Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. "ಮತ ಹಾಕಿ ಗೆಲ್ಲಿಸಿದವರೇ ʼಅನ್ಯʼ...

"ಮತ ಹಾಕಿ ಗೆಲ್ಲಿಸಿದವರೇ ʼಅನ್ಯʼ ಕೋಮಿನವರಾದರೇ?": ಗುಂಪು ಹತ್ಯೆ ಕುರಿತು ದ.ಕ. ಜಿಲ್ಲಾ ಉಸ್ತುವಾರಿ, ಗೃಹ ಸಚಿವರ ಹೇಳಿಕೆಗೆ ವ್ಯಾಪಕ ಆಕ್ರೋಶ!

ವಾರ್ತಾಭಾರತಿವಾರ್ತಾಭಾರತಿ30 April 2025 4:16 PM IST
share
ಮತ ಹಾಕಿ ಗೆಲ್ಲಿಸಿದವರೇ ʼಅನ್ಯʼ ಕೋಮಿನವರಾದರೇ?: ಗುಂಪು ಹತ್ಯೆ ಕುರಿತು ದ.ಕ. ಜಿಲ್ಲಾ ಉಸ್ತುವಾರಿ, ಗೃಹ ಸಚಿವರ ಹೇಳಿಕೆಗೆ ವ್ಯಾಪಕ ಆಕ್ರೋಶ!

ಮಂಗಳೂರು: ನಗರದ ಹೊರವಲಯದಲ್ಲಿ ದುಷ್ಕರ್ಮಿಗಳು ವ್ಯಕ್ತಿಯೋರ್ವನನ್ನು ಥಳಿಸಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜ್ಯದ ಸಚಿವರ ಹೇಳಿಕೆಗಳು ಹಾಗೂ ಕಾಂಗ್ರೆಸ್‌ ನಾಯಕರ ವರಸೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಹತ್ಯೆಯ ಹಿಂದೆ ಬಿಜೆಪಿ ಪ್ರಭಾವಿ ನಾಯಕರೊಬ್ಬರ ಕುಮ್ಮಕ್ಕಿದ್ದು, ಅವರನ್ನು ರಕ್ಷಿಸಲು ಪೊಲೀಸ್‌ ಇಲಾಖೆ ಶ್ರಮಿಸುತ್ತಿದೆ, ರಾಜ್ಯ ಸರ್ಕಾರವೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂಬ ಆರೋಪವೂ ಸಾರ್ವಜನಿಕ ವಲಯದಲ್ಲಿ ಸದ್ದು ಮಾಡುತ್ತಿದೆ.

ಗುಂಪು ಥಳಿತ ಹತ್ಯೆ ಪ್ರಕರಣ ಕುರಿತಂತೆ ಪ್ರತಿಕ್ರಿಯಿಸಿದ್ದ ರಾಜ್ಯ ಗೃಹಮಂತ್ರಿ ಜಿ ಪರಮೇಶ್ವರ್‌ ಅವರು “ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂದು ಹಲ್ಲೆ ನಡೆಸಲಾಗಿದೆ” ಎಂದು ಹೇಳಿಕೆ ನೀಡಿದ್ದರು. ಅವರ ಹೇಳಿಕೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಗುಂಪು ಹತ್ಯೆಗೊಳಗಾದವನು ‌ʼಪಾಕಿಸ್ತಾನ್ ಝಿಂದಾಬಾದ್ʼ ಹೇಳಿದ ಎಂಬ ಮಾಹಿತಿ ಗೃಹ ಸಚಿವರಿಗೆ ಕೊಟ್ಟವರು ಯಾರು? ಕೊಲೆ ಎಂದು ಗೊತ್ತಾಗಿದ್ದೇ ಎರಡು ದಿನಗಳ ಬಳಿಕವಾದರೆ, ಈ ʼಪಾಕಿಸ್ತಾನ್ ಝಿಂದಾಬಾದ್ʼ ಮಾಹಿತಿ ಎಲ್ಲಿಂದ ಬಂತು? ಹೇಗೆ ಬಂತು ?ಎಂದು ಜನರು ಪ್ರಶ್ನಿಸುತ್ತಿದ್ದಾರೆ.

ಮುಸ್ಲಿಂ ಎಂಬ ಕಾರಣಕ್ಕೆ ದೇಶದ ಅಲ್ಲಲ್ಲಿ ಗುಂಪು ಥಳಿತ ಹತ್ಯೆ ಪ್ರಕರಣಗಳು ನಡೆಯುತ್ತಿವೆ. ಅದೀಗ ಮಂಗಳೂರಿನಲ್ಲೂ ನಡೆದಿದೆ. ಆದರೆ, ಗೃಹಸಚಿವರು ಈ ಕೃತ್ಯದ ಗಂಭೀರತೆಯನ್ನು ಗೌಣಗೊಳಿಸಲು ಪ್ರಯತ್ನಿಸುತ್ತಿದ್ದಾರೆʼ ಎಂಬ ಆರೋಪ ಕೇಳಿ ಬಂದಿದೆ.

ವಿವಾದದ ಬಳಿಕ ಪ್ರತಿಕ್ರಿಯಿಸಿದ ಗೃಹಸಚಿವ ಜಿ. ಪರಮೇಶ್ವರ್, ʼಪಾಕಿಸ್ತಾನ ಝಿಂದಾಬಾದ್ʼ ಹೇಳಿದ್ದಕ್ಕೆ ಹಲ್ಲೆ ನಡೆಸಿದ್ದೇವೆ ಎಂದು ಕೊಲೆ ಆರೋಪಿಗಳು ಹೇಳಿದ್ದು, ನಾನು ಹೇಳಿದ್ದಲ್ಲ ಎಂದು ಸ್ಷಷ್ಟನೆ ನೀಡಿದ್ದಾರೆ. ಘಟನೆ ಸಂಬಂಧ ತನಿಖೆ ನಡೆಯುತ್ತಿದ್ದು, ಪ್ರಕರಣದಲ್ಲಿ ಪೊಲೀಸರ ವೈಫಲ್ಯ ಕಂಡು ಬಂದರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಪರಮೇಶ್ವರ್ ಹೇಳಿದ್ದಾರೆ.

ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅವರು ಮೃತ ಮುಸ್ಲಿಂ ವ್ಯಕ್ತಿಯನ್ನು ʼಅನ್ಯಕೋಮಿನವನುʼ ಹಾಗೂ ಹತ್ಯೆಗೈದವರು ʼಕ್ರಿಕೆಟ್‌ ಆಟಗಾರರುʼ ಎಂದು ಸಂಭೋದಿಸಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಸಚಿವರೊಬ್ಬರು ಪ್ರಜೆಗಳನ್ನು ʼಅನ್ಯʼ ರು ಎಂದು ಕರೆಯುವುದು ಎಷ್ಟು ಸರಿ?, ಮತ ಹಾಕಿ ಗೆಲ್ಲಿಸಿದವರೇ ʼಅನ್ಯʼ ಕೋಮಿನವರಾದರೇ? ಎಂದು ಜನರು ಪ್ರಶ್ನಿಸುತ್ತಿದ್ದಾರೆ.

ಮೃತ ವ್ಯಕ್ತಿಯು, ಕಾಂಗ್ರೆಸ್‌ ಸಂಸದೆ ಪ್ರಿಯಾಂಕಾ ಗಾಂಧಿ ಅವರ ವಯನಾಡು ಕ್ಷೇತ್ರದವರಾಗಿದ್ದು, ಪ್ರಕರಣದ ಬಗ್ಗೆ ಇದುವರೆಗೂ ಪ್ರಿಯಾಂಕಾ ಗಾಂಧಿ ಅವರೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಬಗ್ಗೆ ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಪಿಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಅವರು, “ಹೊಡೆದವರು ಕ್ರಿಕೆಟ್ ಆಟಗಾರರಂತೆ, ದಾರುಣವಾಗಿ ಹತ್ಯೆಗೀಡಾದ ವಲಸೆ ಕಾರ್ಮಿಕ ಅನ್ಯಕೋಮಿನವನಂತೆ. ಮುಸ್ಲಿಮರು ಸಚಿವ ದಿನೇಶ್ ಗುಂಡೂರಾವ್ ಅವರಿಗೆ "ಅನ್ಯ ಕೋಮಿನವರು" ಆದದ್ದು ಯಾವಾಗಾ?” ಎಂದು ಪ್ರಶ್ನಿಸಿದ್ದಾರೆ.

ಅಲ್ಲದೆ, “ಮಂಗಳೂರಿನ ಇಂದಿನ ದುಸ್ಥಿತಿಗೆ ಅತಿಥಿ ಸಚಿವರಂತೆ ವರ್ತಿಸುವ ಉಸ್ತುವಾರಿ ಸಚಿವರೂ ಹೊಣೆ. ದಂಧೆಕೋರರ ಜೊತೆ, ಕೋಮುವಾದಿಗಳ ಜೊತೆ ಸಾಫ್ಟ್ ಕಾರ್ನರ್ ಹೊಂದಿರುವ ಪೊಲೀಸ್ ಕಮೀಷನರ್ ರನ್ನು ಎಲ್ಲಾ ಆರೋಪಗಳ ಹೊರತಾಗಿಯು ಮಂಗಳೂರಿನಲ್ಲಿ ಉಳಿಸಿಕೊಂಡು ಈ ಸ್ಥಿತಿಗೆ ಉಸ್ತುವಾರಿ ಸಚಿವರು ತಂದಿಟ್ಟಿದ್ದಾರೆ” ಎಂದು ಮುನೀರ್‌ ಅವರು ಹೇಳಿದ್ದಾರೆ.

ಪತ್ರಕರ್ತ, ಲೇಖಕ ನವೀನ್‌ ಸೂರಿಂಜೆ ಅವರೂ ಈ ಬಗ್ಗೆ ಸರ್ಕಾರವನ್ನು ಟೀಕಿಸಿದ್ದು, “30 ರಿಂದ 40 ಜನರಿದ್ದ ಮೈದಾನದ ಕಡೆಗೆ ವಲಸೆ ಕಾರ್ಮಿಕನೊಬ್ಬ "ಪಾಕಿಸ್ತಾನ್, ಪಾಕಿಸ್ತಾನ್" ಎಂದು ಬೊಬ್ಬೆ ಹೊಡೆಯುತ್ತಾ ಬಂದ ಎಂದು ಗುಂಪುದಾಳಿ ಹತ್ಯೆಯ ಎಫ್ಐಆರ್ ನಲ್ಲಿ ಹೇಳಲಾಗಿದೆ. ಇದನ್ನು ಈ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಂಬಿದ್ದಾರೆ. ಒಂದು ಯುವಕರ ಗುಂಪಿನೆಡೆಗೆ ಬಂದ ಒಬ್ಬನೇ ಒಬ್ಬ ಯುವಕ ಪಾಕಿಸ್ತಾನ್ ಪಾಕಿಸ್ತಾನ್ ಎಂದು ಬೊಬ್ಬೆ ಹೊಡೆದಿದ್ದು ನಿಜವೇ ಆದರೆ ಆ ಯುವಕ ಮಾನಸಿಕ ಅಸ್ವಸ್ಥ ಆಗಿರಬೇಕು. ಇಲ್ಲವೇ ಈ ಘಟನೆಯೇ ಸುಳ್ಳು ಇರಬೇಕು. ಹತ್ಯೆ ಮಾಡಿದ ಯುವಕರ ತಂಡದ ಸದಸ್ಯ ಕೊಟ್ಟ ಹೇಳಿಕೆಯನ್ನು ಈ ರಾಜ್ಯ ಸರ್ಕಾರ ನಂಬುತ್ತೆ ಎಂದರೆ ಅದರ ಗುಣಮಟ್ಟದ ಬಗ್ಗೆ ಅನುಮಾನ ಇರಲೇಬೇಕು. ಪಾಕಿಸ್ತಾನ್ ಎಂದು ಘೋಷಣೆ ಕೂಗಿಲ್ಲ ಎಂದು ಹೇಳುವುದಕ್ಕೆ ಆ ಯುವಕ ಬದುಕಿಲ್ಲ. ಘೋಷಣೆ ಕೂಗಿದ್ದಾನೆ ಎಂಬುದರ ಪ್ರತ್ಯಕ್ಷದರ್ಶಿಗಳೆಲ್ಲರೂ ಹತ್ಯೆಯ ಆರೋಪಿಗಳು ! ಹೀಗಿರುವಾಗ ಸರ್ಕಾರ ಕಾನೂನಿನ ಧ್ವನಿಯಲ್ಲಿ ಮಾತನಾಡಬೇಕೇ ಹೊರತು ಆರೋಪಿಗಳ ದ್ವನಿಯಲ್ಲಿ ಅಲ್ಲ” ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಒಟ್ಟಾರೆ, ಈ ಪ್ರಕರಣವನ್ನು ಸರ್ಕಾರ ನಿಭಾಯಿಸಿರುವ ರೀತಿಯು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ ಮಾತ್ರವಲ್ಲ, ಕಾಂಗ್ರೆಸ್‌ ಗೆ ಮತ ಹಾಕಿದ ಮತದಾರರ ಅಸಮಾಧಾನಕ್ಕೂ ಕಾರಣವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X