Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನಾರಾಯಣಗಳುಗಳಿಂದ ಜಗತ್ತಿಗೆ ಮಾನವೀಯತೆಯ...

ನಾರಾಯಣಗಳುಗಳಿಂದ ಜಗತ್ತಿಗೆ ಮಾನವೀಯತೆಯ ಸಂದೇಶ: ಬಿ.ಕೆ.ಹರಿಪ್ರಸಾದ್

‘ಅರವಿಪುರದಿಂದ ಓಂಕಾರೇಶ್ವರದವರೆಗೆ’ ಕನ್ನಡ ಅನುವಾದಿತ ಗ್ರಂಥ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ24 Aug 2024 7:12 PM IST
share
ನಾರಾಯಣಗಳುಗಳಿಂದ ಜಗತ್ತಿಗೆ ಮಾನವೀಯತೆಯ ಸಂದೇಶ: ಬಿ.ಕೆ.ಹರಿಪ್ರಸಾದ್

ಮಂಗಳೂರು, ಆ. 24: ಜಗತ್ತಿಗೆ ಮಾನವೀಯತೆಯ ಸಂದೇಶ ನೀಡಿದವರಲ್ಲಿ ಬುದ್ಧ ಮತ್ತು ಬಸವಣ್ಣರ ಬಳಿಕದ ಸ್ಥಾನ ಬ್ರಹ್ಮಶ್ರೀ ನಾರಾಯಣಗುರುಗಳಿಗೆ ಸಲ್ಲುತ್ತದೆ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅಭಿಪ್ರಾಯಿಸಿದ್ದಾರೆ.

ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೆ ಜಯಂತಿಯ ಪ್ರಯುಕ್ತ ನಾರಾಯಣಗುರುಗಳಿಂದ ಸ್ಥಾಪಿಸಿಲ್ಪಟ್ಟ ಹಾಗೂ ಅವರ ಶಿಷ್ಯರಿಂದ ಪ್ರತಿಷ್ಟಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ. ಮೀನಾಕ್ಷಿ ರಾಮಚಂದ್ರ ಅವರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ‘ಅರವಿಪುರದಿಂದ ಓಂಕಾರೇಶ್ವರದವರೆಗೆ’ ಗ್ರಂಥವನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಬೌದ್ಧ ಧರ್ಮ ಇಂದು ಪ್ರಪಂಚದಲ್ಲಿ ಮೂರನೆ ದೊಡ್ಡ ಧರ್ಮವಾಗಿದ್ದರೆ, ಭಾರತದಲ್ಲಿ ಅದರ ನೆಲೆ ಮಾತ್ರವಿದೆ. ಬಸವಣ್ಣ 12ನೆ ಶತಮಾನದಲ್ಲಿ ಮಾನವೀತೆಯನ್ನು ಪ್ರತಿಪಾದನೆ ಮಾಡುತ್ತಾ ಅಹಿಂಸೆಯೇ ಪರಮೋಧರ್ಮ ಎಂದು ಸಾರಿದವರು. ಬಳಿಕ ರಕ್ತರಹಿತ ಕ್ರಾಂತಿಯ ಮೂಲಕ ಕೇರಳದಲ್ಲಿ ಸಾಮಾಜಿಕ ಬದಲಾವಣೆಯನ್ನು ತಂದವರು ಬ್ರಹ್ಮಶ್ರೀ ನಾರಾಯಣ ಗುರುಗಳು. ಇಂದು ನಾವು ಮಂಗಳೂರಿನಲ್ಲಿ ಸಾಕಷ್ಟು ಗುರು ಮಂದಿರಗಳನ್ನು ಕಟ್ಟಿದ್ದೇವೆ. ಆದರೆ, ನಾರಾಯಣಗುರುಗಳು ಮಂದಿರ ಕಟ್ಟಿಸಿದ ಧ್ಯೇಯೋದ್ದೇಶಗಳೇ ಬೇರೆ. ದೇವಸ್ಥಾನಕ್ಕೆ ಶೂದ್ರರಿಗೆ, ಪಂಚಮರಿಗೆ ಪ್ರವೇಶಾವಕಾಶ ಇಲ್ಲದಾಗ ಶಿವಗಿರಿಯಲ್ಲಿ ಈಳವ ಶಿವನನ್ನು ಪ್ರತಿಷ್ಟಾಪನೆ ಮಾಡಿ, ಎಲ್ಲಾ ಶೂದ್ರರಿಗೂ ದೇವಸ್ಥಾನಕ್ಕೆ ಪ್ರವೇಶಕ್ಕೆ ಅವಕಾಶ ನೀಡಿದ ನಾರಾಯಣ ಗುರುಗಳು, ಆ ಕಾಲದ ಗೊಡ್ಡು ಸಂಪ್ರದಾಯಗಳನ್ನು ವಿರೋಧಿಸಿ ಹಿಂದೂ ಧರ್ಮದಲ್ಲಿದ್ದುಕೊಂಡೇ ಸುಧಾ ರಣೆ ತಂದವರು. ಮದ್ಯಪಾನ ನಿಷೇಧ, ನೈರ್ಮಲ್ಯಕ್ಕೆ ಒತ್ತು ನೀಡಿ, ಶಿಕ್ಷಣಕ್ಕೆ ಪ್ರೋತ್ಸಾಹಿಸಿ, ಆಡಂಬರದ ವಿವಾಹವನ್ನು ವಿರೋಧಿಸಿ ಕೇರಳದಲ್ಲಿ ಕ್ರಾಂತಿ ಮಾಡಿದ ನಾರಾಯಣಗುರುಗಳು ಗುರುಮಂದಿರಗಳನ್ನು ಕಟ್ಟಿದ್ದು, ಭಜನೆ ಅಥವಾ ಪೂಜೆ ಮಾಡುವ ಉದ್ದೇಶದಿಂದ ಅಲ್ಲ. ಗುರುಮಂದಿರದ ಜತೆ ಗ್ರಂಥಾಲಯ ಕಟ್ಟಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಸಂದೇಶ ಅವರದ್ದಾಗಿತ್ತು. ಆ ಸಂದೇಶ ಮಾತ್ರ ಪಾಲನೆಯಾಗುತ್ತಿಲ್ಲ ಎಂದು ಬಿ.ಕೆ. ಹರಿಪ್ರಸಾದ್ ಹೇಳಿದರು.

ಮಹಾತ್ಮಗಾಂಧೀಜಿ ರಾಷ್ಟ್ರಪಿತ ಎಂದು ಜಗತ್ಪ್ರಸಿದ್ಧರಾಗಲು ಪ್ರೇರಣೆಯಾಗಿದ್ದು ನಾರಾಯಣಗುರುಗಳು. ಗುರುಗಳ ಸರ್ವಧರ್ಮ ಸಮಭಾವದ ಗುರುಮಂತ್ರವನ್ನು ತನ್ನದಾಗಿಸಿಕೊಂಡ ಮಹಾತ್ಮಗಾಂಧೀಜಿಯವರ ಜನ್ಮದಿನವನ್ನು ಪ್ರಪಂಚದ 127 ಆಚರಣೆ ಮಾಡಲಾಗುತ್ತದೆ. ಹಾಗಾಗಿ ಪೂಜೆ, ದೇವಸ್ಥಾನ ನಿರ್ಮಾಣ ಸಾಕು. ಇನ್ನು ಸಮಾಜದ ಶಿಕ್ಷಣಕ್ಕೆ ಆದ್ಯತೆ ನೀಡಿ ಸರಸ್ವತಿ ಮಂದಿರಗಳನ್ನು ಕಟ್ಟುವಂತಾಗಲಿ. ಈ ಗ್ರಂಥದ ಮೂಲಕ ಯುವಪೀಳಿಗೆಗೆ ಮಾರ್ಗದರ್ಶನ ವಾಗಲಿ ಎಂದು ಆಶಯ ವ್ಯಕ್ತಪಡಿಸಿದರು.

ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೊರಗಪ್ಪ ಸಭಾಂಗಣದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಆರ್ಯ ಈಡಿಗ ಮಹಾ ಸಂಸ್ಥಾನ ದ ಪೀಠಾಧಿಪತಿ ಶ್ರೀ ವಿಖ್ಯಾತನಂದ ಸ್ವಾಮೀಜಿ ಆಶೀರ್ವಚನ ನೀಡಿ, ಜಾತಿ-ಶೋಷಣೆ ವಿರುದ್ಧ ಮಾತನಾಡಿದ ಬಹುತೇಕ ಮಹನೀಯರು ಯಾರೂ ಕ್ಷೇತ್ರಾರಾಧನೆಯನ್ನು ಬೆಂಬಲಿಸಿಲ್ಲ. ಆದರೆ ನಾರಾಯಣ ಗುರುಗಳು ಅದಕ್ಕೆ ಮಹತ್ವ ನೀಡಿದವರು. ಕ್ಷೇತ್ರಾರಾಧನೆಯನ್ನು ಬಿಟ್ಟು ಭಾರತೀಯ ಸಂಸ್ಕೃತಿ ಇಲ್ಲವಾಗಿದ್ದು ಬ್ರಹ್ಮಶ್ರೀ ನಾರಾಯಣ ಗುರುಗಳ ಕ್ಷೇತ್ರ ಸಂಕಲ್ಪ ಮಾನಸಿಕ ನೆಮ್ಮದಿಗೆ ಪೂರಕವಾಗಿದೆ ಎಂದರು.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷ ಎಚ್.ಎಸ್. ಸಾಯಿರಾಂ ಕಾರ್ಯಕ್ರಮ ಉದ್ಘಾಟಿಸಿ, ಶುಭ ಹಾರೈಸಿದರು.

ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂಗಳೂರು ವಿವಿ ಉಪಕುಲಪತಿಗಳಾದ ಪಿ.ಎಲ್. ಧರ್ಮ, ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಡಿ.ಸುವರ್ಣ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಅಧ್ಯಕ್ಷ ರಾಜಶೇಖರ್ ಕೋಟ್ಯಾನ್, ನಾರಾಯಣಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್, ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ ಪದ್ಮರಾಜ್ ಆರ್., ನಮ್ಮ ಕುಡ್ಲ ವಾಹಿನಿ ನಿರ್ದೇಶಕ ಲೀಲಾಕ್ಷ ಬಿ. ಕರ್ಕೇರಾ, ಶ್ರೀ ನಾರಾಯಣಗುರು ವೈದಿಕ ಸಮಿತಿ ಅಧ್ಯಕ್ಷ ಹರೀಶ್ ಶಾಂತಿ, ನಾರಾಯಣಗುರು ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ ಕಲ್ಲಾಪು, ಕುಳಾಯಿ ಫೌಂಡೇಶನ್ ಅಧ್ಯಕ್ಷೆ ಪ್ರತಿಭಾ ಕುಳಾಯಿ, ಗ್ರಂಥ ಅನುವಾದಕರಾದ ಮೀನಾಕ್ಷಿ ರಾಮಚಂದ್ರ, ಯುವವಾಹಿನಿ ಮಂಗಳೂರು ಘಟಕ ಅಧ್ಯಕ್ಷ ನಾಗೇಶ್ ಅಮೀನ್, ಯುವವಾಹಿನಿ ಗುರು ತತ್ತ್ವಪ್ರಚಾರ ಸಮಿತಿ ನಿರ್ದೇಶಕ ಮೋಹನ್ ಮಾಡೂರು, ಯುವವಾಹಿನಿ ಮಂಗಳೂರು ಘಟಕ ಕಾರ್ಯದರ್ಶಿ ಶ್ರವಣ್ ಎಸ್. ಕೂಳೂರು, ಗುರು ತತ್ತ್ವಪ್ರಚಾರ ಸಮಿತಿ ನಿರ್ದೇಶಕ ಪೂವಪ್ಪ ಕುಕ್ಯಾನ್ ಉಪಸ್ಥಿತರಿದ್ದರು.

ಯುವವಾಹಿನಿ ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ಸಾಧು ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀರಕ್ಷಾ ಪ್ರಾರ್ಥಿಸಿ ದರು. ದಿನೇಶ್ ರಾಯಿ ಮತ್ತು ಪ್ರಜ್ಞಾ ಕಾರ್ಯಕ್ರಮ ನಿರೂಪಿಸಿದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X