Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು : ಎಂಸಿಸಿ ಬ್ಯಾಂಕ್‌ನ...

ಮಂಗಳೂರು : ಎಂಸಿಸಿ ಬ್ಯಾಂಕ್‌ನ ‘ಮೈಲಿಗಲ್ಲು’ ಸಂಭ್ರಮಾಚರಣೆ

ವಾರ್ತಾಭಾರತಿವಾರ್ತಾಭಾರತಿ21 Jan 2024 9:27 PM IST
share
ಮಂಗಳೂರು : ಎಂಸಿಸಿ ಬ್ಯಾಂಕ್‌ನ ‘ಮೈಲಿಗಲ್ಲು’ ಸಂಭ್ರಮಾಚರಣೆ

ಮಂಗಳೂರು: ಕ್ರೈಸ್ತ ಸಮುದಾಯದ ಧುರೀಣ ಪಿ.ಎಫ್.ಎಕ್ಸ್ ಸಲ್ದಾನ್ಹಾ ನೇತೃತ್ವದಲ್ಲಿ 1912ರಲ್ಲಿ ಕೇವಲ 10 ಸಾವಿರ ರೂ. ಬಂಡವಾಳದೊಂದಿಗೆ ಸೊಸೈಟಿಯಾಗಿ ಆರಂಭಗೊಂಡ ಮಂಗಳೂರು ಕೆಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ ಇದೀಗ 1 ಸಾವಿರ ಕೋ.ರೂ. ವಹಿವಾಟಿನೊಂದಿಗೆ ಸಹಕಾರಿ ಕ್ಷೇತ್ರದ ಅಗ್ರಮಾನ್ಯ ಬ್ಯಾಂಕಾಗಿ ಗುರುತಿಸಲ್ಪಟ್ಟ ಹಿನ್ನೆಲೆಯಲ್ಲಿ ರವಿವಾರ ನಗರದ ಮಿಲಾಗ್ರಿಸ್ ಹಾಲ್‌ನಲ್ಲಿ ‘ಎಂಸಿಸಿ ಬ್ಯಾಂಕ್‌ನ ಸಾಧನೆಯ ‘ಮೈಲಿಗಲ್ಲು’ ಸಂಭ್ರಮಾಚರಣೆ ಕಾರ್ಯಕ್ರಮ ನಡೆಯಿತು.

ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಹಕಾರಿ ರತ್ನ ಅನಿಲ್ ಲೋಬೋ ‘ಸಮಾಜದ ಕಟ್ಟಕಡೆಯ ಜನರಿಗೂ ಬ್ಯಾಂಕ್‌ನ ಸಾಲ ಸೌಲಭ್ಯ, ಯೋಜನೆಗಳು ದೊರಕಬೇಕು ಎಂಬುದು ನಮ್ಮೆಲ್ಲರ ಕನಸಾಗಿದೆ. ಅದನ್ನು ನನಸಾಗಿಸಲು ಸರ್ವ ರೀತಿಯ ಪ್ರಯತ್ನವನ್ನು ಮಾಡುತ್ತಿದ್ದೇವೆ. 2018ರಲ್ಲಿ ನಾನು ಈ ಬ್ಯಾಂಕ್‌ನ ಅಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿ ಕೊಂಡಾಗ ಕೇವಲ 503 ಕೋ.ರೂ. ವ್ಯವಹಾರವಿತ್ತು. 5 ವರ್ಷದಲ್ಲಿ ಅದು 1 ಸಾವಿರಕ್ಕೇರಿರುವುದು ಸಾಹಸವೇ ಸರಿ. ಅದನ್ನು ಯಶಸ್ವಿಗೊಳಿಸುವಲ್ಲಿ ಬ್ಯಾಂಕ್‌ನ ಆಡಳಿತ ಮಂಡಳಿ, ಸಿಬ್ಬಂದಿ ವರ್ಗ ಮತ್ತು ಗ್ರಾಹಕರು ಅಪಾರ ಶ್ರಮ ಪಟ್ಟಿದ್ದಾರೆ. ಬ್ಯಾಂಕನ್ನು ಮತ್ತಷ್ಟು ಅಭಿವೃದ್ಧಿಗೊಳಿಸಲು ಹಲವು ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದರು.

ಬ್ಯಾಂಕ್‌ನ 112 ವರ್ಷಗಳ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಶೇ.1.37ಕ್ಕೆ ಎನ್‌ಪಿಎ ಇಳಿಸಿ ನಿವ್ವಳ ಲಾಭ 10.38 ಕೋ.ರೂ. ದಾಖಲಿಸಿದೆ. 2002ರಲ್ಲಿ ಅವಿಭಜಿತ ದ.ಕ.ಜಿಲ್ಲೆಯಲ್ಲಿ 16 ಶಾಖೆಗಳಿತ್ತು. ಇದೀಗ ದ.ಕ. ಮತ್ತು ಉಡುಪಿ ಜೊತೆಗೆ ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗೆ ಬ್ಯಾಂಕ್‌ನ ಸೇವೆಯನ್ನು ವಿಸ್ತರಿಸ ಲಾಗಿದೆ. ಪ್ರತ್ಯೇಕ ಘಟಕ ನಿರ್ಮಾಣ, ಸಹ ಮಿಲನ, ಸಮಾವೇಶ ಮತ್ತಿತರ ವಿಶೇಷ ಕಾರ್ಯಕ್ರಮಗಳ ಮೂಲಕ ಅನಿ ವಾಸಿ ಭಾರತೀಯ ಖಾತೆಗಳಿಗೆ ಚುರುಕು ಮುಟ್ಟಿಸಲಾಗುತ್ತಿದೆ ಎಂದು ಅನಿಲ್ ಲೋಬೋ ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅನಿವಾಸಿ ಉದ್ಯಮಿ ಮೈಕಲ್ ಡಿಸೋಜ ಸಮುದಾಯದ ಹಿರಿಯರು ಕಟ್ಟಿ ಬೆಳೆಸಿದ ಈ ಬ್ಯಾಂಕನ್ನು ಮತ್ತಷ್ಟು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಯಾವ ಕಾರಣಕ್ಕೂ ಈ ಬ್ಯಾಂಕನ್ನು ವಿಲೀನಗೊಳಿಸುವುದಕ್ಕೆ ಆಸ್ಪದ ನೀಡದೆ ಸದಾ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.

ಹಿರಿಯ ಲೆಕ್ಕ ಪರಿಷೋಧಕ ರುಡೋಲ್ಫ್ ರೊಡ್ರಿಗಸ್ ದಿಕ್ಸೂಚಿ ಭಾಷಣಗೈದರು. ಮಿಲಾಗ್ರಿಸ್ ಚರ್ಚನ ಪ್ರಧಾನ ಗುರು ವಂ. ಬೊನವೆಂಚರ್ ನಜ್ರೆತ್, ಮಾಜಿ ಶಾಸಕರಾದ ಜೆ.ಆರ್.ಲೋಬೊ ಮತ್ತು ಐವನ್ ಡಿಸೋಜ, ಉದ್ಯಮಿ ರೋಹನ್ ಮೊಂತೇರೊ, ಸಮುದಾಯದ ನಾಯಕ ಪಿಯುಸ್ ಎಲ್.ರಾಡ್ರಿಗಸ್ ಶುಭ ಹಾರೈಸಿದರು.

ಬ್ಯಾಂಕ್‌ನ ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿಸಿಲ್ವ, ಬ್ಯಾಂಕ್‌ನ ಜನರಲ್ ಮ್ಯಾನೇಜರ್ ಸುನಿಲ್ ಮೆನೆಜಸ್ ಉಪಸ್ಥಿತರಿದ್ದರು. ಆಲ್ವಿನ್ ದಾಂತಿ ಕಾರ್ಯಕ್ರಮ ನಿರೂಪಿಸಿದರು.

*ಎಂಸಿಸಿ ಬ್ಯಾಂಕ್‌ನ ಅಧ್ಯಕ್ಷ ಹಾಗೂ ಸಹಕಾರ ರತ್ನ ಪ್ರಶಸ್ತಿ ವಿಜೇತರಾದ ಅನಿಲ್ ಲೋಬೊ ಅವರನ್ನು ಸನ್ಮಾನಿಸಲಾಯಿತು.

*ಉಡುಪಿ ಪಾಂಬೂರಿನ ಪಾಂಬೂರಿನ ಮಾನಸ ಪುನರ್ವಸತಿ ಮತ್ತು ತರಬೇತಿ ಕೇಂದ್ರ, ಕಾರ್ಕಳದ ಆಯಿಶಾ ಸ್ಥಾಪಿಸಿದ ಸುರಕ್ಷಾ ಚಾರಿಟೇಬಲ್ ಟ್ರಸ್ಟ್, ಮಂಗಳೂರು ಕಾಪಿಕಾಡ್‌ನ ಪ್ರಜ್ಞಾ ಚಿಣ್ಣರ ತಂಗುಧಾಮ ಸಂಸ್ಥೆಗೆ ತಲಾ 1 ಲಕ್ಷ ರೂ. ಸಹಾಯಧನ ನೀಡಿ ಗೌರವಿಸಲಾಯಿತು.

*ಭವಿಷ್ಯದ ಯೋಜನೆಗಳಾದ ಇ-ಲಾಬಿ, ಪಾಸ್ ಬುಕ್ ಕಿಯೋಸ್ಕ್, Personalized Cheque Book, ಮೈಲಿಗಲ್ಲು ಸಾಧನೆಯ ವಿಶೇಷ ಕೊಡುಗೆಗಳನ್ನು ಅನಾವರಣ ಮಾಡಲಾಯಿತು. *ಬ್ಯಾಂಕ್‌ನ ಬುಲೆಟಿನ್ ೪ನೇ ಸಂಚಿಕೆಯನ್ನು ಬಿಡುಗಡೆ ಮಾಡಲಾಯಿತು.

















share
ವಾರ್ತಾಭಾರತಿ
ವಾರ್ತಾಭಾರತಿ
Next Story
X