Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಬೀಜ ಮಸೂದೆ, ವಿದ್ಯುತ್ ಮಸೂದೆ...

ಮಂಗಳೂರು: ಬೀಜ ಮಸೂದೆ, ವಿದ್ಯುತ್ ಮಸೂದೆ ವಿರೋಧಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ16 Jan 2026 9:55 PM IST
share
ಮಂಗಳೂರು: ಬೀಜ ಮಸೂದೆ, ವಿದ್ಯುತ್ ಮಸೂದೆ ವಿರೋಧಿಸಿ ಪ್ರತಿಭಟನೆ

ಮಂಗಳೂರು : ಬೀಜ ಮಸೂದೆ, ವಿದ್ಯುತ್ ಮಸೂದೆ ಹಾಗೂ ಉದ್ಯೋಗ ಖಾತ್ರಿ ಯೋಜನೆಯ ತಿದ್ದುಪಡಿಯನ್ನು ವಿರೋಧಿಸಿ ದೇಶಾದ್ಯಂತ ರೈತ ಕಾರ್ಮಿಕರ ಸಖ್ಯತೆಯಲ್ಲಿ ಪ್ರತಿರೋಧ ದಿನಾಚರಣೆ ನಡೆಸಬೇಕೆಂದು ಕರೆ ನೀಡಿರುವ ಹಿನ್ನೆಲೆಯಲ್ಲಿ ಕೇಂದ್ರ ಕಾರ್ಮಿಕ ಸಂಘಟನೆಗಳು ಹಾಗೂ ರೈತ ಸಂಘಟನೆಗಳ ಜಂಟಿ ನೇತೃತ್ವದಲ್ಲಿ ನಗರದ ಕ್ಲಾಕ್ ಟವರ್ ಬಳಿ ಶುಕ್ರವಾರ ಪ್ರತಿಭಟನಾ ಸಭೆ ನಡೆಯಿತು.

ಪ್ರತಿಭಟನಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ನಾಯಕ ಕೆ. ಯಾದವ ಶೆಟ್ಟಿ ಕೇಂದ್ರ ಸರಕಾರ ಜಾರಿಗೊಳಿಸಲು ಹೊರಟ ಮಸೂದೆಗಳು ಮತ್ತು ಉದ್ಯೋಗ ಖಾತ್ರಿ ಯೋಜನೆಯ ತಿದ್ದುಪಡಿಗಳು ಯೋಜನೆಯ ಉದ್ದೇಶಗಳನ್ನೇ ಬುಡಮೇಲುಗೊಳಿಸಿದೆ. ಕಾರ್ಪೊರೇಟ್ ಸಂಸ್ಥೆಗಳ ಹಿತಾಸಕ್ತಿಗಳನ್ನೇ ಮುಖ್ಯವಾಗಿಟ್ಟುಕೊಂಡು ದೇಶ ಹಾಗೂ ರೈತಾಪಿ ಜನತೆಯ ಹಿತಾಸಕ್ತಿಗಳನ್ನು ಸಂಪೂರ್ಣವಾಗಿ ಬಲಿ ಕೊಟ್ಟಿದೆ. ಇವುಗಳ ವಿರುದ್ಧ ದೇಶದ ಜನರು ಹೋರಾಡದಿದ್ದರೆ ಅಪಾಯ ಕಾದಿದೆ ಎಂದರು.

ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೀತಾರಾಮ ಬೇರಿಂಜ ಮಾತನಾಡಿ ಈಗಾಗಲೇ ಹಲವು ಬೀಜ ಕಂಪೆನಿಗಳು ನೀಡಿದ ಕಳಪೆ ಗುಣಮಟ್ಟದ ಬೀಜದಿಂದ ನಷ್ಟ ಅನುಭವಿಸಿದ್ದ ರೈತರಿಗೆ ಇಲ್ಲಿಯವರೆಗೂ ಯಾವುದೇ ರೀತಿಯ ಬೆಳೆನಷ್ಟ ಪರಿಹಾರಗಳು ಸಿಕ್ಕಿಲ್ಲ. ಬೀಜ ಮಸೂದೆಯಲ್ಲಿ ಮುಂದೆಯೂ ಅದಕ್ಕೆ ಅವಕಾಶವಿಲ್ಲವಾಗಿದೆ. ಒಟ್ಟಿನಲ್ಲಿ ರೈತರ ಹಿತಾಸಕ್ತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಐಟಿಯು ಜಿಲ್ಲಾಧ್ಯಕ್ಷ ಬಿ.ಎಂ. ಭಟ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿದರು.

ಪ್ರತಿಭಟನೆಯಲ್ಲಿ ಪ್ರಮುಖರಾದ ಬಿ. ಶೇಖರ್ ಬಂಟ್ವಾಳ, ವಿ.ಕುಕ್ಯಾನ್, ಎಚ್.ವಿ. ರಾವ್, ಸುರೇಶ್ ಕುಮಾರ್ ಬಂಟ್ವಾಳ, ಗೀತಾ ಸುವರ್ಣ ಬಜಾಲ್, ಸಂಜೀವಿ ಹಳೆಯಂಗಡಿ, ಮೀನಾಕ್ಷಿ ಬಜಪೆ, ಕೃಷ್ಣಪ್ಪವಾಮಂಜೂರು, ಸುಧಾಕರ ಕಲ್ಲೂರು, ಜೆ. ಬಾಲಕೃಷ್ಣ ಶೆಟ್ಟಿ, ಸುಕುಮಾರ್ ತೊಕ್ಕೋಟು, ವಸಂತ ಆಚಾರಿ, ಯೋಗೀಶ್ ಜಪ್ಪಿನಮೊಗರು, ಪದ್ಮಾವತಿ ಶೆಟ್ಟಿ, ಸುಂದರ ಕುಂಪಲ, ರವಿಚಂದ್ರ ಕೊಂಚಾಡಿ, ಬಿ.ಕೆ. ಇಮ್ತಿಯಾಝ್, ವಸಂತಿ ಕುಪ್ಪೆಪದವು, ಲೋಲಾಕ್ಷಿ ಬಂಟ್ವಾಳ, ಈಶ್ವರಿ ಬೆಳ್ತಂಗಡಿ, ಜಯಂತಿ ಶೆಟ್ಟಿ, ಜಯಲಕ್ಷ್ಮಿ ಪ್ರಮೋದಿನಿ, ಕೃಷ್ಣಪ್ಪ ಸಾಲ್ಯಾನ್, ಸದಾಶಿವದಾಸ್, ಶೇಖರ್ ಕುಂದರ್, ಬಿ.ಎನ್. ದೇವಾಡಿಗ, ರಮೇಶ್ ಉಳ್ಳಾಲ ಮತ್ತಿತರರು ಪಾಲ್ಗೊಂಡಿದ್ದರು.

Tags

MangaluruProtestElectricity Bill
share
ವಾರ್ತಾಭಾರತಿ
ವಾರ್ತಾಭಾರತಿ
Next Story
X