Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಸುನ್ನಿ ಸಂಘ ಕುಟುಂಬದಿಂದ...

ಮಂಗಳೂರು: ಸುನ್ನಿ ಸಂಘ ಕುಟುಂಬದಿಂದ ಡ್ರಗ್ಸ್ ವಿರುದ್ಧ ಜನಜಾಗೃತಿ ರ‍್ಯಾಲಿ-ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ19 Aug 2023 7:53 PM IST
share
ಮಂಗಳೂರು: ಸುನ್ನಿ ಸಂಘ ಕುಟುಂಬದಿಂದ ಡ್ರಗ್ಸ್ ವಿರುದ್ಧ ಜನಜಾಗೃತಿ ರ‍್ಯಾಲಿ-ಸಮಾವೇಶ

ಮಂಗಳೂರು, ಆ.19: ಕರ್ನಾಟಕ ಮುಸ್ಲಿಂ ಜಮಾಅತ್, ಎಸ್‌ವೈಎಸ್, ಎಸೆಸ್ಸೆಫ್, ಕೋ-ಆರ್ಡಿನೇಶನ್ ಕಮಿಟಿ ಮಂಗಳೂರು ರೆನ್ ಇದರ ವತಿಯಿಂದ ನಗರದ ಜ್ಯೋತಿ ಸಮೀಪದ ಅಂಬೇಡ್ಕರ್ ವೃತ್ತದಿಂದ ಪುರಭವನದವರೆಗೆ ಡ್ರಗ್ಸ್ ವಿರುದ್ಧ ಜನಜಾಗೃತಿ ರ‍್ಯಾಲಿ ಮತ್ತು ಸಮಾವೇಶ ಶನಿವಾರ ನಡೆಯಿತು.

313 ಸದಸ್ಯರನ್ನು ಒಳಗೊಂಡ ಜಾಗೃತಿ ರ‍್ಯಾಲಿಯನ್ನು ಮಂಗಳೂರು ನಗರ ಕೇಂದ್ರ ಉಪವಿಭಾಗದ ಎಸಿಪಿ ಮಹೇಶ್ ಕುಮಾರ್ ಉದ್ಘಾಟಿಸಿದರು.

ಬಳಿಕ ಪುರಭವನದ ಮಿನಿ ಹಾಲ್‌ನಲ್ಲಿ ನಡೆದ ಗ್ಲೋರಿಯಸ್ ಇಂಡಿಯಾ ಸಮಾವೇಶ ಹಾಗೂ ಪ್ರಜಾಭಾರತ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ‘ಪ್ರತಿಯೊಬ್ಬರೂ ತಮ್ಮ ಮಕ್ಕಳ ಮೇಲೆ ವಿಶೇಷ ನಿಗಾ ವಹಿಸಬೇಕು. ಯಾವ ಕಾರಣಕ್ಕೂ ಯುವ ಪೀಳಿಗೆಯು ಮಾದಕ ವ್ಯಸನಕ್ಕೆ ಬಲಿಯಾಗದಂತೆ ನೋಡಿಕೊಳ್ಳ ಬೇಕು. ಸರಕಾರ, ಪೊಲೀಸ್ ಇಲಾಖೆಯ ಜೊತೆ ಸಮಾಜವು ಕೈ ಜೋಡಿಸಿದರೆ ಮಾತ್ರ ಈ ಪಿಡುಗನ್ನು ಮಟ್ಟ ಹಾಕಬಹುದು. ಸುನ್ನಿ ಸಂಘಟನೆಗಳು ಸಮಾಜದ ಕಣ್ತೆರೆಸುವಂತಹ ಈ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ ಎಂದರು.

‘ಡ್ರಗ್ಸ್ ಮಾದಕ ದ್ರವ್ಯದ ಅನಾಹುತ’ದ ಬಗ್ಗೆ ಮಾತನಾಡಿದ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ‘ಜಿಲ್ಲೆಯಲ್ಲಿ ನಡೆಯುವ ಮತೀಯ ಗಲಭೆಗಳಲ್ಲಿ ಮಾದಕ ವ್ಯಸನಿಗಳ ಪಾತ್ರ ತುಂಬಾ ಇದೆ. ಮಾದಕ ವ್ಯಸನಿಗಳನ್ನು ಬಳಸಿಕೊಂಡು ಕೊಲೆ, ಲೂಟಿ, ಹಲ್ಲೆಯಂತಹ ಕೃತ್ಯಗಳನ್ನು ಮಾಡಿಸಲಾಗುತ್ತದೆ, ಬೆದರಿಕೆ ಹಾಕಿಸಲಾಗುತ್ತದೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಸಲಾಗುತ್ತದೆ. ಈ ನಿಟ್ಟಿನಲ್ಲಿ ಸುನ್ನಿ ಸಂಘಟನೆಗಳು ಚಳವಳಿ ರೂಪದಲ್ಲಿ ಜಾಗೃತಿ ಮೂಡಿಸಲು ಪ್ರಯತ್ನಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ಹೆತ್ತವರು ನೀಡಿದ ಶುಲ್ಕವನ್ನು ಪಾವತಿಸದೆ ವಿದ್ಯಾರ್ಥಿಗಳು ಮಾದಕ ದ್ರವ್ಯಗಳ ಖರೀದಿಗೆ ಬಳಸಿದ ಉದಾಹರಣೆಯೂ ನಮ್ಮ ಮುಂದಿದೆ. ಹಾಗಾಗಿ ಯುವ ಪೀಳಿಗೆಯ ಭವಿಷ್ಯವನ್ನೇ ನಾಶ ಮಾಡುವ ಈ ಪಿಡುಗಿನ ವಿರುದ್ಧ ಹೋರಾಟ ತೀವ್ರಗೊಳಿಸಬೇಕಿದೆ ಎಂದರು.

‘ಗ್ಲೋರಿಯಸ್ ಇಂಡಿಯಾ’ ಕುರಿತು ಮಾತನಾಡಿದ ಎಸ್‌ವೈಎಸ್ ರಾಜ್ಯ ಮುಖಂಡ ಡಾ. ಎಮ್ಮೆಸ್ಸೆಎಂ ಅಬ್ದುಲ್ ರಶೀದ್ ಝೈನಿ ಕಾಮಿಲ್ ‘ದೇಶಕ್ಕೆ ಮುಸ್ಲಿಮರು ಅಪಾರ ಕೊಡುಗೆಗಳನ್ನು ನೀಡಿದ್ದಾರೆ. ಆದರೆ ಅದನ್ನು ವ್ಯವಸ್ಥಿತವಾಗಿ ಮರೆ ಮಾಚಲಾಗುತ್ತದೆ. ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ ಸುಮಾರು 5 ಲಕ್ಷ ಹೋರಾಟಗಾರರ ಪೈಕಿ ಟಿಪ್ಪು ಸುಲ್ತಾನ್ ಕೂಡ ಪ್ರಮುಖರಾಗಿದ್ದಾರೆ. ಅಂತಹ ದೇಶಪ್ರೇಮಿಯ ತ್ಯಾಗವನ್ನು ಮರೆಯಲಾಗುತ್ತದೆ. ಈ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸಲಾಗುತ್ತದೆ ಎಂದರು.

ಕೆಎಂಜೆ ಮಂಗಳೂರು ಝೋನ್ ಅಧ್ಯಕ್ಷ ವಿಎ ಮುಹಮ್ಮದ್ ಸಖಾಫಿ ವಳವೂರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸೈಯದ್ ಇಸಾಕ್ ತಂಙಳ್ ಕಣ್ಣೂರು, ಬಶೀರ್ ಮದನಿ ಅಲ್ ಕಾಮಿಲ್ ಕೂಳೂರು, ಅಶ್ರಫ್ ಪಾಳಿಲಿ ಅಮ್ಮೆಮ್ಮಾರ್, ಬಶೀರ್ ಅಹ್ಸನಿ ಪಡೀಲ್, ಸುಹೈಲ್ 10ನೆ ಮೈಲ್, ಎಪಿ ಇಸ್ಮಾಯಿಲ್, ಕೆಎಚ್ ಕರೀಂ ಹಾಜಿ ಅಡ್ಯಾರ್, ಬಿಎ ಅಬ್ದುಲ್ ಸಲೀಂ ಹಾಜಿ ಅಡ್ಯಾರ್ ಪದವು, ನವಾಝ್ ಸಖಾಫಿ ಅಡ್ಯಾರ್ ಪದವು, ಅಝ್ಮಾಲ್, ಕೆಸಿ ಸುಲೈಮಾನ್ ಮುಸ್ಲಿಯಾರ್, ಹಸನ್ ಪಾಂಡೇಶ್ವರ, ಕಮಾಲ್, ನಝೀರ್ ಲುಲು ಮತ್ತಿತರರು ಉಪಸ್ಥಿತರಿದ್ದರು.

ಎಸ್‌ವೈಎಸ್ ಫರಂಗಿಪೇಟೆ ಸರ್ಕಲ್ ಅಧ್ಯಕ್ಷ ಮನ್ಸೂರ್ ಮದನಿ ದುಆಗೈದರು. ಎಸ್‌ವೈಎಸ್ ಮಂಗಳೂರು ರೆನ್ ಅಧ್ಯಕ್ಷ ಸತ್ತಾರ್ ಸಖಾಫಿ ಅಡ್ಯಾರ್ ಪದವು ಸ್ವಾಗತಿಸಿದರು. ಸುನ್ನಿ ಕೋ-ಆರ್ಡಿನೇಶನ್ ಮಂಗಳೂರು ರೆನ್ ಅಧ್ಯಕ್ಷ ಹಾಫಿಳ್ ಯಾಕೂಬ್ ಸಅದಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸುನ್ನಿ ಕೋ ಆರ್ಡಿನೇಶನ್‌ನ ಪ್ರಧಾನ ಕಾರ್ಯದರ್ಶಿ ಅಶ್ರಫ್ ಕಿನಾರ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X