Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಧಿಕಾರಿಗಳ ತಪ್ಪಿನಿಂದ...

ಅಧಿಕಾರಿಗಳ ತಪ್ಪಿನಿಂದ ಜನಪ್ರತಿನಿಧಿಗಳಿಗೆ ಕೆಟ್ಟ ಹೆಸರು: ಸಂಸದ ನಳಿನ್ ಕುಮಾರ್ ಕಟೀಲು

ಮೇಯರ್ ನೇತೃತ್ವದಲ್ಲಿ ಜನಸ್ಪಂದನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ18 Dec 2023 10:20 PM IST
share
ಅಧಿಕಾರಿಗಳ ತಪ್ಪಿನಿಂದ ಜನಪ್ರತಿನಿಧಿಗಳಿಗೆ ಕೆಟ್ಟ ಹೆಸರು: ಸಂಸದ ನಳಿನ್ ಕುಮಾರ್ ಕಟೀಲು

ಮಂಗಳೂರು: ಪಾಲಿಕೆ ಸೇರಿದಂತೆ ಕೆಲವು ಇಲಾಖೆಗಳಿಗೆ ಜನರು ಅರ್ಜಿ ನೀಡಿ ಅನುಮೋದನೆ ಪಡೆಯಲು ಹಲವು ದಿನಗಳು ಕಾಯಬೇಕಾದ ಪರಿಸ್ಥಿತಿ ಇದೆ. ಕಾನೂನಿನ ನೆಪ ಹೇಳಿ ಜನಸಾಮಾನ್ಯರನ್ನು ಅಧಿಕಾರಿಗಳು ಅಲೆದಾಡಿಸುತ್ತಾರೆ. ಈ ರೀತಿ ಕೆಲವು ಅಧಿಕಾರಿಗಳ ತಪ್ಪುಗಳಿಂದಾಗಿ ಜನಪ್ರತಿನಿಧಿಗಳಿಗೆ ಕೆಟ್ಟ ಹೆಸರು ಬರುವುದು ಮಾತ್ರವಲ್ಲದೆ, ಜನಸಾಮಾನ್ಯರು ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಅಭಿಪ್ರಾಯಿಸಿದ್ದಾರೆ.

ಮೇಯರ್ ಸುಧೀರ್ ಶೆಟ್ಟಿ ನೇತೃತ್ವದಲ್ಲಿ ಮಂಗಳೂರು ಪಾಲಿಕೆ ವ್ಯಾಪ್ತಿಯ ಜನರ ಅಹವಾಲುಗಳನ್ನು ಪಡೆಯಲು ಮಂಗಳೂರು ಪುರಭವನದಲ್ಲಿ ಸೋಮವಾರ ಆಯೋಜಿಸಲಾದ ‘ಜನಸ್ಪಂದನ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅಧಿಕಾರಿಗಳಿಂದ ಜನಸಾಮಾನ್ಯರಿಗೆ ಆಗುವ ತೊಂದರೆಗಳ ಪರಿಹಾರಕ್ಕೆ ಮಂಗಳೂರು ಪಾಲಿಕೆಯ ಇತಿಹಾಸಲ್ಲಿ ಮೊದಲ ಬಾರಿಗೆ ಮೇಯರ್ ಸುಧೀರ್ ಶೆಟ್ಟಿ ಅವರ ನೇತೃತ್ವದಲ್ಲಿ ಜನಸ್ಪಂದನ ಕಾರ್ಯಕ್ರಮ ಆಯೋಜಿಸಿರುವುದು ಅತ್ಯುತ್ತಮ ಎಂದು ಅವರು ಹೇಳಿದರು.

ಮೇಯರ್ ಸುಧೀರ್ ಶೆಟ್ಟಿ ಮಾತನಾಡಿ, ಜನಸಾಮಾನ್ಯರು ತಮ್ಮ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳಿಗೆ ಅಲೆದಾಡುವ ಪರಿಸ್ಥಿತಿ ಇದೆ. ಈ ನಿಟ್ಟಿನಲ್ಲಿ ಜನರ ಸಮಸ್ಯೆ ಆಲಿಸುವ ನೆಲೆಯಿಂದ ಫೋನ್ ಇನ್ ಕಾರ್ಯಕ್ರಮ ನಡೆಸಲಾಗುತ್ತಿದೆ. ಇದಕ್ಕೆ ಪೂರಕವಾಗಿ ಪಾಲಿಕೆಯ ಎಲ್ಲಾ ಅಧಿಕಾರಿಗಳನ್ನು ಒಂದೆಡೆ ಸೇರಿಸಿಕೊಂಡು ಜನರ ಸಮಸ್ಯೆ ಪರಿಹಾರದ ಆಶಯದೊಂದಿಗೆ ಜನಸ್ಪಂದನ ಕಾರ್ಯಕ್ರಮವನ್ನು ಇದೇ ಮೊದಲ ಬಾರಿಗೆ ಆಯೋಜಿಸಲಾಗಿದೆ ಎಂದರು.

ಶಾಸಕರಾದ ವೇದವ್ಯಾಸ ಕಾಮತ್, ಡಾ. ವೈ.ಭರತ್ ಶೆಟ್ಟಿ, ಉಪಮೇಯರ್ ಸುನೀತ, ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ಪ್ರತಿಪಕ್ಷ ನಾಯಕ ಪ್ರವೀಣ್‌ಚಂದ್ರ ಆಳ್ವ, ಮಾಜಿ ಮೇಯರ್ ಎಂ.ಶಶಿಧರ ಹೆಗ್ಡೆ, ಪಾಲಿಕೆಯ ವಿವಿಧ ಸ್ಥಾಯಿ ಸಮಿತಿ ಅಧ್ಯಕ್ಷರಾದ ಲೋಹಿತ್ ಅಮೀನ್, ವರುಣ್ ಚೌಟ, ಭರತ್ ಕುಮಾರ್, ಗಣೇಶ್ ಸಹಿತ ಮನಪಾ ಸದಸ್ಯರು, ಉಪ ಆಯುಕ್ತ ರವಿಕುಮಾರ್, ವಲಯ ಆಯುಕ್ತೆ ರೇಖಾ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

ಬೆಳಗ್ಗೆ ಸುಮಾರು 11 ಗಂಟೆಯಿಂದ ಸಂಜೆ 3 ಗಂಟೆಯವರೆಗೆ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲಿಕೆಯ 60 ವಾರ್ಡ್‌ಗಳಿಂದ 28 ದೂರು ಅರ್ಜಿಗಳು ಸಲ್ಲಿಕೆಯಾದವು.

ಸಾಮಾಜಿಕ ಹೋರಾಟಗಾರ ಜಿ.ಕೆ.ಭಟ್ ಮಾತನಾಡಿ, ಪಂಪ್‌ವೆಲ್‌ನಲ್ಲಿ ಬಸ್ ನಿಲ್ದಾಣ ಅಗತ್ಯವಾಗಿದ್ದು, ಖಾಲಿ ಜಾಗಕ್ಕೆ ತೆರಿಗೆ ದುಪ್ಪಟ್ಟಾಗುತ್ತಿದೆ. ನಗರದಲ್ಲಿ ಬಸ್ ಶೆಲ್ಟರ್ ನಿರ್ಮಾಣವೇ ಆಗಿಲ್ಲ. ಕ್ಲಾಕ್‌ಟವರ್ ನಿರ್ವಹಣೆ ಆಗುತ್ತಿಲ್ಲ. ಸರ್ವಿಸ್ ಬಸ್‌ನಿಲ್ದಾಣ ರಿಪೇರಿ ಅರ್ಧದಲ್ಲಿ ಬಾಕಿಯಾಗಿದೆ ಎಂದರು.

ಕೃಷ್ಣ ಭಟ್ ಎಂಬವರು ಮಾತನಾಡಿ, ಕಾವೂರು-ಬೋಂದೆಲ್ ಮಧ್ಯೆ ಫುಟ್‌ಪಾತ್ ಇಲ್ಲ. ಕಾವೂರ್ ಜಂಕ್ಷನ್‌ನಲ್ಲಿ ಟ್ರಾಫಿಕ್ ಸಮಸ್ಯೆ ಇದೆ ಎಂದಾಗ ಅಧಿಕಾರಿಗಳು ಪರಿಶೀಲಿಸುವಂತೆ ಮೇಯರ್ ಸೂಚಿಸಿದರು.

ಸಾಮಾಜಿಕ ಕಾರ್ಯಕರ್ತ ಹನುಮಂತ ಕಾಮತ್ ಮಾತನಾಡಿ, 400ಕ್ಕೂ ಅಧಿಕ ಅನಧಿಕೃತ ಕಟ್ಟಡ ಮಂಗಳೂರಿನಲ್ಲಿವೆ. ಇದರಲ್ಲಿ ಕೆಲವನ್ನು ತೆರವು ಮಾಡುವಂತೆ ನ್ಯಾಯಾಲಯ ಸೂಚಿಸಿದೆ. ಪಾಲನೆಯಾಗಿಲ್ಲ ಎಂದಾಗ, ‘ಈ ಬಗ್ಗೆ ಪರಿಶೀಲಿಸಿ ಉತ್ತರ ನೀಡಲಾಗುವುದು’ ಎಂದು ಅಧಿಕಾರಿಗಳು ತಿಳಿಸಿದರು.

‘ಪಾಲಿಕೆ ಕಚೇರಿಯಲ್ಲಿ ಸಂಜೆ 3.30ರ ನಂತರ ಎಲ್ಲಾ ಅಧಿಕಾರಿಗಳು ಸಾರ್ವಜನಿಕರಿಗೆ ಸಿಗುವಂತೆ ನೋಡಿಕೊಳ್ಳಬೇಕು, ರೈಲ್ವೇ ಜಾಗದ ಪಕ್ಕದಲ್ಲಿ ಏಕನಿವೇಶನಕ್ಕೆ ಮುಡಾದಿಂದ ರೈಲ್ವೇ ಇಲಾಖೆಗೆ ಅಲೆದಾಡಿಸುತ್ತಿದ್ದಾರೆ ಹಾಗೂ ಅನಧಿಕೃತ ಹೋರ್ಡಿಂಗ್ ತೆರವು ಮಾಡಬೇಕು, ದಂಡ ವಿಧಿಸಬೇಕು ಎಂದು ಕಾಮತ್ ಒತ್ತಾಯಿಸಿದರು. ಇದರ ಬಗ್ಗೆ ವಿಶೇಷ ಒತ್ತು ನೀಡಲಾಗುವುದು ಎಂದು ಮೇಯರ್ ವಿವರಿಸಿದರು.

ವಿ.ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಮಾತನಾಡಿ, ಪಾಲಿಕೆ ಕಟ್ಟಡದಲ್ಲಿ ಅರ್ಜಿ ಬರೆಯುವವರನ್ನು ತೆರವು ಮಾಡಲಾಗಿದ್ದು, ಅವರಿಗೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಬೇಕು. ಸರ್ವಿಸ್ ಬಸ್‌ನಿಲ್ದಾಣದ ಬದಲು ಸಿಟಿ ಬಸ್‌ಗಳನ್ನು ಹಿಂದಿನಂತೆಯೇ ಸಿಟಿ ಬಸ್ ನಿಲ್ದಾಣ ವ್ಯಾಪ್ತಿಗೆ ತರಬೇಕು ಹಾಗೂ ಕಂಕನಾಡಿಯಿಂದ ನಂದಿಗುಡ್ಡವರೆಗಿನ ರಸ್ತೆ ಬದಿಯಲ್ಲಿ ನಿತ್ಯ ಕಾಮಗಾರಿ, ಪೈಪ್ ರಾಶಿ ಹಾಕಿದ್ದು ಸಹಿತ ವಿವಿಧ ಸಮಸ್ಯೆಗಳು ಇವೆ ಎಂದರು. ಇದೆಲ್ಲದರ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮೇಯರ್ ಉತ್ತರಿಸಿದರು.

ಸಾಮಾಜಿಕ ಹೋರಾಟಗಾರ ಪದ್ಮನಾಭ ಉಳ್ಳಾಲ್ ಮಾತನಾಡಿ, ‘ಬೋಂದೆಲ್‌ನಲ್ಲಿರುವ ಪಿಡಬ್ಲ್ಯೂಡಿ ವಸತಿ ನಿಲಯದ ಆಟದ ಮೈದಾನ ನಿರ್ವಹಣೆ ಮಾಡಬೇಕು. ನೀರು-ಚರಂಡಿ ಸಮಸ್ಯೆ ಪರಿಹಾರಕ್ಕೆ ಪಾಲಿಕೆ ತಾಂತ್ರಿಕ ಸಲಹೆಗಾರರನ್ನು ನೇಮಿಸಬೇಕು ಎಂದರು.

ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಮೇಯರ್ ಭರವಸೆ ನೀಡಿದರು.






share
ವಾರ್ತಾಭಾರತಿ
ವಾರ್ತಾಭಾರತಿ
Next Story
X