Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು | ಕಾಂಗ್ರೆಸ್ ಹುದ್ದೆಗಳಿಗೆ...

ಮಂಗಳೂರು | ಕಾಂಗ್ರೆಸ್ ಹುದ್ದೆಗಳಿಗೆ ಮುಸ್ಲಿಂ ಮುಖಂಡರ ಸಾಮೂಹಿಕ ರಾಜೀನಾಮೆ : ಶಾದಿಮಹಲ್ ಸಭೆಯಲ್ಲಿ ನಡೆದಿದ್ದೇನು ?

ವಾರ್ತಾಭಾರತಿವಾರ್ತಾಭಾರತಿ29 May 2025 6:41 PM IST
share
ಮಂಗಳೂರು | ಕಾಂಗ್ರೆಸ್ ಹುದ್ದೆಗಳಿಗೆ ಮುಸ್ಲಿಂ ಮುಖಂಡರ ಸಾಮೂಹಿಕ ರಾಜೀನಾಮೆ : ಶಾದಿಮಹಲ್ ಸಭೆಯಲ್ಲಿ ನಡೆದಿದ್ದೇನು ?

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಭೀಕರ ಹತ್ಯೆಗಳ ಬೆನ್ನಿಗೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಪ್ರಕಟಿಸಲು ದ.ಕ.ಜಿಲ್ಲಾ ಕಾಂಗ್ರೆಸ್ ನ ಅಲ್ಪಸಂಖ್ಯಾತ ಮುಖಂಡರು ಗುರುವಾರ ನಗರದ ಬೋಳಾರದಲ್ಲಿರುವ ಶಾದಿಮಹಲ್‌ನ ಸಭಾಂಗಣದಲ್ಲಿ ಕರೆದಿದ್ದ ಸಭೆಯಲ್ಲಿ ಕೋಲಾಹಲ ಉಂಟಾಯಿತು.

ಕೊಳತ್ತಮಜಲ್ ನಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಅಬ್ದುಲ್ ರಹ್ಮಾನ್ ಅವರ ಅಂತ್ಯಸಂಸ್ಕಾರದ ವಿಧಿ ವಿಧಾನಗಳು ನಡೆಯುತ್ತಿದ್ದಂತೆ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರು ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ್ದರು. ಇಂದು (ಮೇ 29) ಸಭೆ ಕರೆದು ರಾಜೀನಾಮೆ ಘೋಷಣೆ ಮಾಡುವುದಾಗಿಯೂ ನಿಗದಿಯಾಗಿತ್ತು.

ಅದರಂತೆ ಗುರುವಾರ ಮಧ್ಯಾಹ್ನ ಬೋಳಾರದ ಶಾದಿ ಮಹಲ್ ನಲ್ಲಿ ಸಭೆ ಸೇರಿದಾಗ ಸಾವಿರ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನೆರೆದಿದ್ದರು.

ಮಾತು ಆರಂಭಿಸಿದ ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ.ಕೆ.ಶಾಹುಲ್ ಹಮೀದ್, ಜಿಲ್ಲೆಯಲ್ಲಿ ಗುಂಪಿನಿಂದ ಥಳಿತಕ್ಕೊಳಗಾಗಿ ಹತ್ಯೆಯಾದ ಅಶ್ರಫ್ ಪ್ರಕರಣ ಬೆಳಕಿಗೆ ಬಂದಾಗಲೇ ಸಮುದಾಯಕ್ಕೆ ನೋವಾಗಿತ್ತು. ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳುವಂತೆ ನಾವು ಆಗ್ರಹಿಸಿದ್ದೆವು. ಆದರೆ ಅಬ್ದುಲ್ ರಹ್ಮಾನ್ ಹತ್ಯೆಯಾದಾಗ ನಮ್ಮ ಸಹನೆಯ ಕಟ್ಟೆ ಒಡೆಯಿತು. ನಮ್ಮದೇ ನೇತೃತ್ವದ ಸರಕಾರ ಇದ್ದರೂ ಹೀಗಾಗುತ್ತಿದೆ ಎಂದು ಬೇಸರಪಟ್ಟುಕೊಂಡೆವು. ಅಂತಿಮವಾಗಿ ಸಮುದಾಯದ ಪರವಾಗಿ ನಿಂತು ರಾಜೀನಾಮೆ ನೀಡಬೇಕು ಎಂದು ಮುಖಂಡರು ತೀರ್ಮಾನಿಸಿದ್ದೆವು. ಆದರೆ ಈ ಕುರಿತು ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ ಅವರು ಸ್ವತಃ ಕರೆ ಮಾಡಿ, ಆತುರದ ನಿರ್ಧಾರ ಮಾಡಬೇಡಿ. ಒಂದು ವಾರಗಳ ಸಮಯ ನೀಡಿ, ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು. ಹಾಗಾಗಿ ರಾಜೀನಾಮೆ ನೀಡುವುದನ್ನು ಒಂದು ವಾರಗಳ ಮುಂದೂಡಲಾಗಿದೆ ಎಂದು ಪ್ರಕಟಿಸಿದರು.

ಒಂದು ವಾರದ ಕಾಲ ರಾಜೀನಾಮೆ ಮುಂದೂಡೂವುದಾಗಿ ಶಾಹುಲ್ ಹಮೀದ್ ಅವರು ಹೇಳುತ್ತಿದ್ದಂತೆ ಸೇರಿದ್ದ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ನಾವು ರಾಜೀನಾಮೆ ನೀಡುವ ತೀರ್ಮಾನದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಕಾರ್ಯಕರ್ತರು ಪಟ್ಟು ಹಿಡಿದಿದ್ದರಿಂದ ಸಭಾಂಗಣದಲ್ಲಿ ಏನು ನಡೆಯುತ್ತಿದೆ ಎಂದು ಯಾರಿಗೂ ಕೇಳಿಸದಷ್ಟು ಗದ್ದಲವುಂಟಾಯಿತು. ಕಾರ್ಯಕರ್ತರನ್ನು ಸಮಾಧಾನ ಪಡಿಸಲು ಮುಖಂಡರು ಹರಸಾಹಸ ಪಟ್ಟರು.

ಈ ಹಂತದಲ್ಲಿ ಮಧ್ಯಪ್ರವೇಶಿಸಿದ ಕಾರ್ಪೊರೇಟರ್ ಅಬ್ದುಲ್ ರವೂಫ್, ʼಗದ್ದಲ ಎಬ್ಬಿಸುತ್ತಿರುವುದು ಕಾಂಗ್ರೆಸ್ ಕಾರ್ಯಕರ್ತರಲ್ಲ ಬೇರೆ ಯಾರೋ ಇದ್ದಾರೆʼ ಎಂದಿದ್ದು ಕಾರ್ಯಕರ್ತರನ್ನು ಮತ್ತಷ್ಟು ಕೆರಳಿಸಿತು. ಎದ್ದು ನಿಂತ ಕಾರ್ಯಕರ್ತರು ತಮ್ಮ ಗುರುತಿನ ಚೀಟಿ ತೋರಿಸಿ ತಾವು ಕಾಂಗ್ರೆಸ್ ಕಾರ್ಯಕರ್ತರೇ ಇಲ್ಲಿ ಸೇರಿದ್ದೇವೆ. ನಮಗೆ ನ್ಯಾಯ ಬೇಕು. ರಾಜೀನಾಮೆ ಕೊಡುವುದರಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದರು. ಒಂದು ಹಂತದಲ್ಲಿ ವೇದಿಕೆಗೆ ನುಗ್ಗಿದ ಕಾರ್ಯಕರ್ತರು ನಮಗೆ ನ್ಯಾಯ ಬೇಕೇ ಬೇಕು ಎಂದು ಆಗ್ರಹಿಸಿ ಘೋಷಣೆ ಕೂಗಿದರು.

ಕೆ.ಕೆ.ಶಾಹುಲ್ ಹಮೀದ್, ಎಂ.ಎಸ್. ಮುಹಮ್ಮದ್, ಅಬ್ದುಲ್ ರವೂಫ್ ಹಾಗು ಸುಹೇಲ್ ಕಂದಕ್ ಅವರು ಕಾರ್ಯಕರ್ತರನ್ನು ಸಮಾಧಾನ ಪಡಿಸಲು ಯತ್ನಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಕೊನೆಗೆ ಕಾರ್ಯಕರ್ತರ ಒತ್ತಡಕ್ಕೆ ಮುಖಂಡರು ಮಣಿದರು.

ಸುಹೇಲ್ ಕಂದಕ್ ಮುಂದೆ ಬಂದು ಪಕ್ಷದ ಹುದ್ದೆಗೆ ರಾಜೀನಾಮೆ ಘೋಷಿಸಿದರು. ಆ ಬಳಿಕ ಕೆ.ಕೆ.ಶಾಹುಲ್‌ ಹಮೀದ್‌, ಎಂ.ಎಸ್‌.ಮುಹಮ್ಮದ್‌ ಸೇರಿದಂತೆ ಒಬ್ಬೊಬ್ಬರಾಗಿ ರಾಜೀನಾಮೆ ಘೋಷಿಸಿದರು. ಅದನ್ನು ಮಾಧ್ಯಮಗಳ ಮುಂದೆಯೂ ಹೇಳಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದ್ದರಿಂದ ಈ ಮುಖಂಡರು ಮಾಧ್ಯಮಗಳಿಗೂ ತಮ್ಮ ರಾಜೀನಾಮೆಯ ವಿಷಯ ಪ್ರಕಟಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X