Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು| ಕಾರಿನಲ್ಲಿ ಯುವಕನನ್ನು...

ಮಂಗಳೂರು| ಕಾರಿನಲ್ಲಿ ಯುವಕನನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ

ವಾರ್ತಾಭಾರತಿವಾರ್ತಾಭಾರತಿ27 Sept 2025 9:55 PM IST
share
ಮಂಗಳೂರು| ಕಾರಿನಲ್ಲಿ ಯುವಕನನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ

ಮಂಗಳೂರು, ಸೆ.27: ನಗರದ ಹಂಪನಕಟ್ಟೆಯ ಚಿನ್ನದ ಅಂಗಡಿಯೊಂದರ ಕಚೇರಿ ಕೆಲಸಗಾರ ಮುಸ್ತಫಾ ಎಂಬವರನ್ನು ದುಷ್ಕರ್ಮಿಗಳು ಅಪಹರಿಸಿ 1.5 ಕೋಟಿ ರೂ. ಮೌಲ್ಯದ 1650 ಗ್ರಾಂ ಚಿನ್ನದ ಗಟ್ಟಿಯನ್ನು ದೋಚಿದ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೆ.26ರಂದು ರಾತ್ರಿ 8:30ರ ವೇಳೆಗೆ ಅಂಗಡಿಯಿಂದ ವಾರದಲ್ಲಿ ಶೇಖರಣೆಯಾದ ಸುಮಾರು 1.5 ಕೋಟಿ ರೂ. ಮೌಲ್ಯದ 1,650 ಗ್ರಾಂ ತೂಕದ ಮೆಲ್ಟ್ ಮಾಡಿದ ಚಿನ್ನವನ್ನು ಶುದ್ಧ ಚಿನ್ನವಾಗಿ ಪರಿವರ್ತಿಸಲು ನಗರದ ರಥಬೀದಿಯ ಸಂತೋಷ್ ಎಂಬವರ ಚಿನ್ನದ ಅಂಗಡಿಗೆ ಮುಸ್ತಫಾ ತನ್ನ ಸ್ಕೂಟರ್‌ನ ಸೀಟಿನ ಅಡಿಯ ಡಿಕ್ಕಿಯಲ್ಲಿಟ್ಟು ತೆಗೆದುಕೊಂಡು ಹೋಗಿದ್ದರು ಎನ್ನಲಾಗಿದೆ.

ನಗರದ ಜಿಎಚ್‌ಎಸ್ ರಸ್ತೆಯ ಮೂಲಕ ರಥಬೀದಿ ವೆಂಕಟರಮಣ ದೇವಸ್ಥಾನದ ಬಳಿ ಮುಸ್ತಫಾ ತಲುಪಿದಾಗ ರಾತ್ರಿ ಸುಮಾರು 8:45ರ ವೇಳೆಗೆ ಹಿಂದಿನಿಂದ ಇನ್ನೊಂದು ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಆರೋಪಿಗಳು ಮುಸ್ತಫಾರ ಸ್ಕೂಟರ್‌ಗೆ ಅಡ್ಡವಾಗಿಟ್ಟು ನನ್ನ ವಾಹನಕ್ಕೆ ಯಾಕೆ ತಾಗಿಸಿಕೊಂಡು ಹೋಗುತ್ತೀ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಆರೋಪಿಗಳ ತರಾಟೆಯಿಂದ ಮುಸ್ತಫಾ ಗಾಬರಿಗೊಂಡಿದ್ದು, ಈ ವೇಳೆ ಹಿಂದಿನಿಂದ ಬಿಳಿ ಬಣ್ಣದ ಕಾರಿನಲ್ಲಿ ಬಂದ ನಾಲ್ವರ ಪೈಕಿ ಒಬ್ಬ ಕಾರಿನಿಂದ ಇಳಿದು ಕತ್ತಿ ತೋರಿಸಿ ಬೆದರಿಸಿ, ನಂತರ ಕಾರಿನಲ್ಲಿ ಬಲವಂತವಾಗಿ ಅಪಹರಿಸಿದ್ದಾರೆ. ದಾರಿ ಮಧ್ಯ ಆರೋಪಿಗಳು ಮುಸ್ತಫಾರಿಗೆ ಕೈಯಿಂದ ಹಲ್ಲೆ ನಡೆಸಿ ಸ್ಟೇಟ್‌ಬ್ಯಾಂಕ್, ಪಾಂಡೇಶ್ವರ ಮಾರ್ಗವಾಗಿ ಗೋರಿಗುಡ್ಡ, ಉಜ್ಜೋಡಿ ಫ್ಲೈಓವರ್ ರಸ್ತೆಯ ಕೆಳಗಡೆಯಿಂದ ಸರ್ವಿಸ್ ರಸ್ತೆಯಲ್ಲಿ ಸಾಗುತ್ತಲೇ ಚಿನ್ನದ ಗಟ್ಟಿಯ ಬಗ್ಗೆ ವಿಚಾರಿಸಿದ್ದಾರೆ ಎಂದು ತಿಳಿದು ಬಂದಿದೆ.

ಮುಸ್ತಫಾ ಚಲಾಯಿಸಿಕೊಂಡಿದ್ದ ಸ್ಕೂಟರನ್ನು ದ್ವಿಚಕ್ರ ವಾಹನದಲ್ಲಿ ಬಂದು ತಗಾದೆ ತೆಗೆದಿದ್ದ ಹಿಂಬದಿ ಸವಾರನು ಎಕ್ಕೂರು ಬಳಿ ಕಾರು ತಲುಪಿದಾಗ ಚಿನ್ನದ ಗಟ್ಟಿಯನ್ನು ಕಾರಿನಲ್ಲಿ ಕುಳಿತವರಿಗೆ ನೀಡಿದ್ದಾನೆ ಎಂದು ದೂರಲಾಗಿದೆ. ರಾತ್ರಿ ಸುಮಾರು 9:15ರ ವೇಳೆಗೆ ಮುಸ್ತಫಾರನ್ನು ಕಾರಿನಿಂದ ಇಳಿಸಿ ಸ್ಕೂಟರನ್ನು ಅಲ್ಲೇ ಬಿಟ್ಟು ತೊಕ್ಕೊಟ್ಟು ಕಡೆಗೆ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಬಳಿಕ ಮುಸ್ತಫಾ ದಾರಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೊಬೈಲ್ ಪಡೆದು ಸ್ನೇಹಿತನಿಗೆ ಕರೆ ಮಾಡಿ ವಿಚಾರ ತಿಳಿಸಿದ್ದು, ಅವರು ಚಿನ್ನದ ಅಂಗಡಿಯ ಮ್ಯಾನೇಜರ್‌ಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X