Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಆಕ್ರಮಣಕಾರಿ ಪ್ರತಿರೋಧದ ಮಾನಸಿಕ...

ಆಕ್ರಮಣಕಾರಿ ಪ್ರತಿರೋಧದ ಮಾನಸಿಕ ಅಸ್ವಸ್ಥೆ: ಆಸ್ಪತ್ರೆಗೆ ದಾಖಲಿಸಿದ ಉಪ್ಪಿನಂಗಡಿ ಗ್ರಾ.ಪಂ. ಉಪಾಧ್ಯಕ್ಷೆ

ವಾರ್ತಾಭಾರತಿವಾರ್ತಾಭಾರತಿ12 Jan 2024 9:56 PM IST
share
ಆಕ್ರಮಣಕಾರಿ ಪ್ರತಿರೋಧದ ಮಾನಸಿಕ ಅಸ್ವಸ್ಥೆ: ಆಸ್ಪತ್ರೆಗೆ ದಾಖಲಿಸಿದ ಉಪ್ಪಿನಂಗಡಿ ಗ್ರಾ.ಪಂ. ಉಪಾಧ್ಯಕ್ಷೆ

ಉಪ್ಪಿನಂಗಡಿ: ಮಾನಸಿಕ ಅಸ್ವಸ್ಥೆ ಲಲಿತಾ (50) ಎಂಬಾಕೆಯನ್ನು ಆಕೆಯ ಆಕ್ರಮಣಕಾರಿ ಪ್ರತಿರೋಧದ ನಡುವೆ ಆಸ್ಪತ್ರೆಗೆ ದಾಖಲಿಸುವ ಕಾರ್ಯ ಶುಕ್ರವಾರ ನಡೆಯಿತು.

ಉಪ್ಪಿನಂಗಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ವಿದ್ಯಾಲಕ್ಷ್ಮಿ ಪ್ರಭು ಅವರ ಮಾನವೀಯ ಕಾಳಜಿಯಿಂದಾಗಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸುವ ಕಾರ್ಯ ನಡೆಯಿತು. ಮಹಿಳಾ ಪೊಲೀಸರ ಸಹಕಾರದೊಂದಿಗೆ ಆಕೆಯನ್ನು ವಶಕ್ಕೆ ಪಡೆದುಕೊಳ್ಳಲು ಪ್ರಯತ್ನಿಸಿದಾಗ ತನ್ನಲ್ಲಿ ಸದಾ ಕಾಲ ಇರಿಸಿಕೊಳ್ಳುತ್ತಿದ್ದ ಚಾಕುವನ್ನು ಬಳಸಿ ಪೊಲೀಸರಿಗೆ ತಿವಿಯಲು ಮುಂದಾದಾಗ ಯಶೋಧಾ ಎಂಬ ಮಹಿಳಾ ಪೊಲೀಸ್ ಸಿಬ್ಬಂದಿಯ ಕೈಗೆ ಗಾಯವಾಯಿತು. ಇನ್ನೋರ್ವ ಮಹಿಳಾ ಪೊಲೀಸ್ ಅವರ ಕುತ್ತಿಗೆಗೆ ಇರಿಯಲು ಯತ್ನಿಸಿದಳಾದರೂ ಅವರು ಕೂದಲೆಳೆ ಅಂತರದಲ್ಲಿ ಪಾರಾದರು. ಈ ಮಧ್ಯೆ ಆಕೆಯನ್ನು ಹಿಡಿಯಲು ಯತ್ನಿಸಿದ ಆಸ್ಪತ್ರೆ ಸಿಬ್ಬಂದಿಗೆ ಕಚ್ಚಿ ಗಾಯಗೊಳಿಸಿದ ಆಕೆಯನ್ನು ಬಳಿಕ ಬಲವಂತದಿಂದ ಕೈ ಕಾಲು ಕಟ್ಟಿ ಪ್ರಜ್ಞಾಶೂನ್ಯತೆಗೆ ಒಳಪಡಿಸಿ ಮಂಗಳೂರಿನ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಕೈಗೆ ಸಿಕ್ಕಿದ ದಾಖಲೆಗಳನ್ನುಹಿಡಿದುಕೊಂಡು ಹೋಗಿ ಎಲ್ಲೆಲ್ಲೋ ಎಸೆಯುವ ಮೂಲಕ ಸರಕಾರಿ ಕಚೇರಿ ಸಿಬ್ಬಂದಿಯ ಪಾಲಿಗೆ ಕಂಟಕಳಾಗಿದ್ದ ಲಲಿತಾ ಹತ್ತು ದಿನಗಳ ಹಿಂದೆ ಪಂಚಾಯತ್ ಕಚೇರಿಗೆ ನುಗ್ಗಿ ವಸ್ತುಗಳನೆಲ್ಲಾ ಹಾಳುಗೆಡವಿ ದಾಂಧಲೆ ನಡೆಸಿದಾಗ ಪಂಚಾಯತ್ ಪಿಡಿಒ ಅವರು ಆಕೆಯನ್ನು ಬೆಲ್ಟ್ ಬೀಸಿ ಬೆದರಿಸಿ ಹೊರಗಟ್ಟಿದ್ದರು ಎನ್ನಲಾಗಿದೆ. ಈ ವೇಳೆ ವಿಕಾರವಾಗಿ ಬೊಬ್ಬಿರಿಸಿ ಸಮೀಪದಲ್ಲೇ ಇದ್ದ ಪೊಲೀಸ್ ಠಾಣೆಗೆ ಧಾವಿಸಿದ್ದಳು. ತನಗೆ ಹೊಡೆದಿದ್ದಾರೆ ಎಂದು ಆಕ್ರಂದನಗೈದಿದ್ದಳು. ಈ ಮಧ್ಯೆ ಆಕೆಯ ಮನೋರೋಗವನ್ನು ಗುಣಮುಖಗೊಳಿಸುವ ನಿಟ್ಟಿನಲ್ಲಿ ಮುಂದಾದ ಉಪ್ಪಿನಂಗಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ವಿದ್ಯಾಲಕ್ಷ್ಮಿ ಪ್ರಭು ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆಗಳನ್ನು ಸಂಪರ್ಕಿಸಿ ಅಗತ್ಯ ದಾಖಲೆ ಪತ್ರಗಳನ್ನು ಸಿದ್ಧಪಡಿಸಿ ಶುಕ್ರವಾರ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲು ವ್ಯವಸ್ಥೆ ಕಲ್ಪಿಸಿದರು. ಪ್ರಾರಂಭದ ಯೋಜನೆಯಂತೆ ಪಂಚಾಯತ್ ಸಿಬ್ಬಂದಿಯ ಮೂಲಕ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುವುದು ಎಂದು ನಿಗದಿಯಾಗಿತ್ತಾದರೂ, ಆಕೆಯ ಆಕ್ರಮಣಕಾರಿ ವರ್ತನೆಗೆ ಭಯಪಟ್ಟು ಕೊನೆ ಕ್ಷಣದಲ್ಲಿ ಪಂಚಾಯತ್ ಸಿಬ್ಬಂದಿ ಹಿಂದೆ ಸರಿದಿದ್ದರು. ಈ ವೇಳೆ ಆಕೆಯೊಂದಿಗೆ ಬೇರಾವ ಇಲಾಖೆಯ ಮಂದಿಯೂ ಆಸ್ಪತ್ರೆಗೆ ಹೋಗಲು ಮುಂದಾಗದೇ ಇದ್ದಾಗ ತಾನೇ ಆಕೆಯೊಂದಿಗೆ ಆಸ್ಪತ್ರೆಗೆ ಹೋಗುವೆನೆಂದು ಅಂಬುಲೆನ್ಸ್ ನಲ್ಲಿ ಆಕೆಯೊಂದಿಗೆ ಪ್ರಯಾಣಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿದ್ಯಾಲಕ್ಷ್ಮಿ ಪ್ರಭುರವರ ಈ ಮಾನವೀಯ ಸ್ಪಂದನೆಗೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆಗೆ ಪಾತ್ರವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X