Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೆಡಿಎಂ- ಎಫ್‌ಕೆಸಿಸಿಐ ನಡುವೆ ʼಎಂಒಯುʼ

ಕೆಡಿಎಂ- ಎಫ್‌ಕೆಸಿಸಿಐ ನಡುವೆ ʼಎಂಒಯುʼ

ವಾರ್ತಾಭಾರತಿವಾರ್ತಾಭಾರತಿ24 Dec 2025 6:54 PM IST
share
ಕೆಡಿಎಂ- ಎಫ್‌ಕೆಸಿಸಿಐ ನಡುವೆ ʼಎಂಒಯುʼ

ಮಂಗಳೂರು, ಡಿ.24: ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಮತ್ತು ಫೆಡರೇಷನ್ ಆಫ್ ಕರ್ನಾಟಕ ಚೇಂಬರ್ಸ್ ಆಫ್ ಕಾಮಸ್ ಅಂಡ್ ಇಂಡಸ್ಟ್ರಿ (ಎಫ್‌ಕೆಸಿಸಿಐ) ಸಂಸ್ಥೆಗಳು ಜಿಲ್ಲಾ ಮಟ್ಟದ ಮತ್ತು ಕ್ಲಸ್ಟರ್ ಮಟ್ಟದ ಅಭಿವೃದ್ಧಿಯ ಮೇಲೆ ಒತ್ತು ನೀಡಿ ಬೆಂಗಳೂರಿನಾಚೆಗೆ ಕರ್ನಾಟಕದ ಡಿಜಿಟಲ್ ಆರ್ಥಿಕತೆಯನ್ನು ವೇಗಗೊಳಿಸುವ ಉದ್ದೇಶದ ತಿಳುಳಿಕೆ ಪತ್ರಕ್ಕೆ (ಎಂಒಯು) ಬುಧವಾರ ಸಹಿಹಾಕಿವೆ.

ಈ ಸಹಯೋಗದ ಮೂಲಕ ಎಫ್‌ಕೆಸಿಸಿಐಯ 30ಕ್ಕೂ ಹೆಚ್ಚು ಜಿಲ್ಲಾ ಚೇಂಬರ್‌ಗಳ ಜಾಲ ಮತ್ತು ಕೆಡಿಇಎಂಯ ಕ್ಲಸ್ಟರ್ ಆಧರಿತ ವ್ಯವಸ್ಥೆಯನ್ನು ಬಳಸಿಕೊಂಡು ಮಹಾನಗರಗಳಲ್ಲದ ಪ್ರದೇಶಗಳಲ್ಲಿ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆ ಗಳ ಡಿಜಿಟಲೀಕರಣ, ಸ್ಟಾರ್ಟಪ್ ಬೆಳವಣಿಗೆ, ಹೂಡಿಕೆ ಸಿದ್ಧತೆ ಮತ್ತು ಉದ್ಯಮ ಶೀಲತೆಯನ್ನು ಹೆಚ್ಚಿಸಲು ಕಾರ್ಯನಿರ್ವಹಿಸಲಾಗುವುದು. ಸಣ್ಣ ಉದ್ಯಮಗಳಿಗೆ ಹೆಚ್ಚಿನ

ಅವಕಾಶ ಒದಗಿಸುವ ನಿಟ್ಟಿನಲ್ಲಿ ಮುಂದುವರಿಯಲಾಗುತ್ತದೆ. ಈ ಸಂದರ್ಭ ಮಾತನಾಡಿರುವ ಕೆಡಿಇಎಂನ ಸಿಇಓ ಸಂಜೀವ್ ಕುಮಾರ್ ಗುಪ್ತಾ, ಕರ್ನಾಟಕದ ಡಿಜಿಟಲ್ ಬೆಳವಣಿಗೆಯು ಕೇವಲ ಕೆಲವು ಕೇಂದ್ರಗಳಿಗೆ ಸೀಮಿತವಾಗ ಬಾರದು. ರಾಜ್ಯ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆ ಬೆಳವಣಿಗೆ ಹೊಂದಬೇಕು. ಎಫ್‌ಕೆಸಿಸಿಐ ಜೊತೆಗಿನ ಈ ಪಾಲುದಾರಿಕೆಯು ನೀತಿ, ವ್ಯವಸ್ಥೆ ಅಭಿವೃದ್ಧಿ ಮತ್ತು ಉದ್ಯಮ ಭಾಗವಹಿಸುವಿಕೆಯನ್ನು ಜೋಡಿಸಿ ಈ ಉದ್ದೇಶ ಸಾಧನೆಗೆ ನಮಗೆ ಸಹಾಯ ಮಾಡಲಿದೆ. ಜಿಲ್ಲೆಗಳಲ್ಲಿ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಕಾರ್ಯ ನಿರ್ವಹಿಸುವ ಮೂಲಕ ಹೊಸ ಹೂಡಿಕೆಗಳನ್ನು ಸಾಧ್ಯವಾಗಿಸುವುದು, ಉದ್ಯಮಶೀಲತೆಯನ್ನು ವೇಗಗೊಳಿಸುವುದು ಮತ್ತು ತಂತ್ರಜ್ಞಾನ ಆಧರಿತ ಬೆಳವಣಿಗೆ ಉಂಟಾಗುವಂತೆ ಮಾಡುವುದು ನಮ್ಮ ಗುರಿಯಾಗಿದೆ ಎಂದರು.

ಎಫ್‌ಕೆಸಿಸಿಐಯ ಅಧ್ಯಕ್ಷರಾದ ಉಮಾ ರೆಡ್ಡಿ ಅವರು, ಈ ಒಡಂಬಡಿಕೆಯು ಕರ್ನಾಟಕದ ಡಿಜಿಟಲ್ ಆರ್ಥಿಕತೆಯಲ್ಲಿ ಭಾಗವಹಿಸಲು ಉದ್ಯಮಗಳಿಗೆ ಸ್ಪಷ್ಟ ಮಾರ್ಗಸೂಚಿಯನ್ನು ನೀಡುತ್ತದೆ. ನಮ್ಮ ಜಿಲ್ಲಾ ಚೇಂಬರ್‌ಗಳು ಮತ್ತು ಸದಸ್ಯ ಜಾಲದ ಮೂಲಕ ಕೆಡಿಇಎಂನೊಂದಿಗೆ ಕೆಲಸ ಮಾಡಿ ಉದ್ಯಮಗಳು, ಸ್ಟಾರ್ಟಪ್‌ಗಳು ಮತ್ತು ಎಂಎಸ್‌ಎಂಇಗಳಿಗೆ ಹೂಡಿಕೆ, ಕೌಶಲ್ಯ ಮತ್ತು ಹೊಸ ಆವಿಷ್ಕಾರ ಅವಕಾಶಗಳನ್ನು ಹೊಂದುವ ಸಂಪರ್ಕ ಒದಗಿಸುತ್ತೇವೆ ಎಂದರು.

ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ ಮತ್ತು ಬಿಟಿ ಇಲಾಖೆಯ ಕಾರ್ಯದರ್ಶಿ ಡಾ. ಮಂಜುಳಾ ಮಾತನಾಡಿ, ರಾಜ್ಯಾದ್ಯಂತ ಸಮತೋಲಿತ ಡಿಜಿಟಲ್ ಬೆಳವಣಿಗೆಯನ್ನು ಆಗುಗೊಳಿಸುವ ಕರ್ನಾಟಕ ಸರ್ಕಾರದ ದೂರದೃಷ್ಟಿಗೆ ಪೂರಕವಾಗಿ ಈ ಸಹಭಾಗಿತ್ವ ಮೂಡಿಬಂದಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X