Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಇ- ಆಸ್ತಿ ಆನ್‌ಲೈನ್‌ನಲ್ಲಿ ಖಾತಾ...

ಇ- ಆಸ್ತಿ ಆನ್‌ಲೈನ್‌ನಲ್ಲಿ ಖಾತಾ ನೋಂದಣಿ; ಮಧ್ಯವರ್ತಿಗಳ ಅಗತ್ಯವಿಲ್ಲ: ಪಾಲಿಕೆ ಆಯುಕ್ತರು

ವಾರ್ತಾಭಾರತಿವಾರ್ತಾಭಾರತಿ15 Dec 2023 6:31 PM IST
share
ಇ- ಆಸ್ತಿ ಆನ್‌ಲೈನ್‌ನಲ್ಲಿ ಖಾತಾ ನೋಂದಣಿ; ಮಧ್ಯವರ್ತಿಗಳ ಅಗತ್ಯವಿಲ್ಲ: ಪಾಲಿಕೆ ಆಯುಕ್ತರು

ಮಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ಖಾತೆಗಳನ್ನು ಇ- ಆಸ್ತಿ ಆನ್‌ಲೈನ್ ತಂತ್ರಾಂಶದ ಮೂಲಕ ಸಾರ್ವಜನಿಕರಿಗೆ ವಿತರಿಸಲಾಗುತ್ತಿದೆ. ಪ್ರಸ್ತುತ ಆನ್‌ಲೈನ್ ವ್ಯವಸ್ಥೆಯಡಿ ಖಾತಾ ನೋಂದಣಿ ಹಾಗೂ ವರ್ಗಾವಣೆ ಕೋರಿ ಅರ್ಜಿಗಳನ್ನು ಸರಳವಾಗಿ ನಾಗರಿಕರು ಸಲ್ಲಿಸಬಹುದು. ಮಧ್ಯವರ್ತಿಗಳ ಸಹಾಯ ಪಡೆಯುವ ಅಗತ್ಯವಿಲ್ಲ ಎಂದು ಮನಪಾ ಆಯುಕ್ತರ ಪ್ರಕಟನೆ ತಿಳಿಸಿದೆ.

ನೋಂದಣಿ ಹೇಗೆ?

ಇ ಆಸ್ತಿ ತಂತ್ರಾಂಶದ ಮೂಲಕ ನಾಗರಿಕರು ಆಸ್ತಿಗಳ ಖಾತೆ ನೊಂದಾವಣೆ ಅಥವಾ ವರ್ಗಾವಣೆ ಅರ್ಜಿಸಲ್ಲಿಸಲು KSRSAC ಯಿಂದ ಅಭಿವೃದ್ಧಿ ಪಡಿಸಿರುವ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿದಾಗ ಸಿಗುವ ವೆಬ್‌ಸೈಟ್ ಬಳಸಿಕೊಂಡು ಮೊಬೈಲ್ ನಂಬ್ರದ ಮೂಲಕ ನೋಂದಾಯಿಸಿಕೊಳ್ಳಬಹುದು. ಸ್ಕ್ಯಾನ್ ಮಾಡಿ ವೆಬ್‌ಸೈಟ್‌ನಲ್ಲಿ ಮೊಬೈಲ್ ನಂಬ್ರ ಹಾಕಿದಾಗ ಜಿಐಎಸ್ ಮ್ಯಾಪ್ ತೆರೆದುಕೊಳ್ಳುತ್ತದೆ. ತಮ್ಮ ಆಸ್ತಿಯ ಬಳಿ ಜಿಐಎಸ್ ಮ್ಯಾಪ್ ತೆರೆದಾಗ ಆಸ್ತಿಯ ಸ್ಥಳದ ಗುರುತು ಸೆರೆಹಿಡಿದು ವಿವರಗಳನ್ನು ದಾಖಲಿಸಬಹುದು.

ದಾಖಲಿಸಿದ ವಿವರಗಳು ಇ- ಆಸ್ತಿ ತಂತ್ರಾಂಶಕ್ಕೆ ವರ್ಗಾವಣೆಯಾಗುತ್ತದೆ. (eaasthi.karnataka.gov.in ) ಇ ಆಸ್ತಿ ವೆಬ್‌ಸೈನ್‌ಲ್ಲಿ ಸಿಟಿಜನ್ ಪೋರ್ಟಲ್ (e-AASTHI Citizen Application) ಲಿಂಕ್ ಮೂಲಕ ಲಾಗಿನ್ ಆಗಿ ನೋಂದಣಿ ಮಾಡುವುದು. ಬಳಿಕ ಲೋಕೇಶನ್ ಸೆರೆ ಹಿಡಿದ ಮೊಬೈಲ್ ನಂಬ್ರದ ಮೂಲಕ ಒಳ ಪ್ರವೇಶಿಸಿ ಆಸ್ತಿಯ ವಿವರದೊಂದಿಗೆ ದಾಖಲೆ ದಸ್ತಾವೇಜುಗಳನ್ನು ಅಪ್‌ಲೋಡ್ ಮಾಡಬೇಕು. ಕಂದಾಯ ಶಾಖೆಗೆ ಅನುಮೋದನೆ 7ರಿಂದ 15 ದಿನಗಳ ಅವಧಿಯಲ್ಲಿ ಇಖಾತಾ ವಿತರಣೆಯಾಗುತ್ತದೆ. ಅಪೂರ್ಣ ದಾಖಲೆಗಳು ಅಥವಾ ಹೆಚ್ಚುವರಿ ದಾಖಲೆಗಳ ಅಗತ್ಯವಿದ್ದಲ್ಲಿ ಸಿಟಿಜನ್ ಪೋರ್ಟಲ್‌ಗೆ ಹಿಂತಿರುಗಿಸಲಾಗುತ್ತದೆ ಎಂದು ಪಾಲಿಕೆ ಆಯುಕ್ತ ಆನಂದ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಅರ್ಜಿದಾರರು ಆಸ್ತಿಯ ವಿವರ, ಮಾಲಕರ ವಿವರ (ಭಾವಚಿತ್ರ ಹಾಗೂ ಗುರುತಿನ ಚೀಟಿ ಸಹಿತ), ಕಟ್ಟಡದ ವಿವರಗಳು, ಋಣಗಳ ವಿವರ, ಹಕ್ಕಿನ ವಿವರ, ದಸ್ತಾವೇಜಿನ ವಿವರಗಳು (ದಸ್ತಾವೇಜಿನ ಮತ್ತು ಇತರೆ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡುವುದು). ಅನುಮೋದನೆಯಾದ ಬಳಿಕ ಅರ್ಜಿದಾರರಿಗೆ ಮೊಬೈಲ್‌ಸಂದೇಶ ದೊರೆಯುತ್ತದೆ. ಅರ್ಜಿದಾರರು ಇ ಆಸ್ತಿ ವೆಬ್‌ಸೈಟ್ ಮೂಲಕ ಮನಪಾ ಕಂದಾಯ ಶಾಖೆಯಿಂದ ಅಥವಾ ಮಂಗಳೂರು ವನ್ ಸೇವಾ ಕೇಂದ್ರದಿಂದ ಪ್ರತಿಯನ್ನು ಪಡೆಯಬಹುದು.

ಹೆಚ್ಚಿನ ವಿವರಗಳಿಗೆ ಕೇಂದ್ರ ವಲಯ ಕಚೇರಿ 9141047964, ಸುರತ್ಕಲ್ ವಲಯ ಕಚೇರಿ- 9141047965, ಕದ್ರಿ ಮಲ್ಲಿಕಟ್ಟ ವಲಯಕಚೇರಿ 9141047966 ನ್ನು ಸಂಪರ್ಕಿಸಬಹುದು ಎಂದು ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X