Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ‘ಕೇಶವಾನಂದ ಭಾರತಿ’ ಪ್ರಕರಣದ ತೀರ್ಪು...

‘ಕೇಶವಾನಂದ ಭಾರತಿ’ ಪ್ರಕರಣದ ತೀರ್ಪು ಮುಂದಿನ ಜನಾಂಗಕ್ಕೆ ಅಧ್ಯಯನ ಯೋಗ್ಯ: ಗೋವಾ ರಾಜ್ಯಪಾಲ ಶ್ರೀಧರನ್ ಪಿಳ್ಳೆ

ವಾರ್ತಾಭಾರತಿವಾರ್ತಾಭಾರತಿ9 Dec 2023 8:07 PM IST
share
‘ಕೇಶವಾನಂದ ಭಾರತಿ’ ಪ್ರಕರಣದ ತೀರ್ಪು ಮುಂದಿನ ಜನಾಂಗಕ್ಕೆ ಅಧ್ಯಯನ ಯೋಗ್ಯ: ಗೋವಾ ರಾಜ್ಯಪಾಲ ಶ್ರೀಧರನ್ ಪಿಳ್ಳೆ

ಮಂಗಳೂರು: ಪ್ರಜಾಪ್ರಭುತ್ವದ ಐತಿಹಾಸಿಕ ಮೌಲ್ಯವನ್ನು ಕೇಶವಾನಂದ ಭಾರತಿ ಪ್ರಕರಣದ ತೀರ್ಪು ಎತ್ತಿಹಿಡಿದಿತ್ತು. ಸುಪ್ರೀಂ ಕೋರ್ಟ್ ನೀಡಿದ ಈ ತೀರ್ಪಿನಿಂದಾಗಿ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ರಕ್ಷಣೆ ಸಿಕ್ಕಿತು. ಹಾಗಾಗಿ ಈ ತೀರ್ಪು ಮುಂದಿನ ಜನಾಂಗಕ್ಕೆ ಅಧ್ಯಯನಶೀಲವಾಗಿದೆ ಎಂದು ಗೋವಾ ರಾಜ್ಯಪಾಲ ಪಿ.ಎಸ್.ಶ್ರೀಧರನ್ ಪಿಳ್ಳೆ ಅಭಿಪ್ರಾಯಪಟ್ಟಿದ್ದಾರೆ.

ಮಂಗಳೂರು ಬಾರ್ ಎಸೋಸಿಯೇಶನ್, ಕೇಶವಾನಂದ ಭಾರತಿ ತೀರ್ಪಿನ ಸುವರ್ಣ ಮಹೋತ್ಸವ ಆಚರಣೆ ಸಮಿತಿ ಎಡನೀರು ಮಠ ಹಾಗೂ ಮಂಗಳೂರಿನ ಎಸ್‌ಡಿಎಂ ಕಾನೂನು ಕಾಲೇಜು ಆಶ್ರಯದಲ್ಲಿ ಶನಿವಾರ ನಗರದ ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ನಡೆದ ‘ಕೇಶವಾನಂದ ಭಾರತಿ ತೀರ್ಪು-ಭಾರತೀಯ ಸಂವಿಧಾನದ ನ್ಯಾಯತತ್ವದ ಹಿರಿಮೆ’ ಕುರಿತ ವಿಚಾರ ಸಂಕಿರಣದಲ್ಲಿ ಅವರು ಮುಖ್ಯ ಭಾಷಣಗೈದರು.

ಸಂವಿಧಾನದಲ್ಲಿ ಪ್ರಜಾಪ್ರಭುತ್ವವೇ ಪ್ರಧಾನ ವಹಿಸಲಿದೆ ಎಂದು ಕೇಶವಾನಂದ ಭಾರತಿ ತೀರ್ಪು ಸಾರಿದೆ. ಈ ತೀರ್ಪಿನಲ್ಲಿ ಕೇಶವಾನಂದ ಭಾರತಿ ಸೋತರೂ ತೀರ್ಪು ಇಡೀ ಸಂವಿಧಾನದ ಆಶಯವನ್ನು ಎತ್ತಿಹಿಡಿದೆ. ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವಂತಿಲ್ಲ ಎಂಬುದನ್ನು ಮನದಟ್ಟು ಮಾಡಿದೆ. ಈ ತೀರ್ಪು ನ್ಯಾಯಾಂಗ ಕ್ಷೇತ್ರದಲ್ಲಿ ದೊಡ್ಡ ಮೈಲುಗಲ್ಲಾಗಿದೆ. ಹಾಗಾಗಿ ಸುವರ್ಣ ವರ್ಷಾಚರಣೆ ನಡೆಸುತ್ತಿರುವುದು ಶ್ಲಾಘನೀಯ ಎಂದು ಶ್ರೀಧರನ್ ಪಿಳ್ಳೆ ಹೇಳಿದರು.

ಅಶೀರ್ವಚನ ನೀಡಿದ ಎಡನೀರು ಮಠಾಧೀಶ ಸಚ್ಚಾದಾನಂದ ಭಾರತಿ ಸ್ವಾಮೀಜಿ ‘1970ರಲ್ಲಿ ಕೇರಳ ಸರಕಾರ ಭೂಸುಧಾರಣಾ ಕಾಯ್ದೆ ಜಾರಿಗೆ ತಂದಾಗ ಎಡನೀರು ಮಠದ 400 ಎಕರೆ ಭೂಮಿ ಒಕ್ಕಲು ಹೊಂದಿದವರ ಪಾಲಾಯಿತು. ಇದರಿಂದ ಮಠದ ಆದಾಯ ಕುಂಠಿತಗೊಂಡಿತು. ಇದಕ್ಕಾಗಿ ಕೇಶವಾನಂದ ಭಾರತಿ ಸ್ವಾಮೀಜಿ ಭೂಸುಧಾರಣಾ ಕಾಯ್ದೆ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು. ಆ ಕೇಸನ್ನು ಗೆಲ್ಲಲು ಅವರು ವಿಫಲವಾದರೂ ತೀರ್ಪು ಮಾತ್ರ ಐತಿಹಾಸಿಕವಾಗಿದೆ’ ಎಂದರು.

ನಿಟ್ಟೆ ಸ್ವಾಯತ್ತ ವಿವಿ ಕುಲಪತಿ ಎನ್.ವಿನಯ ಹೆಗ್ಡೆ ಮಾತನಾಡಿ ಸಂವಿಧಾನದ ಮೂಲ ಸಿದ್ಧಾಂತ ಎಲ್ಲಿಯೂ ಬದಲಾವಣೆ ಆಗಿಲ್ಲ, ಆಗುವುದೂ ಇಲ್ಲ ಎಂಬುದನ್ನು ಈ ಪ್ರಕರಣ ತೋರಿಸಿಕೊಟ್ಟಿದೆ. ಸಂವಿಧಾನಕ್ಕೆ ಹಲವು ತಿದ್ದುಪಡಿಗಳಾದರೂ ಮೂಲಭೂತ ಹಕ್ಕುಗಳು ಎಂದಿಗೂ ಸುರಕ್ಷಿತವಾಗಿರುತ್ತದೆ ಎಂಬುದನ್ನು ಈ ತೀರ್ಪು ಸಾಕ್ಷಿಯಾಗಿದೆ ಎಂದರು.

ಸುವರ್ಣ ಮಹೋತ್ಸವ ಆಚರಣೆ ಸಮಿತಿ ಅಧ್ಯಕ್ಷ, ನ್ಯಾಯವಾದಿ ಎಂ. ನಾರಾಯಣ ಭಟ್ ಕಾಸರಗೋಡು ಪ್ರಾಸ್ತಾವಿಕ ವಾಗಿ ಮಾತನಾಡಿದರು. ಬಾರ್ ಎಸೋಸಿಯೇಶನ್ ಅಧ್ಯಕ್ಷ ಕೆ.ಪೃಥ್ವಿರಾಜ್ ರೈ, ಪ್ರಧಾನ ಕಾರ್ಯದರ್ಶಿ ಶ್ರೀಧರ್ ಎಣ್ಮಕಜೆ, ಕಾಲೇಜಿನ ಪ್ರಾಂಶುಪಾಲ ಡಾ.ತಾರಾನಾಥ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X