ಮೂಡುಬಿದಿರೆ | ಬೆಳುವಾಯಿ ಸ್ಪೂರ್ತಿ ವಿಶೇಷ ಮಕ್ಕಳ ಶಾಲೆಯಲ್ಲಿ ಮಕ್ಕಳ ದಿನ ಆಚರಣೆ

ಮೂಡುಬಿದಿರೆ : ಮಕ್ಕಳ ದಿನಾಚರಣೆಯ ಪ್ರಯುಕ್ತ ಬೆಳುವಾಯಿಯಲ್ಲಿರುವ ಸ್ಪೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆ ಮತ್ತು ತರಬೇತಿ ಕೇಂದ್ರದಲ್ಲಿ ವಿಶೇಷ ಮಕ್ಕಳಿಗಾಗಿ ಛದ್ಮವೇಷ ಹಾಗೂ ನೃತ್ಯ ಸ್ಪರ್ಧೆ ನಡೆಯಿತು.
ಮೂಡುಬಿದಿರೆ ಇನ್ನರ್ ವ್ಹೀಲ್ ಕ್ಲಬ್ ನ ಅಧ್ಯಕ್ಷೆ, ವಕೀಲೆ ಶ್ವೇತಾ ಜೈನ್ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಿ ಶುಭ ಹಾರೈಸಿದರು.
ಸನ್ಮಾನ : ಸಂಸ್ಥೆಯ ವಿದ್ಯಾರ್ಥಿಯಾಗಿದ್ದು ಇದೀಗ ಇದೇ ಸಂಸ್ಥೆಯಲ್ಲಿ ಕೇರ್ ಟೇಕರ್ ಆಗಿ ದುಡಿಯುತ್ತಿರುವ ಮುಹಮ್ಮದ್ ಆರೀಸ್ ಅವರನ್ನು ಸನ್ಮಾನಿಸಲಾಯಿತು.
ಬೆಳುವಾಯಿ ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷ ಸುಭಾಶ್ ಪೈ, ಬೆಂಗಳೂರು ತುಳುಕೂಟದ ದೇವೇಂದ್ರ ಹೆಗ್ಡೆ, ಬೆಳುವಾಯಿ ವಿದ್ಯಾ ವರ್ಧಕ ಸಂಘ (ರಿ)ದ ಟ್ರಸ್ಟಿ ಯುವರಾಜ್ ಜೈನ್, ಪಿಂಗಾರ ಕಲಾವಿದೆರ್ ಬೆದ್ರದ ಮಣಿ ಕೋಟೆಬಾಗಿಲು, ರಂಗಭೂಮಿ ಕಲಾವಿದ ಸತೀಶ್ ಕಲ್ಲಮುಂಡ್ಕೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಸಂಸ್ಥೆಯ ಸ್ಥಾಪಕಾಧ್ಯಕ್ಷ ಪ್ರಕಾಶ್ ಜೆ. ಶೆಟ್ಟಿಗಾರ್, ಪೋಷಕರ ಸಮಿತಿಯ ಅಧ್ಯಕ್ಷೆ ಲತಾ ಸುರೇಶ್ ಉಪಸ್ಥಿತರಿದ್ದರು.
ಶಿಕ್ಷಕಿ ಅನಿತಾ ರೊಡ್ರಿಗಸ್ ಸ್ವಾಗತಿಸಿ ಬಹುಮಾನಿತರ ಪಟ್ಟಿ ವಾಚಿಸಿದರು. ಸುಮನಾ ಸನ್ಮಾನ ಪತ್ರ ವಾಚಿಸಿದರು. ಸುಚಿತ್ರ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕಿ ಶರ್ಮಿಳಾ ವಾಸ್ ವಂದಿಸಿದರು.







