Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರಿನ ಬೆವರ್ಲಿ ಹಿಲ್ಸ್‌ನಲ್ಲಿ ಹೊಸ...

ಮಂಗಳೂರಿನ ಬೆವರ್ಲಿ ಹಿಲ್ಸ್‌ನಲ್ಲಿ ಹೊಸ ಐಟಿ ಪಾರ್ಕ್: ಶರತ್ ಬಚ್ಚೇಗೌಡ

ವಾರ್ತಾಭಾರತಿವಾರ್ತಾಭಾರತಿ6 Feb 2024 9:53 PM IST
share
ಮಂಗಳೂರಿನ ಬೆವರ್ಲಿ ಹಿಲ್ಸ್‌ನಲ್ಲಿ ಹೊಸ ಐಟಿ ಪಾರ್ಕ್: ಶರತ್ ಬಚ್ಚೇಗೌಡ

ಮಂಗಳೂರು: ಮಂಗಳೂರಿನ ದೇರೆಬೈಲ್ ಪ್ರದೇಶದ ಬೆವರ್ಲಿ ಹಿಲ್ಸ್‌ನಲ್ಲಿ ಕಿಯೋನಿಕ್ಸ್‌ಗೆ ಸೇರಿದ 4 ಎಕರೆ ಪ್ರದೇಶದಲ್ಲಿ ಹೊಸ ಐಟಿ ಪಾರ್ಕ್ ತಲೆ ಎತ್ತಲಿದೆ ಎಂದು ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಘೋಷಿಸಿದರು.

ಇಲ್ಲಿನ ಟಿಎಂಎ ಪೈ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ‘ಮಂಗಳೂರು ಟೆಕ್ನೋವಾಂಜಾ3.0’ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಮಾತನಾಡಿದರು.

ಹೊಸ ಐಟಿ ಪಾರ್ಕ್‌ನಲ್ಲಿ ಸಾಗರ ತಂತ್ರಜ್ಞಾನ, ಸಾಗರ ಜೈವಿಕ ತಂತ್ರಜ್ಞಾನ ವಲಯದ ಕಂಪನಿಗಳು ಹಾಗೂ ಸ್ಟಾರ್ಟ್‌ ಗಳಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಜತೆಗೆ, ಕೌಶಲಾಭಿವೃದ್ಧಿ ಕೇಂದ್ರಗಳಿಗೆ ಸ್ಥಳಾವಕಾಶ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ಉದ್ಯಮಿಗಳ ನಾಡು ದಕ್ಷಿಣ ಕನ್ನಡ, ಬ್ಯಾಂಕಿಂಗ್, ಫಿನ್ ಟೆಕ್, ಆತಿಥ್ಯ ಹಾಗೂ ಆರೋಗ್ಯ ವಲಯದ ದಿಗ್ಗಜರು ಈ ಭಾಗದವರು. ಅತ್ಯುತ್ತಮ ಮೂಲ ಸೌಕರ್ಯ ಉನ್ನತ ದರ್ಜೆಯ ಶಿಕ್ಷಣ ಸಂಸ್ಥೆಗಳು ಇಲ್ಲಿವೆ. ಇಲ್ಲಿನ ಪ್ರತಿಭಾನ್ವಿತರು ಸ್ಥಳೀಯವಾಗಿ ಉದ್ಯಮ ಆರಂಭಿಸಿ, ಸ್ಥಳೀಯರಿಗೆ ಇಲ್ಲಿ ಉದ್ಯೋಗಾವಕಾಶ ಸೃಷ್ಟಿಸುವಂತಾಗಬೇಕು. ಅದಕ್ಕೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎಲ್ಲ ರೀತಿಯ ನೆರವು ಕಲ್ಪಿಸುತ್ತದೆ ಎಂದು ಶರತ್ ಬಚ್ಚೇಗೌಡ ತಿಳಿಸಿದರು.

ಸ್ಟಾರ್ಟ್‌ಅಪ್‌ಗಳಿಗೆ ಸರಳ ನಿಬಂಧನೆ: ಸ್ಥಳೀಯ ನವೋದ್ಯಮಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ’ಪ್ರಾಶಸ್ತ್ಯದ ಸಾರ್ವಜನಿಕ ಸಂಗ್ರಹಣೆ ನೀತಿ’ ರೂಪಿಸುತ್ತಿದ್ದು, ರಾಜ್ಯದ ಸ್ಟಾರ್ಟ್‌ಅಪ್‌ಗಳು ಸರಕಾರಿ ಟೆಂಡರ್ ಗಳಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ನಿಬಂಧನೆ ಸಡಿಲಗೊಳಿಸಲು ತೀರ್ಮಾನಿಸಿದೆ ಎಂದು ಐಟಿ-ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಡಾ. ಏಕರೂಪ ಕೌರ್ ತಿಳಿಸಿದರು.

ಮೇಡ್ ಇನ್ ಕರ್ನಾಟಕದ ಉತ್ಪನ್ನಗಳನ್ನು ಖರೀದಿಸಿ, ಸ್ಟಾರ್ಟ್‌ಅಪ್‌ಗಳನ್ನು ಪೋಷಿಸಲು ಸರ್ಕಾರ ಬದ್ಧ ಎಂದರು.

ಸರ್ಕಾರಿ ಟೆಂಡರ್‌ಗಳಲ್ಲಿ ಭಾಗವಹಿಸಲು ಇಂತಿಷ್ಟು ವರ್ಷದ ಅನುಭವ, ಹಿಂದೆ ನಿಭಾಯಿಸಿದ ಯೋಜನೆಗಳ ಮೊತ್ತ ಇತ್ಯಾದಿ ಹಲವು ಕಠಿಣ ನಿಬಂಧನೆಗಳಿರುತ್ತವೆ. ಇಂದರಿಂದಾಗಿ ಟೆಂಡರ್‌ನಲ್ಲಿ ಭಾಗವಹಿಸಲು ಸ್ಟಾರ್ಟ್‌ಅಪ್‌ಗಳಿಗೆ ಕಷ್ಟವಾಗುತ್ತದೆ. ಇದಕ್ಕೆ ಪರಿಹಾರವಾಗಿ ಸ್ಟಾರ್ಟ್‌ಅಪ್‌ಗಳಿಗೆ ನಿಬಂಧನೆಗಳನ್ನು ಸರಳಗೊಳಿಸಿ, ಟೆಂಡರ್‌ನಲ್ಲಿ ಭಾಗವಹಿ ಸಲು ರಾಜ್ಯ ಸರಕಾರ ಅನುಕೂಲ ಮಾಡಿಕೊಡಲಿದೆ ಎಂದರು.

ಸರಕಾರದ ಸೆಕ್ಟರ್ ಆಧಾರಿತ ನೀತಿಗಳಿಂದ ರಾಜ್ಯಕ್ಕೆ ಹೂಡಿಕೆ ಹರಿದು ಬರುತ್ತಿದ್ದು, ವಿಶೇಷವಾಗಿ ಇಲೆಕ್ಟ್ರಾನಿಕ್ ವಲಯಕ್ಕೆ ಹೆಚ್ಚಿನ ಹೂಡಿಕೆ ಬರುತ್ತಿದೆ. ಅನಿಮೇಷನ್ ವಿಷುಯಲ್ ಎಫೆಕ್ಸ್ಟ್, ಗೇಮ್ಸ್ ಮತ್ತು ಕಾಮಿಕ್ಸ್ (ಎವಿಜಿಸಿ) ನೀತಿಯ ಪರಿಣಾಮಕಾರಿ ಅನುಷ್ಠಾನದಿಂದ ಮುಂದಿನ 4 ವರ್ಷಗಳಲ್ಲಿ ಸುಮಾರು 30,000 ಉದ್ಯೋಗ ಸೃಷ್ಟಿಸುವ ಗುರಿ ಹೊಂದಿದೆ. ನವೋದ್ಯಮಗಳನ್ನು ಬೆಂಬಲಿಸಲು ಎಲಿವೇಟ್‌ನಂತಹ ಉಪಕ್ರಮಗಳನ್ನು ರೂಪಿಸಲಾಗಿದೆ. ಇದರಿಂದಾಗಿಯೇ ಮಂಗಳೂರಿನಂತಹ ಉದಯೋನ್ಮುಖ ಕ್ಲಸ್ಟರ್‌ಗಳಲ್ಲಿ ಉದ್ಯಮಶೀಲ ಪರಿಸರ ವ್ಯವಸ್ಥೆ ಬಲಗೊಳುತ್ತಿದೆ,ಎಂದು ಹೇಳಿದರು.

ದಕ್ಷಿಣ ಕನ್ನಡ ಪ್ರತಿಭಾನ್ವಿತರ ಕಣಜ. ಪ್ರತಿ ವರ್ಷ ಇಲ್ಲಿನ ಕಾಲೇಜುಗಳಿಂದ 10,000 ಇಂಜಿನಿಯರಿಂಗ್ ವಿದ್ಯಾರ್ಥಿಗಳು, 30 ಸಾವಿರ ಪದವೀಧರರು ಹೊರಬರುತ್ತಿದ್ದಾರೆ. ಪ್ರತಿಭಾನ್ವಿತರು ಸ್ಥಳೀಯವಾಗಿ ಉದ್ಯಮ ಸ್ಥಾಪಿಸುವಂತಾಗಲು ಅನುಕೂಲಕರ ನೀತಿಗಳನ್ನು ಹೊರತಂದಿದ್ದೇವೆ. ಇದರಿಂದಾಗಿ ಸ್ಥಳೀಯವಾಗಿ ಉದ್ಯೋಗಾವಕಾಶಗಳು ಸೃಷ್ಟಿಯಾಗು ತ್ತವೆ. ಉದ್ಯಮಗಳು ಹಾಗೂ ಶಿಕ್ಷಣದ ನಡುವಿನ ಕಂದಕಗಳನ್ನು ಸರಿಪಡಿಸಲು ಅಗತ್ಯ ಕೌಶಲ ತರಬೇತಿ ನೀಡಲು ಬದ್ಧ ವಾಗಿ, ಶೇ.50-70 ರಷ್ಟು ತರಬೇತಿ ವೆಚ್ಚವನ್ನು ಸರ್ಕಾರ ಭರಿಸುತ್ತಿದೆ. ಇಂಥ ಕ್ರಮಗಳಿಂದಾಗಿ ರಾಜ್ಯದ ಉದಯೋನ್ಮುಖ ಟೆಕ್ ಕ್ಲಸ್ಟರ್‌ಗಳು ಪ್ರಗತಿ ಸಾಧಿಸುತ್ತಿವೆ,ಎಂದು ಹರ್ಷ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಕೆಡಿಇಎಂ ಅಧ್ಯಕ್ಷ ಬಿ.ವಿ ನಾಯ್ಡು, ಕೆಡಿಇಎಂನ ಸಿಇಓ ಸಂಜೀವ್ ಗುಪ್ತಾ, ದಿ ಮಿಲ್, ಟೆಕ್ನಿಕಲರ್ ಕ್ರಿಯೇಟಿವ್ ಸ್ಟುಡಿಯೋಸ್ ಇಂಡಿಯಾದ ಕಾರ್ಯನಿರ್ವಾಹಕ ನಿರ್ದೇಶಕ ಆರ್. ಕೆ ಚಂದ್, ಕರ್ನಾಟಕ ಮತ್ತು ಕೇರಳದ ಬ್ರಿಟಿಷ್ ಡೆಪ್ಯುಟಿ ಹೈ ಕಮಿಷನರ್ ಚಂದ್ರು ಅಯ್ಯರ್, ಆಕ್ಸೆಂಚರ್‌ನ ಆರತಿ ಕುಚಿಬಟ್ಲ, ಡೆಲಿವರಿ ಸಂಸ್ಥೆಯ ಸಿಇಒ ಅಜಿತ್ ಪೈ, 99 ಗೇಮ್ಸ್ ಸಿಇಒ, ಟಿಐಇ ಮಂಗಳೂರಿನ ರೋಹಿತ್ ಭಟ್ ಉಪಸ್ಥಿತರಿದ್ದರು.

"2001ರಲ್ಲಿ ಮಂಗಳೂರಿನಲ್ಲಿ ಆರಂಭವಾದ ಸಣ್ಣ ಐಟಿ ಪಾರ್ಕ್ ಈಗ ’ಸಿಲಿಕಾನ್ ಬೀಚ್’ ಆಗಿ ಹೊರಹೊಮ್ಮುವ ಮಟ್ಟಕ್ಕೆ ಬೆಳೆದಿದೆ. ಕಳೆದ 18 ತಿಂಗಳಲ್ಲಿ ಮಂಗಳೂರಿನಲ್ಲಿ 15ಕ್ಕೂ ಹೆಚ್ಚು ಕಂಪನಿಗಳು ಹೂಡಿಕೆ ಮಾಡಿದ್ದು, 25-30 ಕಂಪನಿಗಳು ಹೂಡಿಕೆಗೆ ಆಸಕ್ತಿ ತೋರಿವೆ. ಮುಂದಿನ 2 ದಶಕಗಳಲ್ಲಿ ಮಂಗಳೂರು ದೇಶದ ಪ್ರಮುಖ ಆರ್ಥಿಕ ಕೇಂದ್ರವಾಗಲಿದೆ"

-ಬಿ.ವಿ ನಾಯ್ಡು, ಕೆಡಿಇಎಂ ಅಧ್ಯಕ್ಷ

"ಸ್ಟಾರ್ಟ್‌ಅಪ್ ಪರಿಸರ ಬೆಂಗಳೂರಿಗಷ್ಟೇ ಸೀಮಿತವಾಗಿಲ್ಲ, ರಾಜ್ಯಾದ್ಯಂತ ವಿಸ್ತರಿಸಿದೆ ಎಂದು ಜಗತ್ತಿಗೆ ತೋರಿಸಿ ಕೊಡಬೇಕಿದೆ. ಅದಕ್ಕೆ ಪೂರಕವಾಗಿ ಕೆಡಿಇಎಂ ಕೆಲಸ ಮಾಡುತ್ತಿದೆ.ಕಳೆದ ಎರಡು ವರ್ಷದಲ್ಲಿ ಮಂಗಳೂರು ಬಹಳಷ್ಟು ಹೊಸ ಕೈಗಾರಿಕೆಗಳನ್ನು ಕಂಡಿದೆ, ಅವುಗಳು ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸುವಲ್ಲಿ ಮತ್ತು ಕ್ಲಸ್ಟರ್ ಪರಿಸರ ವ್ಯವಸ್ಥೆಯನ್ನು ಸಕ್ರಿಯಗೊಳಿಸುವಲ್ಲಿ ಪ್ರಮುಖ ಪಾತ್ರವಹಿಸಿವೆ. ಟೆಕ್ ಮಹೀಂದ್ರಾದಲ್ಲಿ 100+, ಇಂಕ್ಚರ್ 20+, ಎಕ್ಸ್‌ಫೆನೊ 30+, ಮೈಕ್ರೋ ಜೆನೆಸಿಸ್ - 15+ ಉದ್ಯೋಗಗಳು ಸೃಷ್ಟಿಯಾಗಿವೆ. ಹಲವು ಅಂತಾರಾಷ್ಟ್ರೀಯ ಸಂಸ್ಥೆಗಳನ್ನು ತನ್ನತ್ತ ಸೆಳೆದಿರುವ ಈ ಕ್ಲಸ್ಟರ್ ವರ್ಷದಿಂದ ವರ್ಷಕ್ಕೆ ಅಭಿವೃದ್ಧಿ ಹೊಂದುವ ವಿಶ್ವಾಸ ನಮಗಿದೆ"

-ಸಂಜೀವ್ ಗುಪ್ತಾ, ಕೆಡಿಇಎಂನ ಸಿಇಒ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X