Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿದ್ಯಾಮಂದಿರ‌ ನಿರ್ಮಾಣ ಇಂದಿನ ಅಗತ್ಯತೆ:...

ವಿದ್ಯಾಮಂದಿರ‌ ನಿರ್ಮಾಣ ಇಂದಿನ ಅಗತ್ಯತೆ: ಬಿ.ಕೆ. ಹರಿಪ್ರಸಾದ್

ವಿಶ್ವಮಂಗಳ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ

ವಾರ್ತಾಭಾರತಿವಾರ್ತಾಭಾರತಿ5 Jan 2024 7:48 PM IST
share
ವಿದ್ಯಾಮಂದಿರ‌ ನಿರ್ಮಾಣ ಇಂದಿನ ಅಗತ್ಯತೆ: ಬಿ.ಕೆ. ಹರಿಪ್ರಸಾದ್

ಕೊಣಾಜೆ: ಆ ಕಾಲದಲ್ಲಿ ಶಿಕ್ಷಣಕ್ಕಾಗಿ ದಾನಧರ್ಮ ಮಾಡುವವರು ಹೆಚ್ಚಿದ್ದರು. ಆದರೆ ಶಿಕ್ಷಣ ವ್ಯಾಪಾರ ಕೇಂದ್ರಗಳಾಗಿ ರೂಪುಗೊಳ್ಳುತ್ತಿರುವುದು ವಿಷಾದನೀಯ. ಇಂದಿನ ಕಾಲದಲ್ಲಿ ದೇವಸ್ಥಾನ, ಮಸೀದಿ,‌ ಮಂದಿರಗಳಿಗಿಂತ ಶಾಲೆ ನಿರ್ಮಾಣ ಬಹಳ ಅಗತ್ಯ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರು ಹೇಳಿದರು.

ಅವರು ಶುಕ್ರವಾರ ಕೊಣಾಜೆ ವಿಶ್ವಮಂಗಳ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಕೇರಳದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳಿಂದ ಶೇ.100 ಸಾಕ್ಷರತೆ ಸಾಧನೆ ಸಾಧ್ಯವಾಯಿತು. ಮಾತ್ರವಲ್ಲ ವಿವಿಧ ರಾಜ್ಯಗಳಲ್ಲಿ ಮಹಾತ್ಮರು ಶಿಕ್ಷಣವನ್ನು ಎಲ್ಲರಿಗೂ ತಲುಪಿಸಲು‌ ಶ್ರಮಿಸಿದರು. ಪ್ರಮುಖವಾಗಿ ಮಹಿಳಾ ಶಿಕ್ಷಣಕ್ಕೆ ಹೆಚ್ಚಿನ ಆಧ್ಯತೆ ದೊರೆಯಿತು.

ವಿಶ್ವದಲ್ಲೇ ಭಾರತದಷ್ಟು ಸುಂದರ, ಸೌಹಾರ್ದ ದೇಶ ಕಾಣಲು ಅಸಾಧ್ಯ. ನಮ್ಮಲ್ಲಿ ಆಯ್ಕೆಯಾದ ಜನಪ್ರತಿನಿಧಿಗಳು ರಾಜರ ಹಾಗಿರದೆ ಜನಸೇವಕರಾಗಿರಬೇಕು. ಜೀವನಕ್ಕೋಸ್ಕರ ಬರಬೇಡಿ‌. ಜೀವನ ಬದಲಾಯಿಸಲುವರಾಜಕೀಯಕ್ಕೆ ಬನ್ನಿ ಎಂದು ಅಂಬೇಡ್ಕರ್ ಹೇಳಿದ್ದು ಸದಾ ಪ್ರಸ್ತುತ ಎಂದರು.

ಮಂಗಳೂರು ವಿವಿ ಕುಲಪತಿ ಪ್ರೊ.ಜಯರಾಜ್ ಅಮೀನ್ ಅವರು ಮಾತನಾಡಿ, ವಿದ್ಯಾರ್ಥಿಯ ಬೆಳವಣಿಗೆಯಲ್ಲಿ ಪೋಷಕ ರೊಂದಿಗೆ ಶಿಕ್ಷಕರ ಪಾತ್ರ ಮಹತ್ತರವಾದುದು. ವಿಶ್ವಮಂಗಳ ವಿದ್ಯಾಸಂಸ್ಥೆಯು ಕಳೆದ ಹಲವಾರು ವರ್ಷಗಳಿಂದ ಉತ್ತಮ ಸಾಧನೆಯೊಂದಿಗೆ ಮುನ್ನಡೆಯುತ್ತಿದೆ ಎಂದರು.

ವಿಶ್ವಮಂಗಳ ಎಜುಕೇಶನ್ ಸೊಸೈಟಿ ಅಧ್ಯಕ್ಷ ಪ್ರೊ.ವಿಶ್ವನಾಥ ಅವರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ವಿವಿಧ ವಿಭಾಗಗಳ ಮುಖ್ಯೋಪಾಧ್ಯಾಯರಾದ ಹಂಸಗೀತಾ, ಶೋಭಾವತಿ, ಪ್ರಿಯಾ ಹಾಗೂ ಪ್ರಾಂಶುಪಾಲೆ ಪೂರ್ಣಿಮಾ ಶೆಟ್ಟಿ ವರದಿ ವಾಚಿಸಿದರು.

ಶಿಕ್ಷಕ ರಕ್ಷಕ ಸಂಘ ಅಧ್ಯಕ್ಷ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು. ವಿಶ್ವಮಂಗಳ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ವಿನಯ ರಜತ್ ಸ್ವಾಗತಿದರು. ಮಂಥನ್ ಪ್ರಸಾದ್ ರೈ ಹಾಗೂ ಶರ್ಮಿನ್ ಖದೀಜಾ ಬಿ.ಎಂ. ಕಾರ್ಯಕ್ರಮ ನಿರೂಪಿಸಿದರು.

ನೂತನ ಕೊಠಡಿ ಉದ್ಘಾಟನೆ: ಬಿ.ಕೆ.ಹರಿಪ್ರಸಾದ್ ಅವರು ರಾಜ್ಯ ಸಭಾ ಸದಸ್ಯರಾಗಿದ್ದ ಸಂದರ್ಭದಲ್ಲಿ ವಿಶ್ವಮಂಗಳ ವಿದ್ಯಾಸಂಸ್ಥೆಗೆ ನೀಡಿದ 11 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಂಡ ನೂತ‌ನ ಕೊಠಡಿಯ ಉದ್ಘಾಟನೆ ಶಾಲಾ‌ ವಾರ್ಷಿಕೋತ್ಸವದ ಸಂದರ್ಭ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X