Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪೊಯ್ಯತ್ತಬೈಲ್ ಮಣವಾಠಿ ದರ್ಗಾ ವಠಾರದಲ್ಲಿ...

ಪೊಯ್ಯತ್ತಬೈಲ್ ಮಣವಾಠಿ ದರ್ಗಾ ವಠಾರದಲ್ಲಿ ‘ಸಾಂಸ್ಕೃತಿಕ ಜಾಥಾ’ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ7 Dec 2023 6:28 PM IST
share
ಪೊಯ್ಯತ್ತಬೈಲ್ ಮಣವಾಠಿ ದರ್ಗಾ ವಠಾರದಲ್ಲಿ ‘ಸಾಂಸ್ಕೃತಿಕ ಜಾಥಾ’ಕಾರ್ಯಕ್ರಮ

ಪೊಯ್ಯತ್ತಬೈಲ್: ರಾಷ್ಟ್ರೀಯ ಸಾಂಸ್ಕೃತಿಕ ಯಾತ್ರೆ ಕರ್ನಾಟಕ ಇದರ ವತಿಯಿಂದ ‘ಪ್ರೀತಿ ಸಹಬಾಳ್ವೆಗಾಗಿ ನಮ್ಮ ನಡೆ’ ಎಂಬ ಆಶಯದೊಂದಿಗೆ ಹಮ್ಮಿಕೊಂಡ ಸಾಂಸ್ಕೃತಿಕ ಜಾಥಾವು ಬುಧವಾರ ಕೇರಳ-ಕರ್ನಾಟಕ ಗಡಿ ಪ್ರದೇಶದ ಪೊಯ್ಯತ್ತಬೈಲ್ ಮಣವಾಠಿ ಬೀವಿ ದರ್ಗಾ ಶರೀಫ್ ವಠಾರಕ್ಕೆ ಆಗಮಿಸಿತು.

ಸ್ಥಳೀಯ ದರ್ಸ್ ವಿದ್ಯಾರ್ಥಿಗಳು ಆಗಮಿಸಿದ ತಂಡವನ್ನು ಹೂಗುಚ್ಛ ನೀಡಿ ಸ್ವಾಗತಿಸಿದರು. ದರ್ಸ್ ವಿದ್ಯಾರ್ಥಿಗಳಿಂದ ಐಕ್ಯತಾ ಗಾನಾಲಾಪನ, ರಾಷ್ಟ್ರೀಯ ಜಾಥಾ ತಂಡದ ಸದಸ್ಯರಿಂದ ಸಮೂಹ ಗಾಯನ ಕಾರ್ಯಕ್ರಮ ನಡೆಯಿತು. ಜಮಾಅತ್ ಅಧ್ಯಕ್ಷ ಡಿ.ಎಂ.ಕೆ. ಮುಹಮ್ಮದ್ ಅಧ್ಯಕ್ಷತೆ ವಹಿಸಿದ್ದರು. ಖತೀಬ್ ಅಬ್ದುಲ್ ಜಬ್ಬಾರ್ ಸಖಾಫಿ ‘ಮಣವಾಠಿ ಬೀವಿ ದರ್ಗಾದ ಇತಿಹಾಸ ಹಾಗೂ ಸಾಮರಸ್ಯದ ಕೇಂದ್ರ ಪೊಯ್ಯತ್ತಬೈಲ್’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.

ಹಿರಿಯ ರಂಗಕರ್ಮಿ, ಸಾಂಸೃತಿಕ ಜಾಥಾ ತಂಡದ ಸಂಚಾಲಕ ಪ್ರಸನ್ನ ಹೆಗ್ಗೋಡು ಮಾತನಾಡಿ ‘ಮಾನವನ ಸಾರ್ಥಕ ಬದುಕು ಮತ್ತು ರಾಷ್ರೀಯ ಏಕತೆ ಪ್ರೀತಿ, ಸಹಬಾಳ್ವೆಯಿಂದ ಮಾತ್ರ ಸಾಧ್ಯ ಎಂದರು.

ವೇದಿಕೆಯಲ್ಲಿ ವರ್ಕಾಡಿ ಗ್ರಾಪಂ ಅಧ್ಯಕ್ಷೆ ಭಾರತಿ, ಸದಸ್ಯೆ ಗೀತಾ ಸಾಮಾನಿ, ಜಮಾಅತ್ ಉಪಾಧ್ಯಕ್ಷ ಮುಹಮ್ಮದ್ ಪರನೀರ್, ಪ್ರಧಾನ ಕಾರ್ಯದರ್ಶಿ ಜಮಾಲುದ್ದೀನ್ ಎನ್., ಕಾರ್ಯದರ್ಶಿಗಳಾದ ಮಜಾಲ್ ಮುಹಮ್ಮದ್, ಅಬೂಸಾಲಿ, ಕೋಶಾಧಿಕಾರಿ ಮುಹಮ್ಮದ್ ಹಾಜಿ ಅಸನಬೈಲ್, ಸದಸ್ಯರಾದ ಮೂಸಾ ಡಿ.ಕೆ, ಅಬ್ದುಲ್ ಅಝೀಝ್, ಇಬ್ರಾಹಿಂ ಬದಿ ಯಾರ್, ಕುಂಞಿ ಕಿನ್ನಜೆ, ಪ್ರಮುಖರಾದ ನಾಗೇಶ್ ಕಲ್ಲೂರು, ದೂಮಪ್ಪಶೆಟ್ಟಿ ತಾಮಾರು, ಸದಾಶಿವ ಪೊಯ್ಯತ್ತಬೈಲ್, ಕೃಷ್ಣ ನಡಕ, ಚಂದ್ರಹಾಸ ಕಣಂತೂರು, ಡಾ.ಎನ್. ಇಸ್ಮಾಯಿಲ್, ಉಮೇಶ ಅಸನಬೈಲ್, ಸೀತಾರಾಮ ಬೇವಿಂಜೆ, ಪೂವಪ್ಪ ಕಲ್ಲೂರು, ಎಸ್. ಮುಹಮ್ಮದ್, ಇಬ್ರಾಹಿಂ ಹಾಜಿ ಸುಳ್ಯಮೆ, ಇಸ್ಮಾಯಿಲ್ ಕಣಂದೂರು ಉಪಸ್ಥಿತರಿದ್ದರು.

ಜಮಾಲುದ್ದೀನ್ ಸ್ವಾಗತಿಸಿದರು. ಮೂಸಾ.ಡಿ.ಕೆ. ವಂದಿಸಿದರು. ಇಸ್ಮಾಯಿಲ್ ಟಿ. ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X