Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ನ.15ರಂದು ಡ್ರಗ್ಸ್ ವಿರುದ್ಧ...

ಮಂಗಳೂರು: ನ.15ರಂದು ಡ್ರಗ್ಸ್ ವಿರುದ್ಧ 'ಜಾಗೃತಿ ಮಹಾ ಸಂಗಮ'

ವಾರ್ತಾಭಾರತಿವಾರ್ತಾಭಾರತಿ13 Nov 2025 2:50 PM IST
share
ಮಂಗಳೂರು: ನ.15ರಂದು ಡ್ರಗ್ಸ್ ವಿರುದ್ಧ ಜಾಗೃತಿ ಮಹಾ ಸಂಗಮ

ಮಂಗಳೂರು, ನ.13: ದೂದ್ ನಾನಾ ಕಲ್ಚರಲ್ ಫೌಂಡೇಶನ್ ಹಾಗೂ ಅಲ್ ಸಲಾಮ ಕೌನ್ಸಿಲಿಂಗ್ ಸೆಂಟರ್ ವತಿಯಿಂದ ನ.15ರಂದು ನಗರದ ಪುರಭವನದಲ್ಲಿ ಡ್ರಗ್ಸ್ ವಿರುದ್ಧ ಜಾಗೃತಿ ಮಹಾ ಸಂಗಮವನ್ನು ಆಯೋಜಿಸಲಾಗಿದೆ.

ನಗರದ ಪ್ರೆಸ್ ಕ್ಲಬ್ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾರ್ಯಕ್ರಮ ಸಂಚಾಲಕ ಶೇಖ್ ಮುಹಮ್ಮದ್ ಇರ್ಫಾನಿ, ದ.ಕ.ಜಿಲ್ಲೆಯಲ್ಲಿ ಮಾದಕ ದ್ರವ್ಯ ವಸ್ತುಗಳ ಹಾವಳಿಯಿಂದ ಭಯದ ವಾತಾವರಣ ಸೃಷ್ಟಿಯಾಗಿದೆ. ಇದಕ್ಕೆ ಸಮರ್ಪಕ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಈ ಜಾಗೃತಿ ಕಾರ್ಯಕ್ರಮ ಆಯೋಜಿಸಿರುವುದಾಗಿ ಹೇಳಿದರು.

ಬೆಳಗ್ಗೆ 10ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ವಾಗ್ಮಿ ಸಿಂಸಾರುಲ್ ಹಖ್ ಹುದವಿ ಮುಖ್ಯ ಭಾಷಣ ಮಾಡಲಿದ್ದು, ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಕಾನೂನು ಸಲಹೆ ನೀಡಲಿದ್ದಾರೆ.

ಅಲ್ ಸಲಾಮ ಅಧ್ಯಕ್ಷ ಜಿ.ಎ.ಬಾವಾ ಯೋಜನೆ ಮಾಹಿತಿ ನೀಡಲಿದ್ದಾರೆ. ಅಧ್ಯಕ್ಷತೆಯನ್ನು ಶರೀಫ್ ಹಾಜಿ ವೈಟ್ ಸ್ಟೋನ್ ವಹಿಸಲಿದ್ದು, ಸೈಯದ್ ಅಮೀರ್ ತಂಙಳ್ ದುಆ ನೆರವೇರಿಸಲಿದಾದರೆ. ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್, ಬಿ.ಕೆ.ಅಬ್ದುಲ್ ಖಾದರ್ ಮುಸ್ಲಿಯಾರ್ ಬಂಬ್ರಾಣ, ಉದ್ಯಮಿ ಮುಸ್ತಫಾ ಭಾರತ್ ಸಂದೇಶ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ಇತ್ತೀಚೆಗೆ ಬೆಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿದ ಸ್ವೀಕರ್ ಯು.ಟಿ.ಖಾದರ್, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಝಕರಿಯಾ ಜೋಕಟ್ಟೆ ಹಾಗೂ ಮಾನವೀಯ ಸೇವೆ ನೀಡಿದ ಝೈನುಲ್ ಅಬಿದ್ ರವರನ್ನು ವಿಶೇಷವಾಗಿ ಗೌರವಿಸಲಾಗುವುದು. ವಿಧಾನ ಪರಿಷತ್ ಮಾಜಿ ಸದಸ್ಯ ಬಿ.ಎಂ.ಫಾರೂಕ್ ಪ್ರಾಜೆಕ್ಟ್ ಅನಾವರಣಗೊಳಿಸಲಿದ್ದಾರೆ. ಯೆನೆಪೊಯ ಅಬ್ದುಲ್ಲಾ ಕುಂಞಿ, ಇನಾಯತ್ ಅಲಿ ಮುಲ್ಕಿ, ಹೈದರ್ ಪರ್ತಿಪ್ಪಾಡಿ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.

ದ.ಕ. ಜಿಲ್ಲೆಯಲ್ಲಿ ಮಾದಕ ದ್ರವ್ಯ ಹಾವಳಿಯಿಂದಾಗಿ ವಿದ್ಯಾರ್ಥಿಗಳು ಹಾಗೂ ಯುವಜನರ ಮೇಲಾಗುತ್ತಿರುವ ಪರಿಣಾಮಗಳ ಬಗ್ಗೆ ಅಧ್ಯಯ ನಡೆಸಲಾಗಿದೆ. ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ದಾಖಲಾದ 2,000 ಪ್ರಕರಣಗಳಲ್ಲಿ 1,600 ಪ್ರಕರಣಗಳಲ್ಲಿ ಮುಸ್ಲಿಮ್ ಸಮುದಾಯದವರಿರುವುದು ಕಂಡುಬಂದಿದೆ. ದ.ಕ. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ವ್ಯಾಪ್ತಿಯಲ್ಲಿ ದಾಖಲಾದ 1,800 ಪ್ರಕರಣಗಳಲ್ಲಿ 1,200ರಷ್ಟು ಮಂದಿ ಮುಸ್ಲಿಮ್ ಸಮುದಾಯದವರು. ಎಂಡಿಎಂಎ ಪೂರೈಕೆ ಮತ್ತು ಬಳಕೆ ಹೆಚ್ಚಿದ್ದು, ಇದು ಯುವಜನರ ಆರೋಗ್ಯದ ಮೇಲೆ ತೀವ್ರ ರೀತಿಯ ಪರಿಣಾಮ ಬೀಳುತ್ತಿದೆ. ಶಾಲಾ, ಕಾಲೇಜು ಮಕ್ಕಳಿಗೆ ಡ್ರಗ್ಸ್ ಪೂರೈಕೆದಾರರು (ಪೆಡ್ಲರ್)ಗಳು ಪರೀಕ್ಷೆಯ ಹಿಂದಿನ ದಿನ ಓದಿದ್ದು, ಮಾದಕ ವಸ್ತುಗಳ ಬಳಕೆಯಿಂದ ಪರೀಕ್ಷೆಯ ದಿನ ನೆನಪು ಶಕ್ತಿಗೆ ನೆರವಾಗುತ್ತದೆ ಎಂಬ ಆಮಿಷ ತೋರಿಸಿ ಮಾದಕ ವ್ಯಸನದ ಜಾಲಕ್ಕೆ ಸಿಲುಕಿಸುವಂತಹ ಪ್ರಕರಣಗಳು ಅಧ್ಯಯನ ವೇಳೆ ಪತ್ತೆಯಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಬಾಳಿಲ ತಿಳಿಸಿದರು.

ಮುಸಲ್ಮಾನ ಸಮಾಜದಲ್ಲಿ ಮದ್ಯಪಾನ ನಿಷೇಧವಿದೆ. ಈ ಬಗ್ಗೆ ಮದ್ರಸಗಳಲ್ಲಿಯೂ ಬಾಲ್ಯದಲ್ಲೇ ಜಾಗೃತಿ ಮೂಡಿಸಲಾಗುತ್ತದೆ. ಮದ್ಯಪಾನ ಮಾಡಿದರೆ ಅದರ ವಾಸನೆಯಿಂದ ತಿಳಿಯುತ್ತದೆ. ಆದರೆ ಡ್ರಗ್ಸ್ ಸೇವನೆ ಯಾರಿಗೂ ಗೊತ್ತಾಗುವುದಿಲ್ಲ. ಹಾಗಾಗಿ ಸಮುದಾಯದ ಯುವ ಪೀಳಿಗೆ ಈ ದುಶ್ಚಟಕ್ಕೆ ಹೆಚ್ಚು ಬಲಿಯಾಗುತ್ತಿದ್ದು, ಡ್ರಗ್ಸ್ ವಿರುದ್ಧ ಧರ್ಮಗುರುಗಳಿಂದ ಫತ್ವಾ ಹೊರಡಿಸುವ ಮೂಲಕ ಮದ್ರಸಗಳಿಂದಲೇ ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕಾರ್ಯಾಧ್ಯಕ್ಷ ಹಾಜಿ ಬಿಎಂ.ಶರೀಫ್ ವೈಟ್ ಸ್ಟೋನ್, ಕೋಶಾಧಿಕಾರಿ ಫಕೀರಬ್ಬ, ದೂದ್ ನಾನಾ ಫೌಂಡೇಶನ್ ಅಧ್ಯಕ್ಷ ಝೈನುಲ್ ಆಬಿದ್ ಬಿ.ಕೆ., ಅಶ್ರಫ್ ಕುಂಬ್ರ, ಮುಹಮ್ಮದ್ ಕುಂಞಿ ಮಾಸ್ಟರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X