮಹಾತ್ಮಾ ಗಾಂಧೀಜಿಯ ಸಂದೇಶವು ಸಾರ್ವಕಾಲಿಕವಾದುದು. ಜಾತಿ, ಧರ್ಮದ ಹೆಸರಿನಲ್ಲಿ ನಮ್ಮಲ್ಲಾಗುವ ರಕ್ತಪಾತ ಜಗತ್ತಿನ ಯಾವ ರಾಷ್ಟ್ರದಲ್ಲೂ ಆಗುತ್ತಿಲ್ಲ. ಇದು ಮುಂದುವರಿಯಬಾರದು. ಜಗತ್ತು ಎಂಬುದು ಒಂದು ಕುಟುಂಬವಿದ್ದಂತೆ ಎಂಬ ಪ್ರಜ್ಞೆ ಸದಾ ನಮ್ಮಲ್ಲಿರಬೇಕು ಎಂದು ಆಶಿಸಿದರು.

ಹನೂರು ಬುದ್ಧ ವಿಹಾರದ ಭಿಕ್ಕು ಧಮ್ಮತಿಸ್ಸ ಅಶೋಕ ಆರಾಮ ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಮಹಾತ್ಮಾ ಗಾಂಧೀಜಿ ಅಸ್ಪ್ರಶ್ಯತೆಯ ವಿರುದ್ಧ ಹೋರಾಟ ಮಾಡಿದ್ದರು. ಆದರೂ ಇಂದಿಗೂ ಜಾತಿ ವ್ಯವಸ್ಥೆ ಮುಂದುವರಿದಿರುವುದು ವಿಷಾದನೀಯ. ಇಂತಹ ವಿಷಯಕ್ಕೆ ಸಂಬಂಧಿಸಿ ಅಂದು ಮತ್ತು ಇಂದು ಸಂದೇಶ ನೀಡುವವರಿಗೇನೂ ಈ ಸಮಾಜದಲ್ಲಿ ಕೊರತೆ ಇಲ್ಲ. ಆದರೆ ಅದನ್ನು ಅನುಷ್ಠಾನಗೊಳಿಸುವವರ ಸಂಖ್ಯೆ ಕಡಿಮೆ ಇದೆ ಎಂದು ಅಭಿಪ್ರಾಯಪಟ್ಟರು.

ಶಿವಗಿರಿ ಮಠದ ಸ್ವಾಮಿ ಆಸಂಗಾನಂದ ಗಿರಿ ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಮಹಾತ್ಮಾ ಗಾಂಧೀಜಿಯ ಮಧ್ಯೆ ನಡೆದ ಅಂದಿನ ಆ ಸಂವಾದವು ವಾದಿಸಿ ಗೆಲ್ಲಲಲ್ಲ. ಅರಿಯಲು ನಡೆಸಿರುವಂತದ್ದಾಗಿದೆ. ಹಾಗಾಗಿ ನಾರಾಯಣ ಗುರುಗಳ ಸಂದೇಶವು ಕೇರಳ -ಕರ್ನಾಟಕಕ್ಕೆ ಸೀಮಿತವಾಗಬಾರದು. ದೇಶ-ವಿದೇಶಗಳಿಗೂ ವಿಸ್ತರಣೆಯಾಗಬೇಕು. ಅದಕ್ಕಾಗಿ ಶಿವಗಿರಿ ಮಠ ಶ್ರಮಿಸಲಿದೆ ಎಂದರು.

ಕೇರಳದ ಮಾಜಿ ಡಿಜಿಪಿ ಟಿ.ಪಿ. ಸೆನ್ ಕುಮಾರ್ ಮಾತನಾಡಿದರು.

ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಲಾದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಕಾಟಿಪಳ್ಳ ನಾರಾಯಣ ಗುರು ಕಾಲೇಜಿನ ವಿದ್ಯಾರ್ಥಿನಿ ದಿವ್ಯಾ ದಯಾನಂದ ಸಾಲ್ಯಾನ್ರಿಗೆ ಶಿವಗಿರಿ ಮಠದ ಜ್ಞಾನೇಶ್ವರ ಸ್ವಾಮೀಜಿ ಬಹುಮಾನ ವಿತರಿಸಿದರು.

ಕೆ.ಕೆ. ರಾಮನ್ ಬರೆದ, ಡಾ. ಮೀನಾಕ್ಷಿ ರಾಮಚಂದ್ರ ಅನುವಾಸಿದ ದಿವ್ಯಬಿಂಬ ಕೃತಿಯನ್ನು ಬಿಡುಗಡೆಗೊಳಿಸಲಾಯಿತು.

ಎರ್ನಾಕುಳಂನ ಉದ್ಯಮಿ ಡಾ. ಫಾದ್ಲ್ ಎಚ್. ವೀರನ್ಕುಟ್ಟಿ, ತಿರುವನಂತಪುರಂನ ಉಪೇಂದ್ರನ್ ಕಾಂಟ್ರಾಕ್ಟರ್, ಉದ್ಯಮಿ ಅಶೋಕ್ ಕುಲಾಲ್ ಅವರನ್ನು ಸನ್ಮಾನಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X