Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುರತ್ಕಲ್ ನಿರುಪಯುಕ್ತ ಟೋಲ್ ಗೇಟ್ ತಕ್ಷಣ...

ಸುರತ್ಕಲ್ ನಿರುಪಯುಕ್ತ ಟೋಲ್ ಗೇಟ್ ತಕ್ಷಣ ತೆರವುಗೊಳಿಸದಿದ್ದರೆ ನೇರ ಕಾರ್ಯಾಚರಣೆ: ಹೋರಾಟ ಸಮಿತಿ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ10 Dec 2023 8:35 PM IST
share
ಸುರತ್ಕಲ್ ನಿರುಪಯುಕ್ತ ಟೋಲ್ ಗೇಟ್ ತಕ್ಷಣ ತೆರವುಗೊಳಿಸದಿದ್ದರೆ ನೇರ ಕಾರ್ಯಾಚರಣೆ: ಹೋರಾಟ ಸಮಿತಿ ಎಚ್ಚರಿಕೆ

ಸುರತ್ಕಲ್‌, ಡಿ.10: ಒಂದು ವರ್ಷದ ಹಿಂದೆ ಟೋಲ್ ಸಂಗ್ರಹ ರದ್ದುಗೊಂಡಿರುವ ಸುರತ್ಕಲ್ ಟೋಲ್ ಗೇಟ್ ನ ನಿರುಪಯೋಗಿ ಅವಶೇಷಗಳನ್ನು ತೆರವುಗೊಳಿಸಬೇಕು ಇಲ್ಲವಾದರೆ, ನೇರ ಕಾರ್ಯಾಚರಣೆ ಹೋರಾಟಕ್ಕೆ ಕರೆ ನೀಡಿ ತೆರವು ಮಾಡಲು ಕರೆ ನೀಡಬೇಕಾಗುತ್ತದೆ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಜಿಲ್ಲಾಡಳಿತ, ಜನಪ್ರತಿನಿಧಿಗಳು ಮತ್ತು ರಾಷ್ಟ್ರಿಯ ಹೆದ್ದಾರಿ ಪ್ರಾಧಿಕಾರಕ್ಕೆ ಎಚ್ಚರಿಕೆ ನೀಡಿದೆ.

ವರ್ಷದ ಹಿಂದೆ ಟೋಲ್ ಸಂಗ್ರಹ ರದ್ದುಗೊಂಡಿರುವ ಸುರತ್ಕಲ್ ಟೋಲ್ ಗೇಟ್ ನ ನಿರುಪಯೋಗಿ ಅವಶೇಷಗಳನ್ನು ತೆರವುಗೊಳಿಸದೆ ಅಪಾಯಕಾರಿಯಾಗಿ ಉಳಿಸಿರುವುದರಿಂದ ಅಪಘಾತಗಳು, ಪ್ರಾಣಹಾನಿ ಸಂಭವಿಸುತ್ತಿದೆ. ಈ ಕುರಿತು ಹಲವು ಬಾರಿ ಎಚ್ಚರಿಸಿದರೂ ಸ್ಥಳೀಯ ಶಾಸಕ, ಸಂಸದರು, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ. ಇದೀಗ ಟ್ರಕ್ ಒಂದು ಟೋಲ್ ಗೇಟ್ ಗೆ ಡಿಕ್ಕಿ ಹೊಡೆದು ಟೋಲ್ ಗೇಟ್ ನ ಅವಶೇಷಗಳು ಕುಸಿಯುವ ಭೀತಿ ಎದುರಾಗಿದೆ. ಸ್ಥಳದಲ್ಲಿ ಅಪಾಯಕಾರಿ ಸ್ಥಿತಿ ನಿರ್ಮಾಣಗೊಂಡಿದೆ. ಸಂಬಂಧ ಪಟ್ಟವರು ತಕ್ಷಣವೇ ಅಪಾಯಕಾರಿ ಸ್ಥಿತಿಯಲ್ಲಿರುವ ಟೋಲ್ ಗೇಟ್ ಅನ್ನು ತೆರವುಗೊಳಿಸಿ ಹೆದ್ದಾರಿಯಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡದಿದ್ದಲ್ಲಿ ನಿರುಪಯುಕ್ತ ಟೋಲ್ ಗೇಟ್ ತೆರವುಗೊಳಿಸಲು ಹೋರಾಟ ಸಮಿತಿಯೇ ಮತ್ತೊಮ್ಮೆ "ನೇರ ಕಾರ್ಯಾಚರಣೆ" ಯಂತಹ ಹೋರಾಟಕ್ಕೆ ಕರೆ ನೀಡಬೇಕಾಗುತ್ತದೆ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಎಚ್ಚರಿಕೆ ನೀಡಿದೆ.

ಸುರತ್ಕಲ್ ಟೋಲ್ ಗೇಟ್ ನಲ್ಲಿ ಟೋಲ್ ಸಂಗ್ರಹ ರದ್ದತಿಗಾಗಿ ಹೋರಾಟ ಸಮಿತಿ ಏಳು ವರ್ಷಗಳ ಕಾಲ ಸತತ ಹೋರಾಟ ನಡೆಸಬೇಕಾಯ್ತು‌. ಆ ಸಂದರ್ಭದಲ್ಲೂ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಭರತ್ ಶೆಟ್ಟಿ ಟೋಲ್ ಗುತ್ತಿಗೆದಾರರ ಪರವಾಗಿಯೇ ನಿಂತಿದ್ದರು, ಟೋಲ್ ಗೇಟ್ ಮುಚ್ಚುವ ಜನಾಗ್ರಹವನ್ನು ಲಘುವಾಗಿಸಲು ಯತ್ನಿಸಿದರು. ಜನತೆಯ ಸಂಘಟಿತ ಹೋರಾಟಗಳು ಮಾತ್ರ ಜನಪ್ರತಿನಿಧಿಗಳ ಕುಟಿಲತೆಯನ್ನು ವಿಫಲಗೊಳಿಸಿತ್ತು.

ಟೋಲ್ ಸಂಗ್ರಹ ರದ್ದತಿ ಆದೇಶದ ಮುಂದೆ ನಿರುಪಯುಕ್ತ ಟೋಲ್ ಗೇಟ್ ಅವಶೇಷಗಳ ತೆರವು ತೀರಾ ಸಣ್ಣ ಕೆಲಸ ವಾಗಿದೆ. ಸಂಸದ, ಶಾಸಕರುಗಳು ಮನಸ್ಸು ಮಾಡಿದರೆ ಒಂದೆರಡು ದಿನಗಳಲ್ಲಿ ಟೋಲ್ ಅವಶೇಷಗಳನ್ನು ಸಂಬಂಧ ಪಟ್ಟವರು ತೆರವುಗೊಳಿಸುತ್ತಾರೆ. ಆದರೆ, ಇಂತಹ ಸಣ್ಣ ಕೆಲಸವನ್ನು ಮಾಡಲು ಮುಂದಾಗದ ಸಂಸದ, ಶಾಸಕರುಗಳು ತಾವು ಜನಪ್ರತಿನಿಧಿಗಳ ಕರ್ತವ್ಯ ನಿರ್ವಹಣೆಗೆ ಅನ್ ಫಿಟ್ ಎಂದು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ.

ಜೊತೆಗೆ ತಮ್ಮ ಉದ್ದೇಶ, ನಿರೀಕ್ಷೆಗಳನ್ನು ಮೀರಿ ಸುರತ್ಕಲ್ ಟೋಲ್ ಗೇಟನ್ನು ಐತಿಹಾಸಿಕ ಹೋರಾಟದ ಮೂಲಕ ತೆರವುಗೊಳಿಸಿದ ಹೋರಾಟ ಸಮಿತಿ ಹಾಗೂ ನಾಗರಿಕರ ಮೇಲೆ ಅವಶೇಷ ತೆರವುಗೊಳಿಸದೆ ಸೇಡು ತೀರಿಸಿಕೊ ಳ್ಳುವಂತೆ ನಡೆದುಕೊಳ್ಳುತ್ತಿದ್ದಾರೆ. ಅದಕ್ಕಾಗಿಯೇ ಅಪಘಾತಗಳು, ಪ್ರಾಣ ಹಾನಿ ಸಂಭವಿಸುತ್ತಿದ್ದರೂ ನಿರುಪಯುಕ್ತ ಟೋಲ್ ಗೇಟ್ ಅನ್ನು ಹೆದ್ದಾರಿ ನಡುವೆಯೆ ಉಳಿಸಿ ವಾಹನ ಸವಾರರ ಪ್ರಾಣದ ಜೊತೆಗೆ ಚೆಲ್ಲಾಟ ಆಡುತ್ತಿದ್ದಾರೆ ಎಂದು ಹೋರಾಟ ಸಮಿತಿ ಅಪಾದಿಸಿದೆ.

ನಂತೂರು, ಸುರತ್ಕಲ್ ಹೆದ್ದಾರಿಯ ರದ್ದುಗೊಂಡಿರುವ ಸುಂಕವನ್ನು ಮತ್ತೆ ಸಂಗ್ರಹಿಸಲು ಹೋರಾಟ ಸಮಿತಿ ಯಾವುದೆ ಕಾರಣಕ್ಕು ಅವಕಾಶ ನೀಡುವುದಿಲ್ಲ. ಅಪಾಯಕಾರಿ ಸ್ಥಿತಿಯಲ್ಲಿರುವ ಸುರತ್ಕಲ್ ನಿರುಪಯುಕ್ತ ಟೋಲ್ ಗೇಟ್ ಅವಶೇಷ ಗಳನ್ನು ತಕ್ಷಣವೇ ತೆರವುಗೊಳಿಸಬೇಕು. ಇಲ್ಲದಿದ್ದಲ್ಲಿ ಸರಣಿ ಹೋರಾಟಗಳನ್ನು, ನಿರುಪಯುಕ್ತ ಟೋಲ್ ಗೇಟ್ ತೆರವಿಗೆ ಮತ್ತೊಮ್ಮೆ ನೇರ ಕಾರ್ಯಾಚರಣೆ ಯಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಾಗುತ್ತದೆ, ಅದಕ್ಕೆಲ್ಲಾ ಜನವಿರೋಧಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಭರತ್ ಶೆಟ್ಟಿಯವರೇ ನೇರ ಹೊಣೆಯಾಗುತ್ತಾರೆ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X