Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಮ್‌ಆರ್‌ಪಿಎಲ್- ಒಎನ್ ಜಿಸಿ ನಿರ್ವಸಿತ...

ಎಮ್‌ಆರ್‌ಪಿಎಲ್- ಒಎನ್ ಜಿಸಿ ನಿರ್ವಸಿತ ಉದ್ಯೋಗಿಗಳ ಕಲ್ಯಾಣ ಸಂಘದಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ವಾರ್ತಾಭಾರತಿವಾರ್ತಾಭಾರತಿ6 Aug 2025 10:24 PM IST
share
ಎಮ್‌ಆರ್‌ಪಿಎಲ್- ಒಎನ್ ಜಿಸಿ ನಿರ್ವಸಿತ ಉದ್ಯೋಗಿಗಳ ಕಲ್ಯಾಣ ಸಂಘದಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸುರತ್ಕಲ್: ಎಮ್.ಆರ್.ಪಿ.ಎಲ್ – ಒ.ಎನ್.ಜಿ.ಸಿ ನಿರ್ವಸಿತ ಉದ್ಯೋಗಿಗಳ ಕಲ್ಯಾಣ ಸಂಘ (ರಿ) ವತಿಯಿಂದ ಎಂ.ಆರ್.ಪಿ.ಎಲ್ – ಒ.ಎನ್.ಜಿ.ಸಿ ನಿರ್ವಸಿತ ಕುಟುಂಬಗಳ 10 ಮತ್ತು 12 ನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ ಮತ್ತು ಸನ್ಮಾನ ಹಾಗೂ ನಿವೃತ್ತ ಉದ್ಯೋಗಿಗಳಿಗೆ ಅಭಿವಂದನೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಎಂ.ಆರ್.ಪಿ.ಎಲ್ ಉದ್ಯೋಗಿಗಳ ರಿಕ್ರಿಯೇಷನ್ ಸಭಾಂಗಣದಲ್ಲಿ ಜರಗಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೂಲ್ಕಿ ಮೂಡಬಿದ್ರಿ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್ ರವರು ಸಂಘಟನೆಯ ಕಾರ್ಯಕ್ರಮವನ್ನು ಶ್ಲಾಘಿಸಿದರು.

ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪುರಸ್ಕರಿಸಿ ಮಾತನಾಡಿದ ಅವರು ಎಮ್‌.ಆರ್‌.ಪಿ‌.ಎಲ್ ಸಂಸ್ಥೆಯು ಕಾರ್ಮಿಕರಿಗೆ ಕೊಡುವ ಸವಲತ್ತುಗಳನ್ನು ಸರಿಯಾಗಿ ನೀಡಬೇಕು ಎಂದು ಸಲಹೆ ನೀಡಿದರು. ಕಾರ್ಖಾನೆಗಳು ಬೇಕು, ಅದೇ ಪ್ರಕಾರ ಸ್ಥಳೀಯರಿಗೆ ಪ್ರಾಶಸ್ತ್ಯ ನೀಡಬೇಕೆಂದು ಅಗ್ರಹಿಸಿ, ಸ್ಥಳೀಯರ ನ್ಯಾಯೋಚಿತ ಹೋರಾಟಗಳಿಗೆ ಸ್ಪಂದಿಸು ವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಶಾಸಕ ಭರತ್ ಶೆಟ್ಟಿ ವೈ ಅವರು ಕಾರ್ಯಕ್ರಮದ ಬಗ್ಗೆ ಸಂತಸ ವ್ಯಕ್ತ ಪಡಿಸಿದ್ದಲ್ಲದೆ, ಎಂ.ಆರ್.ಪಿ.ಎಲ್ – ಒ.ಎನ್.ಜಿ.ಸಿ ನಿರ್ವಸಿತ ಉದ್ಯೋಗಿಗಳ ಕಲ್ಯಾಣ ಸಂಘ ಮಕ್ಕಳ ವಿದ್ಯಾಭ್ಯಾಸಕ್ಕೆ ಒತ್ತು ನೀಡಬೇಕೆಂಬ ಸಲಹೆ ನೀಡಿದರು.

ಮುಖ್ಯ ಅತಿಥಿಯಾಗಿ ಭಾರತೀಯ ವಾಯು ಸೇನೆಯ ನಿವೃತ್ತ ಸಾರ್ಜೆಂಟ್ ಶ್ರೀಕಾಂತ್ ಶೆಟ್ಟಿ ಬಾಳ, ಎಂ.ಆರ್.ಪಿ.ಎಲ್ ನ ನಿರ್ದೇಶಕ ನಂದಕುಮಾರ್ ವಿ. ಪಿಳ್ಳೈ, ರೊನಾಲ್ಡ್ ಫೆರ್ನಾಂಡಿಸ್, ಬಾಳ ಗ್ರಾಮ ಪಂಚಾಯತ್ ಅಧ್ಯಕ್ಷ ಶಂಕರ್ ಜೋಗಿ, ಎಂ.ಆರ್.ಪಿ.ಎಲ್ ಮಾನೇಜ್ಮೆಂಟ್ ಸ್ಟಾಫ್ ಅಸೋಸಿಯಶನ್ ಅಧ್ಯಕ್ಷ ಸಂಪತ್ ರೈ, ಉಪಾಧ್ಯಕ್ಷ್ಯ ಡಾಕ್ಟರ್ ಸಂಪತ್, ಎಂ.ಆರ್.ಪಿ‌.ಎಲ್ ಯೂನಿಯನ್ ನ ಅಧ್ಯಕ್ಷ ಶರತ್ ಜೋಗಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ನಿರ್ವಸಿತ ಕುಟುಂಬಗಳ 10 ಮತ್ತು 12 ನೇ ತರಗತಿಯ ಒಟ್ಟು 60 ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ನಿವೃತ್ತ ಉದ್ಯೋಗಿಗಳಾದ ಪುಷ್ಪರಾಜ್ ಅಡಪ್ಪ ಮತ್ತು ದಿಲೀಪ್ ಬಿ ಆಳ್ವ ಅವರನ್ನು ಸನ್ಮಾನಿಸಲಾಯಿತು.

ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಭಗವದ್ಗೀತ ಸ್ಪರ್ಧೆಯಲ್ಲಿ ಪ್ರಥಮ ಪುರಸ್ಕಾರ ಪಡೆದ ಎಮ್‌.ಆರ್‌.ಪಿ‌.ಎಲ್ ಸಂಸ್ಥೆ ಉದ್ಯೋಗಿ ವಿನಯ್ ಭಟ್, ಹತ್ತನೇ ತರಗತಿಯಲ್ಲಿ ರಾಜ್ಯ ಮಟ್ಟದಲ್ಲಿ ತೃತೀಯ ಸಾಧನೆಗೈದ ವಿದ್ಯಾರ್ಥಿ ಕುಮಾರಿ ಬಿಂದು ಎಂ ಸುವರ್ಣ, ಹಾಗೂ ಉತ್ತಮ ಸರಕಾರಿ ಮಹಿಳಾ ಉದ್ಯೋಗಿ ಎಂದು ರಾಷ್ಟ್ರ ಪ್ರಶಸ್ತಿ ಪಡೆದ ಪ್ರಮೀಳಾ ದೀಪಕ್ ಪೆರ್ಮುದೆ ಇವರನ್ನು ಸನ್ಮಾನಿಸಲಾಯಿತು.

ಎಮ್.ಆರ್.ಪಿ.ಎಲ್ – ಒ.ಎನ್.ಜಿ.ಸಿ ಯೋಜನಾ ನಿರ್ವಸಿತರಾಗಿದ್ದು, ಉದ್ಯೋಗ ಹೊಂದಿರದ ಆರ್ಥಿಕ ದುರ್ಬಲ ರಾಗಿರುವ 5 ಕುಟುಂಬಗಳನ್ನು ಗುರುತಿಸಿ, ಅವರಿಗೆ ತಲಾ ಹತ್ತು ಸಾವಿರ ರೂ ಆರ್ಥಿಕ ಸಹಾಯ ನೀಡಲಾಯಿತು.

ಎಮ್.ಆರ್.ಪಿ.ಎಲ್ – ಒ.ಎನ್. ಜಿ.ಸಿ ನಿರ್ವಸಿತ ಉದ್ಯೋಗಿಗಳ ಕಲ್ಯಾಣ ಸಂಘ (ರಿ), ಇದರ ಅಧ್ಯಕ್ಷ ದಿನೇಶ್ ಬಿ ಶೆಟ್ಟಿ ಸ್ವಾಗತಿಸಿ, ಕಾರ್ಯದರ್ಶಿ ಲಕ್ಷ್ಮೀಶ ಎಂ ಅಂಚನ್ ವರದಿ ವಾಚನ ಗೈದರು. ಜೊತೆ ಕಾರ್ಯದರ್ಶಿ ಗುರುರಾಜ್ ಪ್ರತಿಭಾನ್ವಿತ ವಿದ್ಯಾರ್ಥಿಗಳ ಪಟ್ಟಿಯನ್ನು ವಾಚಿಸಿದರು. ಎಮ್.ಆರ್.ಪಿ.ಎಲ್ – ಒ.ಎನ್.ಜಿ.ಸಿ ನಿರ್ವಸಿತ ಕುಟುಂಬಗಳ 10 ಮತ್ತು 12 ನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ತಲಾ ರೂ 5 ಸಾವಿರ ಪುರಸ್ಕಾರ ನೀಡಿದ ಎಮ್‌.ಆರ್‌.ಪಿ‌.ಎಲ್ ಸಂಸ್ಥೆಗೆ ಕೃತಜ್ನತೆ ಅರ್ಪಿಸಲಾಯಿತು.

ಸುಧೀರ್ ಆಚಾರ್ಯ ವಂದನಾರ್ಪಣೆಗೈದರು. ಕಾರ್ಯಕ್ರಮದಲ್ಲಿ ಎಮ್.ಆರ್.ಪಿ.ಎಲ್ – ಒ.ಎನ್.ಜಿ.ಸಿ ನಿರ್ವಸಿತ ಉದ್ಯೋಗಿಗಳ ಕಲ್ಯಾಣ ಸಂಘ (ರಿ), ಇದರ ಸದಸ್ಯರಾದ ರಘುರಾಮ್ ತಂತ್ರಿ, ಜಯೇಶ್ ಗೋವಿಂದ್, ಜಯ ಪ್ರಕಾಶ್, ರಾಜ್ ಕುಮಾರ್, ಶಶಿ, ದಾಮೋದರ್ ಶೆಟ್ಟಿ, ಕಿರಣ್ ಕುಮಾರ್, ಶಿವಾನಂದ, ಕುಮಾರ್ ಡಿ ಅಂಚನ್, ಪ್ರಸನ್ನ ಕುಮಾರ್, ರತನ್, ಕಿಶೋರ್ ಶೆಟ್ಟಿ, ಗಿರೀಶ್, ಗಂಗಾಧರ್, ಜಯಲಕ್ಷ್ಮಿ ಶೆಟ್ಟಿ, ಸ್ಮಿತಾ ಭಂಡಾರಿ, ತೇಜೇಶ್, ಅವಿನಾಶ್ , ಶರತ್ ಉಪಸ್ಥಿತರಿದ್ದರು. ಶ್ರೀಶ ಎಂ ಕರ್ಮರನ್ ಹಾಗೂ ಪ್ರಾರ್ಥನಾ ಕಾರ್ಯಕ್ರಮ ನಿರೂಪಿಸಿದರು.

ಬಳಿಕ ನಾಗೇಶ್ ಕುಲಾಲ್ ಇವರ ತಂಡದವರಿಂದ "ಪರಮಾತ್ಮೆ ಪಂಜುರ್ಲಿ" ತುಳು ನಾಟಕ ಪ್ರದರ್ಶನ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X