Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮನಪಾ: ಆಸ್ತಿ ತೆರಿಗೆ ಹೆಚ್ಚಳಕ್ಕೆ...

ಮನಪಾ: ಆಸ್ತಿ ತೆರಿಗೆ ಹೆಚ್ಚಳಕ್ಕೆ ಅಸ್ತು; ಶೇ. 3ರಷ್ಟು ಹೆಚ್ಚಳಕ್ಕೆ ಅನುಮೋದನೆ

ವಾರ್ತಾಭಾರತಿವಾರ್ತಾಭಾರತಿ31 Jan 2024 3:23 PM IST
share

ಮಂಗಳೂರು, ಜ.31: ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಚಾಲ್ತಿಯಲ್ಲಿರುವ ಪರಿಷ್ಕೃತ ಮಾರುಕಟ್ಟೆ ದರಗಳನ್ನು ಅಳವಡಿಸಿ ಪರಿಷ್ಕೃತ ಆಸ್ತಿ ತೆರಿಗೆ ವಸೂಲಿ ಮಾಡಬೇಕೆಂಬ ಸರಕಾರದ ನಿರ್ಣಯದಂತೆ ಮಂಗಳೂರು ಮಹಾನಗರ ಪಾಲಿಕೆ ಆಡಳಿತವು ಶೇ. 3ರಷ್ಟು ತೆರಿಗೆ ಹೆಚ್ಚಳಕ್ಕೆ ಅನುಮೋದನೆ ನೀಡಿದೆ.

ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ತೆರಿಗೆ ಹೆಚ್ಚಳದ ನಿರ್ಣಯವನ್ನು ಅವಿರೋಧವಾಗಿ ಅನುಮೋದಿಸಲಾಯಿತು.

ಸಭೆಯಲ್ಲಿ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ ಅವರು, ತೆರಿಗೆ ಪರಿಷ್ಕರಣೆ ಕುರಿತಾದ ಕಾರ್ಯಸೂಚಿ ಮಂಡಿಸಿದರು.

ಮನಪಾ ವ್ಯಾಪ್ತಿಯಲ್ಲಿ 2023-24ನೆ ಸಾಲಿಗೆ ಹೊಸ ಆಸ್ತಿ ತೆರಿಗೆಯನ್ನು ಆನ್ಲೈನ್ ಮೂಲಕ ಅಳವಡಿಸಿ ವಸೂಲಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಜನವರಿ ತಿಂಗಳಿನಿಂದ ತೆರಿಗೆದಾರರು 2024-25ನೆ ಸಾಲಿನ ತೆರಿಗೆಯನ್ನು ಮುಂಗಡವಾಗಿ ಪಾವತಿಸಲು ಆಸಕ್ತಿ ವಹಿಸಿರುವುದರಿಂದ ಆನ್ಲೈನ್ ತಂತ್ರಾಂಶದಲ್ಲಿ ಪರಿಷ್ಕೃತ ಮಾರುಕಟ್ಟೆ ಮೌಲ್ಯ ಬಳಸಿ ಮುಂಗಡ ಪಾವತಿಗೆ ಅವಕಾಶ ಕಲ್ಪಿಸಬೇಕಾಗಿದೆ. ನಗರ ವ್ಯಾಪ್ತಿಯಲ್ಲಿ 1-10-2023ರಿಂದ ಪರಿಷ್ಕೃತ ಮಾರುಕಟ್ಟೆ ಮೌಲ್ಯಗಳನ್ನು ಜಾರಿಗೆ ಮಾಡಲಾಗಿದೆ. ಸದ್ರಿ ಮಾರುಕಟ್ಟೆ ದರಗಳನ್ನು ಅಳವಡಿಸಿ ತಿದ್ದುಪಡಿ ಅಧಿನಿಯಮ 2021ರ ಪ್ರಕಾರ ನಿಗದಿಗೊಳಿಸಿರುವ ಮಾನದಂಡದಂತೆ ಆಸ್ತಿ ತೆರಿಗೆ ವಸೂಲಿ ಮಾಡಲು ಅನುಮೋದನೆ ನೀಡುವುದಾಗಿ ಮುಖ್ಯ ಸಚೇತಕರು ತಿಳಿಸಿದರು.

ಕರ್ನಾಟಕ ನಗರ ಪಾಲಿಕೆಗಳ (ತಿದ್ದುಪಡಿ) ಆಧ್ಯಾದೇಶ, 2021ರ ಪ್ರಕಾರ ಸ್ವಯಂ ಘೋಷಿತ ಆಸ್ತಿ ತೆರಿಗೆಯಲ್ಲಿ ತಿದ್ದುಪಡಿ ಮಾಡಲಾಗಿದೆ. ಅದರಂತೆ ಪ್ರತಿ ಹಣಕಾಸು ವರ್ಷದಲ್ಲಿ ಚಾಲ್ತಿ ಪರಿಷ್ಕೃತ ಮಾರುಕಟ್ಟೆ ಮೌಲ್ಯದ ಮಾರ್ಗಸೂಚಿ ದರಗಳನ್ನು ಅಳವಡಿಸಿ ಅಥವಾ ಮಾರ್ಗಸೂಚಿ ದರಗಳ ಪರಿಷ್ಕರಣೆ ಆಗದಿದ್ದರೆ ಪ್ರತಿ ವರ್ಷ ಶೇ. 3ರಷ್ಟು ಹೆಚ್ಚಳ ಮಾಡಿ ಆಸ್ತಿ ತೆರಿಗೆ ವಸೂಲು ಮಾಡಬೇಕಾಗಿದೆ. ಸ್ಥಳೀಯ ಸಂಸ್ಥೆಗಳನ್ನು ಆರ್ಥಿಕವಾಗಿ ಬಲಪಡಿಸಲು ಆಸ್ತಿ ತೆರಿಗೆ ಬಹು ಮುಖ್ಯ ಆದಾಯವಾಗಿರುವ ಹಿನ್ನೆಲೆಯಲ್ಲಿ ಕಾಯ್ದೆಗಳಲ್ಲಿ ತಿದ್ದುಪಡಿಯಾಗಿರುವ ಅಂಶಗಳನ್ನು ಪರಿಗಣಿಸಿ, ಸಾರ್ವಜನಿಕರಿಗೆ ಹೆಚ್ಚಿನ ಹೊರೆ ಆಗದ ರೀತಿಯಲ್ಲಿ ತೆರಿಗೆ ವಿಧಿಸಲು ಕ್ರಮ ವಹಿಸುವಂತೆ 2021/2/19ರ ಸರಕಾರದ ಸುತ್ತೋಲೆಯಲ್ಲಿ ಸೂಚಿಸಲಾಗಿದೆ. ಸ್ಥಳೀಯ ಸಂಸ್ಥೆಗಳು ತಿದ್ದುಪಡಿ ಕಾಯ್ದೆಯಂತೆ ಆಸ್ತಿ ತೆರಿಗೆ ನಿಗದಿಪಡಿಸಿ ಅನುಷ್ಠಾನಗೊಳಿಸಬೇಕು. ಇಲ್ಲವಾದಲ್ಲಿ ಕೇಂದ್ರ ಸರಕಾರದ 15ನೆ ಹಣಕಾಸು ಆಯೋಗದ ಅನುದಾನ ಮತ್ತು ಸ್ವಚ್ಛ ಭಾರತ್ ಮಿಷನ್ 2.0 ಯೋಜನೆಯ ಅನುದಾನದ ಮೇಲೆ ಪರಿಣಾಮ ಬೀರಲಿದೆ. ಕಾಲಕಾಲಕ್ಕೆ ಆದಾಯದ ಮೂಲಗಳನ್ನು ಹೆಚ್ಚಿಸಲು ಕ್ರಮ ವಹಿಸದಿದ್ದಲ್ಲಿ ರಾಜ್ಯ ಹಣಕಾಸು ಆಯೋಗದ ಅನುದಾನವನ್ನು ತಡೆಹಿಡಿಯಲು ಕ್ರಮ ವಹಿಸಲು ಸೂಚಿರುವುದಾಗಿ ಅವರು ಈ ಸಂದರ್ಭ ವಿವರಿಸಿದರು.

ಉಪ ಮೇಯರ್ ಸುನೀತಾ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಲೋಹಿತ್ ಅಮೀನ್, ವರುಣ್ ಚೌಟ, ಭರತ್ ಕುಮಾರ್, ಗಣೇಶ, ಪಾಲಿಕೆ ಆಯುಕ್ತ ಆನಂದ್ ಉಪಸ್ಥಿತರಿದ್ದರು.

Tags

MCCMangaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X