Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಗಾಂಧಿಯನ್ನು ಓದಿದಾಗ ಮಾತ್ರ ಅರಿಯಲು...

ಗಾಂಧಿಯನ್ನು ಓದಿದಾಗ ಮಾತ್ರ ಅರಿಯಲು ಸಾಧ್ಯ: ಜಬ್ಬಾರ್ ಸಮೋ

ಮಂಗಳೂರು: ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದಿಂದ ಗಾಂಧಿ ಪುಣ್ಯತಿಥಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ30 Jan 2024 3:22 PM IST
share
ಗಾಂಧಿಯನ್ನು ಓದಿದಾಗ ಮಾತ್ರ ಅರಿಯಲು ಸಾಧ್ಯ: ಜಬ್ಬಾರ್ ಸಮೋ

ಮಂಗಳೂರು, ಜ.30: ತನ್ನ ಸ್ವಂತ ಆಲೋಚನೆಯನ್ನು ಇತರ ಮೇಲೆ ಹೇರದ, ಸತ್ಯ, ನ್ಯಾಯ, ಧರ್ಮವನ್ನು ತನ್ನ ಕಾಯಕದ ಮೂಲಕ ವಿಶ್ವ ವ್ಯಾಪಕವಾಗಿರುವ ಮಹಾತ್ಮ ಗಾಂಧಿಯನ್ನು ಓದಿದಾಗ ಮಾತ್ರವೇ ಅರಿಯಲು ಸಾಧ್ಯ ಎಂದು ರಂಗ ಕಲಾವಿದ ಜಬ್ಬಾರ್ ಸಮೋ ಸಂಪಾಜೆ ಅಭಿಪ್ರಾಯಿಸಿದ್ದಾರೆ.

ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದ ವತಿಯಿಂದ ಮಂಗಳವಾರ ಟಾಗೋರ್ ಪಾರ್ಕ್ ನಲ್ಲಿರುವ ಪ್ರತಿಷ್ಠಾನದ ಸಭಾಂಗಣದಲ್ಲಿ ಆಯೋಜಿಸಿದ್ದ ಗಾಂಧಿ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡುತ್ತಿದ್ದರು.

ಹೆಚ್ಚು ಹೆಚ್ಚು ಓದಿನಿಂದ ಗ್ರಹಿಕೆ, ವಿದ್ಯಮಾನ ಮನದಟ್ಟಾಗುವ ಜತೆಗೆ ಪುರಾತನ ವಿಷಯ ವರ್ತಮಾನದಲ್ಲಿ ಜೀವಂತವಾಗಿರಲು ಸಾಧ್ಯವಾಗುತ್ತದೆ ಎಂದು ಹೇಳಿದ ಅವರು, ರವೀಂದ್ರ ನಾಥ ಟಾಗೋರ್ ಅವರಿಂದ ಮಹಾತ್ಮ ಎಂದು ಕರೆಸಿಕೊಂಡ, ಸುಭಾಷ್ ಚಂದ್ರ ಬೋಸ್ ಅವರೇ ಪಿತಾಮಹ ಎಂದು ಒಪ್ಪಿಕೊಂಡ ಮಹಾತ್ಮಾ ಗಾಂಧಿ ಅವರ ಬಗ್ಗೆ ಪ್ರಸಕ್ತ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಚರ್ಚೆಯನ್ನು ನೋಡಿದರೆ ಭಯವಾಗುತ್ತದೆ. ಚರ್ಚೆ, ವಾದ ವಿವಾದಗಳು ಸಂವಾದ ರೂಪದಲ್ಲಿರಬೇಕೇ ಹೊರತು ಆಲೋಚನೆಗಳು, ಸಿದ್ಧಾಂತಗಳು ಹೇರಿಕೆ ಆಗಬಾರದು ಎಂದು ಅವರು ಅಭಿಪ್ರಾಯಿಸಿದರು.

ಮಹಾತ್ಮ ಗಾಂಧಿ ಬಗ್ಗೆ ಮಾತನಾಡುವುದು ಕ್ಲೀಷೆ, ಕಠಿಣ ಕಾಯಕ. ಅವರು ಪ್ರತಿಪಾದಿಸಿದ ಸಂಗತಿ ಭೌತಿಕವಾಗಿ ನಮ್ಮಿಂದ ಕಣ್ಮರೆಯಾಗಿದ್ದರೂ, ನಮ್ಮಿಂದ ಹೊರಗೆ ಕಳುಹಿಸಲ್ಪಟ್ಟಿದ್ದರೂ, ಗಾಂಧೀಜಿ ನಿತ್ಯ ಅಸ್ತಿತ್ವ ಹಾಗೂ ನಿತ್ಯ ಸತ್ಯ ಎಂದು ಜಬ್ಬಾರ್ ಸಮೋ ಪ್ರತಿಪಾದಿಸಿದರು.

ಚಾರಿತ್ರ ಇಲ್ಲದ ಶಿಕ್ಷಣ, ದುಡಿಮೆ ಇಲ್ಲದ ಸಂಪತ್ತು, ಆತ್ಮ ಸಾಕ್ಷಿ ಇಲ್ಲದ ಸಂತಸ, ನೀತಿ ಇಲ್ಲದ ವ್ಯಾಪಾರ, ಮಾನವೀಯತೆ ಇಲ್ಲದ ಜ್ಞಾನ, ತ್ಯಾಗವಿಲ್ಲದ ಪೂಜೆಯನ್ನು ಗಾಂಧೀಜಿ ವಿರೋಧಿಸಿದ್ದರು. ಆದರೆ ಇಂದು ಅವೆಲ್ಲಾ ಸಾರ್ವತ್ರಿಕವಾಗಿವೆ. ತಮ್ಮ ಆತ್ಮಾನ್ವೇಷಣೆಯಲ್ಲಿಯೂ ನನ್ನ ಸ್ವಂತ ಆಲೋಚನೆ ನಿಮ್ಮ ಮೇಲೆ ಹೇರಲಾರೆ ಎಂದು ಹೇಳಿದ್ದ ಗಾಂಧಿ ತತ್ವ, ಸ್ವತ್ವ ಹಾಗೂ ಸತ್ವ ಚಿರಾಯುಗಬೇಕು ಎಂದು ಅವರು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಪ್ಪು ಸೈಂಟ್ ರೀಟಾ ಚರ್ಚ್ನ ಮುಖ್ಯ ಧರ್ಮಗುರು ರೆ.ಫಾ. ಎರಿಕ್ ಕ್ರಾಸ್ತಾ ಮಾತನಾಡಿ, ಗಾಂಧೀಜಿ ಕಲ್ಪಿಸಿದ ಭಾರತದ ಕನಸು, ಸ್ವತಂತ್ರಭಾರತ ಅಹಿಂಸೆಯಿಂದ ಕೂಡಿದ್ದಾಗಿದೆ. ಅವರ ಅಹಿಂಸಾ ವಿಧಾನ ಜಗತ್ತಿಗೆ ಪ್ರೇರಣೆಯಾಗಿದ್ದು, ವಿವಿಧತೆಯಲ್ಲಿ ಏಕತೆ ಅವರ ಪ್ರತಿಪಾದನೆಯಾಗಿತ್ತು. ನಮ್ಮ ಧರ್ಮದ ಬಗ್ಗೆ ಸರಿಯಾಗಿ ತಿಳಿದುಕೊಂಡು ಇತರ ಧರ್ಮಗಳ ಅರಿವು ಇರುವ ಸಮನ್ವಯದ ಭಾರತಕ್ಕೆ ಗಾಂಧೀಜಿ ಎಂದಿಗೂ ಪ್ರೇರಣೆ ಎಂದರು.

ಪ್ರತಿಷ್ಠಾನದ ಅದ್ಯಕ್ಷ ಡಾ.ಎ.ಸದಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಡಾ.ಇಸ್ಮಾಯೀಲ್ ಎನ್. ಸ್ವಾಗತಿಸಿದರು. ಜತೆ ಕಾರ್ಯದರ್ಶಿ ಕಲ್ಲೂರು ನಾಗೇಶ ಕಾರ್ಯಕ್ರಮ ನಿರೂಪಿಸಿದರು. ಸಹ ಕೋಶಾಧಿಕಾರಿ ಪ್ರೇಮ್ ಚಂದ್ ವಂದಿಸಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X